ಕೋಲಾರ: ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಕೋಲಾರ: ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್ ರಮೇಶಕುಮಾರ ಆಪ್ತ, ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಶ್ರೀನಿವಾಸಪುರ ತಾಲೂಕು ಹೊಗಳಗೆರೆ ಬಳಿ ಕಾಂಗ್ರೆಸ್‌ ಮುಖಂಡ ಎಂ.ಶ್ರೀನಿವಾಸ ಅವರ ಮೇಲೆ ಆರು ಮಂದಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದು, ತೀವ್ರವಾಗಿ ಗಾಐಗೊಂಡಿದ್ದ ಅವರನ್ನು ತಕ್ಷಣವೇ ಕೋಲಾರದ ಜಾಲಪ್ಪ ಆಸ್ಪತ್ರೆಗೆ ಒಯ್ಯಲಾಗಿತ್ತು. … Continued

ಒಕ್ಕಲಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರೊ. ಭಗವಾನ್ ವಿರುದ್ಧ ಎಫ್​ಐಆರ್​ ದಾಖಲು

ಮೈಸೂರು: ಒಕ್ಕಲಿಗರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪ್ರೊ. ಕೆ.ಎಸ್​. ಭಗವಾನ್ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ. ಗಂಗಾಧರ ಅವರು ಕರ್ನಾಟಕ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕರಾದ ಮೈಸೂರಿನ ಗಂಗಾಧರ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 153 ಹಾಗೂ 153A ಅಡಿಯಲ್ಲಿ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ಐಆರ್​ ದಾಖಲಾಗಿದೆ. ಪ್ರೊ. … Continued

ವಿಎಚ್‌ಪಿ ಮುಖಂಡನ ಮೇಲೆ ದಾಖಲಿಸಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು : ಕೋಮು ಸೌಹಾರ್ದತೆಗೆ ಧಕ್ಕೆ ತರುವ ಚಟುವಟಿಕೆಯಲ್ಲಿ ತೊಡಗಿರುವ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ ಪಂಪ್‌ವೆಲ್ ವಿರುದ್ಧ ಮಂಗಳೂರು ನಗರ ದಕ್ಷಿಣ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಮಂಗಳೂರಿನ ಮಂಗಳಾದೇವಿ ಜಾತ್ರೆಯಲ್ಲಿ ಭಗವಾಧ್ವಜ ಕಟ್ಟಿರುವ ಹಿಂದೂಗಳ ಮಳಿಗೆಗಳಲ್ಲಿ ಮಾತ್ರವೇ ಹಿಂದೂ ಗ್ರಾಹಕರು ವ್ಯಾಪಾರ ಮಾಡಬೇಕು … Continued

ನಮ್ಮದೇ ನಿಜವಾದ ಜೆಡಿಎಸ್ : ಯಾವ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟದ ಜೊತೆ ಹೋಗಲ್ಲ : ಸಿ.ಎಂ.ಇಬ್ರಾಹಿಂ

ಬೆಂಗಳೂರು : ಲೋಕಸಭೆ ಚುಣಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಈಗ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೇ ಸಡ್ಡು ಹೊಡೆದಿದ್ದಾರೆ. ನಮ್ಮದೇ ಅಸಲಿ ಜೆಡಿಎಸ್. ನಾವು ಯಾವುದೇ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟದ ಜೊತೆ ಹೋಗುವುದಿಲ್ಲ ಎಂದು ಸಿಎಂ … Continued

ಕರ್ನಾಟಕ ಸೇರಿ ನಾಲ್ಕು ರಾಜ್ಯಗಳ 55 ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ: 102 ಕೋಟಿ ರೂ.ಮೌಲ್ಯದ ಆಸ್ತಿ ಜಪ್ತಿ

ಬೆಂಗಳೂರು: ಆದಾಯ ತೆರಿಗೆ ಇಲಾಖೆ (Income Tax departmen) ನಗದು, ಚಿನ್ನ, ವಜ್ರಾಭರಣ, ಐಷಾರಾಮಿ ವಾಚ್‌ಗಳು ಸೇರಿದಂತೆ 102 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ. ಕರ್ನಾಟಕ ಮತ್ತು ಇತರ ಹಲವಾರು ರಾಜ್ಯಗಳಲ್ಲಿ ಸರ್ಕಾರಿ ಗುತ್ತಿಗೆದಾರರು ಮತ್ತು ರಿಯಲ್ ಎಸ್ಟೇಟ್ ಡೆವಲಪರ್‌ಗಳ ಮೇಲೆ ನಡೆಸಿದ ಸರಣಿ ದಾಳಿಗಳ ನಂತರ ಇದನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ಟೋಬರ್ 12ರಂದು … Continued

ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 2000 ಹೆಚ್ಚುವರಿ ಬಸ್‌ ಕಾರ್ಯಾಚರಣೆ

ಬೆಂಗಳೂರು : ದಸರಾ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ(ಕೆಎಸ್‌ಆರ್‌ಟಿಸಿ) 2000 ಹೆಚ್ಚುವರಿ ಬಸ್‌‌ಗಳನ್ನು ನಿಯೋಜನೆ ಮಾಡಲಾಗಿದೆ. ಹಾಗೂ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ವಿಶೇಷ ರಿಯಾಯಿತಿ ನೀಡಲಾಗಿದೆ. ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗಾಗಿ (Mysore Dasara) ಮೈಸೂರಿಗೆ ತೆರಳುವ ಪ್ರವಾಸಿಗರಿಗಾಗಿ 600 ದಸರಾ ವಿಶೇಷ ಬಸ್‌ಗಳನ್ನು ನಿಯೋಜಿಸಲಾಗಿದೆ. ಸಾಲು ಸಾಲಾಗಿ ಹಬ್ಬಗಳು ಬರುತ್ತಿರುವ … Continued

ಕರ್ನಾಟಕಕ್ಕೆ ಮತ್ತೆ ಶಾಕ್: ಮತ್ತೆ 15 ದಿನ ತಮಿಳುನಾಡಿಗೆ ನೀರು ಹರಿಸಲು ಸಿಡಬ್ಲ್ಯುಆರ್‌ಸಿ ಶಿಫಾರಸು

ನವದೆಹಲಿ : ರಾಜ್ಯದಲ್ಲಿ ಮುಂಗಾರು ಮಳೆಯಿಲ್ಲದೆ ನೀರಿಗೆ ಬರ ಎದುರಾಗಿದೆ. ಇಂತಹ ಸನ್ನಿವೇಶದಲ್ಲಿಯೂ ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಮತ್ತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. ಬುಧವಾರ ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ಅಕ್ಟೋಬರ್ 16ರಿಂದ 31ರವರೆಗೆ ಮತ್ತೆ ಪ್ರತಿದಿನ 3 ಸಾವಿರ ಕ್ಯೂಸೆಕ್ … Continued

ಕರ್ನಾಟಕದಲ್ಲಿ ಇನ್ಮುಂದೆ ರೇಬೀಸ್ ಲಸಿಕೆ ಉಚಿತ

ಬೆಂಗಳೂರು : ಎಪಿಎಲ್ ಅಥವಾ ಬಿಪಿಎಲ್ ಕಾರ್ಡ್ ಎಂಬುದನ್ನು ಪರಿಶೀಲಿಸದೆ ಪ್ರಾಣಿ ಕಡಿತಕ್ಕೆ ಒಳಗಾದವರಿಗೆ ಎಲ್ಲರಿಗೂ ಆಂಟಿ ರೇಬೀಸ್ ಲಸಿಕೆ (ಎಆರ್‌ವಿ) ಮತ್ತು ರೇಬೀಸ್ ಇಮ್ಯುನೊಗ್ಲಾಬ್ಯುಲಿನ್ (ಆರ್‌ಐಜಿ) ಅನ್ನು ಉಚಿತವಾಗಿ ನೀಡಲು ರಾಜ್ಯ ಆರೋಗ್ಯ ಇಲಾಖೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಸೂಚಿಸಿದೆ. ಈ ಕುರಿತು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಸುತ್ತೋಲೆ … Continued

ಕ್ರಿಕೆಟ್‌ ವಿಶ್ವಕಪ್‌ ನಲ್ಲಿ ಇಂಗ್ಲೆಂಡ್ ವಿರುದ್ಧ ಸೆಂಚುರಿ ಸಿಡಿಸಿದ ನ್ಯೂಜಿಲೆಂಡ್ ಆಟಗಾರ ʼರಚಿನ್ʼ ರವೀಂದ್ರ ಕನ್ನಡಿಗ ; ಈ ಆಟಗಾರನ ಹೆಸರಲ್ಲಿರುವ ವಿಶೇಷತೆ ಏನು..?

ಗಾಯಗೊಂಡಿದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅವರ ಅನುಪಸ್ಥಿತಿಯಲ್ಲಿ ಕಣಕ್ಕಿಳಿದು ಹಾಲಿ ವಿಶ್ವ ಚಾಂಪಿಯನ್‌ ಇಂಗ್ಲೆಂಡ್‌ ಅದ್ಭುತ ಆಟದೊಂದಿಗೆ ಗಮನ ಸೆಳೆದ ಭಾರತೀಯ ಮೂಲದ ಯುವ ಕ್ರಿಕೆಟರ್‌ ರಚಿನ್ ರವೀಂದ್ರ ಈಗ ಭಾರಿ ಸುದ್ದಿಯಾಗಿದ್ದಾರೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ಗುರುವಾರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ (ICC ODI World Cup 2023) … Continued

ಲೋಕಸಭೆ ಚುನಾವಣೆ 2024 : ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ : ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟಕ್ಕೆ ಹೆಚ್ಚು ಸ್ಥಾನ, ಕಾಂಗ್ರೆಸ್‌ಗೆ ಲಾಭದ ಸಾಧ್ಯತೆ

ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 16 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ, ಕಾಂಗ್ರೆಸ್ 10 ಮತ್ತು ಜೆಡಿಎಸ್‌ 2 ಸ್ಥಾನಗಳನ್ನು ಗಳಿಸಬಹುದಾಗಿದೆ. ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ ಶೇ.44ರಷ್ಟು ಮತಗಳನ್ನು ಪಡೆಯಬಹುದು ಹಾಗೂ ಕಾಂಗ್ರೆಸ್ ಶೇ.40ರಷ್ಟು ಮತಗಳನ್ನು ಗಳಿಸುವ ಸಾಧ್ಯತೆಯಿದೆ ಮತ್ತು ಜೆಡಿಎಸ್ ಶೇ.11ರಷ್ಟು ಮತಗಳನ್ನು ಪಡೆಯುವ ಸಾಧ್ಯತೆಯಿದೆ. … Continued