34 ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ ; ಸಂಪೂರ್ಣ ಪಟ್ಟಿ…

ಬೆಂಗಳೂರು : ರಾಜ್ಯದ 34 ನಿಗಮ/ಮಂಡಳಿ, ಪ್ರಾಧಿಕಾರಗಳಿಗೆ (boards and corporations) ನೂತನ ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನೂತನ ಅಧ್ಯಕ್ಷರನ್ನು ನೇಮಕಗೊಂಡ ದಿನಾಂಕದಿಂದ ಮುಂದಿನ ಎರಡು ವರ್ಷಗಳ ಅವಧಿ ವರೆಗೆ ನೇಮಿಸಲಾಗಿದೆ. ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರ ಪಟ್ಟಿ ಪಿ.ರಘು – ಸಫಾಯಿ ಕರ್ಮಚಾರಿ ಆಯೋಗ ಶಿವಲೀಲಾ ವಿನಯ ಕುಲಕರ್ಣಿ – … Continued

ಮೈಸೂರಿನಲ್ಲಿ ಸಾಹಿತಿ ಎಸ್‌.ಎಲ್‌. ಭೈರಪ್ಪ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ ಹಾಗೂ ಸರಸ್ವತಿ ಸಮ್ಮಾನ್‌ ಪುರಸ್ಕೃತ ಡಾ. ಎಸ್ ಎಲ್ ಭೈರಪ್ಪ (SL Bhyrappa) ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಾಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ನಿನ್ನೆ ಬುಧವಾರ (ಸೆ.24) ನಿಧನರಾದ ಸಾಹಿತಿ ಎಸ್.ಎಲ್. ಭೈರಪ್ಪ (94) ಅವರ ಪಾರ್ಥಿವ ಶರೀರವನ್ನು ಇಂದು ಗುರುವಾರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ … Continued

ಸಿನಿಮಾ ಟಿಕೆಟಿಗೆ ₹200 ದರ ನಿಗದಿ ; ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು : ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂಪಾಯಿ ಏಕರೂಪ ದರ ನಿಗದಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಮಧ್ಯಂತರ ತಡೆ ನೀಡಿದೆ. ಈ ಕುರಿತಾದ ಅರ್ಜಿಗಳ ವಿಚಾರಣೆ ನಡೆಸಿ, ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ರವಿ ಹೊಸಮನಿ … Continued

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕಗೆ ಆಹ್ವಾನ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದ ರಾಜ್ಯ ಹೈಕೋರ್ಟ್‌ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. “ದೇಶದ ಸಂವಿಧಾನದ ಪ್ರಸ್ತಾವನೆ ಏನು ಹೇಳುತ್ತದೆ? ಇದು ಸರ್ಕಾರಿ ಕಾರ್ಯಕ್ರಮ, ಸರ್ಕಾರ ಭೇದ ಮಾಡಲು ಹೇಗೆ ಸಾಧ್ಯ?” ಎಂದು … Continued

15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನ ಗುಜರಿಗೆ ಹಾಕಿ- ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 15 ವರ್ಷಕ್ಕಿಂತ ಹಳೆಯ ಎಲ್ಲ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಅಧೀನದಲ್ಲಿರುವ ವಿವಿಧ ಇಲಾಖೆಗಳು, ನಿಗಮ/ಮಂಡಳಿಗಳು, ನಗರಸಭೆ, ಮಂಡಳಿಗಳ ವಾಹನಗಳನ್ನು ನಾಶಪಡಿಸಲು ಆದೇಶದಲ್ಲಿ ತಿಳಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶದಂತೆ ರಾಜ್ಯ ಸರ್ಕಾರ ಈ ಸೂಚನೆ ನೀಡಿದೆ. ಆದ್ಯತೆ ಮತ್ತು ಉಪಯೋಗದ ಆಧಾರದ ಮೇಲೆ 5 … Continued

ಖ್ಯಾತ ನಟರಾದ ವಿಷ್ಣುವರ್ಧನ್​​, ಬಿ. ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರ ಕನ್ನಡದ ಖ್ಯಾತ ನಟರಾದ ವಿಷ್ಣುವರ್ಧನ್ ಹಾಗೂ ಸರೋಜಾದೇವಿಗೆ ಮರಣೋತ್ತರ ʼಕರ್ನಾಟಕ ರತ್ನʼ ಪ್ರಶಸ್ತಿ ಘೋಷಿಸಿದೆ. ಕನ್ನಡ ಚಿತ್ರರಂಗಕ್ಕೆ ಈ ಇಬ್ಬರು ಕಲಾವಿದರು ನೀಡಿದ ಅಪಾರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ. ನಟರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಇಂದು ಗುರುವಾರ (ಸೆ.೧೨) ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. … Continued

ರಮೇಶಬಾಬು, ಜಕ್ಕಪ್ಪನವರ ಸೇರಿ ವಿಧಾನ ಪರಿಷತ್ತಿಗೆ ನಾಲ್ವರ ನೇಮಕ ; ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸುಮಾರು ಆರೇಳು ತಿಂಗಳಿಂದ ಖಾಲಿಯಿದ್ದ ನಾಲ್ಕು ವಿಧಾನ ಪರಿಷತ್‌ ಸ್ಥಾನಗಳಿಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ ಬಾಬು ಸೇರಿದಂತೆ ನಾಲ್ವರನ್ನು ನಾಮ ನಿರ್ದೇಶನ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ ಬಾಬು, ಕರ್ನಾಟಕ … Continued

ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ; ಆಯೋಗಕ್ಕೆ ಶಿಫಾರಸಿಗೆ ಸಂಪುಟದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂಗಳ ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್)ಗಳ ಬಳಸಿ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಗುರುವಾರ (ಸೆಪ್ಟೆಂಬರ್‌ ೪) ನಿರ್ಧರಿಸಿದೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು … Continued

ರಾಜ್ಯ ಜನತೆಗೆ ಮತ್ತೊಂದು ಶಾಕ್‌ ; ಇಂದಿನಿಂದ ರಾಜ್ಯದಲ್ಲಿ ಆಸ್ತಿ ಖರೀದಿ ನೋಂದಣಿ ಶುಲ್ಕ ಡಬಲ್‌…!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಬಿಗ್ ಶಾಕ್ ನೀಡಿದ್ದು ಇಂದಿನಿಂದಲೇ (ಆಗಸ್ಟ್‌ 31) ಆಸ್ತಿ ಖರೀದಿ ನೋಂದಣಿ ಶುಲ್ಕ ದುಪ್ಪಟ್ಟಾಗಿದೆ. ಆಸ್ತಿ ಖರೀದಿ ನೋಂದಣಿ ಶುಲ್ಕವನ್ನು ಹಿಂದಿನ ದರಕ್ಕಿಂತ ದುಪ್ಪಟ್ಟು ದರಕ್ಕೆ ಏರಿಕೆ ಮಾಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ. ನೋಂದಣಿ ಶುಲ್ಕ ಶೇ.1 ರಿಂದ ಶೇ.2 ರಷ್ಟು ಏರಿಕೆ … Continued

ಪರಿಶಿಷ್ಟ ಜಾತಿ ಎಡಗೈ, ಬಲಗೈ ಸಮುದಾಯಕ್ಕೆ ತಲಾ ಶೇ. 6 ರಷ್ಟು ಒಳ ಮೀಸಲಾತಿ: ಸದನದಲ್ಲಿ ಪ್ರಕಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ಆಯೋಗದ ವರದಿಯನ್ನು ಕೆಲವು ಮಾರ್ಪಾಡುಗಳೊಂದಿಗೆ ರಾಜ್ಯ ಸರ್ಕಾರವು ಔಪಚಾರಿಕವಾಗಿ ಸ್ವೀಕರಿಸಲು ನಿರ್ಧರಿಸಿದೆ. ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆಗೆ ಅನುಮೋದನೆ ದೊರೆತ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸಭೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದರು. ನವೆಂಬರ್ 2024 ರಲ್ಲಿ ರಚಿಸಲಾದ … Continued