ಮುರುಘಾ ಮಠದ ಆಡಳಿತ ನಿರ್ವಹಣೆಗೆ 3 ದಿನದಲ್ಲಿ ಸಮಿತಿ ರಚಿಸಿ: ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ : ಚಿತ್ರದುರ್ಗದ ಮುರುಘಾ ಮಠ ಮತ್ತು ಎಸ್‌ಜೆಎಂ ವಿದ್ಯಾಪೀಠದ ಆಡಳಿತ ನಿರ್ವಹಣೆಗೆ ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಡಾ. ಶಿವಮೂರ್ತಿ ಮುರುಘಾ ಶರಣರು ಮತ್ತು ಎಚ್‌.ಏಕಾಂತಯ್ಯ (ಅರ್ಜಿದಾರ) ಅವರನ್ನು ಹೊರಗಿಟ್ಟು ಮೂರು ದಿನಗಳಲ್ಲಿ ಸಮಿತಿ ರಚಿಸಬೇಕು ಎಂದು ಮಂಗಳವಾರ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಎಚ್‌. ಏಕಾಂತಯ್ಯ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು … Continued

ಸಿಎಂ ಸಿದ್ದರಾಮಯ್ಯಗೆ ದಂಡ: ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದ ಸುಪ್ರಿಂ ಕೋರ್ಟ್‌

ನವದೆಹಲಿ : ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮ್ಯಯ ಮತ್ತು ಇತರ ನಾಯಕರಿಗೆ ತಲಾ ₹10 ಸಾವಿರ ದಂಡ ವಿಧಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ. ಹಾಗೂ ಮಾರ್ಚ್‌ 6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಕರ್ನಾಟಕ ಮುಖ್ಯಮಂತ್ರಿ (ಸಿಎಂ) ಸಿದ್ದರಾಮಯ್ಯ, ಸಚಿವರಾದ ರಾಮಲಿಂಗಾ ರೆಡ್ಡಿ ಮತ್ತು ಎಂ.ಬಿ.ಪಾಟೀಲ, ಹಾಗೂ ಮತ್ತು ಕರ್ನಾಟಕ ಕಾಂಗ್ರೆಸ್‌ … Continued

ಸಂಯಮದಿಂದ ಮಾತನಾಡಲು ನಿಮ್ಮ ಕಕ್ಷಿದಾರರಿಗೆ ಹೇಳಿ: ಬಿಜೆಪಿ ಮುಖಂಡ ಈಶ್ವರಪ್ಪಗೆ ಹೈಕೋರ್ಟ್‌ ತರಾಟೆ

ಬೆಂಗಳೂರು : ನಮ್ಮ ಧುರೀಣರು ಮಾತನಾಡುವಾಗ ಒಳ್ಳೆಯ ಭಾಷೆಯನ್ನು ಏಕೆ ಬಳಸುವುದಿಲ್ಲ? ನಾವು ಏನೋ ಒಂದು ಮಾತನಾಡಬಾರದು. ಸಂಯಮದಿಂದ ಭಾಷಾ ಪ್ರಯೋಗ ಮಾಡಬೇಕು. ಪದ ಬಳಕೆಯಲ್ಲಿ ಜವಾಬ್ದಾರಿಯುತವಾಗಿರಬೇಕು ಎಂದು ನಿಮ್ಮ ಕಕ್ಷಿದಾರರಿಗೆ ಹೇಳಿ” ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಮಾಜಿ ಉಪಮುಖ್ಯಮಂತ್ರಿ ಕೆ ಎಸ್‌ ಈಶ್ವರಪ್ಪ ಅವರ ಕುರಿತು ಮೌಖಿಕವಾಗಿ ಹೇಳಿತು. ದೇಶವನ್ನು ಛಿದ್ರ ಮಾಡುತ್ತೇವೆ … Continued

ಸಿಎಂ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತಕುಮಾರ ಹೆಗಡೆ ಬಳಸಿದ ಭಾಷೆ ಶೋಭೆ ತರುವಂಥದ್ದಲ್ಲ : ಹೈಕೋರ್ಟ್‌ ಅಸಮಾಧಾನ

ಬೆಂಗಳೂರು : “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಅವರು ಬಳಕೆ ಮಾಡಿರುವ ಭಾಷೆ ಶೋಭೆ ತರುವಂಥದ್ದಲ್ಲ. ಭಾಷೆ ಬಳಕೆ ಮೇಲೆ ನಿಯಂತ್ರಣ ಇರಬೇಕು ಎಂಬುದನ್ನು ನಿಮ್ಮ ಕ್ಷಕಿದಾರರಿಗೆ ಹೇಳಿ” ಎಂದು ಹೈಕೋರ್ಟ್‌ ಶುಕ್ರವಾರ ಮೌಖಿಕವಾಗಿ ಎಚ್ಚರಿಕೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಮಮಂದಿರ ವಿಚಾರದ ಕುರಿತು ಆಕ್ಷೇಪಾರ್ಹ ಹೇಳಿಕೆ … Continued

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಎನ್ ವಿ ಅಂಜಾರಿಯಾ ನೇಮಕ

ಬೆಂಗಳೂರು : ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಕಾನೂನು ಖಾತೆ ಕೇಂದ್ರ ರಾಜ್ಯ ಸಚಿವ ಅರ್ಜುನ್ ರಾಮ ಮೇಘವಾಲ್ ಇದನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ಫೆಬ್ರವರಿ 7 ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ನ್ಯಾಯಮೂರ್ತಿ ಅಂಜಾರಿಯಾ ಅವರನ್ನು … Continued

40% ಕಮಿಷನ್‌ ಆರೋಪ ಪ್ರಕರಣ: ಏಕ ವ್ಯಕ್ತಿ ಆಯೋಗದ ಮುಂದೆ ಯಾಕೆ ಒಂದೇ ಒಂದು ಪ್ರಕ್ರಿಯೆ ನಡೆದಿಲ್ಲ ; ಹೈಕೋರ್ಟ್‌ ಪ್ರಶ್ನೆ

ಬೆಂಗಳೂರು : ಕಳೆದ ನಾಲ್ಕು ವರ್ಷದಲ್ಲಿ ಬಿಬಿಎಂಪಿ ಸೇರಿದಂತೆ ವಿವಿಧ ಇಲಾಖೆಗಳ ಗುತ್ತಿಗೆ ಕಾಮಗಾರಿಗಳಲ್ಲಿ ನಡೆದಿದೆ ಎಂದು ಆರೋಪಿಸಲಾದ ಅಕ್ರಮಗಳ ಕುರಿತು ವಿಚಾರಣೆ ನಡೆಸಲು ನೇಮಕಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನದಾಸ ಅವರ ಏಕ ವ್ಯಕ್ತಿ ಆಯೋಗದ ಮುಂದೆ ಏಕೆ ಒಂದೇ ಒಂದು ಪ್ರಕ್ರಿಯೆ ನಡೆದಿಲ್ಲ ಎಂಬುದನ್ನು ರಾಜ್ಯ ಸರ್ಕಾರ ತಿಳಿಸಬೇಕು. ಇಲ್ಲವಾದಲ್ಲಿ ಸೂಕ್ತ ಆದೇಶ … Continued

ವಂಚನೆ ಪ್ರಕರಣ: ರಮೇಶ್‌ ಜಾರಕಿಹೊಳಿಗೆ ತಾತ್ಕಾಲಿಕ ರಿಲೀಫ್‌ ನೀಡಿದ ಹೈಕೋರ್ಟ್

ಬೆಂಗಳೂರು : ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ ಲಿಮಿಟೆಡ್‌ಗೆ ₹439 ಕೋಟಿ ಸಾಲ ಪಾವತಿಸದೇ ವಂಚಿಸಿರುವ ಆರೋಪಕ್ಕೆ ಗುರಿಯಾಗಿರುವ ಮೇಲೆ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ದಾಖಲಾದ ಪ್ರಕರಣದ ಸಂಬಂಧ ಮುಂದಿನ ವಿಚಾರಣೆ ವರೆಗೆ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ನಿರ್ದೇಶಿಸಿದೆ. ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ … Continued

ಚುನಾವಣೆ ವೇಳೆ ಗ್ಯಾರಂಟಿ ಭಾಗ್ಯಗಳ ಮೂಲಕ ಮತದಾರರಿಗೆ ಆಮಿಷ : ಚುನಾವಣೆ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆ ವೇಳೆ ಮತದಾರರಿಗೆ ಗ್ಯಾರಂಟಿ ರೂಪದಲ್ಲಿ ಆಮಿಷವೊಡ್ಡಲಾಗಿದ್ದು, ಅಂತಹ ಅಕ್ರಮಗಳನ್ನು ತಡೆಯುವಂತೆ ಸರ್ಕಾರಗಳು ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಮತ್ತಿತರರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಗುರುವಾರ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್‌ ಜಾರಿ ಮಾಡಿದೆ. … Continued

ಎಐಸಿಸಿ ಅಧ್ಯಕ್ಷ ಖರ್ಗೆಗೆ ನಿಂದನೆ ಆರೋಪ: ಸೂಲಿಬೆಲೆ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

ಕಲಬುರಗಿ : ಕಾಂಗ್ರೆಸ್‌ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಿ ಗುರಿಯಾಗಿ ಜಾತಿ ನಿಂದನೆ ಪ್ರಕರಣ ಎದುರಿಸುತ್ತಿರುವ ನಮೋ ಬ್ರಿಗೇಡ್‌ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ನ ಕಲಬುರ್ಗಿ ಪೀಠವು ಮಂಗಳವಾರ ತಡೆಯಾಜ್ಞೆ ನೀಡಿದೆ. ರಾಜಕೀಯ ಕಾರಣಕ್ಕಾಗಿ ತನ್ನ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸಬೇಕು ಎಂದು ಕೋರಿ ಚಕ್ರವರ್ತಿ … Continued

ಗೋಕರ್ಣ ಮಹಾಬಲೇಶ್ವರ ದೇಗುಲ ಮೇಲ್ವಿಚಾರಣಾ ಸಮಿತಿಯ ಸದಸ್ಯರ ಬದಲಾವಣೆ: ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು : ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಚಟುವಟಿಕೆಗಳ ನಿರ್ವಹಣೆಗಾಗಿ ಸುಪ್ರೀಂ ಕೋರ್ಟ್‌ ಆದೇಶದ ಅನ್ವಯ ರಚಿಸಲಾಗಿದ್ದ ಮೇಲ್ವಿಚಾರಣಾ ಸಮಿತಿಯ ನಾಲ್ವರು ಸದಸ್ಯರನ್ನು ತೆಗೆದುಹಾಕಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿದೆ. ಮೇಲ್ವಿಚಾರಣಾ ಸಮಿತಿಯಲ್ಲಿದ್ದ ಇಬ್ಬರು ಉಪಾಧಿವಂತರಯ ಹಾಗೂ ಇಬ್ಬರು ವಿದ್ವಾಂಸರನ್ನು ಬದಲಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್‌ ರದುಪಡಿಸಿದೆ. ಮಠದ ಮೇಲ್ವಿಚಾರಣಾ ಸಮಿತಿಯ ನಾಲ್ವರು … Continued