ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3-4 ದಿನ ಗುಡುಗು ಸಹಿತ ಮಳೆಯ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ  ಮೂರ್ನಾಲ್ಕುದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಮಾರ್ಚ್‌ 19ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಕೆಲವು ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ವಿಜಯಪುರ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ … Continued

ಉಪಚುನಾವಣೆ : ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಭಾರಿ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಬಾಗಲಕೋಟೆಯ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾಗಿದೆ. ಇಂದು (ಮಾರ್ಚ್‌ 19) ಯುಗಾದಿ ಹಬ್ಬದ ದಿನವೇ ಈ ಎರಡು ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ಮತ್ತು ಎಚ್.ವೈ.ಮೇಟಿ ಅವರ ನಿಧನದಿಂದಾಗಿ ತೆರವಾದ ಕ್ಷೇತ್ರಗಳಿಗೆ … Continued

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ತಾಪಮಾನ (Karnataka Weather) ಹೆಚ್ಚಾಗಿ ಬಿಸಿಲಿನ ತೀವ್ರತೆ ಹೆಚ್ಚಾಗಿದೆ. ಈ ನಡುವೆ ರಾಜ್ಯದ ಹಲವೆಡೆ ಮಳೆಯಾದ ವರದಿಯಾಗಿದೆ. ಉತ್ತರ ಕನ್ನಡ, ಧಾರವಾಡ, ಹಾವೇರಿ, ಗದಗ, ಕೊಡಗು, ಬೀದರ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಕೆಲವಡೆ ಭಾನುವಾರ ಕೆಲ ಹೊತ್ತು ಗುಡುಗು ಸಹಿತ ಮಳೆ ಸುರಿದಿದೆ. ಉತ್ತರ … Continued

ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ ರಾಜೀನಾಮೆ…!

ಹುಬ್ಬಳ್ಳಿ: ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡದ ಕಾರಣ ನನಗೆ ಬೇಸರವಾಗಿದೆ. ಹೀಗಾಗಿ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಬಿಜೆಪಿ ನಾಯಕ ಲಿಂಗರಾಜ ಪಾಟೀಲ ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 37 ವರ್ಷಗಳಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಪಕ್ಷ … Continued

ವಿಧಾನ ಪರಿಷತ್‌ ಚುನಾವಣೆ; ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನ ದ್ವೈವಾರ್ಷಿಕ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಚರ್ಚಿಸಿ ಮೂರು ಪ್ರಮುಖ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಒಟ್ಟು ನಾಲ್ಕು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದ್ದು, ಉಳಿದ ಒಂದು ಸ್ಥಾನವನ್ನು ಮಿತ್ರ ಪಕ್ಷ ಜೆಡಿಎಸ್​​ಗೆ … Continued

ಕರ್ನಾಟಕ ಬಜೆಟ್‌ : ಅಡಕೆ ಬೆಳೆ ಎಲೆ ಚುಕ್ಕಿ ರೋಗ ನಿಯಂತ್ರಣ ಅಧ್ಯಯನ ಚಟುವಟಿಕೆಗೆ 10 ಕೋಟಿ ರೂ. ಅನುದಾನ

ಬೆಂಗಳೂರು : 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಅಡಕೆ ಬೆಳೆಗಾರರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಘೋಷಣೆ ಮಾಡಲಾಗಿದೆ. ಅಡಕೆ ಮರಗಳಿಗೆ ತೀವ್ರ ಹಾನಿ ಉಂಟುಮಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳನ್ನು ನಿಯಂತ್ರಿಸುವ ಸಂಬಂಧ ನಡೆಸುವ ಅಧ್ಯಯನ ಚಟುವಟಿಕೆ ನಡೆಸಲು 10 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​​ನಲ್ಲಿ ಪ್ರಕಟಿಸಿದ್ದಾರೆ. … Continued

ಕರ್ನಾಟಕ ಬಜೆಟ್‌ 2026 | ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ ; ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಕರ್ನಾಟಕ ರಾಜ್ಯದ ಸಂಸ್ಕೃತಿಯ ಅಂಗವಾಗಿರುವ ಹವ್ಯಕ ಭಾಷೆಯ ಬೆಳವಣಿಗೆಗೆ ಹವ್ಯಕ ಭಾಷಾ ಅಕಾಡೆಮಿಯನ್ನು ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಕರ್ನಾಟಕ ಬಜೆಟ್ 2026-27ರಲ್ಲಿ ಘೋಷಣೆ ಮಾಡಿದ್ದಾರೆ. ಹವ್ಯಕ ಭಾಷೆಯ ವಿಶಿಷ್ಟ ಮತ್ತು ಅಪರೂಪದ ಭಾಷೆಯ ಅಧ್ಯಯನ, ಅಭಿವೃದ್ಧಿ ಮತ್ತು ಸಂರಕ್ಷಣೆ ದೃಷ್ಟಿಯಿಂದ ಹವ್ಯಕ ಭಾಷಾ ಅಕಾಡೆಮಿ ಸ್ಥಾಪಿಸುವುದಾಗಿ ಅವರು ಹೇಳಿದ್ದಾರೆ. ಹವ್ಯಕ ಭಾಷೆ ಅಥವಾ … Continued

2026ರ ಕರ್ನಾಟಕ ಬಜೆಟ್‌ ಹೈಲೈಟ್ಸ್‌

  ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕದ 2026-27ನೇ ಸಾಲಿನ ವಾರ್ಷಿಕ ಬಜೆಟ್ ಮಂಡಿಸಿದರು. ಬಜೆಟ್‌ ಗಾತ್ರ ಹೆಚ್ಚಾಗಿದ್ದರೂ, ಆರ್ಥಿಕವಾಗಿ ದೊಡ್ಡ ಮಟ್ಟದ ಸಾಲದ ಹೊರೆಯೂ ಬೀಳಲಿದೆ.  ಸಿದ್ದರಾಮಯ್ಯ ಅವರು 4,48,004 ಕೋಟಿ ರೂಪಾಯಿಗಳ ಬೃಹತ್ ಗಾತ್ರದ ಬಜೆಟ್ ಮಂಡಿಸಿದರೂ ಇದು 22,957 ಕೋಟಿ ರೂಪಾಯಿಗಳ ಕೊರತೆ ಬಜೆಟ್‌ ಆಗಿದೆ. ಇದೇ ವೇಳೆ 1,32,190 ಕೋಟಿ … Continued

2026ರ ಕರ್ನಾಟಕ ಬಜೆಟ್‌ : 4.48 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ; ಯಾರಿಗೆ ಎಷ್ಟು ಅನುದಾನ? ಇಲ್ಲಿದೆ ವಿವರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಕರ್ನಾಟಕದ  2026-27ನೇ ಸಾಲಿನ ಬಜೆಟ್ ಮಂಡಿಸಿದ್ದು, ಈ ಬಾರಿಯ ಬಜೆಟ್‌ನ ಒಟ್ಟು ಗಾತ್ರ 4,48,004 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.ಕಳೆದ ವರ್ಷಕ್ಕೆ ಹೋಲಿಸಿದರೆ ಬಜೆಟ್ ಗಾತ್ರದಲ್ಲಿ ಏರಿಕೆಯಾಗಿದೆ. ಕಳೆದ ವರ್ಷ 2025-26ನೇ ಸಾಲಿನ ಬಜೆಟ್‌ನಲ್ಲಿ ಪರಿಷ್ಕೃತ ಅಂದಾಜು 3,95,307 ಕೋಟಿ ರೂ.ಗಳಷ್ಟಿತ್ತು. ಬಜೆಟ್‌ ಹಂಚಿಕೆಯಲ್ಲಿ ಎಂದಿನಂತೆ ಶಿಕ್ಷಣ ಕ್ಷೇತ್ರಕ್ಕೆ … Continued

2026ರ ಕರ್ನಾಟಕ ಬಜೆಟ್‌ | 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬಳಕೆ ನಿಷೇಧ: ಸಿಎಂ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ (Social Media Ban) ಬಳಕೆ ನಿಷೇಧಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. 2026-27ನೇ ಸಾಲಿನ ಬಜೆಟ್‌ ಮಂಡನೆ ವೇಳೆ ಮಾತನಾಡಿದ ಅವರು,  ಮೊಬೈಲ್‌ ಅತಿಯಾದ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು ಎಂದು … Continued