ಮತ್ತೆ ಮಳೆ ಚುರುಕು ; ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಜುಲೈ 21ರ ವರೆಗೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಕಳೆದ ಕೆಲ ದಿನಗಳಿಂದ ಸ್ಥಗಿತಗೊಂಡಿದ್ದ ಮಳೆ ಗುರುವಾರ(ಜುಲೈ 16)ದಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಮತ್ತೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ (ಜುಲೈ 17 ಹಾಗೂ 18) ಕರಾವಳಿಯ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಜುಲೈ 21ರ ವರೆಗೂ ಮುಂದುವರಿಯುವ ಸಾಧ್ಯತೆಯಿದೆ. ಜುಲೈ 18, ಶನಿವಾರ … Continued

ಕರ್ನಾಟಕ ಸೇರಿ 4 ರಾಜ್ಯಗಳ ಎಸ್‌ಐಆರ್‌ ಅವಧಿ ವಿಸ್ತರಣೆ ಮಾಡಿದ ಚುನಾವಣಾ ಆಯೋಗ

ನವದೆಹಲಿ : ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯ ಅವಧಿಯನ್ನು ಚುನಾವಣಾ ಆಯೋಗವು ಬುಧವಾರ ವಿಸ್ತರಿಸಿದೆ. ಕರ್ನಾಟಕ, ಪಂಜಾಬ್, ತೆಲಂಗಾಣ ಹಾಗೂ ದೆಹಲಿಯಲ್ಲಿ ಮನೆ-ಮನೆಗೆ ಭೇಟಿ, ಕರಡು ಮತದಾರರ ಪಟ್ಟಿ ಪ್ರಕಟಣೆ ಹಾಗೂ ಅಂತಿಮ ಮತದಾರರ ಪಟ್ಟಿ ಪ್ರಕಟಣೆಯ … Continued

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಘಟನೆ : ಮೂವರು ಐಪಿಎಸ್‌ ಅಧಿಕಾರಿಗಳಿಗೆ ಕ್ಲೀನ್ ಚಿಟ್

ಬೆಂಗಳೂರು: 2025ರ ಜೂನ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಐಪಿಎಲ್ ಪ್ರಶಸ್ತಿ ಸಂಭ್ರಮಾಚರಣೆ ವೇಳೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಭಾಗದಲ್ಲಿ ಸಂಭವಿಸಿದ್ದ ಭೀಕರ  ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಐಪಿಎಸ್ ಅಧಿಕಾರಿಗಳ ವಿರುದ್ಧದ ಇಲಾಖಾ ವಿಚಾರಣೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ಅವರಿಗೆ ಕ್ಲೀನ್ ಚಿಟ್ ನೀಡಿದೆ. 2025ರ ಜೂನ್ 4ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು … Continued

ಬಿಜೆಪಿ ಹಿರಿಯ ನಾಯಕ-ಮಾಜಿ ಸಚಿವ ರಾಮಚಂದ್ರೇಗೌಡ ನಿಧನ

ಬೆಂಗಳೂರು: ಕರ್ನಾಟಕದ ಬಿಜೆಪಿಯ (BJP) ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ಇಂದು, ಮಂಗಳವಾರ (ಜುಲೈ 14) ಮುಂಜಾನೆ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಮಚಂದ್ರೇಗೌಡ (Ramachandre Gowda) ಅವರು ರಾಜಾಜಿನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಮಾಜಿ … Continued

ಕರ್ನಾಟಕದ ಮುಜರಾಯಿ ದೇವಾಲಯಗಳ ಹುಂಡಿ ಹಣದ ಸುರಕ್ಷತೆಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು : ದೇಶದ ವಿವಿಧೆಡೆ ಹಾಗೂ ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಸ್ಥಾನಗಳ ಹುಂಡಿಗಳಲ್ಲಿ ಕಳ್ಳತನ ಮತ್ತು ಎಣಿಕೆ ಸಂದರ್ಭದಲ್ಲಿ ಹಣ ದುರುಪಯೋಗ ಆಗುತ್ತಿರುವ ಪ್ರಕರಣಗಳನ್ನು ತಡೆಗಟ್ಟಲು ಕರ್ನಾಟಕ ಸರ್ಕಾರವು  ಕ್ರಮಕ್ಕೆ ಮುಂದಾಗಿದೆ. ದೇವಸ್ಥಾನಗಳ ಹುಂಡಿಗಳಲ್ಲಿ ಆಗುತ್ತಿರುವ ಕಳ್ಳತನ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜೋರಾದ ಗಾಳಿಮಳೆಯ ಮುನ್ಸೂಚನೆ

ಬೆಂಗಳೂರು: ಹವಾಮಾನ ಇಲಾಖೆಯು ಕರ್ನಾಟಕದ   ಹಲವಾರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಜೋರಾಗಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗರಿಷ್ಠ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ … Continued

ಸುಟ್ಟ ಶವ, ಯಾವುದೇ ಕುರುಹುಗಳಿಲ್ಲದ ಪ್ರಕರಣ…: ಆದ್ರೆ ಹಂತಕರ ಪತ್ತೆಗೆ ಕಾರಣವಾಯ್ತು ‘ಹಪ್ಪಳ’ದ ಪ್ಯಾಕೆಟ್‌….!

ಅನಂತಪುರ: ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಶವದ ಪ್ರಕರಣವನ್ನು ಆರಂಭದಲ್ಲಿ ‘ಬ್ಲೈಂಡ್ ಕೇಸ್’ ಎಂದು ಪರಿಗಣಿಸಿದ್ದ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗಂ ಪೊಲೀಸರು, ವೈಜ್ಞಾನಿಕ ತನಿಖೆ ಹಾಗೂ ಘಟನೆ ಸ್ಥಳದಲ್ಲಿ ಸಿಕ್ಕಿದ್ದ ಒಂದು ಸಣ್ಣ ಸುಳಿವಿನ ನೆರವಿನಿಂದ ಅದನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ಪ್ರಮುಖ ಸುಳಿವಾಗಿ ಸಿಕ್ಕಿದ್ದ ಹಪ್ಪಳ(ಪಾಪಡ್)ದ ಪ್ಯಾಕೆಟ್ ಕೊಲೆಯ ರಹಸ್ಯವನ್ನು ಬಯಲಿಗೆಳೆಯುವಲ್ಲಿ … Continued

ಕರ್ನಾಟಕದ ಆರು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆ ಮುನ್ಸೂಚನೆ ; ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ರಾಜ್ಯದ ಪ್ರಮುಖ 6 ಜಿಲ್ಲೆಗಳಿಗೆ ಬುಧವಾರ (ಜುಲೈ ೮) ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ … Continued

ಕರ್ನಾಟದಲ್ಲಿ ಈವರೆಗೂ ಮುಂಗಾರು ನೀರಸ ; 17 ಜಿಲ್ಲೆಗಳು, 129 ತಾಲೂಕುಗಳಲ್ಲಿ ಮಳೆ ಕೊರತೆ

ಬೆಂಗಳೂರು : ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ಕೊರತೆ ಮುಂದುವರಿದಿದ್ದು, ಜೂನ್ 1ರಿಂದ ಜುಲೈ 6ರ ವರೆಗೆ ಮುಂಗಾರು ಮಳೆ ಬಿದ್ದ ಪ್ರಮಾಣ ಗಮಿಸಿದರೆ 31 ಜಿಲ್ಲೆಗಳ ಪೈಕಿ 17 ಜಿಲ್ಲೆಗಳಲ್ಲಿ ಮಳೆ ಕೊರತೆ(Deficit)ಯಾಗಿದೆ. 13 ಜಿಲ್ಲೆಗಳಲ್ಲಿ ಬಹುತೇಕ ವಾಡಿಕೆ (Normal)ಯಷ್ಟು ಮಳೆಯಾಗಿದ್ದರೆ ಒಂದು ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆ ಎದುರಾಗಿದೆ ಎಂದು ಕರ್ನಾಟಕ ರಾಜ್ಯ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 10ರ ವರೆಗೆ ಅತಿ ಭಾರಿ ಗಾಳಿಮಳೆಯಾಗುವ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಬಿರುಸುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ(IMD)ಯು ಕರ್ನಾಟಕದ ಹಲವು ಭಾಗಗಳಿಗೆ ಹೊಸದಾಗಿ ಮಳೆಯ ಮುನ್ಸೂಚನೆ ನೀಡಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆ, ಗುಡುಗು-ಮಿಂಚು, ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆ ನೀಡಿರುವ … Continued