ಭಾರತ್‌ ಬಂದ್‌: ಕರ್ನಾಟಕ ವಿವಿ ಪರೀಕ್ಷೆಗಳು ಮುಂದೂಡಿಕೆ

ಧಾರವಾಡ: ರೈತ ಸಂಘಟನೆಗಳು ಸೋಮವಾರ ಭಾರತ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯವು ಸೋಮವಾರ (27-09-2021) ನಡೆಸಬೇಕಿದ್ದ ಸ್ನಾತಕ ಮತ್ತು ಸ್ನಾತಕೋತ್ತರ, ವಿವಿಧ ಸೆಮಿಸ್ಟರ್ ವಿಷಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ನಂತರ ಪ್ರಕಟಿಸಲಾಗುವದು ಎಂದು ಕರ್ನಾಟಕ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎಚ್ ನಾಗರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.