ದ್ವೇಷ ಭಾಷಣದ ಆರೋಪ ; ಸಿ.ಟಿ.ರವಿಗೆ ಮಧ್ಯಂತರ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಮಾತನಾಡುವಾಗ ಕೋಮು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಮಧ್ಯಂತರ ಆದೇಶ ಮಾಡಿದೆ. ಚಿಕ್ಕಮಗಳೂರು ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರು ಹಾಗೂ ಎಫ್‌ಐಆರ್ ರದ್ದು … Continued

ಸುಳ್ಳು ಆದಾಯ ಪ್ರಮಾಣಪತ್ರ ಪ್ರಕರಣ : ಸುಮಾ ಸಾಹುಕಾರಗೆ ಹೈಕೋರ್ಟ್ ತರಾಟೆ

ಬೆಂಗಳೂರು : ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಅಕ್ರಮವಾಗಿ ನೇಮಕವಾಗಲು ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಸಿದ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾದ ಎಫ್ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ ಅವರ ಪುತ್ರಿಯ ವಿರುದ್ಧ ಕರ್ನಾಟಕ ಹೈಕೋರ್ಟ್ ಸೋಮವಾರ ಕಿಡಿಕಾರಿತು. ಹಿಂದುಳಿದ ವರ್ಗಗಳ 3ಬಿ ಕೆಟಗರಿ ಕೋಟಾದಡಿ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ … Continued

52 ಕ್ರಿಮಿನಲ್ ಪ್ರಕರಣ ಹಿಂಪಡೆದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು : ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ಗಲಭೆ ಸೇರಿ ಕೆಲವು ಕೋಮುಗಲಭೆ ಪ್ರಕರಣ ಸೇರಿದಂತೆ ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ 52 ಪ್ರಕರಣಗಳನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ಗುರುವಾರ ತಡೆ ನೀಡಿದೆ. 2026ರ ಮೇ 27ರಂದು ರಾಜ್ಯ ಗೃಹ ಇಲಾಖೆಯು ರಾಜ್ಯದ ವಿವಿಧ ಪೊಲೀಸ್‌ … Continued

ಪೋಕ್ಸೊ ಪ್ರಕರಣ ; ವಚನಾನಂದ ಶ್ರೀಗಳ ನಿರೀಕ್ಷಣಾ ಜಾಮೀನು ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ದಾವಣಗೆರೆಯ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿಗೆ ವಿಚಾರಣಾಧೀನ ನ್ಯಾಯಾಲಯವು ಎಫ್‌ಐಆರ್‌ ದಾಖಲಾಗುವುದಕ್ಕೂ ಮುನ್ನ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿದೆ. ಆರೋಪಿಯಾಗಿರುವ ಸ್ವಾಮೀಜಿಗೆ ಪ್ರಕರಣ ದಾಖಲಾಗುವುದಕ್ಕೂ ಒಂದು ವಾರ ಮುಂಚಿತವಾಗಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ದಾವಣಗೆರೆಯ ವಿಚಾರಣಾಧೀನ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು … Continued

ಧರ್ಮಸ್ಥಳ ಪ್ರಕರಣ; ಚಿನ್ನಯ್ಯ ನನಗೆ ಕರೆ ಮಾಡಿದ್ದ, ಆದರೆ ಎಸ್‌ಐಟಿ ಸಂಪರ್ಕಿಸಲು ಹೇಳಿದ್ದೆ- ನಟ ಪ್ರಕಾಶ್ ರಾಜ

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆರೋಪಗಳು ಹಾಗೂ ‘ಚಿನ್ನಯ್ಯ’ ಎಂಬಾತ ನೀಡಿರುವ ಹೇಳಿಕೆಗಳಿಗೂ ತನಗೂ ಸಂಬಂಧವಿಲ್ಲ ಎಂದು ನಟ ಪ್ರಕಾಶ ರೈ ಹೇಳಿದ್ದಾರೆ. ನಗರದ ಪ್ರೆಸ್ ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ತಮ್ಮ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.“ಧರ್ಮಸ್ಥಳದ ಹೆಸರು ಹಾಳು ಮಾಡಲು … Continued

ಪೋಕ್ಸೊ ಪ್ರಕರಣ | ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು: ಆಘಾತ ವ್ಯಕ್ತಪಡಿಸಿದ ಹೈಕೋರ್ಟ್‌

ಬೆಂಗಳೂರು: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ ಅಡಿ ದಾಖಲಾಗಿರುವ ಪ್ರಕರಣದಲ್ಲಿ ದಾವಣಗೆರೆ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ವಿಚಾರಣಾ ನ್ಯಾಯಾಲಯದ ಕ್ರಮಕ್ಕೆ ಹೈಕೋರ್ಟ್ ಮಂಗಳವಾರ ಆಘಾತ ವ್ಯಕ್ತಪಡಿಸಿದೆ. ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ 2026ರ ಮೇ 6ರಂದು ದಾವಣಗೆರೆಯ ಹೆಚ್ಚುವರಿ ಜಿಲ್ಲಾ ಮತ್ತು … Continued

ರಾಜ್ಯ ರಸ್ತೆ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್‌ ನಿರ್ಬಂಧ

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಸಿಬ್ಬಂದಿ ಟ್ರೇಡ್‌ ಯೂನಿಯನ್‌ಗಳ ಜಂಟಿ ಕ್ರಿಯಾ ಸಮಿತಿ ಬುಧವಾರ (ಮೇ 20)ರಿಂದ ಕರೆದಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್‌ ನಿರ್ಬಂಧ ವಿಧಿಸಿದೆ. ವಿವಿಧ ಯೂನಿಯನ್‌ಗಳ ನೇತೃತ್ವ ವಹಿಸಿರುವ ಜಂಟಿ ಕ್ರಿಯಾ ಸಮಿತಿಯು 29.04.2026ರ ನೋಟಿಸ್‌ ಆಧರಿಸಿ ಮುಷ್ಕರ ನಡೆಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ” ಎಂದು ಪೀಠ ಆದೇಶಿಸಿತು. ಮುಷ್ಕರ … Continued

ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ : ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ರಾಜೇಗೌಡ

ನವದೆಹಲಿ: ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆಗೆ ಸೂಚಿಸಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಚಲಾವಣೆಯಾದ ಅಂಚೆ ಮತಪತ್ರಗಳ ಮರುಪರಿಶೀಲನೆ ಮತ್ತು ಮರುಎಣಿಕೆಗೆ ನಿರ್ದೇಶಿಸಿದ ಕರ್ನಾಟಕ ಹೈಕೋರ್ಟ್‌ನ ಏಪ್ರಿಲ್ 6 ರ ಆದೇಶವನ್ನು ರಾಜೇಗೌಡ ತಮ್ಮ ಅರ್ಜಿಯಲ್ಲಿ ಪ್ರಶ್ನಿಸಿದ್ದಾರೆ. ಮೂರು … Continued

ಯೋಗೀಶ್‌ ಗೌಡ ಕೊಲೆ ಪ್ರಕರಣ : ತೀರ್ಪು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ವಿನಯ ಕುಲಕರ್ಣಿ

ಬೆಂಗಳೂರು : ಧಾರವಾಡ ಜಿಲ್ಲೆಯ ಬಿಜೆಪಿ ಮುಖಂಡ ಯೋಗೇಶ ಗೌಡ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಶುಕ್ರವಾರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಜೀವಾವಧಿ ಶಿಕ್ಷೆ ವಿಧಿಸಿರುವ ತೀರ್ಪನ್ನು ಬದಿಗೆ ಸರಿಸಬೇಕು ಎಂದು ಕೋರಿ ವಿನಯ ಕುಲಕರ್ಣಿ ಅರ್ಜಿ ಸಲ್ಲಿಸಿದ್ದು, … Continued

ಎಸ್‌ಎಸ್‌ಎಲ್‌ಸಿ | ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಿ; ಹೈಕೋರ್ಟ್ ಆದೇಶ

ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಗ್ರೇಡ್ ಬದಲಿಗೆ ಅಂಕ ನೀಡಲು ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದ್ದು, ಆದೇಶ ಮರುಪರಿಶೀಲಿಸಲು ನಿರಾಕರಿಸಿದೆ. ಹೈಕೋರ್ಟ್‌ ಆದೇಶದ ಮರುಪರಿಶೀಲನೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ಸಂಬಂಧ ಕೆಲವು ಮಾರ್ಪಾಡು … Continued