ಮುಡಾದ ದಟ್ಟಗಳ್ಳಿಯ ಜಮೀನು ಜಪ್ತಿ ಪ್ರಕರಣ | ಆತುರದ ಕ್ರಮಕ್ಕೆ ಮುಂದಾಗುವುದು ಬೇಡ : ಇ.ಡಿ.ಗೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು : ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆಯ ಅಕ್ರಮ ಹಗರಣದ ಹಿನ್ನೆಲೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ದಟ್ಟಗಳ್ಳಿಯಲ್ಲಿರುವ ಜಮೀನನ್ನು ಜಾರಿ ನಿರ್ದೇಶನಾಲಯ (ಇ ಡಿ) ಜಪ್ತಿ ಮಾಡಿದ್ದು, ಸದ್ಯ ಈ ಕುರಿತು ಯಾವುದೇ ಆತುರದ ಕ್ರಮಕ್ಕೆ ಮುಂದಾಗುವುದು ಬೇಡ ಎಂದು ಕರ್ನಾಟಕ ಹೈಕೋರ್ಟ್‌ ಬುಧವಾರ ಇ.ಡಿ.ಗೆ ನಿರ್ದೇಶಿಸಿದೆ. ಇ.ಡಿ. ಕ್ರಮದ ವಿರುದ್ಧ … Continued

ಸಿದ್ದರಾಮಯ್ಯ ವಿರುದ್ಧ ತನಿಖೆ ಏಕೆ ಅಗತ್ಯ ? ಹೈಕೋರ್ಟ್ ಹೇಳಿದ್ದೇನು…?

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆರೆಮರೆಯಲ್ಲಿ ಇಲ್ಲ ಎಂದು ಒಪ್ಪಿಕೊಳ್ಳುವುದು ಕಷ್ಟ. ಮುಖ್ಯಮಂತ್ರಿ ಕುಟುಂಬದವರೇ ಫಲಾನುಭವಿ ಆಗಿರುವುದರಿಂದ ಮುಡಾ ಪ್ರಕರಣದಲ್ಲಿ ತನಿಖೆ ಅಗತ್ಯವಿದೆ ಎಂದು ಹೈಕೋರ್ಟ್‌ (High Court) ತೀರ್ಪಿನಲ್ಲಿ ಹೇಳಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA) ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಸೆಕ್ಷನ್ 17 ಎ ಭ್ರಷ್ಟಾಚಾರ ನಿರ್ಮೂಲನೆ … Continued

ಲೈಂಗಿಕ ದೌರ್ಜನ್ಯದ ಪ್ರಕರಣ : ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡರಿಗೆ ಜಾಮೀನು ಮಂಜೂರು

ಬೆಂಗಳೂರು : ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ನ್ಯಾಯಪೀಠ ಜಾಮೀನು ನೀಡಿ ಆದೇಶಿಸಿದೆ. ಸಾಕ್ಷ್ಯಗಳ ನಾಶ ಮಾಡಬಾರದು, ನ್ಯಾಯಾಲಯದ ವ್ಯಾಪ್ತಿಯಿಂದ ಹೊರ ಹೋಗಬಾರದು ಮತ್ತು ಇಬ್ಬರು ಶ್ಯೂರಿಟಿ ನೀಡಬೇಕು ಎಂಬುದಾಗಿ … Continued

ಪ್ರಜ್ವಲ್‌ ಅಶ್ಲೀಲ ವೀಡಿಯೊ ಪ್ರಕರಣ : ನಿರೀಕ್ಷಣಾ ಜಾಮೀನು ಕೋರಿ ನಾಲ್ವರಿಂದ ಹೈಕೋರ್ಟ್‌ ಗೆ ಅರ್ಜಿ

ಬೆಂಗಳೂರು : ಹಾಸನ ಲೋಕಸಭಾ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೊ ಮತ್ತು ಚಿತ್ರಗಳ ಪೆನ್‌ಡ್ರೈವ್‌ ಮತ್ತು ಸಿ ಡಿ ಹಂಚಿಕೆ ಪ್ರಕರಣದ ನಾಲ್ವರು ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಆರೋಪಿಗಳಾದ ನವೀನ ಗೌಡ ಅಲಿಯಾಸ್‌ ಎನ್‌.ಆರ್‌. ನವೀನಕುಮಾರ, ಎನ್‌.ಕಾರ್ತಿಕ, ಬಿ ಸಿ ಚೇತನಕುಮಾರ ಮತ್ತು … Continued

ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಅಂದಿನ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆಗ ವಿರೋಧ ಪಕ್ಷದ ನಾಯಕರಾಗಿದ್ದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ. ಪ್ರಕರಣ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಕ್ರಿಮಿನಲ್ … Continued

ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ: ಬಂಡೀಪುರ ಪರಿಸರ ವಲಯ ನಿಗಾ ಸಮಿತಿಗೆ ಉತ್ತರಿಸಲು ನಟ ಗಣೇಶಗೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಬಂಡೀಪುರ ಸೂಕ್ಷ್ಮ ಪರಿಸರ ವಲಯದ ವ್ಯಾಪ್ತಿಯಲ್ಲಿ ಬರುವ ತಮ್ಮ ಜಮೀನಿನಲ್ಲಿ ಕಟ್ಟಡ ನಿರ್ಮಾಣಕ್ಕೆ ನಿರ್ಬಂಧ ವಿಧಿಸಿರುವುದಕ್ಕೆ ಸಂಬಂಧಿಸಿದಂತೆ ಬಂಡೀಪುರ ಸೂಕ್ಷ್ಮ ಪರಿಸರ ವಲಯ ನಿಗಾ ಸಮಿತಿಗೆ ಏಳು ದಿನಗಳಲ್ಲಿ ನಟ ಗಣೇಶ ಉತ್ತರ ನೀಡಬೇಕು ಹಾಗೂ ಇದಾದ ನಾಲ್ಕು ವಾರಗಳಲ್ಲಿ ಸಮಿತಿ ನಿರ್ಧಾರ ಕೈಗೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್‌ ಸೋಮವಾರ ಆದೇಶಿಸಿದೆ. ತಾತ್ಕಾಲಿಕ … Continued

ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ಕೋರಿ ಹೈಕೋರ್ಟಿಗೆ ಅರ್ಜಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್​ಗಳನ್ನು ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿ ಚುನಾವಣೆಯಲ್ಲಿ ಗೆಲುವು ಸಾಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೆ.ಎಂ.ಶಂಕರ ಎಂಬವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) … Continued

ವಿಧವಾ ವೇತನ ದುರ್ಬಳಕೆ: 80 ವರ್ಷದ ನಿವೃತ್ತ ಸರ್ಕಾರಿ ನೌಕರನಿಗೆ ಒಂದು ವರ್ಷ ಜೈಲು ಬದಲು ಒಂದು ದಿನ ಕೋರ್ಟ್‌ನಲ್ಲಿ ಕೂರುವ ಶಿಕ್ಷೆ

ಬೆಂಗಳೂರು: 36 ವರ್ಷಗಳ ಹಿಂದೆ ಸರ್ಕಾರಿ ನೌಕರನಾಗಿದ್ದಾಗ ಹಣ ದುರ್ಬಳಕೆಗೆ ವಿಧಿಸಿದ್ದ ಒಂದು ವರ್ಷದ ಜೈಲು ಶಿಕ್ಷೆಯನ್ನು ಹೈಕೋರ್ಟ್‌ ನ್ಯಾಯಾಮೂರ್ತಿಗಳು ವಯಸ್ಸನ್ನು ಗಣನೆಗೆ ತೆಗೆದುಕೊಂಡು ಮಾನವೀಯತೆ ಆಧಾರದಲ್ಲಿ ಕಲಾಪ ಮುಗಿಯುವ ತನಕ ಕೋರ್ಟ್‌ನಲ್ಲೇ ಇಡೀ ದಿನ ಕುಳಿತುಕೊಳ್ಳವ ಶಿಕ್ಷೆಯಾಗಿ ಪರಿವರ್ತಿಸಿದ್ದಾರೆ. 36 ವರ್ಷಗಳ ಹಿಂದೆ ಸರ್ಕಾರಿ ಉದ್ಯೋಗಿಯಾಗಿದ್ದಾಗ ವಿಧವಾ ವೇತನ ದುರ್ಬಳಕೆ ಮಾಡಿದ್ದ ಪ್ರಕರಣದಲ್ಲಿ 80 … Continued

ನಂದಿ ಬೆಟ್ಟದ ಸಮೀಪ ಆದಿಯೋಗಿ ಪ್ರತಿಮೆ ನಿರ್ಮಾಣ: ಯಥಾಸ್ಥಿತಿ ಕಾಪಾಡಲು ಇಶಾ ಯೋಗ ಕೇಂದ್ರಕ್ಕೆ ಹೈಕೋರ್ಟ್‌

ಬೆಂಗಳೂರು : ಚಿಕ್ಕಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ಅವಲಗುರ್ಕಿಯಲ್ಲಿ ಆದಿಯೋಗಿ ಪ್ರತಿಷ್ಠಾಪನೆಗೆ ಮಂಜೂರಾಗಿರುವ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಸದೆ ಯತಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ನಿರ್ದೇಶಿಸಿದೆ. ಚಿಕ್ಕಬಳ್ಳಾಪುರದ ಚಂಬಳ್ಳಿಯ ಎಸ್‌ ಕ್ಯಾತಪ್ಪ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್.‌ ಕಿಣಗಿ ಅವರ ನೇತೃತ್ವದ … Continued

ಘಟನೆ ನಡೆದು ನಾಲ್ಕು ವರ್ಷ ಮೀರಿದ್ದರೆ ನಿವೃತ್ತ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತಿಲ್ಲ: ಹೈಕೋರ್ಟ್‌ ಮಹತ್ವದ ತೀರ್ಪು

ಬೆಂಗಳೂರು:ನಿವೃತ್ತ ಅಧಿಕಾರಿಯ ವಿರುದ್ಧ ಆರೋಪಿಸಲಾದ ಘಟನೆಯು ನಡೆದು ನಾಲ್ಕು ವರ್ಷಗಳಿಗೂ ಹೆಚ್ಚು ಕಾಲವಾಗಿದ್ದರೆ ಕರ್ನಾಟಕ ನಾಗರಿಕ ಸೇವೆಗಳ ಕಾನೂನಿನ ನಿಯಮ 214 (2) (ಬಿ)ರ ಅನ್ವಯ ಇಲಾಖಾ ತನಿಖಾ ಪ್ರಕ್ರಿಯೆಯನ್ನು ನಡೆಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ. ಕರ್ನಾಟಕ ಗೃಹ ಮಂಡಳಿಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಅನಿಲಕುಮಾರ ಹಾಗೂ ಟಿ. … Continued