ಅದೃಷ್ಟ ಅಂದ್ರೆ ಇದಪ್ಪ..: ಅಬುಧಾಬಿ ಬಿಗ್ ಟಿಕೆಟ್ ಲಾಟರಿಯಲ್ಲಿ ₹49 ಕೋಟಿ ಬಹುಮಾನ ಗೆದ್ದ ಉಡುಪಿ ಯುವಕ…!

ಉಡುಪಿ: ಕರ್ನಾಟಕದ ಕರಾವಳಿಯ ಯುವಕನೊಬ್ಬನಿಗೆ ರಾತ್ರೋರಾತ್ರಿ ಅದೃಷ್ಟ ಲಕ್ಷ್ಮಿ ಒಲಿದಿದ್ದಾಳೆ. ಯುಎಇಯ ಪ್ರತಿಷ್ಠಿತ ‘ಬಿಗ್ ಟಿಕೆಟ್’ (Big Ticket) ಲಕ್ಕಿ ಡ್ರಾನಲ್ಲಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟಪಾಡಿ ಮಟ್ಟು ನಿವಾಸಿ ಶಂತನು ಶೆಟ್ಟಿಗಾರ್ ಅವರು ಬರೋಬ್ಬರಿ 20 ಮಿಲಿಯನ್ ದಿರ್ಹಾಮ್ (ಅಂದಾಜು 49 ಕೋಟಿ ರೂಪಾಯಿ) ಬಹುಮಾನ ಗೆದ್ದಿದ್ದಾರೆ. ಪ್ರಸ್ತುತ ಓಮನ್‌ನ ರಿಟೇಲ್ ವಲಯದಲ್ಲಿ … Continued

57ನೇ ವಯಸ್ಸಿನಲ್ಲಿ ರಾಜ್ಯಮಟ್ಟದ ಶೂಟಿಂಗ್‌ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನಟ ಜಗ್ಗೇಶ ಪತ್ನಿ…!

 ಬೆಂಗಳೂರು : ‘ವಯಸ್ಸು ಕೇವಲ ಸಂಖ್ಯೆಯಷ್ಟೇ ಹೊರತು ಸಾಧನೆಗೆ ಅಲ್ಲ’ ಎಂಬುದನ್ನು ಖ್ಯಾತ ನಟ ಜಗ್ಗೇಶ ಪತ್ನಿ ಹಾಗೂ ಆಹಾರ ತಜ್ಞೆಯೂ  ಪರಿಮಳಾ ಜಗ್ಗೇಶ ಅವರು ಸಾಬೀತು ಪಡಿಸಿದ್ದಾರೆ. ಅವರು ತಮ್ಮ  57  ವಯಸ್ಸಿನಲ್ಲಿ ಇತ್ತೀಚಿಗೆ ನಡೆದ ರಾಜ್ಯಮಟ್ಟದ ಶೂಟಿಂಗ್ ಚಾಂಪಿಯನ್‌ಶಿಪ್‌ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಕರ್ನಾಟಕ ರಾಜ್ಯ ರೈಫಲ್ ಅಸೋಸಿಯೇಷನ್ (KSRA) ವತಿಯಿಂದ … Continued

ಕರ್ನಾಟಕ-ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಜಲ ವಿವಾದ: ನ್ಯಾಯಮಂಡಳಿ ರಚನೆಗೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಕರ್ನಾಟಕ ಮತ್ತು ತಮಿಳುನಾಡು ನಡುವಿನ ಅಂತಾರಾಜ್ಯ ದಕ್ಷಿಣ ಪಿನಾಕಿನಿ (ಪೆನ್ನಾರ್) ನದಿ‌ ನೀರು ಹಂಚಿಕೆ ವಿವಾದ ಇತ್ಯರ್ಥಕ್ಕಾಗಿ ನ್ಯಾಯಮಂಡಳಿ ರಚನೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕು ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಆದೇಶಿಸಿದೆ ಇಂದಿನಿಂದ (ಫೆ.2, 2026) ಒಂದು ತಿಂಗಳ ಒಳಗಾಗಿ ಅಧಿಕೃತ ಗೆಜೆಟ್‌ ಅಧಿಸೂಚನೆ ಹೊರಡಿಸುವಂತೆ ನ್ಯಾಯಮೂರ್ತಿಗಳಾದ ವಿಕ್ರಮನಾಥ ಮತ್ತು … Continued

ತಂದೆ-ತಾಯಿ, ತಂಗಿಯನ್ನು ಕೊಂದು ಮನೆಯಲ್ಲೇ ಹೂತಿಟ್ಟಿದ್ದ ಯುವಕ

ವಿಜಯನಗರ: ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಹೆತ್ತ ತಂದೆ-ತಾಯಿ ಮತ್ತು ತಂಗಿಯನ್ನು ಕೊಲೆ ಮಾಡಿ, ಮನೆಯೊಳಗೆ ಹೂತು ಹಾಕಿರುವ ಅಮಾನುಷ ಕೃತ್ಯ ವಿಜಯನಗರ ಜಿಲ್ಲೆಯ ಕೋಟೂರು ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ದೊಡ್ಡಕಿಟ್ಟದಹಳ್ಳಿ ಮೂಲದ ಅಕ್ಷಯಕುಮಾರ ಎಂಬಾತನೇ ಈ ಪೈಶಾಚಿಕ ಕೃತ್ಯ ಎಸಗಿದ ಆರೋಪಿ. ಈತ ತನ್ನ ತಂದೆ ಭೀಮರಾಜ, ತಾಯಿ … Continued

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಆತ್ಮಹತ್ಯೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಸಂಸ್ಥೆ ‘ಕಾನ್ಫಿಡೆಂಟ್ ಗ್ರೂಪ್’ (Confident Group) ಅಧ್ಯಕ್ಷರಾದ ಸಿ.ಜೆ. ರಾಯ್ (CJ Roy) ಅವರು ಶುಕ್ರವಾರ (ಜನವರಿ 30) ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ತಮ್ಮ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.   ಮಾಹಿತಿ ಪ್ರಕಾರ, ಐಟಿ (ಆದಾಯ ತೆರಿಗೆ) ಇಲಾಖೆಯ … Continued

ನಟ ಧರ್ಮೇಂದ್ರ- ಪದ್ಮವಿಭೂಷಣ, ಶತಾವಧಾನಿ ಆರ್‌.ಗಣೇಶ-ಪದ್ಮಭೂಷಣ ; 131 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರಕಟ-ಸಂಪೂರ್ಣ ಪಟ್ಟಿ

ನವದೆಹಲಿ: ಕೇಂದ್ರವು ಭಾನುವಾರ 2026 ರ ಪದ್ಮ ಪ್ರಶಸ್ತಿಗಳನ್ನು ಘೋಷಿಸಿದ್ದು, ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ 131 ಸಾಧಕರಿಗೆ ಪದ್ಮ ಪ್ರಶಸ್ತಿಗಳನ್ನು ಘೋಷುಸಲಾಗಿದೆ. ಈ ಪಟ್ಟಿಯಲ್ಲಿ ಸಾರ್ವಜನಿಕ ಜೀವನ, ಕಲೆ, ಸಿನಿಮಾ, ಸಾಹಿತ್ಯ, ಕ್ರೀಡೆ ಮತ್ತು ಸಾರ್ವಜನಿಕ ವ್ಯವಹಾರಗಳ ಹಲವಾರು ಪ್ರಮುಖ ಹೆಸರುಗಳು ಸೇರಿವೆ, ಈ ವರ್ಷ ಐದು ಪದ್ಮವಿಭೂಷಣ, 13 ಪದ್ಮಭೂಷಣ ಮತ್ತು 113 … Continued

ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಅಸ್ತು

 ಬೆಂಗಳೂರು : ರಾಜ್ಯದ ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲು ಗುರುವಾರ ನಡೆದ ಸಚಿವ ಸಂಪುಟ ಸಭೆಯು ಮಹತ್ವದ ತೀರ್ಮಾನ ಕೈಗೊಂಡಿದೆ. ಈ ವಯೋಮಿತಿ … Continued

ಸರ್ಕಾರ ನೀಡಿದ ಭಾಷಣ ಓದದೆ ಎರಡೇ ಸಾಲಿನ ಭಾಷಣ ಓದಿ ಸದನದಿಂದ ತೆರಳಿದ ರಾಜ್ಯಪಾಲರು

ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಬಜೆಟ್ ಅಧಿವೇಶನದ ಆರಂಭದಲ್ಲೇ ರಾಜಭವನ ಮತ್ತು ರಾಜ್ಯ ಸರ್ಕಾರದ ನಡುವಿನ ಶೀತಲ ಸಮರ ಸ್ಫೋಟಗೊಂಡಿದೆ. ಗುರುವಾರ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ಆಗಮಿಸಿದ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು, ಕೇವಲ ಎರಡೇ ಸಾಲುಗಳನ್ನು ಓದಿ ತಮ್ಮ ಭಾಷಣವನ್ನು ಮುಕ್ತಾಯಗೊಳಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಸರ್ಕಾರ ಸಿದ್ಧಪಡಿಸಿದ್ದ ಭಾಷಣದ ಪ್ರತಿಯಲ್ಲಿ ಉಲ್ಲೇಖಿಸಲಾಗಿದ್ದ … Continued

ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲರ ನಿರಾಕರಣೆ : ಸರ್ಕಾರದಿಂದ ಮನವೊಲಿಸುವ ಯತ್ನ

ಬೆಂಗಳೂರು: ಜನವರಿ 22 ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ. ರಾಜ್ಯಪಾಲರ ಈ ಅನಿರೀಕ್ಷಿತ ನಿರ್ಧಾರದ ಬೆನ್ನಲ್ಲೇ, ರಾಜ್ಯ ಸರ್ಕಾರವು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲು ತೀರ್ಮಾನಿಸಿದೆ. ರಾಜ್ಯಪಾಲರ ಈ ನಿರ್ಧಾರಕ್ಕೆ ನಿಖರವಾದ ಕಾರಣಗಳು ಅಧಿಕೃತವಾಗಿ ಇನ್ನು ಬಹಿರಂಗವಾಗಿಲ್ಲ. ರಾಜ್ಯದ ಕಾಂಗ್ರೆಸ್‌ ಸರ್ಕಾರದ … Continued

ಅಸಭ್ಯ ವೀಡಿಯೊ ವೈರಲ್ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್ ಅಮಾನತು

ಬೆಂಗಳೂರು: ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯರ ಜೊತೆಗಿನ ಅಸಭ್ಯ ವೀಡಿಯೊ ವೈರಲ್ ಆದ ನಂತರರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದ್ದು, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ (Ramachandra rao) ಅವರನ್ನು ತಕ್ಷಣವೇ ಹುದ್ದೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಸೋಮವಾರ ಮಧ್ಯಾಹ್ನದ (ಜನವರಿ 19) ಹೊತ್ತಿಗೆ 10 ದಿನಗಳ ಕಡ್ಡಾಯ ರಜೆ ಮೇಲೆ … Continued