ಖ್ಯಾತ ನಟರಾದ ವಿಷ್ಣುವರ್ಧನ್​​, ಬಿ. ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರ ಕನ್ನಡದ ಖ್ಯಾತ ನಟರಾದ ವಿಷ್ಣುವರ್ಧನ್ ಹಾಗೂ ಸರೋಜಾದೇವಿಗೆ ಮರಣೋತ್ತರ ʼಕರ್ನಾಟಕ ರತ್ನʼ ಪ್ರಶಸ್ತಿ ಘೋಷಿಸಿದೆ. ಕನ್ನಡ ಚಿತ್ರರಂಗಕ್ಕೆ ಈ ಇಬ್ಬರು ಕಲಾವಿದರು ನೀಡಿದ ಅಪಾರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ. ನಟರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಇಂದು ಗುರುವಾರ (ಸೆ.೧೨) ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. … Continued

ರಮೇಶಬಾಬು, ಜಕ್ಕಪ್ಪನವರ ಸೇರಿ ವಿಧಾನ ಪರಿಷತ್ತಿಗೆ ನಾಲ್ವರ ನೇಮಕ ; ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸುಮಾರು ಆರೇಳು ತಿಂಗಳಿಂದ ಖಾಲಿಯಿದ್ದ ನಾಲ್ಕು ವಿಧಾನ ಪರಿಷತ್‌ ಸ್ಥಾನಗಳಿಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ ಬಾಬು ಸೇರಿದಂತೆ ನಾಲ್ವರನ್ನು ನಾಮ ನಿರ್ದೇಶನ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದ್ದು, ಗೆ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ ಬಾಬು, ಕರ್ನಾಟಕ … Continued

ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ; ಆಯೋಗಕ್ಕೆ ಶಿಫಾರಸಿಗೆ ಸಂಪುಟದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂಗಳ ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್)ಗಳ ಬಳಸಿ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಗುರುವಾರ (ಸೆಪ್ಟೆಂಬರ್‌ ೪) ನಿರ್ಧರಿಸಿದೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು … Continued

ರಾಜ್ಯ ಜನತೆಗೆ ಮತ್ತೊಂದು ಶಾಕ್‌ ; ಇಂದಿನಿಂದ ರಾಜ್ಯದಲ್ಲಿ ಆಸ್ತಿ ಖರೀದಿ ನೋಂದಣಿ ಶುಲ್ಕ ಡಬಲ್‌…!

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಬಿಗ್ ಶಾಕ್ ನೀಡಿದ್ದು ಇಂದಿನಿಂದಲೇ (ಆಗಸ್ಟ್‌ 31) ಆಸ್ತಿ ಖರೀದಿ ನೋಂದಣಿ ಶುಲ್ಕ ದುಪ್ಪಟ್ಟಾಗಿದೆ. ಆಸ್ತಿ ಖರೀದಿ ನೋಂದಣಿ ಶುಲ್ಕವನ್ನು ಹಿಂದಿನ ದರಕ್ಕಿಂತ ದುಪ್ಪಟ್ಟು ದರಕ್ಕೆ ಏರಿಕೆ ಮಾಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ. ನೋಂದಣಿ ಶುಲ್ಕ ಶೇ.1 ರಿಂದ ಶೇ.2 ರಷ್ಟು ಏರಿಕೆ … Continued

ಪರಿಶಿಷ್ಟ ಜಾತಿ ಎಡಗೈ, ಬಲಗೈ ಸಮುದಾಯಕ್ಕೆ ತಲಾ ಶೇ. 6 ರಷ್ಟು ಒಳ ಮೀಸಲಾತಿ: ಸದನದಲ್ಲಿ ಪ್ರಕಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ಆಯೋಗದ ವರದಿಯನ್ನು ಕೆಲವು ಮಾರ್ಪಾಡುಗಳೊಂದಿಗೆ ರಾಜ್ಯ ಸರ್ಕಾರವು ಔಪಚಾರಿಕವಾಗಿ ಸ್ವೀಕರಿಸಲು ನಿರ್ಧರಿಸಿದೆ. ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆಗೆ ಅನುಮೋದನೆ ದೊರೆತ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ವಿಧಾನಸಭೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಿದರು. ನವೆಂಬರ್ 2024 ರಲ್ಲಿ ರಚಿಸಲಾದ … Continued

ಬೆಂಗಳೂರು ಕಾಲ್ತುಳಿತ ಪ್ರಕರಣ ; ನಾಲ್ವರು ಪೊಲೀಸ್‌ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ (stampede) ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹಿರಿಯ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕರ್ತವ್ಯ ಲೋಪ ಆರೋಪದಲ್ಲಿಅಮಾನತು ಮಾಡಲಾಗಿದ್ದ ಬೆಂಗಳೂರು ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್‌ ಕಮಿಷನರ್‌ ಆಗಿದ್ದ ವಿಕಾಸ್‌ ಕುಮಾರ್ ಒಬ್ಬರನ್ನು ಬಿಟ್ಟು ಬೆಂಗಳೂರು  ಪೊಲೀಸ್ ಕಮಿಷನರ್ … Continued

ಸೆಪ್ಟೆಂಬರ್ 22ರಿಂದ ಜಾತಿ ಗಣತಿ ಮರು ಸಮೀಕ್ಷೆ; ಅಕ್ಟೋಬರ್ ಅಂತ್ಯದೊಳಗೆ ವರದಿ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರ ಹೊಸದಾಗಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ) ನಡೆಸಲು ನಿರ್ಧರಿಸಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. ಬುಧವಾರ (ಜುಲೈ ೨೪) ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತ ಪೂರ್ವಭಾವಿ ಸಭೆಯಲ್ಲಿ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ 15 ದಿನಗಳ ಕಾಲ ಸಮೀಕ್ಷೆ … Continued

ಧರ್ಮಸ್ಥಳ ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆಗಳ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಲ್ಕು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡ(SIT)ವನ್ನು ರಚಿಸಿದೆ. ಎಸ್‌ಐಟಿಯ ನೇತೃತ್ವವನ್ನು … Continued

ಮುಜರಾಯಿ ಇಲಾಖೆ ವಶಕ್ಕೆ ಗಾಳಿ ಆಂಜನೇಯಸ್ವಾಮಿ ದೇವಾಲಯ ; ಸರ್ಕಾರದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಕಾರ

ಬೆಂಗಳೂರು : ಬೆಂಗಳೂರು ಮಹಾನಗರದ ನಗರದ ಪ್ರಸಿದ್ಧ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಸುಪರ್ದಿಗೆ ಪಡೆದು ರಾಜ್ಯ ಮುಜರಾಯಿ ಇಲಾಖೆ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದ್ದ ಮನವಿಯನ್ನು ಬುಧವಾರ ಕರ್ನಾಟಕ ಹೈಕೋರ್ಟ್‌ ತಿರಸ್ಕರಿಸಿದೆ. ಸರ್ಕಾರದ ಆದೇಶ ರದ್ದು ಕೋರಿ ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಆಡಳಿ ಮಂಡಳಿ ಸಲ್ಲಿಸಿದ್ದ ಅರ್ಜಿಯ ಮಧ್ಯಂತರ ಕೋರಿಕೆಯನ್ನು ನ್ಯಾಯಮೂರ್ತಿ … Continued

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್​ ಸರ್ಜರಿ: 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 34 ಐಪಿಎಸ್ (IPS)​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿಯೂ ಸರ್ಜರಿ ನಡೆದಿದೆ. ಐಪಿಎಸ್ ಅಧಿಕಾರಿಗಳ ವರ್ಗಾವಣೆ ವಿವರ (ವರ್ಗಾವಣೆ ಮಾಡಿರುವ ಹುದ್ದೆ) ಅಕ್ಷಯ ಮಚೀಂದ್ರ – ಡಿಸಿಪಿ, ಬೆಂಗಳೂರೂ ಕೇಂದ್ರ ವಿಭಾಗ ಅಜಯ … Continued