ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 3ರ ವರೆಗೆ ಮಳೆ : ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಮಧ್ಯಮ ಸ್ತರದಲ್ಲಿ ಉಂಟಾಗಿರುವ ವಾಯುಭಾರ ತಿರುವಿನ ಪ್ರಭಾವದಿಂದ, ದಕ್ಷಿಣ ಬಾರತದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ, ತೆಲಂಗಾಣ, ಆಂಧ್ರ ಮತ್ತು ಕೇರಳದ ಕೆಲವು ಪ್ರದೇಶಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಅಥವಾ ಅಲ್ಲಲ್ಲಿ ಚದುರಿದ ಮಳೆ ಆಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಕರ್ನಾಟಕದ … Continued

ಒಬ್ಬರು ಐಎಫ್‌ಎಸ್‌, ನಾಲ್ವರು ಐಎಎಸ್‌, 15 ಐಪಿಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರವು ಒಬ್ಬರು ಐಎಫ್‌ಎಸ್‌ ಅಧಿಕಾರಿ, ನಾಲ್ವರು ಐಎಎಸ್‌ ಅಧಿಕಾರಿಗಳು ಹಾಗೂ 15 ಐಪಿಎಸ್ ಅಧಿಕಾರಿಗಳನ್ನು (IPS Officers) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಎಫ್‌ಎಸ್‌ ಅಧಿಕಾರಿ ಲಿಂಗರಾಜ ಎಸ್.ಎಸ್ :  ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ. ಯಲಗೌಡ ಶಿವನಗೌಡ ಪಾಟೀಲ (ಐಎಎಸ್): ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ … Continued

ಕೆಪಿಎಸ್‌ಸಿ ಎಇಇ ನೇಮಕಾತಿಯಲ್ಲಿ ಅಕ್ರಮ ಆರೋಪ : ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಹಗರಣದ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಮಂತ್ರಿಯಾಗಿದ್ದಾಗ 2022ರಲ್ಲಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಮೂಲಕ ನಡೆದಿರುವ … Continued

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಿಸಿದ ಸರ್ಕಾರ ; ಅವು ಯಾವುವು ? ಪಟ್ಟಿ ಇಲ್ಲಿದೆ

ಬೆಂಗಳೂರು: ಪ್ರಸಕ್ತ ವರ್ಷ ಮುಂಗಾರು ಕೈಕೊಟ್ಟ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದೆ. ಈ ಬಗ್ಗೆ ಉಪ ಮುಖ್ಯಮಂತ್ರಿ, ಕಂದಾಯ ಸಚಿವ ಡಾ ಜಿ ಪರಮೇಶ್ವರ ಅವರು ಗುರುವಾರ ವಿಧಾನಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.ರಾಜ್ಯವು ಪ್ರಸ್ತುತ ಸಾಲಿನಲ್ಲಿ ತೀವ್ರ ಸ್ವರೂಪದ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, 1976ರ ನಂತರ … Continued

ನೇಪಾಳ ಪ್ರವಾಹ ದುರಂತ: ಕರ್ನಾಟಕದ 8 ಮಂದಿ ಸೇರಿ ದಕ್ಷಿಣ ಭಾರತದ 168 ಜನರು ನಾಪತ್ತೆ

ನವದೆಹಲಿ: ಕೈಲಾಸ ಮಾನಸರೋವರ ಯಾತ್ರೆ ಸೇರಿದಂತೆ ವಿವಿಧ ಕಾರಣಕ್ಕೆ ನೇಪಾಳಕ್ಕೆ ತೆರಳಿದ್ದ ದಕ್ಷಿಣ ಭಾರತದ ಸುಮಾರು 168ಕ್ಕೂ ಹೆಚ್ಚು ಯಾತ್ರಿಕರು ಹಾಗೂ ಪ್ರವಾಸಿಗರು ಹಿಮ-ಬಂಡೆಗಳ ಕುಸಿತದಿಂದ ಉಂಟಾದ ಹಠಾತ್‌ ಭೀಕರ ಪ್ರವಾಹದ ಬಳಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವರು ಸಿಲುಕಿಕೊಂಡಿದ್ದು, ಕೆಲವರು ನಾಪತ್ತೆಯಾಗಿದ್ದಾರೆ ಹಾಗೂ ಇನ್ನೂ ಹಲವರ ಬಗ್ಗೆ ಮಾಹಿತಿ ಸಂಗ್ರಹಿಸುವ ಕಾರ್ಯ ಮುಂದುವರಿದಿದೆ. ನೇಪಾಳದ ರಸುವಾ … Continued

ಸಂಪುಟ ಸಲಹೆ ಮೇರೆಗೆ ಕೆಪಿಎಸ್‌ಸಿ ಅಧ್ಯಕ್ಷ ಸಾಹುಕಾರನನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ

ಬೆಂಗಳೂರು: ಭ್ರಷ್ಟಾಚಾರ ಮತ್ತು ದೊಡ್ಡ ಪ್ರಮಾಣದ ಅಕ್ರಮಗಳ ಆರೋಪಗಳ ಸಂಬಂಧ ರಾಜ್ಯ ಸಚಿವ ಸಂಪುಟ ಸಲಹೆಯ ಮೇರೆಗೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು, ಮಂಗಳವಾರ ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ(KPSC)ದ ಅಧ್ಯಕ್ಷ ಶಿವಶಂಕರಪ್ಪ ಎಸ್ ಸಾಹುಕಾರ ಅವರನ್ನು ಮತ್ತೆ ಅಮಾನತುಗೊಳಿಸಿದ್ದಾರೆ. ಜುಲೈ 13ರಂದು ರಾಜ್ಯಪಾಲರು ಶಿವಶಂಕರಪ್ಪ ಎಸ್ ಸಾಹುಕಾರ ಅವರನ್ನು ಅಮಾನತುಗೊಳಿಸಿದ್ದರು. ಬಳಿಕ ರಾಜ್ಯ ಸಚಿವ … Continued

ಆನ್‌ಲೈನ್‌ನಲ್ಲಿ ವಿಷಕಾರಿ ʼದತ್ತೂರʼ ಮಾರಾಟ: ಅಮೆಜಾನ್‌, ಇನ್‌ಸ್ಟಾಮಾರ್ಟ್‌, ಬಿಗ್‌ಬಾಸ್ಕೆಟ್‌ ಆಹಾರ ಲೈಸನ್ಸ್‌ ಸಸ್ಪೆಂಡ್‌

ಬೆಂಗಳೂರು: ವಿಷಕಾರಿ ಸಸ್ಯವಾದ ಧತ್ತೂರ (Datura)ವನ್ನು ಆನ್‌ಲೈನ್‌ ಮೂಲಕ ಮಾರಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಅಮೆಜಾನ್‌,  ಇನ್‌ಸ್ಟಾಮಾರ್ಟ್‌ ಹಾಗೂ ಬಿಗ್‌ಬಾಸ್ಕೆಟ್‌ಗೆ ನೀಡಲಾಗಿದ್ದ ಆಹಾರ ಪರವಾನಗಿಗಳನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ (FSDA) ಅಮಾನತುಗೊಳಿಸಿದೆ. ಇಲಾಖೆಯಿಂದ ಮುಂದಿನ ಆದೇಶ ಹೊರಬೀಳುವವರೆಗೆ ಈ ಅಮಾನತು ಜಾರಿಯಲ್ಲಿರಲಿದೆ. ಇತ್ತೀಚೆಗೆ ಇಲಾಖೆ ನಡೆಸಿದ ಪರಿಶೀಲನೆಯಲ್ಲಿ ಧತ್ತೂರದ ಹಣ್ಣುಗಳು ಹಾಗೂ … Continued

ಕರ್ನಾಟಕದ 11 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು : ರಾಜ್ಯದ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಕರಾವಳಿ ಹಾಗೂ ಒಳನಾಡಿನ ವಿವಿಧ ಭಾಗಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ವಾತಾವರಣದಲ್ಲಿ ಗಮನಾರ್ಹ ಬದಲಾವಣೆಯಾಗಲಿದ್ದು, 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ದಕ್ಷಿಣ ಕನ್ನಡ, ಉಡುಪಿ ಹಾಗೂ … Continued

ಎಸ್‌ಐಆರ್‌ : ಕರ್ನಾಟಕದ ಕರಡು ಮತದಾರರ ಪಟ್ಟಿ ಪ್ರಕಟ ; 1.07 ಕೋಟಿ ಹೆಸರು ಪಟ್ಟಿಯಿಂದ ಹೊರಗೆ, ಬೆಂಗಳೂರಲ್ಲೇ ಹೆಚ್ಚು

ಬೆಂಗಳೂರು : ವಿಶೇಷ ಸಮಗ್ರಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಚುನಾವಣಾ ಆಯೋಗವು ಕರ್ನಾಟಕದ ಕರಡು ಮತದಾರರ ಪಟ್ಟಿಯನ್ನು ಭಾನುವಾರ ಪ್ರಕಟಿಸಿದ್ದು, ಜೂನ್ 16ರ ವೇಳೆಗೆ ರಾಜ್ಯದಲ್ಲಿ ದಾಖಲಾಗಿದ್ದ 5.54 ಕೋಟಿ ಮತದಾರರ ಪೈಕಿ 4.46 ಕೋಟಿ ಮತದಾರರ ಹೆಸರುಗಳು ಕರಡು ಪಟ್ಟಿಯಲ್ಲಿ ಸೇರಿವೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ (CEO) … Continued

ಕರ್ನಾಟಕದಲ್ಲಿ 4 ಸಾವಿರ ದಾಟಿದ H1N1 ಸೋಂಕು

ಬೆಂಗಳೂರು : ಕರ್ನಾಟಕದಲ್ಲಿ ಎಚ್‌1ಎನ್‌1 (H1N1)ಸೋಂಕಿನ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗಿದ್ದು, ಸೋಂಕಿತರ ಸಂಖ್ಯೆ 4,000ರ ಗಡಿ ದಾಟಿದೆ. ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪರಿಸ್ಥಿತಿಯ ಸಮಗ್ರ ಪರಿಶೀಲನೆಗೆ ಮುಂದಾಗಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲು ಸೂಚನೆ ನೀಡಿದೆ. ಹವಾಮಾನ ಬದಲಾವಣೆ ಹಾಗೂ ನಿರಂತರ ಮಳೆಯ ಹಿನ್ನೆಲೆಯಲ್ಲಿ ವೈರಲ್ ಸೋಂಕುಗಳು ವೇಗವಾಗಿ … Continued