ಮಾಜಿ ಪ್ರಧಾನಿ ಮನಮೋಹನ ಸಿಂಗ್ ನಿಧನ ; ರಾಜ್ಯದಲ್ಲಿ 7 ದಿನ ಶೋಕಾಚರಣೆ, ಡಿ.27 ರಂದು ಸರ್ಕಾರಿ ರಜೆ

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ಶುಕ್ರವಾರ(ಡಿ.27) ಸರ್ಕಾರಿ ರಜೆ ಘೋಷಿಸಲಾಗಿದೆ. 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ಈಗಾಗಲೇ ಒಂದು ವಾರ ಗಳ ಕಾಲ ರದ್ದು ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ ತಿಳಿಸಿದ್ದಾರೆ. ಮನಮೋಹನ ಸಿಂಗ್ ಅವರು ವಿಧಿವಶವಾದ … Continued

ಜನಾಕ್ರೋಶಕ್ಕೆ ಮಣಿದ ಸರ್ಕಾರ ; ಬಿಪಿಎಲ್​ ಕಾರ್ಡ್​​ ರದ್ದು ಮಾಡದಂತೆ ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು: ಅನರ್ಹ ರೇಷನ್‌ ಕಾರ್ಡ್‌ಗಳನ್ನು ರದ್ದು ಮುಂದಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕೆ ಎದುರಾದ ವ್ಯಾಪಕ ವಿರೋಧಕ್ಕೆ ಮಣಿದು ಈಗ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಆದೇಶ ಮಾಡಿದ್ದಾರೆ. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿ ಉಳಿದ … Continued

ಸರ್ಕಾರಿ ಕಚೇರಿ, ಆವರಣಗಳಲ್ಲಿ ಧೂಮಪಾನ, ತಂಬಾಕು ಸೇವನೆ ನಿಷೇಧ

 ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿ ಆವರಣಗಳಲ್ಲಿ ಧೂಮಪಾನ ಇತರೆ ತಂಬಾಕು ಉತ್ಪನ್ನಗಳ ಸೇವನೆ ನಿಷೇಧಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ. ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ … Continued

‘ಸುವರ್ಣ ಮಹೋತ್ಸವ’ ಪ್ರಶಸ್ತಿ ಮೊತ್ತ 1 ಲಕ್ಷಕ್ಕೆ ಏರಿಕೆ : ಸಚಿವ ಶಿವರಾಜ ತಂಗಡಗಿ

ಬೆಂಗಳೂರು: ಸುವರ್ಣ ಮಹೋತ್ಸವ ಪ್ರಶಸ್ತಿಯ ಮೊತ್ತವನ್ನು 50 ಸಾವಿರ ರೂ.ಗಳಿಂದ 1 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಗುರುವಾರ ಪ್ರಕಟಿಸಿದ್ದಾರೆ. ಕರ್ನಾಟಕ ಸಂಭ್ರಮ – 50 ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 50 ಮಹಿಳಾ ಸಾಧಕಿಯರಿಗೆ ಮತ್ತು 50 … Continued

ಸರ್ಕಾರದಿಂದ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ ; ಇದು ಓಲೈಕೆ ರಾಜಕಾರಣ ಎಂದು ಬಿಜೆಪಿ ಕಿಡಿ

ಬೆಂಗಳೂರು : ಹಳೇ ಹುಬ್ಬಳ್ಳಿಯಲ್ಲಿ 2022r ಏಪ್ರಿಲ್ ನಲ್ಲಿ ನಡೆದ ಗಲಭೆ ಪ್ರಕರಣ ಸೇರಿದಂತೆ ಒಟ್ಟು 43 ಪ್ರಕರಣಗಳನ್ನು ರದ್ದು ಮಾಡಲು ಸಚಿವ ಸಂಪುಟ ಕೈಗೊಂಡ ತೀರ್ಮಾನಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಹುಬ್ಬಳ್ಳಿ ಗಲಭೆಯಲ್ಲಿ ದಾಖಲಾಗಿದ್ದವರ ಮೇಲಿನ ಪ್ರಕರಣವನ್ನು ವಾಪಸ್‌ ಪಡೆಯುವ ನಿರ್ಧಾರ ಕೈಗೊಂಡಿದ್ದಕ್ಕೆ … Continued

ಬಿಜೆಪಿ ಸರ್ಕಾರದ ಅವಧಿಯ ‘ಕೋವಿಡ್ ಹಗರಣ’ ತನಿಖೆಗೆ ಎಸ್‌ಐಟಿ ರಚಿಸಲು ಸಚಿವ ಸಂಪುಟ ಅನುಮೋದನೆ: ಎಚ್.ಕೆ. ಪಾಟೀಲ

ಬೆಂಗಳೂರು : ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ನೇಮಿಸಲು (ಎಸ್ಐಟಿ) ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್.ಕೆ. ಪಾಟೀಲ ತಿಳಿಸಿದ್ದಾರೆ. ಮುಖ್ಯಮಂತ್ರಿಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸಚಿವ ಸಂಪುಟದ ನಿರ್ಣಯಗಳ ಕುರಿತು … Continued

ಪಶ್ಚಿಮ ಘಟ್ಟ : ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು: ಪಶ್ಚಿಮ ಘಟ್ಟಗಳ ಕುರಿತ ಡಾ.ಕೆ ಕಸ್ತೂರಿರಂಗನ್ ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸುವ ತನ್ನ ನಿರ್ಧಾರಕ್ಕೆ ಬದ್ಧವಾಗಿರಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಡಾ.ಕೆ ಕಸ್ತೂರಿರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ವರದಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಘೋಷಿಸುತ್ತದೆ. ಆಗ ಅಲ್ಲಿ ಮಾನವ ಹಸ್ತಕ್ಷೇಪ ಮಾಡುವ … Continued

ಕರ್ನಾಟಕದಲ್ಲಿ ಸಿಬಿಐಗೆ ನೀಡಿದ್ದ ಮುಕ್ತ ತನಿಖೆಗೆ ಅನುಮತಿ ಅಧಿಸೂಚನೆ ವಾಪಸ್‌ ; ಸಚಿವ ಸಂಪುಟ ನಿರ್ಧಾರ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸಲು ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರ ಗುರುವಾರ ತನ್ನ ಒಪ್ಪಿಗೆಯನ್ನು ಹಿಂಪಡೆದಿದೆ. ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ಡಿಎಸ್‌ಪಿಇ) ಕಾಯಿದೆ, 1946 ರ ಸೆಕ್ಷನ್ 6 ರ ಪ್ರಕಾರ, ಸಿಬಿಐ ತನಿಖೆ ನಡೆಸಲು … Continued

ಟಿಎಸ್‍ಆರ್-ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ ; 10 ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ

ಬೆಂಗಳೂರು : ಕನ್ನಡ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ನೀಡುವ ಟಿ.ಎಸ್.ರಾಮಚಂದ್ರರಾವ್ (ಟಿಎಸ್‍ಆರ್) ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಕನ್ನಡ ಪತ್ರಿಕೆ ಅಥವಾ ಪತ್ರಿಕಾ ಸಮೂಹವನ್ನು ಕಟ್ಟಿ ಬೆಳೆಸಿದ ಪತ್ರಕರ್ತರ ಸಾಧನೆ ಗುರುತಿಸಿ ನೀಡುವ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಕಟಿಸಿದೆ. ಕೋವಿಡ್ ಸೇರಿ ನಾನಾ ಕಾರಣಗಳಿಂದ ವಿಳಂಬವಾಗಿದ್ದ … Continued

ಕರ್ನಾಟಕದ ಮುಜರಾಯಿ ದೇಗುಲಗಳಲ್ಲಿ ಪೂಜೆ, ಪ್ರಸಾದಕ್ಕೆ ʼನಂದಿನಿ ತುಪ್ಪʼದ ಬಳಕೆ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಎಲ್ಲ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನದಲ್ಲಿ ಪ್ರಸಾದಕ್ಕೆ ಕರ್ನಾಟಕ ಹಾಲು ಒಕ್ಕೂಟ(KMF)ದ ನಂದಿನಿ ತುಪ್ಪವನ್ನೇ ಬಳಸುವಂತೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯ ಅಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ (Muzrai Temple) ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ … Continued