ಖಾಸಗಿ ಜಮೀನುಗಳ ದಾಖಲೆ ರಹಿತ ಜನವಸತಿ ಪ್ರದೇಶದವರಿಗೆ ಸಿಹಿ ಸುದ್ದಿ: : ಕಂದಾಯ ಗ್ರಾಮವಾಗಿ ಪರಿವರ್ತಿಸಿ ಹಕ್ಕು ಪತ್ರ ನೀಡಲು ಆದೇಶ

ಬೆಂಗಳೂರು: ಖಾಸಗಿ ಜಮೀನುಗಳಲ್ಲಿ ನೆಲೆಸಿರುವ ದಾಖಲೆ ರಹಿತ ಜನವಸತಿಗಳನ್ನು ಕಂದಾಯ ಗ್ರಾಮ, ಗ್ರಾಮದ ಭಾಗವಾಗಿ ಪರಿವರ್ತಿಸಿ, ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ( Title Deed ) ನೀಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಖಾಸಗಿ ಜಮೀನುಗಳಲ್ಲಿ ವಾಸಿಸುತ್ತಾ, ದಾಖಲೆ ರಹಿತರಾಗಿದ್ದವರಿಗೆ ಸರ್ಕಾರ ಭರ್ಜರಿಸಿಹಿ ಸುದ್ದಿ ನೀಡಿದೆ. ಈ ಕುರಿತು ಕಂದಾಯ ಇಲಾಖೆಯ ಸರ್ಕಾರದ ಉಪಕಾರ್ಯದರ್ಶಿ ಸುತ್ತೋಲೆ … Continued

ಬಿಜೆಪಿಗೆ ಸೇರ್ಪಡೆಯಾದ ಮಾಜಿ ಸಂಸದ ಮುದ್ದಹನುಮೇಗೌಡ, ಖ್ಯಾತ ನಟ ಶಶಿಕುಮಾರ

ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದ ಮಾಜಿ‌ ಸಂಸದ ಎಸ್​.ಪಿ. ಮುದ್ದಹನುಮೇಗೌಡ ಮತ್ತು ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದ ಹಾಗೂ ಖ್ಯಾತ ನಟ ಶಶಿಕುಮಾರ್ ಇಂದು, ಗುರುವಾರ ಬಿಜೆಪಿಗೆ ಸೇರ್ಪಡೆಯಾದರು. ನಗರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಬ್ಬರಿಗೂ ಬಿಜೆಪಿ ಶಾಲು ಹೊದಿಸಿ, ಬಿಜೆಪಿ ಬಾವುಟ ಕೈಗೆ ಕೊಟ್ಟು … Continued

ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ 10 ನಿಮಿಷ ಧ್ಯಾನ: ಶಿಕ್ಷಣ ಸಚಿವ ನಾಗೇಶ ಪತ್ರ

ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸಲು, ಒತ್ತಡ ಮುಕ್ತವಾಗಿಸಲು ಶಿಕ್ಷಣ ಇಲಾಖೆ ಧ್ಯಾನದ (Meditation) ಮೊರೆ ಹೋಗಲು ನಿರ್ಧರಿಸಿದೆ. ಇನ್ನು ಮುಂದೆ ಶಾಲಾ-ಕಾಲೇಜುಗಳಲ್ಲಿ 10 ನಿಮಿಷ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಅವರು, ಧ್ಯಾನ … Continued

ಪತ್ರಕರ್ತರಿಗೆ ಉಡುಗೊರೆ ಆರೋಪ ಕಾಂಗ್ರೆಸ್​ನ ಅಪಪ್ರಚಾರದ ಟೂಲ್ ಕಿಟ್: ಸಿಎಂ ಬೊಮ್ಮಾಯಿ‌ ವಾಗ್ದಾಳಿ

ಬೆಂಗಳೂರು : ಎಲ್ಲ ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯಿಂದ ಉಡುಗೊರೆ ನೀಡಲಾಗಿದೆ ಎನ್ನುವುದು ಕಾಂಗ್ರೆಸ್​ನ ಅಪಪ್ರಚಾರದ ಟೂಲ್ ಕಿಟ್. ಸುಳ್ಳು ಹೇಳುವ ಮೂಲಕ ಎಲ್ಲ ಪತ್ರಕರ್ತರಿಗೆ ಅವಮಾನಿಸಿರುವುದನ್ನು ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು. ಮುಖ್ಯಮಂತ್ರಿಗಳ ಕಚೇರಿಯಿಂದ ಕೆಲವು ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ 1 ಲಕ್ಷ ರೂಪಾಯಿ ನಗದು ಉಡುಗೊರೆ ನೀಡಿರುವ … Continued

ಹಬ್ಬದಲ್ಲಿ ಪತ್ರಕರ್ತರಿಗೆ ಸ್ವೀಟ್‌ಬಾಕ್ಸ್ ನೀಡುವ ಸಂಪ್ರದಾಯ ಮೊದಲಿನಿಂದಲೂ ಇದೆ : ಕಾಂಗ್ರೆಸ್ ಆರೋಪಕ್ಕೆ ಬಿಜೆಪಿ ತಿರುಗೇಟು

ಬೆಂಗಳೂರು : ರಾಜ್ಯದಲ್ಲಿ ಹಬ್ಬದ ಸಂದರ್ಭದಲ್ಲಿ ಪತ್ರಕರ್ತರಿಗೆ ಸ್ವೀಟ್ ಬಾಕ್ಸ್ ನೀಡುವ ಸಂಪ್ರದಾಯ ಮೊದಲಿನಿಂದಲೂ ಇದ್ದು, ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲಾ ಅವರು ಈ ಬಗ್ಗೆ ರಾಜ್ಯದ ಕಾಂಗ್ರೆಸ್‌ ನಾಯಕರಿಂದ ಮಾಹಿತಿ ಪಡೆದುಕೊಳ್ಳುವುದು ಒಳ್ಳೆಯದು ಎಂದು ಬಿಜೆಪಿ ಹೇಳಿದೆ. ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಹಾಗೂ ರಾಜ್ಯದ ಕಾಂಗ್ರೆಸ್ ನಾಯಕರು ಅನಗತ್ಯ ಆಧಾರ … Continued

ರಾಜ್ಯದ ಅರೇಬಿಕ್ ಶಾಲೆಗಳಲ್ಲಿ ಶಿಕ್ಷಣ ಬೋಧನೆ ಬಗ್ಗೆ ವರದಿ ಸಲ್ಲಿಸಲು ಸೂಚನೆ : ಶಿಕ್ಷಣ ಸಚಿವ ನಾಗೇಶ

ಬೆಂಗಳೂರು: ರಾಜ್ಯದ ಅರೇಬಿಕ್ ಶಾಲೆಗಳ ವಿದ್ಯಾರ್ಥಿಗಳು ಸಹ ಇತರ ಶಾಲೆಗಳಿಗೆ ಸಮಾನವಾದ ಶಿಕ್ಷಣ ಸೌಲಭ್ಯಗಳನ್ನು ಪಡೆಯಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ   ಸಚಿವರಾದ ಬಿ ಸಿ ನಾಗೇಶ್ ಹೇಳಿದರು. ಅರೇಬಿಕ್ ಶಾಲೆಗಳಲ್ಲಿ ಬೋಧನೆಗೆ ಸಂಬಂಧಿಸಿದಂತೆ ವರದಿಯನ್ನು ತಮ್ಮ ಸಚಿವಾಲಯ ಕೇಳಿದೆ ಎಂದು ನಾಗೇಶ್ ಮಾಧ್ಯಮಗಳಿಗೆ ತಿಳಿಸಿದರು. ರಾಜ್ಯದಲ್ಲಿ 106 ಅನುದಾನಿತ ಮತ್ತು 80 … Continued

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡ ಅವಿರೋಧವಾಗಿ ಪುನಃ ಆಯ್ಕೆ

ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ. ಗುರುವಾರ ಜೆಡಿಎಸ್ ರಾಜ್ಯ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ದೇವೇಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಜೆಡಿಎಸ್ ರಾಷ್ಟ್ರೀಯ ಚುನಾವಣಾ ಅಧಿಕಾರಿ ಕೆ.ಟಿ‌ ಶ್ರೀಕಂಠೇಗೌಡ ಅವರು, 10 … Continued

ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ನಿಧನ

ಬೆಳಗಾವಿ: ಸವದತ್ತಿ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ್ ಮಾಮನಿ (56) ಅವರು ತೀವ್ರ ಅನಾರೋಗ್ಯದಿಂದಾಗಿ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಯಾನ್ಸರ್ ಕಾಯಿಲೆಯಿಂದಾಗಿ ಕೆಲ ದಿನಗಳ ಹಿಂದೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. … Continued

21 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಬೆಂಗಳೂರು: ರಾಜ್ಯ ಸರ್ಕಾರ 21 ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ವರ್ಗಾವಣೆಯಾದ ಐಎಎಸ್‌ ಅಧಿಕಾರಿಗಳ ಪಟ್ಟಿ ಇಂತಿದೆ. *ಕಪಿಲ್ ಮೋಹನ್- ಎಸಿಎಸ್, ಪ್ರವಾಸೋದ್ಯಮ ಇಲಾಖೆ *ಅನಿಲ್ ಕುಮಾರ್ ಟಿ.ಕೆ- ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ( ಹೆಚ್ಚುವರಿ ಹೊಣೆ) ಹಾಲಿ ಆರೋಗ್ಯ ಇಲಾಖೆ ಪ್ರಧಾನ … Continued

ವಿದ್ಯಾರ್ಥಿಗಳ ಗಮನಕ್ಕೆ….ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಮಾರ್ಚ್ 2023ರಲ್ಲಿ ನಡೆಯಲಿರುವಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ (Second PUC Annual Examination 2023 ) ತಾತ್ಕಾಲಿಕ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಈ ಸಂಬಂಧ ಮಾಹಿತಿ ಬಿಡುಗಡೆ ಮಾಡಿದ್ದಾರೆ. 2023ರಲ್ಲಿ ನಡೆಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮಾರ್ಚ್‌ 10ರಿಂದ ಮಾರ್ಚ್‌ … Continued