ಗಲಾಟೆ ಪ್ರಕರಣ: ಮಾಜಿ ಸಂಸದ ಅನಂತಕುಮಾರ ಹೆಗಡೆ ಪುತ್ರನ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಹಳೇ ನಿಜಗಲ್ ಬಳಿ ಕಾರು ಹಿಂದಿಕ್ಕುವ ವಿಚಾರಕ್ಕೆ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಮಾಜಿ ಸಂಸದ ಅನಂತಕುಮಾರ ಹೆಗಡೆ (Anantkumar Hegde) ಪುತ್ರ ಅಶುತೋಷ ಹೆಗಡೆ  ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಗುರುವಾರ ಹೈಕೋರ್ಟ್‌ ತಡೆ ನೀಡಿದೆ. ಎಫ್‌ಐಆರ್‌ ಮತ್ತು ಆರೋಪ ಪಟ್ಟಿಯಲ್ಲಿ ತಮ್ಮ ಹೆಸರಿಲ್ಲದೇ ಇರುವುದರಿಂದ ಪ್ರಕರಣದಿಂದ … Continued

ಮುಟ್ಟಿನ ರಜೆ ನೀತಿಯನ್ನು ಎಲ್ಲಾ ವಲಯಗಳಲ್ಲೂ ಜಾರಿಗೊಳಿಸಿ ; ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು : ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನಸಹಿತ ರಜೆ ನೀಡುವ ಸಂಬಂಧ ರೂಪಿಸಲಾಗಿರುವ ನೀತಿಯನ್ನು ಕಟ್ಟುನಿಟ್ಟಾಗಿ ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಬುಧವಾರ ನಿರ್ದೇಶನ ನೀಡಿದೆ. ಕರ್ನಾಟಕ ಗೆಜೆಟ್‌ನಲ್ಲಿ ಪ್ರಕಟಗೊಂಡಿರುವ ಹೊರತಾಗಿಯೂ ಋತುಚಕ್ರದ ರಜೆ ನೀತಿಯನ್ನು ಹೋಟೆಲ್‌ಗಳು ಮತ್ತಿತರ ಸಂಸ್ಥೆಗಳಲ್ಲಿ … Continued

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ ; ʼಬಿʼ ರಿಪೋರ್ಟ್‌ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಇ.ಡಿ. ಅರ್ಜಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಹಾಗೂ ಮತ್ತಿತರರು ಆರೋಪ ಎದುರಿಸುತ್ತಿದ್ದ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್‌ ಅಂಗೀಕಾರ ಪ್ರಶ್ನಿಸಿ ಜಾರಿ ನಿರ್ದೇಶನಾಲಯವು (ಇಡಿ) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಅರ್ಜಿ ಸಲ್ಲಿಸಿದ್ದು,  ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ ಎಂದು ಬಾರ್‌ … Continued

ಪರಿಸರ ಸ್ನೇಹಿ ಕೈಚೀಲ ಖರೀದಿ ಪ್ರಕರಣ : ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ

ಬೆಂಗಳೂರು: ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ (bag purchase) ಆರೋಪಿತ ಹಗರಣದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ತನಿಖೆ ಕೋರಿ ಮೈಸೂರಿನ ವಕೀಲ ಎನ್.ಆರ್.ರವಿಚಂದ್ರೇಗೌಡ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್‌ ಏಕಸದಸ್ಯ ಪೀಠವು, ಮೈಸೂರು ಜಿಲ್ಲೆಯ ಅಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ … Continued

ಶರಾವತಿ ಪಂಪ್ ಸ್ಟೋರೇಜ್‌ ಯೋಜನೆ ಕಾಮಗಾರಿಗೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಶರಾವತಿ ಸಿಂಹ ಬಾಲದ ಕೋತಿ (LTM) ಅಭಯಾರಣ್ಯ ಮತ್ತು ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯಲ್ಲಿ ಉದ್ದೇಶಿತ ‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಗೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿ ಅಥವಾ ಚಟುವಟಿಕೆಗಳನ್ನು ನಡೆಸದಂತೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಮಧ್ಯಂತರ ಆದೇಶ ಹೊರಡಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂನಾಚ ಅವರನ್ನೊಳಗೊಂಡ ವಿಭಾಗೀಯ ಪೀಠವು … Continued

ಪರೀಕ್ಷಾ ಕೊಠಡಿ ಒಳಗೆ ಮೊಬೈಲ್‌ ಒಯ್ದಿದ್ದ 12ನೇ ತರಗತಿ ವಿದ್ಯಾರ್ಥಿಯ ಡಿಬಾರ್‌ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು : ಪರೀಕ್ಷಾ ಕೊಠಡಿಯೊಳಗೆ ಮೊಬೈಲ್‌ ಫೋನ್‌ ಒಯ್ದಿದ್ದ ಆರೋಪದಡಿ ಸಿಬಿಎಸ್‌ಇ 12ನೇ ತರಗತಿ ವಿದ್ಯಾರ್ಥಿಯೊಬ್ಬನನ್ನು ಎರಡು ವರ್ಷ ಡಿಬಾರ್‌ ಮಾಡಿದ್ದ ಸಿಬಿಎಸ್‌ಇ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಈಚೆಗೆ ಎತ್ತಿಹಿಡಿದಿದೆ. ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಬಿಎಸ್‌ಇ ಮತ್ತು ನವದೆಹಲಿಯ ಪರೀಕ್ಷಾ ನಿಯಂತ್ರಣ ಕೇಂದ್ರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು … Continued

ಮಾನಹಾನಿ ಸುದ್ದಿ : ಕರ್ನಾಟಕ ಹೈಕೋರ್ಟ್​ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ

ಬೆಂಗಳೂರು : ಶ್ರೀಲಂಕಾದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎಎಚ್‌ಎಂ ದಿಲೀಪ ನವಾಜ್‌ ಅವರು ತನ್ನ ವಿರುದ್ಧದ ಎಲ್ಲ ಮಾನಹಾನಿ ಸುದ್ದಿ/ಲೇಖನ ಮತ್ತು ಯುಆರ್‌ಎಲ್‌ಗಳನ್ನು ತೆಗೆದುಹಾಕುವಂತೆ ಕೋರಿ ಕರ್ನಾಟಕ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಶ್ರೀಲಂಕಾದ ನ್ಯಾಯಮೂರ್ತಿ ದಿಲೀಪ ನವಾಜ್‌ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್‌ ಶಂಕರ ಮಗದುಮ್‌ ಅವರ ಏಕಸದಸ್ಯ ಪೀಠ ಈ … Continued

ಕಾಂತಾರ ಮಿಮಿಕ್ರಿ ಪ್ರಕರಣ ; ನಟ ರಣವೀರ್‌ ಸಿಂಗ್‌ ಗೆ ಕರ್ನಾಟಕ ಹೈಕೋರ್ಟ್‌ ತರಾಟೆ

ಬೆಂಗಳೂರು : ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಕರ್ನಾಟಕ ಹೈಕೋರ್ಟ್ ಬಂಧನದಿಂದ ತಾತ್ಕಾಲಿಕ ಸಮಾಧಾನ ನೀಡಿದೆಯಾದರೂ, ಅವರ ವರ್ತನೆಯ ಬಗ್ಗೆ ನ್ಯಾಯಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, “ಸೆಲೆಬ್ರಿಟಿಯಾದ ತಕ್ಷಣ ಧಾರ್ಮಿಕ ನಂಬಿಕೆಗಳನ್ನು ಅಪಹಾಸ್ಯ ಮಾಡುವ ಹಕ್ಕು ಯಾರಿಗೂ ಇಲ್ಲ” ಎಂದು ಹೇಳಿದ್ದಾರೆ. ಕೋರ್ಟ್ … Continued

ಮಾನನಷ್ಟ ಮೊಕದ್ದಮೆ ರದ್ದು ಕೋರಿದ್ದ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಐಪಿಎಸ್‌ ಅಧಿಕಾರಿ ಡಿ. ರೂಪಾ ಮೌದ್ಗಿಲ್‌ (D Roopa) ಅವರು ಹೂಡಿರುವ ಮಾನಹಾನಿ ಪ್ರಕರಣದಲ್ಲಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿಗೆ (Rohini Sindhuri) ಹಿನ್ನಡೆಯಾಗಿದೆ. ರೂಪಾ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ರದ್ದು ಮಾಡುವಂತೆ ಕೋರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಐಪಿಎಸ್‌ ಅಧಿಕಾರಿ ರೂಪಾ ಅವರು ತನ್ನ … Continued

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶ

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ (ಭಾಗ್ಯನಗರ) ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್‌ ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿ ಆದೇಶಿದೆ. ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧು ಎಂದು ಘೋಷಣೆ ಮಾಡಬೇಕು ಎಂದು ಪರಾಜಿತ ಅಭ್ಯರ್ಥಿ ಸಿ ಮುನಿರಾಜು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರಿದ್ದ … Continued