ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲರ ನಿರಾಕರಣೆ : ಸರ್ಕಾರದಿಂದ ಮನವೊಲಿಸುವ ಯತ್ನ

ಬೆಂಗಳೂರು: ಜನವರಿ 22 ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ. ರಾಜ್ಯಪಾಲರ ಈ ಅನಿರೀಕ್ಷಿತ ನಿರ್ಧಾರದ ಬೆನ್ನಲ್ಲೇ, ರಾಜ್ಯ ಸರ್ಕಾರವು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲು ತೀರ್ಮಾನಿಸಿದೆ. ರಾಜ್ಯಪಾಲರ ಈ ನಿರ್ಧಾರಕ್ಕೆ ನಿಖರವಾದ ಕಾರಣಗಳು ಅಧಿಕೃತವಾಗಿ ಇನ್ನು ಬಹಿರಂಗವಾಗಿಲ್ಲ. ರಾಜ್ಯದ ಕಾಂಗ್ರೆಸ್‌ ಸರ್ಕಾರದ … Continued

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಮಸೂದೆ ರಾಷ್ಟ್ರಪತಿಗೆ ರವಾನಿಸಿದ ಕರ್ನಾಟಕದ ರಾಜ್ಯಪಾಲ

ಬೆಂಗಳೂರು: ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ 4% ಮೀಸಲಾತಿ (Muslim reservation) ನೀಡುವ ರಾಜ್ಯದ ವಿಧೇಯಕವನ್ನು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಒಪ್ಪಿಗೆಗಾಗಿ ಕಳುಹಿಸಿದ್ದಾರೆ. ಈ ವಿಧೇಯಕ ವಿಧಾನಮಂಡಲದಲ್ಲಿ ಅಂಗೀಕಾರಗೊಂಡಿತ್ತು. ನಂತರ ರಾಜ್ಯಪಾಲರ ಬಳಿ ಹೋಗಿತ್ತು. ಇದೀಗ ಈ ವಿಧೇಯಕವನ್ನು ರಾಜ್ಯಪಾಲರು ರಾಷ್ಟ್ರಪತಿ ಒಪ್ಪಿಗೆಗೆ ಕಳುಹಿಸಿದ್ದಾರೆ. “ಸಂವಿಧಾನವು ಧರ್ಮದ ಆಧಾರದ ಮೇಲೆ … Continued

ಮುಡಾ ಹಗರಣ | ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ ಜನವರಿ 25ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ ಸೆಕ್ಷನ್‌ 17ಎ ಅಡಿ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅನುಮತಿಸಲು ರಾಜ್ಯಪಾಲರಿಗೆ ಅಧಿಕಾರವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠದ ಮುಂದೆ ರಾಜ್ಯ ಸರ್ಕಾರ ವಾದಿಸಿತು. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯಪಾಲರು ಅನುಮತಿಸಿರುವುದನ್ನು ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಆದೇಶದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ, … Continued