ಕೈಗಾ ಅಣು ವಿದ್ಯುತ್ ಸ್ಥಾವರ: 5, 6ನೇ ಘಟಕಗಳ ಕಾಮಗಾರಿಗೆ ಚಾಲನೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕೈಗಾ ಅಣು ವಿದ್ಯುತ್ ಸ್ಥಾವರದ 5 ಮತ್ತು 6ನೇ ಘಟಕಗಳ ನಿರ್ಮಾಣದ ಪ್ರಮುಖ ಹಂತವಾದ ‘ಕಾಂಕ್ರೀಟಿಂಗ್’ ಕಾರ್ಯಕ್ಕೆ ಭಾರತೀಯ ಅಣುಶಕ್ತಿ ಆಯೋಗದ ಅಧ್ಯಕ್ಷ ಅಜಿತಕುಮಾರ ಮೊಹಾಂತಿ ಭಾನುವಾರ ಅಧಿಕೃತವಾಗಿ ಚಾಲನೆ ನೀಡಿದರು. ದೇಶೀಯ ತಂತ್ರಜ್ಞಾನದ PHW (Pressurised Heavy Water) ಮಾದರಿಯ ರಿಯಾಕ್ಟರ್‌ಗಳನ್ನು ಇಲ್ಲಿ ಬಳಸಲಾಗುತ್ತಿದೆ. ಈ ತಂತ್ರಜ್ಞಾನದ … Continued

ವೀಡಿಯೊ..| ರಣಜಿ ಫೈನಲ್‌ ನಲ್ಲಿ ಜಮ್ಮು-ಕಾಶ್ಮೀರ ತಂಡಕ್ಕೆ ಹುರಿದುಂಬಿಸಲು ಹುಬ್ಬಳ್ಳಿಗೆ ಬಂದ ಸಿಎಂ ಓಮರ್ ಅಬ್ದುಲ್ಲಾ…!

ಹುಬ್ಬಳ್ಳಿ : ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ಕ್ರಿಕೆಟ್ ತಂಡಗಳ ನಡುವೆ ಇಲ್ಲಿನ ಕೆ.ಎಸ್.ಸಿ.ಎ (KSCA) ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ ಪಂದ್ಯವನ್ನು ವೀಕ್ಷಿಸಲು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಶುಕ್ರವಾರ ಸಂಜೆ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಜೆಕೆ ತಂಡ ಬೃಹತ್ ಮುನ್ನಡೆ ಸಾಧಿಸಿದ್ದು, ಚೊಚ್ಚಲ ರಣಜಿ ಪ್ರಶಸ್ತಿ ಗೆಲ್ಲುವ ಸನಿಹದಲ್ಲಿದೆ. ಹೀಗಾಗಿ ತಂಡಕ್ಕೆ … Continued

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ

ಬೆಂಗಳೂರು : ರಾಜ್ಯದಲ್ಲಿ ನಾಳೆ (ಫೆ.28)ಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಮಾ.17ರ ವರೆಗೆ ಪರೀಕ್ಷೆ ನಡೆಯಲಿದೆ. ರಾಜ್ಯಾದ್ಯಂತ 1,217 ಕೇಂದ್ರಗಳಲ್ಲಿ ಪರೀಕ್ಷೆನಡೆಯಲಿದ್ದು, 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿಜ್ಞಾನ ವಿಭಾಗದಲ್ಲಿ 2,92,645 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,11,174, ಕಲಾ ವಿಭಾಗದಲ್ಲಿ 1,42,982 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. ಪರೀಕ್ಷೆಯು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆ … Continued

ವೀಡಿಯೊ | ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ : ಕರ್ನಾಟಕ ಆಟಗಾರನಿಗೆ ತಲೆಯಿಂದ ಡಿಚ್ಚಿ ಹೊಡೆದ ಜಮ್ಮು ತಂಡದ ನಾಯಕ

ಹುಬ್ಬಳ್ಳಿ: ಇಲ್ಲಿನ ಕೆ.ಎಸ್.ಸಿ.ಎ ಮೈದಾನದಲ್ಲಿ ನಡೆಯುತ್ತಿರುವ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ನಡುವಿನ 2025-26ರ ಸಾಲಿನ ರಣಜಿ ಟ್ರೋಫಿ ಫೈನಲ್ ಪಂದ್ಯದ ಎರಡನೇ ದಿನದಂದು ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಜಮ್ಮು-ಕಾಶ್ಮೀರ ತಂಡದ ನಾಯಕ ಪರಾಸ್ ಡೋಗ್ರಾ ಅವರು ಕರ್ನಾಟಕದ ಫೀಲ್ಡರ್ ಕೆ.ವಿ. ಅನೀಶ್ ಅವರಿಗೆ ತಲೆಯಿಂದ ಡಿಚ್ಚಿ ಹೊಡೆದ (Headbutt) ಪ್ರಸಂಗ ನಡೆದಿದೆ. ಜಮ್ಮು-ಕಾಶ್ಮೀರ ಇನಿಂಗ್ಸ್‌ನ 101ನೇ … Continued

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಎರಡ್ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಫೆಬ್ರವರಿ 27 ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಂತರ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಬಂಗಾಳಕೊಲ್ಲಿಯ ಮೇಲೆ ಉತ್ತರ ಶ್ರೀಲಂಕಾದ ಬಳಿ ಕೇಂದ್ರೀಕೃತವಾಗಿರುವ ವಾಯುಭಾರ ಕುಸಿತವು ಕ್ರಮೇಣ ಪೂರ್ವಕ್ಕೆ ಬದಲಾಗುತ್ತಿದೆ. ಈ ಚಲನೆಯೊಂದಿಗೆ, ಬಂಗಾಳಕೊಲ್ಲಿಯಿಂದ ಬೀಸುವ ತೇವಾಂಶ-ವಾಹಕ ಗಾಳಿಯು ದುರ್ಬಲಗೊಳ್ಳಬಹುದು, … Continued

ಶಿವಮೊಗ್ಗ: ಜಗಳ ಬಿಡಿಸಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗ: ಶಿವಮೊಗ್ಗದ ಹೊರವಲಯದ ಸೂಳೆಬೈಲು ಪ್ರದೇಶದಲ್ಲಿ 15 ವರ್ಷದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯನ್ನು ಆತನ ಸಹಪಾಠಿಗಳೇ ಬರ್ಬರವಾಗಿ ಹೊಡೆದು ಕೊಂದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸೋಮವಾರ ರಾತ್ರಿ ವಿಶೇಷ ತರಗತಿ ಮುಗಿಸಿ ವಿದ್ಯಾರ್ಥಿಗಳು ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತ ವಿದ್ಯಾರ್ಥಿಯನ್ನು ಸಂಕೇತ ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC … Continued

ಧಾರವಾಡ : ಕೆಡಿಪಿ ಸಭೆಯಲ್ಲಿ ಸಚಿವ ಲಾಡ್-ಕಾಂಗ್ರೆಸ್‌ ಪರಿಷತ್‌ ಸದಸ್ಯ ಜಕ್ಕಪ್ಪನವರ ತೀವ್ರ ಜಟಾಪಟಿ

ಧಾರವಾಡ : ಸೋಮವಾರ ಧಾರವಾಡದಲ್ಲಿ ನಡೆದ ಜಿಲ್ಲಾ ಪಂಚಾಯತ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಅನುದಾನ ಬಳಕೆ ಹಾಗೂ ಸೌಲಭ್ಯ ಹಂಚಿಕೆ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಹಾಗೂ ಕಾಂಗ್ರೆಸ್ಸಿನ ವಿಧಾನ ಪರಿಷತ್‌ ಸದಸ್ಯ ಎಫ್‌.ಎಚ್‌ ಜಕ್ಕಪ್ಪನವರ ಮಧ್ಯೆ ತೀವ್ರ ಜಟಾಪಟಿ ನಡೆದಿದೆ. ಇಬ್ಬರು ನಾಯಕರು … Continued

ಬೆಂಗಳೂರು : ಸ್ನೇಹಿತನಿಗೆ ಬ್ಯಾಂಕ್‌ ವಿವರ ನೀಡಿ 7 ಕೋಟಿ ರೂ. ವಂಚನೆ ಜಾಲದಲ್ಲಿ ಸಿಲುಕಿದ ವಿದ್ಯಾರ್ಥಿ…!

ಬೆಂಗಳೂರು: ತನ್ನ ಸ್ನೇಹಿತನನ್ನು ಅತಿಯಾಗಿ ನಂಬಿದ್ದು ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನ ಪಾಲಿಗೆ ಅದೇ ದುಸ್ವಪ್ನವಾಗಿ ಪರಿಣಮಿಸಿದೆ. ಸ್ನೇಹಿತನಿಗೆ ಸಹಾಯ ಮಾಡಲು ಹೋದ ಈತ ಈಗ ಕೋಟ್ಯಂತರ ರೂಪಾಯಿಗಳ ಸೈಬರ್ ಹಗರಣದಲ್ಲಿ ಸಿಲುಕಿಕೊಂಡಿದ್ದಾನೆ. ಈ ವಿದ್ಯಾರ್ಥಿಯ ಬ್ಯಾಂಕ್ ಖಾತೆಯನ್ನು ಸೈಬರ್ ವಂಚಕರು ಬರೋಬ್ಬರಿ 7 ಕೋಟಿ ರೂಪಾಯಿ ವಂಚನೆಗೆ ಬಳಸಿಕೊಂಡಿರುವುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ. ಬೆಂಗಳೂರು … Continued

ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧ ? ಸಿದ್ದರಾಮಯ್ಯ ಸುಳಿವು

ಬೆಂಗಳೂರು: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಮಕ್ಕಳಲ್ಲಿ ಹೆಚ್ಚುತ್ತಿರುವ ಸಾಮಾಜಿಕ ಜಾಲತಾಣಗಳ ವ್ಯಸನವನ್ನು  ಗಮನದಲ್ಲಿಟ್ಟುಕೊಂಡು ಈ ಕ್ರಮಕ್ಕೆ ಮುಂದಾಗಲು ಸರ್ಕಾರ ನಿರ್ಧರಿಸಿದೆ. ಈ ಪ್ರಸ್ತಾವನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿಗಳೊಂದಿಗೆ ಸಮಾಲೋಚನೆ ನಡೆಸಿದ್ದು, … Continued

ಕರ್ನಾಟಕದ ಐದಾರು ಜಿಲ್ಲೆಗಳಲ್ಲಿ 3-4 ದಿನಗಳ ಕಾಲ ಮಳೆಯ ಮುನ್ಸೂಚನೆ

ಬೆಂಗಳೂರು : ಆಗ್ನೇಯ ಬಂಗಾಳ ಕೊಲ್ಲಿಯ ಮೇಲೆ ವಾಯುಭಾರ ಕುಸಿತ ಉಂಟಾಗಿದ್ದರಿಂದ ದಕ್ಷಿಣ ಭಾರತದ ಕೆಲ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಿಲಾಗಿದೆ. ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಹಾಸನ, ಚಾಮರಾಜನಗರ, ಕೊಡಗು, ಮೈಸೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ … Continued