ಬೆಂಗಳೂರು ಕಾಲ್ತುಳಿತ ಪ್ರಕರಣ ; ನಾಲ್ವರು ಪೊಲೀಸ್‌ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ (stampede) ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹಿರಿಯ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕರ್ತವ್ಯ ಲೋಪ ಆರೋಪದಲ್ಲಿಅಮಾನತು ಮಾಡಲಾಗಿದ್ದ ಬೆಂಗಳೂರು ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್‌ ಕಮಿಷನರ್‌ ಆಗಿದ್ದ ವಿಕಾಸ್‌ ಕುಮಾರ್ ಒಬ್ಬರನ್ನು ಬಿಟ್ಟು ಬೆಂಗಳೂರು  ಪೊಲೀಸ್ ಕಮಿಷನರ್ … Continued

ಸೆಪ್ಟೆಂಬರ್ 22ರಿಂದ ಜಾತಿ ಗಣತಿ ಮರು ಸಮೀಕ್ಷೆ; ಅಕ್ಟೋಬರ್ ಅಂತ್ಯದೊಳಗೆ ವರದಿ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದ ಮೇರೆಗೆ ರಾಜ್ಯ ಸರ್ಕಾರ ಹೊಸದಾಗಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ) ನಡೆಸಲು ನಿರ್ಧರಿಸಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. ಬುಧವಾರ (ಜುಲೈ ೨೪) ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತ ಪೂರ್ವಭಾವಿ ಸಭೆಯಲ್ಲಿ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ 15 ದಿನಗಳ ಕಾಲ ಸಮೀಕ್ಷೆ … Continued

ಧರ್ಮಸ್ಥಳ ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆಗಳ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಲ್ಕು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡ(SIT)ವನ್ನು ರಚಿಸಿದೆ. ಎಸ್‌ಐಟಿಯ ನೇತೃತ್ವವನ್ನು … Continued

ಮುಜರಾಯಿ ಇಲಾಖೆ ವಶಕ್ಕೆ ಗಾಳಿ ಆಂಜನೇಯಸ್ವಾಮಿ ದೇವಾಲಯ ; ಸರ್ಕಾರದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಕಾರ

ಬೆಂಗಳೂರು : ಬೆಂಗಳೂರು ಮಹಾನಗರದ ನಗರದ ಪ್ರಸಿದ್ಧ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಸುಪರ್ದಿಗೆ ಪಡೆದು ರಾಜ್ಯ ಮುಜರಾಯಿ ಇಲಾಖೆ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದ್ದ ಮನವಿಯನ್ನು ಬುಧವಾರ ಕರ್ನಾಟಕ ಹೈಕೋರ್ಟ್‌ ತಿರಸ್ಕರಿಸಿದೆ. ಸರ್ಕಾರದ ಆದೇಶ ರದ್ದು ಕೋರಿ ಗಾಳಿ ಆಂಜನೇಯ ಸ್ವಾಮಿ ದೇವಾಲಯದ ಆಡಳಿ ಮಂಡಳಿ ಸಲ್ಲಿಸಿದ್ದ ಅರ್ಜಿಯ ಮಧ್ಯಂತರ ಕೋರಿಕೆಯನ್ನು ನ್ಯಾಯಮೂರ್ತಿ … Continued

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್​ ಸರ್ಜರಿ: 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 34 ಐಪಿಎಸ್ (IPS)​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿಯೂ ಸರ್ಜರಿ ನಡೆದಿದೆ. ಐಪಿಎಸ್ ಅಧಿಕಾರಿಗಳ ವರ್ಗಾವಣೆ ವಿವರ (ವರ್ಗಾವಣೆ ಮಾಡಿರುವ ಹುದ್ದೆ) ಅಕ್ಷಯ ಮಚೀಂದ್ರ – ಡಿಸಿಪಿ, ಬೆಂಗಳೂರೂ ಕೇಂದ್ರ ವಿಭಾಗ ಅಜಯ … Continued

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ವ್ಯವಸ್ಥೆ : ರಾಜ್ಯ ಸರ್ಕಾರದ ಮಹತ್ವದ ಘೋಷಣೆ

ಬೆಂಗಳೂರು : ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳಿಗೆ ಮಹತ್ವದ ಘೋಷಣೆ ಮಾಡಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ (Karnataka Public School) ಎಲ್‌ಕೆಜಿ (LKG)ಯಿಂದ ಪಿಯುಸಿ ವರೆಗೆ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಒತ್ತು ನೀಡಲು ನಿರ್ಧರಿಸಿದೆ. ಈ ಕುರಿತು … Continued

ಕೋವಿಡ್ ಲಸಿಕೆಗಳಿಗೂ ಹೃದಯಾಘಾತದ ಸಾವುಗಳಿಗೂ ಯಾವುದೇ ಸಂಬಂಧವಿಲ್ಲ; ತಳ್ಳಿಹಾಕಿದ ಏಮ್ಸ್ ವೈದ್ಯರು

ನವದೆಹಲಿ: ಕೋವಿಡ್-19 ಲಸಿಕೆಗಳನ್ನು “ಪರಿಣಾಮಕಾರಿ” ಎಂದು ಕರೆದ ದೆಹಲಿಯ ಏಮ್ಸ್ ವೈದ್ಯರು, ವ್ಯಾಕ್ಸಿನೇಷನ್ ಮತ್ತು ಹೃದಯಾಘಾತದಿಂದ ಉಂಟಾಗುವ ಹಠಾತ್ ಸಾವುಗಳಿಗೆ ಸಂಬಂಧವಿದೆ ಎಂಬುದನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ದೆಹಲಿಯ ಏಮ್ಸ್‌ನ ಶ್ವಾಸಕೋಶ, ಕ್ರಿಟಿಕಲ್ ಕೇರ್ ಮತ್ತು ಸ್ಲೀಪ್ ಮೆಡಿಸಿನ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಕರಣ ಮದನ ಅವರು, ಈವರೆಗೆ ಬಳಸಲಾದ ಲಸಿಕೆಗಳ ಬಗ್ಗೆ ಪರಿಶೀಲನೆ ನಡೆಸಲು … Continued

ಬೆಂಗಳೂರು ನಗರ ವಿವಿಗೆ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಹೆಸರು ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಬೆಂಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ದೇಶದ ಪ್ರಧಾನಿಯಾಗಿ ಬೆಂಗಳೂರು ನಗರದ ಅಭಿವೃದ್ಧಿಗೆ ಸಾಕಷ್ಟು ಯೋಜನೆ ಮತ್ತು ಕೊಡುಗೆಗಳನ್ನು ನೀಡಿದ್ದ ಆರ್ಥಿಕ ತಜ್ಞ ಡಾ. … Continued

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬಾಗೇಪಲ್ಲಿ ಪಟ್ಟಣದ ಹೆಸರು ಬದಲಾವಣೆಗೆ ಸಚಿವ ಸಂಪುಟ ಅನುಮೋದನೆ

ಚಿಕ್ಕಬಳ್ಳಾಪುರ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಮನಗರ ಜಿಲ್ಲೆಯ ನಂತರ ಮತ್ತೊಂದು ಜಿಲ್ಲೆಯ ಹೆಸರು ಬದಲಾವಣೆಗೆ ಮುಂದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಬುಧವಾರ ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಇಂದು, ಬುಧವಾರ (ಜುಲೈ ೨) ನಂದಿ ಗಿರಿಧಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ … Continued

ಗಡಿ ಉಸ್ತುವಾರಿ ಸಚಿವರಾಗಿ ಹೆಚ್‌.ಕೆ ಪಾಟೀಲ ನೇಮಕ

ಬೆಂಗಳೂರು: ಕರ್ನಾಟಕ ಗಡಿ ಮತ್ತು ನದಿಗಳ ವಿವಾದ ವಿಷಯಗಳ ಬಗ್ಗೆ ನಿರಂತರವಾಗಿ ನಿಗಾ ವಹಿಸಿ ಸೂಕ್ತ ಕ್ರಮ ನಿರ್ಧಾರ ತೆಗೆದುಕೊಳ್ಳಲು ಅನುಕೂಲವಾಗಲು ಗಡಿ ಹಾಗೂ ನೀರಿನ ವಿವಾದಗಳ ಉಸ್ತುವಾರಿ ಸಚಿವರಾಗಿ ಎಚ್ ಕೆ‌ ಪಾಟೀಲ ಅವರನ್ನು ನೇಮಕ‌ ಮಾಡಲಾಗಿದೆ. 2013ರಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೆಚ್.​ಕೆ. ಪಾಟೀಲರನ್ನು ಗಡಿ ಉಸ್ತುವಾರಿ ಸಚಿವರನ್ನಾಗಿ ನೇಮಕ … Continued