ಟ್ಯಾಟೂನಿಂದ ಬರಲಿದೆ ಎಚ್​ಐವಿ, ಕ್ಯಾನ್ಸರ್ : ಕೇಂದ್ರಕ್ಕೆ ಈ ಬಗ್ಗೆ ಪತ್ರ , ಕಾನೂನು ಜಾರಿಗೆ ಚಿಂತನೆ ; ಗುಂಡೂರಾವ್

ಬೆಂಗಳೂರು: ಇಡ್ಲಿ ಬೇಯಿಸಲು ಉಪಯೋಗಿಸುವ ಪ್ಲಾಸ್ಟಿಕ್ ಹಾಳೆ ಬಳಕೆ ಆರೋಗ್ಯಕ್ಕೆ ಹಾನಿಕರ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಡೆಸಿದ ಪರೀಕ್ಷೆಯಿಂದ ದೃಢಪಟ್ಟ ಟ್ಯಾಟೂನಿಂದ ಎಚ್​ಐವಿ ಹಾಗೂ ಚರ್ಮದ ಕ್ಯಾನ್ಸರ್ ಬರುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಶುಕ್ರವಾರ ಮಾಹಿತಿ ನೀಡಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಹಾಗೂ ಔಷಧ … Continued

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ಸಚಿವ ಸಂಪುಟ ಅಸ್ತು; ಆಯೋಗ ರಚನೆಗೆ ತೀರ್ಮಾನ

ಬೆಂಗಳೂರು: ಪರಿಶಿಷ್ಟ ಜಾತಿ(ಎಸ್‌ಸಿ)ಗಳಿಗೆ ಒಳಮೀಸಲಾತಿ ಜಾರಿ ಮಾಡುವ ಕುರಿತು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶಗಳನ್ನು ಸಂಗ್ರಹಿಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್‌.ಕೆ. … Continued

ವಾಹನಗಳಿಗೆ ಎಚ್​​​ ಎಸ್​ ಆರ್​ ಪಿ ನಂಬರ್​ ಪ್ಲೇಟ್​​ ಅವಳಡಿಸುವ ಗಡುವು ವಿಸ್ತರಣೆ

ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (High Security Registration Number Plate- HSRP)    ಪ್ಲೇಟ್ ಅಳವಡಿಸಿಕೊಳ್ಳುವ ಅಂತಿಮ ದಿನಾಂಕವನ್ನು ವಿಸ್ತರಣೆ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಕಡ್ಡಾಯವಾಗಿ ಅಳವಡಿಸಲು ರಾಜ್ಯ ಸರ್ಕಾರ‌ ನೀಡಿದ ಗಡುವು ಸಮೀಪ ಬಂದ ನಂತರ … Continued

ವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ : ಮೊದಲ ಪಟ್ಟಿಯಲ್ಲಿ 34 ಶಾಸಕರಿಗೆ ಮಣೆ ; ಯಾರಿಗೆ ಯಾವ ನಿಗಮ-ಮಂಡಳಿ-ಪಟ್ಟಿ ಇಲ್ಲಿದೆ…

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ವಿವಿಧ ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಎನ್.ಎ.ಹ್ಯಾರಿಸ್, ಕೆಎಂ ಶಿವಲಿಂಗೇಗೌಡ, ವಿನಯ ಕುಲಕರ್ಣಿ ಸೇರಿದಂತೆ ಒಟ್ಟು 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಸಿ. ಪುಟ್ಟರಂಗಶೆಟ್ಟಿ ಹಾಗೂ ಎಸ್.ಎನ್. ಸುಬ್ಬಾರೆಡ್ಡಿ, ಎನ್.ಎ.ಹ್ಯಾರಿಸ್, ಕೆಎಂ ಶಿವಲಿಂಗೇಗೌಡ, … Continued

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ‘ಹಳೇ ಪಿಂಚಣಿ ಯೋಜನೆ(OPS)ಗೆ ಒಳಪಡಲು ಅವಕಾಶ ನೀಡಿ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕಾಂಗ್ರೆಸ್ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹೊಸ ಪಿಂಚಣಿ ಯೋಜನೆ (ಎನ್ ಪಿಎಸ್)ಯಿಂದ ಹಳೆ ಪಿಂಚಣಿ ಯೋಜನೆಗೆ ಒಳಪಡಲು ಅವಕಾಶ ನೀಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಈ ಬಗ್ಗೆ ಆಡಳಿತ ಮತ್ತು ಸಮನ್ವಯ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಹಳೆಯ ಪಿಂಚಣಿ ಯೋಜನೆಗೆ ಒಳಪಡಲು 6 ಷರತ್ತುಗಳನ್ನು … Continued

ಕೋಲಾರ: ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಪ್ರಕರಣ; ಪ್ರಾಂಶುಪಾಲ, ವಾರ್ಡನ್, ಶಿಕ್ಷಕ ಅಮಾನತು

ಕೋಲಾರ : ಕೋಲಾರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ಮಾಲೂರು ತಾಲ್ಲೂಕಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲರಾದ ಭಾರತಮ್ಮ, ವಾರ್ಡನ್ ಮಂಜುನಾಥ … Continued

ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣ: ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್

ಬೆಳಗಾವಿ: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ ಸಿ) ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಈ ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ ಸಿ), ತನಿಖೆಯ ಪ್ರಗತಿ, ಬಂಧನ, ಪರಿಹಾರ ನೀಡಿದ … Continued

ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆ ಜನವರಿ 1ರಿಂದ ಆರಂಭ

ಬೆಂಗಳೂರು: ಪದವೀಧರರಿಗೆ 3 ಸಾವಿರ ರೂ.ಗಳು ಮತ್ತು ಡಿಪ್ಲೊಮಾ ಮಾಡಿದ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು 1500 ರೂ.ಗಳ ಭತ್ಯೆ ನೀಡುವ ರಾಜ್ಯದ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಪ್ರಾರಂಭವಾಗಲಿದೆ ಹಾಗೂ ಯೋಜನೆ ಜನವರಿ 1ರಿಂದ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಪ್ರಕಟಿಸಿದ್ದಾರೆ. ಈ … Continued

ವಾಹನಗಳಲ್ಲಿ ಹೈ ಸೆಕ್ಯುರಿಟಿ ರಿಜಿಸ್ಪ್ರೇಷನ್‌ ನಂಬರ್‌ ಪ್ಲೇಟ್‌ ಅಳವಡಿಕೆಗೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ : ನವೆಂಬರ್‌ 17 ಕೊನೆ ದಿನ–ನಿಯಮ ಮೀರಿದ್ರೆ ಬೀಳಲಿದೆ ದಂಡ

ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆಯು ಏಪ್ರಿಲ್ 1, 2019 ರ ಮೊದಲು ನೋಂದಾಯಿಸಲಾದ ಎಲ್ಲಾ ವಾಹನಗಳಿಗೆ ನವೆಂಬರ್ 17 ರಿಂದ ಹೈ-ಸೆಕ್ಯುರಿಟಿ ನೋಂದಣಿ ಫಲಕಗಳನ್ನು (HSRP) ಹೊಂದಿರುವುದನ್ನು ಕಡ್ಡಾಯಗೊಳಿಸಿದೆ. ರಾಜ್ಯ ಇಲಾಖೆಯು ಆಗಸ್ಟ್ 17 ರಂದು ಅಧಿಸೂಚನೆಯನ್ನು ಹೊರಡಿಸಿದ್ದು, ಯಾವುದೇ ವಾಹನ ಈ ಗಡುವನ್ನು ಅನುಸರಿಸಲು ವಿಫಲವಾದರೆ ವಾಹನ ಮಾಲೀಕರು ದಂಡದ ಕ್ರಮಕ್ಕೆ ಒಳಪಡಲಾಗುತ್ತದೆ … Continued

ಹುಬ್ಬಳ್ಳಿ: ಗೌನ್ ಧರಿಸುವುದು ಮೇಯರ್‌ಗಳ ವಿವೇಚನೆಗೆ ಬಿಟ್ಟ ವಿಚಾರ ಎಂದು ಸ್ಪಷ್ಟಪಡಿಸಿದ ರಾಜ್ಯ ಸರ್ಕಾರ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮೇಯರ್ ಈರೇಶ್ ಅಂಚಟಗೇರಿ ಅವರು ಸಮಾರಂಭದ ಗೌನ್ ಧರಿಸುವ ಸಂಪ್ರದಾಯ ನಿಲ್ಲಿಸಿ ಸುಮಾರು ಎರಡು ತಿಂಗಳ ನಂತರ, ಗೌನ್ ಧರಿಸುವುದು ಮೇಯರ್‌ಗಳ ವಿವೇಚನೆಗೆ ಬಿಟ್ಟ ವಿಚಾರ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಮೇಯರ್ ಗೌನ್ ತೊಡುವ ಪದ್ಧತಿ ಕೈಬಿಡುವಂತೆ ಆಗ್ರಹಿಸಿ ಅಂಚಟಗೇರಿ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆ ಜಂಟಿ … Continued