ವಿಧಾನ ಪರಿಷತ್‌ ಉಪಚುನಾವಣೆ : ಬಾಬುರಾವ್ ಚಿಂಚನಸೂರ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ವಿಧಾನ ಪರಿಷತ್‍ಗೆ ಆಯ್ಕೆಯಾಗುವ ಒಂದು ಸ್ಥಾನದ ಉಪಚುನಾವಣೆಯಲ್ಲಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್ ಸ್ಥಾನ ಹಿನ್ನೆಲೆಯಲ್ಲಿ ಈ ಸ್ಥಾನಕ್ಕೆ ಚುನಾವಣಾ ಆಯೋಗ ಚುನಾವಣೆ ನಡೆಸಿತ್ತು. ಆಡಳಿತಾರೂಢ ಬಿಜೆಪಿಯಿಂದ ಬಾಬುರಾವ್ ಚಿಂಚನಸೂರ ಮಾತ್ರ ಚುನಾವಣಾ ಕಣದಲ್ಲಿ ಇದ್ದಿದ್ದರಿಂದ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ … Continued