ಕರ್ನಾಟಕದಲ್ಲಿ ಕೊರೊನಾ ದೈನಂದಿನ ಸೋಂಕು ಕುಸಿತ.. ಆದರೆ ಸಾವಿನ ಪ್ರಮಾಣದಲ್ಲಿ ಇಳಿಕೆಯಿಲ್ಲ

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಬುಧವಾರ ಹೊಸದಾಗಿ 20,505 ಕೊರೊನಾ ಸೋಂಕು ದಾಖಲಾಗಿದ್ದು, 81 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇವೇಳೆ 40,903 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು, ರಾಜ್ಯದಲ್ಲಿ ಒಟ್ಟು ಈವರೆಗೆ ರಾಜ್ಯದಲ್ಲಿ ಒಟ್ಟು 38,44,338 ಮಂದಿಗೆ ಕೊರೊನಾ ಬಂದಿದೆ. ಒಟ್ಟು ಈವರೆಗೆ 36,27,925 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಆರೋಗ್ಯ ಇಲಾಖೆಯ … Continued

ಕರ್ನಾಟಕದಲ್ಲಿ ಇಳಿಕೆಯತ್ತ ಕೊರೊನಾ ಸೋಂಕು..ಮಂಗಳವಾರ 14,366 ಹೊಸ ಸೋಂಕು ದಾಖಲು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಇಂದು, ಮಂಗಳವಾರ ಒಟ್ಟು 14,366 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇವೇಳೆ 58 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಹಾಗೂ ಹಾಗೂ ರಾಜ್ಯದಲ್ಲಿ ಒಟ್ಟು 60,914 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ವಿಜಯಪುರದಲ್ಲಿ 7 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಸಕಾರಾತ್ಮಕ … Continued

ಇಬ್ರಾಹಿಂ ಆರೋಪಕ್ಕೆ ಉತ್ತರ: ವಿಪಕ್ಷ ಉಪನಾಯಕರಾಗಿ ಯು.ಟಿ.ಖಾದರ್

ಬೆಂಗಳೂರು : ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಹಾಗೂ ವಿಪಕ್ಷದ ಉಪನಾಯಕರಾಗಿ ಶಾಸಕ, ಮಾಜಿ ಸಚಿವ ಯು.ಟಿ.ಖಾದರ್ ಅವರನ್ನು ನೇಮಕ ಮಾಡಲಾಗಿದೆ. ಹಿರಿಯ ಕಾಂಗ್ರೆಸ್ ನಾಯಕ ಸಿ.ಎಂ. ಇಬ್ರಾಹಿಂ ಅಲ್ಪಸಂಖ್ಯಾತರು ಕಾಂಗ್ರೆಸ್ಸಿಗೆ ಗೇಣಿದಾರರು, ಆದರೆ ಯಾರಿಗೂ ಸ್ಥಾನಮಾನ ನೀಡಿಲ್ಲ ಎಂದು ಆರೋಪಿಸಿ ಪಕ್ಷ ತೊರೆಯುವುದಾಗಿ ಹೇಳಿದ ಬೆನ್ನಲ್ಲೇ ಕಾಂಗ್ರೆಸ್‌ ಖಾದರ್ ಅವರನ್ನು ಎಐಸಿಸಿ ನೇಮಕ ಮಾಡಿದೆ. … Continued

ಗೋಮಾಳ ಜಮೀನು ಮಂಜೂರಾತಿ ನೀತಿ ರೂಪಣೆಗೆ ಸಮಿತಿ ರಚನೆ

ಬೆಂಗಳೂರು: ಗೋಮಾಳ ಜಮೀನು ಮಂಜೂರಾತಿ ನೀತಿ ರಚನೆ ಕುರಿತು ಸಮಿತಿ ರಚನೆ ಮಾಡಲಾಗಿದೆ. ಸಚಿವ ಸಂಪುಟ ಉಪಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಕಂದಾಯ ಸಚಿವ ಆರ್. ಅಶೋಕ ಅಧ್ಯಕ್ಷತೆಯಲ್ಲಿ ಉಪಸಮಿತಿ ರಚನೆ ಮಾಡಲಾಗಿದ್ದು,. ಉಪ ಸಮಿತಿ ಸದಸ್ಯರಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ, ಕಾನೂನು ಸಚಿವ ಮಾಧುಸ್ವಾಮಿ, ಕೃಷಿ ಸಚಿವ ಬಿ.ಸಿ. ಪಾಟೀಲ, ನಗರಾಭಿವೃದ್ಧಿ … Continued

ವಿದ್ಯುತ್ ಸರಬರಾಜು ಕಂಪನಿಗಳ ಅಸಮರ್ಥತತೆಯಿಂದಾದ ನಷ್ಟ ಬಳಕೆದಾರರ ಮೇಲೆ ಹೇರುವುದ್ಯಾಕೆ..? ವಸಂತ ಲದವಾ ಪ್ರಶ್ನೆ

ಹುಬ್ಬಳ್ಳಿ: ವಿದ್ಯುತ್ ಸರಬರಾಜು ಕಂಪನಿಗಳು ೨೦೨೦-೨೧ರಲ್ಲಿ ೧೩೫೨.೧೪ ಕೋಟಿ ರೂ.ಗಳಷ್ಟು ನಷ್ಟ ಅನುಭವಿಸಿದ್ದರಿಂದ ಈ ಕೊರತೆ ವಿದ್ಯತ್ ದರ ಏರಿಕೆ ಮೂಲಕ ಭರಿಸಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಅನುಮೋದನೆಗಾಗಿ ಮನವಿ ಸಲ್ಲಿಸಿವೆ. ರಾಜ್ಯ ಸರ್ಕಾರ ವಿದ್ಯುತ್ ದರ ಏರಿಸುವ ಹೇಳಿಕೆ ನೀಡಿದೆ. ಕಂಪನಿಗಳ ಆಡಳಿತ ಅಸಮರ್ಥತೆ ಮತ್ತು ವೈಫಲ್ಯತೆಯಿಂದ ಅನುಭವಿಸಿದ ನಷ್ಟ ರಾಜ್ಯದ ೫೫,೫೭,೧೦೮ … Continued

ಅಕ್ರಮ ಅದಿರು ಮಾರಾಟ: ಜನಾರ್ದನ ರೆಡ್ಡಿ ಮತ್ತಿತರರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಆದೇಶ

ಬೆಂಗಳೂರು: ಅಕ್ರಮವಾಗಿ ಕಬ್ಬಿಣದ ಅದಿರು ಮಾರಾಟ, ರಾಜ್ಯ ಸರ್ಕಾರಕ್ಕೆ ರಾಜಧನ ಖೋತಾ ಮತ್ತು ಇತರೆ ತೆರಿಗೆಗಳ ನಷ್ಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ ಮೂವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈಚೆಗೆ ಆದೇಶಿಸಿದ್ದು, ಸಮನ್ಸ್‌ ಜಾರಿ ಮಾಡಿದೆ. ತನಿಖಾಧಿಕಾರಿ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ … Continued

ಕರ್ನಾಟಕದಲ್ಲಿ 38 ಸಾವಿರಕ್ಕೆ ಇಳಿದ ದೈನಂದಿನ ಕೊರೊನಾ ಪ್ರಕರಣ: ಬೆಂಗಳೂರಲ್ಲೂ ಇಳಿಕೆ ಕಾಣುತ್ತಿರುವ ಸೋಂಕು..

ಬೆಂಗಳೂರು: ಕರ್ನಾಟಕದಲ್ಲಿ ಗುರುವಾರ ಹೊಸದಾಗಿ 38,083 ಕೊರೊನಾ ಸೋಂಕು ಪತ್ತೆಯಾಗಿದ್ದು, ರಾಜ್ಯದಲ್ಲಿ ದೈನಂದಿನ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆ ಕಂಡಿದೆ. ಇದೇವೇಳೆ ರಾಜ್ಯದಲ್ಲಿ 67,236 ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಹಾಗೂ ರಾಜ್ಯಾದ್ಯಂತ ಚಿಕಿತ್ಸೆ ಫಲಿಸದೆ 49 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸದ್ಯ 3,28,711ಕ್ಕೆ ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿನ ಕೋವಿಡ್ ಪಾಸಿಟಿವಿಟಿ ದರ … Continued

ಕರ್ನಾಟಕದಲ್ಲಿ ಮಂಗಳವಾರ ಹೊಸದಾಗಿ 48,905 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 48,905 ಕೊರನಾ ಸೋಂಕು ದಾಖಲಾಗಿದ್ದು, ಇದೇ ಸಮಯದಲ್ಲಿ 39 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 22,427 ಮಂದಿಗೆ ಸೋಂಕು ತಗುಲಿದ್ದು, 8 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 3654413ಕ್ಕೆ ಏರಿಕೆಯಾಗಿದೆ, ಇದುವರೆಗೆ 3257769 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 357909 ಸಕ್ರಿಯ ಪ್ರಕರಣಗಳಿವೆ. ಬಾಗಲಕೋಟೆ 610, ಬಳ್ಳಾರಿ 1,141, ಬೆಳಗಾವಿ 791, ಬೆಂಗಳೂರು … Continued

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 19 `ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ ಸರ್ಜರಿ ಮಾಡಿದ್ದು, 19 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಗೊಳಿಸಿ ಸರ್ಕಾರ ಆದೇಶಿಸಿದೆ. ವರ್ಗಾವಣೆಗೊಂಡ ಐಎಎಸ್ ಅಧಿಕಾರಿಗಳು ಯಶವಂತ ವಿ.ಗುರುಕರ್ – ಕಲಬುರ್ಗಿ ಜಿಲ್ಲಾಧಿಕಾರಿ ಡಾ.ಶ್ಯಾಮಲಾ – ಕಾರ್ಯದರ್ಶಿ ಸಾರ್ವಜನಿಕ ಉದ್ಯಮ ವಿ.ವಿ.ಜ್ಯೋತ್ಸ್ನಾ – ಕೆ ಎಸ್ ಐಸಿ – ಎಂಡಿ ಕನಗವಲ್ಲಿ – ಆಯುಕ್ತರು, ಆಹಾರ ಮತ್ತು … Continued

ಕರ್ನಾಟಕದಲ್ಲಿ ಸೋಮವಾರ 46,426 ಮಂದಿಗೆ ಕೊರೊನಾ ಸೋಂಕು, ನಿನ್ನೆಗಿಂತ ತುಸು ಕಡಿಮೆ

ಬೆಂಗಳೂರು: ಕರ್ನಾಟಕದಲ್ಲಿ ಸೋಮವಾರ 46,426 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ 41,703 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಹಾಗೂ 32 ಜನರು ಮೃತಪಟ್ಟಿದ್ದಾರೆ. ಪ್ರಸ್ತುತ 3,62,487 ಸಕ್ರಿಯ ಪ್ರಕರಣಗಳಿವೆ. ಪ್ರಸ್ತುತ ರಾಜ್ಯದ ಪಾಸಿಟಿವಿಟಿ ಪ್ರಮಾಣ ಶೇ 32.95 ಇದ್ದು, ಸೋಂಕಿತರ ಸಾವಿನ ಸರಾಸರಿ ಶೇ 0.06 ಇದೆ. ಬೆಂಗಳೂರು ನಗರದಲ್ಲಿ ಸೋಮವಾರ ಒಟ್ಟು 21,569 … Continued