ಅತಿಥಿ ಉಪನ್ಯಾಸಕರಿಗೆ 5 ಲಕ್ಷ ರೂ. ಇಡುಗಂಟು ನೀಡಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ (Guest Lecturers) ಸೇವೆ ಸಲ್ಲಿಸಿ 60 ವರ್ಷ ಪೂರೈಸಿದವರಿಗೆ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ 5 ಲಕ್ಷ ಇಡುಗಂಟು ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವಿವಿಧ ಸೌಲಭ್ಯಗಳು 2024ರ ಜನವರಿ 1ರಿಂದ ಜಾರಿಗೆ ಬರುವಂತೆ ಮಂಜೂರಾಗಲಿದ್ದು, ಕನಿಷ್ಠ ಒಂದು ವರ್ಷ … Continued

ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆ : ಹುಬ್ಬಳ್ಳಿ ಗಲಭೆ ಸೇರಿ 43 ಪ್ರಕರಣ ಹಿಂಪಡೆದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : ಹುಬ್ಬಳ್ಳಿ ಗಲಭೆ ಪ್ರಕರಣ (Hubballi Riot) ಸೇರಿದಂತೆ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂದಕ್ಕೆ ಪಡೆಯುವ ಕರ್ನಾಟಕ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ (Karnataka High Court) ರದ್ದುಗೊಳಿಸಿದೆ. ಕೇಂದ್ರ ಮತ್ತು ರಾಜ್ಯ ಸಚಿವರು, ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಶಾಸಕರು, ಕನ್ನಡಪರ ಹೋರಾಟಗಾರರು, ರೈತ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳಿಗೆ … Continued

ಕೋವಿಡ್‌ ಸಭೆ | ಮಕ್ಕಳಿಗೆ ಜ್ವರ, ಶೀತ ಇದ್ರೆ ರಜೆ ಕೊಡಲು ಸಿಎಂ ಸೂಚನೆ ; ವೃದ್ಧರು-ಗರ್ಭಿಣಿಯರಿಗೆ ಮಾಸ್ಕ್‌ ಧರಿಸಲು ಸಲಹೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಮತ್ತೆ ಕಾಣಿಸಿಕೊಂಡಿದ್ದು, ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸಚಿವರು, ಅಧಿಕಾರಿಗಳ ಸಭೆ ನಡೆಸಿದರು. ಅಧಿಕಾರಿಗಳು, ತಜ್ಞರಿಂದ ಮಾಹಿತಿ ಪಡೆದ ನಂತರ ಅವರು ಕೊರೋನಾ ನಿಯಂತ್ರಣಕ್ಕೆ ಎಲ್ಲ ಸಿದ್ಧತೆಗಳನ್ನ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಸಮಸ್ಯೆ ಆಗಬಾರದು. ಕೋವಿಡ್​ ಸಹಾಯವಾಣಿ​​ ತೆರೆಯಬೇಕು … Continued

ಜಾತಿ ಗಣತಿ ವರದಿ: ತೀರ್ಮಾನಕ್ಕೆ ಬರಲಾಗದೆ ಮುಗಿದ ಸಚಿವ ಸಂಪುಟ ಸಭೆ

ಬೆಂಗಳೂರು : ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ ಜಾತಿ ಗಣತಿ (Caste Census) ವರದಿ ಬಗ್ಗೆ ನಿರ್ಧರಿಸಲು ಕರೆಯಲಾಗಿದ್ದ ಸಚಿವ ಸಂಪುಟ ಸಭೆಯಲ್ಲಿ ಹಲವು ಸಚಿವರು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದೆ ಮುಕ್ತಾಯವಾಗಿದೆ. ಹಲವು ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಯಾವುದೇ ಸ್ಪಷ್ಪ ನಿರ್ಧಾರಕ್ಕೆ ಬರಲು ಸಾಧ್ಯವಾಗಲಿಲ್ಲʼʼ … Continued

ಸಚಿವರು, ಶಾಸಕರ ವೇತನ ದ್ವಿಗುಣ ಸಾಧ್ಯತೆ : ವೇತನ. ಭತ್ಯೆ ಹೆಚ್ಚಳಕ್ಕೆ ತಿದ್ದುಪಡಿ ಮಸೂದೆ ಸಿದ್ಧ

ಬೆಂಗಳೂರು: ಕರ್ನಾಟಕದ ಚುನಾಯಿತ ಪ್ರತಿನಿಧಿಗಳು ಶೀಘ್ರದಲ್ಲೇ ಎರಡು ಪಟ್ಟು ಹೆಚ್ಚು ಸಂಬಳ ಪಡೆಯಲಿದ್ದಾರೆ, ಕರಡು ಮಸೂದೆಯು ಮುಖ್ಯಮಂತ್ರಿ, ಮಂತ್ರಿಗಳು ಮತ್ತು ಶಾಸಕರಿಗೆ 100%ರಷ್ಟು ವೇತನ ಹೆಚ್ಚಳವನ್ನು ಪ್ರಸ್ತಾಪಿಸುತ್ತದೆ. ಪಿಂಚಣಿಗಳು ಮತ್ತು ವಿಮಾನ/ರೈಲು ಪ್ರಯಾಣ ಭತ್ಯೆಗಳಲ್ಲಿ ಶೇಕಡಾ 50 ರಷ್ಟು ಹೆಚ್ಚಳದಿಂದ ಹಿಡಿದು ಇತರ ಸೌಲಭ್ಯಗಳ ಬಗ್ಗೆ ಪ್ರಸ್ತಾಪಿಸಲಾಗಿದೆ ಎಂದು ತಿಳಿದುಬಂದಿದೆ. ಕರ್ನಾಟಕ ಶಾಸಕಾಂಗದ ವೇತನಗಳು, ಪಿಂಚಣಿಗಳು … Continued

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ಮಲತಂದೆ ಡಿಜಿಪಿ ರಾಮಚಂದ್ರ ರಾವ್‍ಗೆ ‘ಕಡ್ಡಾಯ ರಜೆ’ ನೀಡಿದ ಸರ್ಕಾರ

ಬೆಂಗಳೂರು: ಚಿನ್ನದ ಕಳ್ಳಸಾಗಣೆ ಆರೋಪಿ ರನ್ಯಾ ರಾವ್ ಅವರ ಮಲತಂದೆ, ಕರ್ನಾಟಕದ ಡಿಜಿಪಿ ಶ್ರೇಣಿಯ ಅಧಿಕಾರಿ ರಾಮಚಂದ್ರರಾವ್ ಅವರನ್ನು ಶನಿವಾರ ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿದೆ. ಐಪಿಎಸ್ ಅಧಿಕಾರಿ ರಾಮಚಂದ್ರರಾವ್ ಪ್ರಸ್ತುತ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. ಡಿಜಿಪಿ ರಾಮಚಂದ್ರರಾವ್‌ ಅವರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ … Continued

ರನ್ಯಾ ರಾವ್‌ ಚಿನ್ನ ಕಳ್ಳಸಾಗಣೆ ಪ್ರಕರಣ | ಪ್ರೋಟೋಕಾಲ್ ದುರ್ಬಳಕೆ ; ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಆದೇಶ

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ದುರ್ಬಳಕೆ ಮಾಡಿಕೊಂಡ ಬಗ್ಗೆ ತನಿಖೆ ನಡೆಸಿ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ ಎಂದು ವರದಿ  ತಿಳಿಸಿದೆ. ಅಲ್ಲದೆ, ರನ್ಯಾ ರಾವ್‌ ಮಲತಂದೆ ಡಿಜಿಪಿ ರಾಮಚಂದ್ರ … Continued

ಕರ್ನಾಟಕದಲ್ಲಿ ತಯಾರಾಗುವ ಎಲ್ಲ ಉತ್ಪನ್ನಗಳ ಮೇಲೆ ಕನ್ನಡದ ಲೇಬಲ್ ಕಡ್ಡಾಯ ; ಸರ್ಕಾರದಿಂದ ಆದೇಶ

ಬೆಂಗಳೂರು : ಕರ್ನಾಟಕದಲ್ಲಿ ತಯಾರಾಗುವ ಎಲ್ಲ ಉತ್ಪನ್ನಗಳ ಮೇಲೆ ಹೆಸರು ಹಾಗೂ ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಕನ್ನಡದಲ್ಲಿಯೂ ಮುದ್ರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ … Continued

ಕರ್ನಾಟಕದಲ್ಲಿ ಜಿಪಂ, ತಾಪಂ ಚುನಾವಣೆಗೆ ಕೊನೆಗೂ ಕಾಲ ಸನ್ನಿಹಿತ…

ಬೆಂಗಳೂರು : ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ ಮೀಸಲು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮೇ ಅಂತ್ಯದೊಳಗೆ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟಿಗೆ ತಿಳಿಸಿದೆ. ರಾಜ್ಯ ಸರ್ಕಾರದ ಮುಚ್ಚಳಿಕೆಯನ್ನು ಆಧರಿಸಿ ನ್ಯಾಯಾಂಗ ನಿಂದನೆ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ಇತ್ಯರ್ಥಪಡಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯತ … Continued

ಸಿಎಂ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಬಿ.ಆರ್.ಪಾಟೀಲಗೆ ಈಗ ಮತ್ತೊಂದು ಹುದ್ದೆ, ಸಂಪುಟ ದರ್ಜೆ ಸ್ಥಾನಮಾನ

ಬೆಂಗಳೂರು : ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಆಪ್ತ ಹಾಗೂ ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ (B.R.Patil)​ ಅವರಿಗೆ ಈಗ ಮತ್ತೊಂದು ಹುದ್ದೆ ನೀಡಲಾಗಿದೆ. ಈಗ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಬಿ.ಆರ್.ಪಾಟೀಲ್ ಸಂಪುಟ … Continued