ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ: ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದು, ಗುರುವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, … Continued

ರಾಜ್ಯದಲ್ಲಿ ಬುಧವಾರ 1,231 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು, ಬುಧವಾರ 1,231 ಮಂದಿಗೆ ಕೊರೊನಾ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿಯೇ 1,124 ಪ್ರಕರಣ ವರದಿಯಾಗಿದೆ. ಇದೇವೇಳೆ 1,047 ಮಂದಿ ಆಸ್ಪತ್ರೆಯಿಂದ ಡಿಸ್ಚಾಜ್ ಆಗಿದ್ದಾರೆ. ಶೂನ್ಯ ಮರಣ ಪ್ರಮಾಣ ದಾಖಲಾಗಿದೆ. ರಾಜ್ಯದ ಈಗ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 6,603ಕ್ಕೆ ತಲುಪಿದೆ. ರಾಜ್ಯದ ಪಾಸಿಟಿವಿಟಿ ದರ ಶೇ.4.78 ಕ್ಕೆ ತಲುಪಿದೆ. ಒಟ್ಟು ಇಲ್ಲಿವರೆಗೂ 39,35,088 … Continued

ಜುಲೈ15ರ ವರೆಗೆ ರಾಜ್ಯದ ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಇಂದು ಸೋಮವಾರದಿಂದ ಜುಲೈ 15ರ ವರೆಗೆ ಮಲೆನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಅಲ್ಲದೆ ದಾವಣಗೆರೆ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಜುಲೈ 12ರಂದು ಚಿಕ್ಕಮಗಳೂರು, ಕೊಡಗು ಮತ್ತು … Continued

ರಾಜ್ಯದ ಎಲ್ಲ ವಿಶ್ವ ವಿದ್ಯಾಲಯಗಳು, ಕಾಲೇಜುಗಳಿಗೆ ಏಕರೂಪದ ವೇಳಾಪಟ್ಟಿ

ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜಿಗೆ ಅನ್ವಯವಾಗುವಂತೆ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 2022-23ನೇ ಶೈಕ್ಷಣಿಕ ಸಾಲಿಗೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಏಕರೂಪದ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ಪ್ರತಿಯೊಬ್ಬರು ಇದನ್ನು ಅಳವಡಿಸಿಕೊಂಡು ಕಡ್ಡಾಯವಾಗಿ ಪಾಲನೆ ಮಾಡುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್‌ ಅಶ್ವತ್ಥನಾರಾಯಣ ಸೂಚಿಸಿದ್ದಾರೆ. ಈ ಕುರಿತು ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, … Continued

ಬೆಳ್ಳಂಬೆಳಿಗ್ಗೆ ಜಮೀರ್ ಅಹಮದ್‌ಗೆ ಎಸಿಬಿ ಶಾಕ್:‌ ಐದು ಕಡೆ ಎಸಿಬಿ ಅಧಿಕಾರಿಗಳಿಂದ ದಾಳಿ

ಬೆಂಗಳೂರು: ಚಾಮರಾಜ ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ‌ ಇಡಿ ಬಳಿಕ ಈಗ ಎಸಿಬಿ ಶಾಕ್ ಕೊಟ್ಟಿದೆ. ಇಂದು, ಮಂಗಳವಾರ ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರದ ದಳ (ACB) ದ ಅಧಿಕಾರಿಗಳು ಜಮೀರ್ ಮನೆಗೆ ದಾಳಿ (Raid) ನಡೆಸಿದ್ದಾರೆ. ಕಂಟೋನ್ಮೆಂಟ್​ನಲ್ಲಿರುವ ಜಮೀರ್ ಅಹಮದ್ ಖಾನ್ ಅವರ ನಿವಾಸ, ಸಿಲ್ವರ್ ಓಕ್ ಅಪಾರ್ಟ್ಮೆಂಟ್​ನಲ್ಲಿರುವ ಫ್ಲಾಟ್, … Continued

ಭ್ರಷ್ಟಾಚಾರ ಆರೋಪ : ಐಎಎಸ್‌ ಅಧಿಕಾರಿ ಮಂಜುನಾಥ ಬಂಧಿಸಿದ ಎಸಿಬಿ

ಬೆಂಗಳೂರು: ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಮೊನ್ನೆಯಷ್ಟೇ ಬೆಂಗಳೂರು ಜಿಲ್ಲಾಧಿಕಾರಿ ಹುದ್ದೆಯಿಂದ ಎತ್ತಂಗಡಿಯಾಗಿದ್ದ ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಅವರನ್ನು ಇಂದು, ಸೋಮವಾರ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದಾಗ ಭ್ರಷ್ಟಾಚಾರ ಆರೋಪಕ್ಕೆ ಒಳಗಾಗಿದ್ದ ಐಎಎಸ್​ ಅಧಿಕಾರಿ ಜೆ. ಮಂಜುನಾಥ ಬಂಧನವಾಗಿದೆ. ಅವರನ್ನು ಸರ್ಕಾರ ಕೆಲವೇ ದಿನಗಳ ಹಿಂದೆ ಇಂಟಿಗ್ರೇಟೆಡ್ ಚೈಲ್ಡ್ ಪ್ರೊಟೆಕ್ಷನ್ ಸ್ಕೀಂ ಡೈರೆಕ್ಟರ್ … Continued

ಕೊರೊನಾ ಏರಿಕೆ ಬೆನ್ನಲ್ಲೇ ಹೊಸ ಮಾರ್ಗಸೂಚಿ ಜಾರಿಗೆ

ಬೆಂಗಳೂರು: ರಾಜ್ಯದಲ್ಲಿ ಹಾಗೂ ಬೆಂಗಳೂರಿನಲ್ಲಿ ನಿರೀಕ್ಷೆಗೂ ಕೊರೊನಾ ಸೋಂಕು ವೇಗವಾಗಿ ಏರಿಕೆಯಾಗುತ್ತಿರುವುದರಿಂದ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲೆ ಕಚೇರಿಗಳು, ವಿದ್ಯಾಸಂಸ್ಥೆ, ಕಾಲೇಜುಗಳು ಹಾಗೂ ಅಪಾರ್ಮೆಂಟ್‍ಗಳಲ್ಲಿ ಕೋವಿಡ್-19 ಪರೀಕ್ಷೆ, ಐಸೋಲೇಷನ್, ಚಿಕಿತ್ಸೆ ಹಾಗೂ ಕ್ವಾರಂಟೈನ್‍ಗೆ ಸಂಬಂಧಿಸಿದಂತೆ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ. ಅಪಾರ್ಟ್‍ಮೆಂಟ್‍ಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೆಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. … Continued

ಪಠ್ಯದಲ್ಲಿ ಕನಕದಾಸರ ಜೀವನ ಚರಿತ್ರೆ ಈ ಹಿಂದಿನಂತೆಯೇ ಪ್ರಕಟಿಸಲು ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ದಾಸ ಶ್ರೇಷ್ಠ ಕನಕದಾಸರ ಜೀವನ ಚರಿತ್ರೆಯನ್ನು ಶಾಲಾ ಪಠ್ಯದಲ್ಲಿ ಈ ಹಿಂದೆ ಇದ್ದಂತ್ತೆಯೇ ಮುಂದುವರೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಕಾಗಿನೆಲೆಯ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ನಿನ್ನೆ, ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ನೀಡಿದ್ದ ಬೆನ್ನಲ್ಲೇ ಮುಖ್ಯಮಂತ್ರಿ ಬೊಮ್ಮಾಯಿ ಇಂದು, ಮಂಗಳವಾರ ಪಠ್ಯ ಪುಸ್ತಕದಲ್ಲಿ … Continued

ಕರ್ನಾಟಕದ ಕರಾವಳಿಯಲ್ಲಿ ಇನ್ನೂ ಎರಡು ದಿನ ಭಾರೀ ಮಳೆ: ಕರಾವಳಿಗೆ ಆರೆಂಜ್ ಅಲರ್ಟ್, ಉತ್ತರ ಕರ್ನಾಟಕಕ್ಕೆ ಹಳದಿ​ ಅಲರ್ಟ್​ ಘೋಷಣೆ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆ ಜೋರಾಗಿ ಸುರಿಯುತ್ತಿದ್ದು, ಮಲೆನಾಡಿನಲ್ಲೂ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಇಂದಿನಿಂದ 2 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರು ಮಳೆ … Continued

ಕರ್ನಾಟಕದಲ್ಲಿ ಶುಕ್ರವಾರ 816 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡಿದ್ದು, ಸಾವಿನ ಪ್ರಕರಣ ಶೂನ್ಯವಾಗಿದೆ. ಕಳೆದ 24 ಗಂಟೆಯಲ್ಲಿ 816 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇವೇಳೆ 703 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈ ಮೂಲಕ ಇದುವರೆಗೆ 39,19,155 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು 22,527 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. … Continued