ರಾಜ್ಯ ರಸ್ತೆ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್‌ ನಿರ್ಬಂಧ

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಸಿಬ್ಬಂದಿ ಟ್ರೇಡ್‌ ಯೂನಿಯನ್‌ಗಳ ಜಂಟಿ ಕ್ರಿಯಾ ಸಮಿತಿ ಬುಧವಾರ (ಮೇ 20)ರಿಂದ ಕರೆದಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್‌ ನಿರ್ಬಂಧ ವಿಧಿಸಿದೆ. ವಿವಿಧ ಯೂನಿಯನ್‌ಗಳ ನೇತೃತ್ವ ವಹಿಸಿರುವ ಜಂಟಿ ಕ್ರಿಯಾ ಸಮಿತಿಯು 29.04.2026ರ ನೋಟಿಸ್‌ ಆಧರಿಸಿ ಮುಷ್ಕರ ನಡೆಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ” ಎಂದು ಪೀಠ ಆದೇಶಿಸಿತು. ಮುಷ್ಕರ … Continued

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ : ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ರಾಜೇಗೌಡ

ನವದೆಹಲಿ: ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆಗೆ ಸೂಚಿಸಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಚಲಾವಣೆಯಾದ ಅಂಚೆ ಮತಪತ್ರಗಳ ಮರುಪರಿಶೀಲನೆ ಮತ್ತು ಮರುಎಣಿಕೆಗೆ ನಿರ್ದೇಶಿಸಿದ ಕರ್ನಾಟಕ ಹೈಕೋರ್ಟ್‌ನ ಏಪ್ರಿಲ್ 6 ರ ಆದೇಶವನ್ನು ರಾಜೇಗೌಡ ತಮ್ಮ ಅರ್ಜಿಯಲ್ಲಿ ಪ್ರಶ್ನಿಸಿದ್ದಾರೆ. ಮೂರು … Continued

ಯೋಗೀಶ್‌ ಗೌಡ ಕೊಲೆ ಪ್ರಕರಣ : ತೀರ್ಪು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ವಿನಯ ಕುಲಕರ್ಣಿ

ಬೆಂಗಳೂರು : ಧಾರವಾಡ ಜಿಲ್ಲೆಯ ಬಿಜೆಪಿ ಮುಖಂಡ ಯೋಗೇಶ ಗೌಡ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಶುಕ್ರವಾರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಜೀವಾವಧಿ ಶಿಕ್ಷೆ ವಿಧಿಸಿರುವ ತೀರ್ಪನ್ನು ಬದಿಗೆ ಸರಿಸಬೇಕು ಎಂದು ಕೋರಿ ವಿನಯ ಕುಲಕರ್ಣಿ ಅರ್ಜಿ ಸಲ್ಲಿಸಿದ್ದು, … Continued

ಎಸ್‌ಎಸ್‌ಎಲ್‌ಸಿ | ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಿ; ಹೈಕೋರ್ಟ್ ಆದೇಶ

ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದ್ದು, ಆದೇಶ ಮರುಪರಿಶೀಲಿಸಲು ನಿರಾಕರಿಸಿದೆ. ಹೈಕೋರ್ಟ್‌ ಆದೇಶದ ಮರುಪರಿಶೀಲನೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ಸಂಬಂಧ ಕೆಲವು ಮಾರ್ಪಾಡು … Continued

ಗಲಾಟೆ ಪ್ರಕರಣ: ಮಾಜಿ ಸಂಸದ ಅನಂತಕುಮಾರ ಹೆಗಡೆ ಪುತ್ರನ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹಳೇ ನಿಜಗಲ್ ಬಳಿ ಕಾರು ಹಿಂದಿಕ್ಕುವ ವಿಚಾರಕ್ಕೆ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಮಾಜಿ ಸಂಸದ ಅನಂತಕುಮಾರ ಹೆಗಡೆ (Anantkumar Hegde) ಪುತ್ರ ಅಶುತೋಷ ಹೆಗಡೆ  ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಗುರುವಾರ ಹೈಕೋರ್ಟ್‌ ತಡೆ ನೀಡಿದೆ. ಎಫ್‌ಐಆರ್‌ ಮತ್ತು ಆರೋಪ ಪಟ್ಟಿಯಲ್ಲಿ ತಮ್ಮ ಹೆಸರಿಲ್ಲದೇ ಇರುವುದರಿಂದ ಪ್ರಕರಣದಿಂದ … Continued

ಮುಟ್ಟಿನ ರಜೆ ನೀತಿಯನ್ನು ಎಲ್ಲಾ ವಲಯಗಳಲ್ಲೂ ಜಾರಿಗೊಳಿಸಿ ; ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು : ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ರೂಪಿಸಲಾಗಿರುವ ನೀತಿಯನ್ನು ಕಟ್ಟುನಿಟ್ಟಾಗಿ ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಬುಧವಾರ ನಿರ್ದೇಶನ ನೀಡಿದೆ. ಕರ್ನಾಟಕ ಗೆಜೆಟ್‌ನಲ್ಲಿ ಪ್ರಕಟಗೊಂಡಿರುವ ಹೊರತಾಗಿಯೂ ಋತುಚಕ್ರದ ರಜೆ ನೀತಿಯನ್ನು ಹೋಟೆಲ್‌ಗಳು ಮತ್ತಿತರ ಸಂಸ್ಥೆಗಳಲ್ಲಿ … Continued

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ ; ʼಬಿʼ ರಿಪೋರ್ಟ್‌ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಇ.ಡಿ. ಅರ್ಜಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಹಾಗೂ ಮತ್ತಿತರರು ಆರೋಪ ಎದುರಿಸುತ್ತಿದ್ದ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್‌ ಅಂಗೀಕಾರ ಪ್ರಶ್ನಿಸಿ ಜಾರಿ ನಿರ್ದೇಶನಾಲಯವು (ಇಡಿ) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಅರ್ಜಿ ಸಲ್ಲಿಸಿದ್ದು,  ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ ಎಂದು ಬಾರ್‌ … Continued

ಪರಿಸರ ಸ್ನೇಹಿ ಕೈಚೀಲ ಖರೀದಿ ಪ್ರಕರಣ : ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ

ಬೆಂಗಳೂರು: ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ (bag purchase) ಆರೋಪಿತ ಹಗರಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ತನಿಖೆ ಕೋರಿ ಮೈಸೂರಿನ ವಕೀಲ ಎನ್.ಆರ್.ರವಿಚಂದ್ರೇಗೌಡ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್‌ ಏಕಸದಸ್ಯ ಪೀಠವು, ಮೈಸೂರು ಜಿಲ್ಲೆಯ ಅಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ … Continued

ಶರಾವತಿ ಪಂಪ್ ಸ್ಟೋರೇಜ್‌ ಯೋಜನೆ ಕಾಮಗಾರಿಗೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಶರಾವತಿ ಸಿಂಹ ಬಾಲದ ಕೋತಿ (LTM) ಅಭಯಾರಣ್ಯ ಮತ್ತು ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯಲ್ಲಿ ಉದ್ದೇಶಿತ ‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಗೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿ ಅಥವಾ ಚಟುವಟಿಕೆಗಳನ್ನು ನಡೆಸದಂತೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಮಧ್ಯಂತರ ಆದೇಶ ಹೊರಡಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂನಾಚ ಅವರನ್ನೊಳಗೊಂಡ ವಿಭಾಗೀಯ ಪೀಠವು … Continued

ಪರೀಕ್ಷಾ ಕೊಠಡಿ ಒಳಗೆ ಮೊಬೈಲ್‌ ಒಯ್ದಿದ್ದ 12ನೇ ತರಗತಿ ವಿದ್ಯಾರ್ಥಿಯ ಡಿಬಾರ್‌ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು : ಪರೀಕ್ಷಾ ಕೊಠಡಿಯೊಳಗೆ ಮೊಬೈಲ್‌ ಫೋನ್‌ ಒಯ್ದಿದ್ದ ಆರೋಪದಡಿ ಸಿಬಿಎಸ್‌ಇ 12ನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ಎರಡು ವರ್ಷ ಡಿಬಾರ್‌ ಮಾಡಿದ್ದ ಸಿಬಿಎಸ್‌ಇ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಈಚೆಗೆ ಎತ್ತಿಹಿಡಿದಿದೆ. ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಬಿಎಸ್‌ಇ ಮತ್ತು ನವದೆಹಲಿಯ ಪರೀಕ್ಷಾ ನಿಯಂತ್ರಣ ಕೇಂದ್ರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು … Continued