‘ಸುಳ್ಳು ಹೇಳುತ್ತಲೇ ಇರುತ್ತಾರೆ….’: ಕಾಂಗ್ರೆಸ್ ಸರ್ಕಾರದ ಸಮೀಕ್ಷೆ ಮುಂದಿಟ್ಟು ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಎಲೆಕ್ಟ್ರಾನಿಕ್ ಮತಯಂತ್ರಗಳ (EVM) ಮೇಲೆ ಅನುಮಾನ ವ್ಯಕ್ತಪಡಿಸುತ್ತಾ ‘ಮತ ಕಳ್ಳತನ’ದ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ಅವರಿಗೆ ಈಗ ಸ್ವಪಕ್ಷದ ಸರ್ಕಾರವಿರುವ ಕರ್ನಾಟಕದಲ್ಲೇ ಇರಿಸುಮುರಿಸಾಗುವ ಸಮೀಕ್ಷೆ ಹೊರಬಿದ್ದಿದೆ. ರಾಜ್ಯ ಸರ್ಕಾರವೇ ನಡೆಸಿದ ಸಮೀಕ್ಷೆಯೊಂದರಲ್ಲಿ ಶೇ. 83ಕ್ಕೂ ಹೆಚ್ಚು ಜನ ಎವಿಎಂ ಮತಯಂತ್ರಗಳ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದು, ಇದನ್ನು ಮುಂದಿಟ್ಟುಕೊಂಡು ಬಿಜೆಪಿ ಕಾಂಗ್ರೆಸ್ ವಿರುದ್ಧ ತೀವ್ರ … Continued

ಕರ್ನಾಟಕದ ಹೆಚ್ಚಿನ ಜನರಿಗೆ ಎವಿಎಂ ಮೇಲೆ ಅಪಾರ ವಿಶ್ವಾಸ ; ಹೊಸ ಸಮೀಕ್ಷೆಯಲ್ಲಿ ಅನೇಕ ಅಂಶಗಳು ಬಹಿರಂಗ

ಬೆಂಗಳೂರು: ಭಾರತದಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಯುತ್ತವೆ ಹಾಗೂ ಇವಿಎಂ (EVM) ಯಂತ್ರಗಳು ನಿಖರವಾದ ಫಲಿತಾಂಶವನ್ನು ನೀಡುತ್ತವೆ ಎಂದು ಕರ್ನಾಟಕದ ಬಹುಪಾಲು ಮತದಾರರು ನಂಬಿದ್ದಾರೆ. ಕರ್ನಾಟಕ ಮೌಲ್ಯಮಾಪನ ಮತ್ತು ಉಸ್ತುವಾರಿ ಪ್ರಾಧಿಕಾರ (Karnataka Monitoring and Evaluation Authority (KMEA)) ನಡೆಸಿದ ಇತ್ತೀಚಿನ ಸಮೀಕ್ಷೆಯಲ್ಲಿ ಈ ಕುತೂಹಲಕಾರಿ ಅಂಶಗಳು ಬಹಿರಂಗಗೊಂಡಿವೆ. ಆಗಸ್ಟ್ 2025 ರ … Continued

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್​ ಸರ್ಜರಿ: 60ಕ್ಕೂ ಹೆಚ್ಚು ಐಪಿಎಸ್‌ ಅಧಿಕಾರಿಗಳಿಗೆ ಬಡ್ತಿ, ವರ್ಗಾವಣೆ

ಬೆಂಗಳೂರು : 2026 ಹೊಸ ವರ್ಷ ಆರಂಭದ ನಡುವೆಯೇ ಕರ್ನಾಟಕ ರಾಜ್ಯ ಸರ್ಕಾರ (Karnataka government) ಪೊಲೀಸ್​ ಇಲಾಖೆಗೆ ಮೇಜರ್​ ಸರ್ಜರಿ (IPS Transfer) ಮಾಡಿದೆ. 60ಕ್ಕೂ ಹೆಚ್ಚು ಐಪಿಎಸ್‌ ಪೊಲೀಸ್‌ ಅಧಿಕಾರಿಗಳಿಗೆ ಬಡ್ತಿ ಹಾಗೂ ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ. ಸುಮಾರು 23 ಐಪಿಎಸ್​ ಅಧಿಕಾರಿಗಳಿಗೆ (IPS Officers) ಡಿಐಜಿಪಿ ಹುದ್ದೆಗೆ ಬಡ್ತಿ ನೀಡಿದ್ದು, … Continued

ಕರ್ನಾಟಕದಲ್ಲಿ ದಾಖಲೆ ಮಟ್ಟದ ಚಳಿ: ಕಳೆದ 20 ವರ್ಷಗಳಲ್ಲೇ ಅತ್ಯಂತ ಶೀತಲ ಹವಾಮಾನ…!

ಬೆಂಗಳೂರು : ಕರ್ನಾಟಕದಲ್ಲಿ ಈ ವರ್ಷ ಚಳಿಯ ತೀವ್ರತೆ ಮಿತಿಮೀರಿದ್ದು, ಕಳೆದ ಎರಡು ದಶಕಗಳಲ್ಲಿ ರಾಜ್ಯದ ಅರ್ಧದಷ್ಟು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ದಾಖಲೆ ಮಟ್ಟಕ್ಕೆ ಕುಸಿದಿದೆ. ಇದು ಕೇವಲ ಸಾಂದರ್ಭಿಕ ಬದಲಾವಣೆಯಲ್ಲ, ಬದಲಿಗೆ ದೀರ್ಘಕಾಲದ ಹವಾಮಾನ ವೈಪರೀತ್ಯದ ಸೂಚನೆಯಾಗಿದೆ ಎಂದು ದತ್ತಾಂಶಗಳು ತಿಳಿಸಿವೆ. ರಾಜ್ಯದಲ್ಲಿ ತಾಪಮಾನದ ವ್ಯವಸ್ಥಿತ ದಾಖಲೆಗಳನ್ನು ಸುಮಾರು ಒಂದು ಶತಮಾನದಿಂದ ನಿರ್ವಹಿಸಲಾಗುತ್ತಿದ್ದರೂ, ಹೆಚ್ಚಿನ … Continued

ಕರ್ನಾಟಕದಲ್ಲಿ ಸಿಎಂ ಬದಲಾವಣೆ ವಿಚಾರ ; ಕೋಡಿಮಠದ ಸ್ವಾಮೀಜಿ ಭವಿಷ್ಯ

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ತಿಕ್ಕಾಟ ಜೋರಾಗಿದ್ದು, ಇದರ ಮಧ್ಯೆ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿ ರಾಜ್ಯ ರಾಜಕೀಯದ ಬಗ್ಗೆ ಪ್ರತಿಕ್ರಿಯಿಸಿದ ಕೋಡಿಮಠ ಶ್ರೀಗಳು, ಸಂಕ್ರಾಂತಿ ನಂತರ ಈ ಬಗ್ಗೆ ಸ್ಪಷ್ಟವಾಗಿ ಹೇಳಬಹುದು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಹುದ್ದೆ ಕಿತ್ತುಕೊಳ್ಳುವುದು ಅಷ್ಟು ಸುಲಭವಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ … Continued

ಮೈಸೂರು ಅರಮನೆ ಬಳಿ ಬಲೂನ್ ಗ್ಯಾಸ್ ಸಿಲಿಂಡರ್ ಸ್ಫೋಟ ; ಓರ್ವ ಸಾವು, ನಾಲ್ವರಿಗೆ ಗಾಯ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗುರುವಾರ ರಾತ್ರಿ ದುರಂತವೊಂದು ಸಂಭವಿಸಿದೆ. ಮೈಸೂರು ಅರಮನೆಯ  ಬಳಿ ಬಲೂನ್‌ಗಳಿಗೆ ಗ್ಯಾಸ್ ತುಂಬಿಸುವ ಸಿಲಿಂಡರ್ ಸ್ಫೋಟಗೊಂಡು, ಬಲೂನ್ ವ್ಯಾಪಾರಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಹಾಗೂ ಮಹಿಳೆ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗುರುವಾರ ರಾತ್ರಿ ಸುಮಾರು 8:30ರ ವೇಳೆಗೆ ಈ ಘಟನೆ ನಡೆದಿದೆ. ಕ್ರಿಸ್‌ಮಸ್ ರಜೆ ಹಿನ್ನೆಲೆಯಲ್ಲಿ … Continued

ಚಿತ್ರದುರ್ಗ : ಬಸ್‌ -ಕಂಟೇನರ್‌ ಲಾರಿ ಡಿಕ್ಕಿ ; ಬಸ್‌ ಹೊತ್ತಿ ಉರಿದು ಹಲವರು ಸಾವು

ಚಿತ್ರದುರ್ಗ :  ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಜವನಗೊಂಡನಹಳ್ಳಿ ಬಳಿ ಗುರುವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಲವರು ಸಾವಿಗೀಡಾಗಿದ್ದಾರೆ ಹಾಗೂ ಹಲವರಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ. ಪೊಲೀಸರ ಮಾಹಿತಿ ಪ್ರಕಾರ 9 ಮಂದಿ ಸಜೀವ ದಹನವಾಗಿದ್ದು, ಮೃತರ ಗುರುತು ಪತ್ತೆ ಕಷ್ಟವಾಗಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ‘ಸೀ ಬರ್ಡ್’ … Continued

ಕರ್ನಾಟಕದ 4 ಪಟ್ಟಣ ಪಂಚಾಯತಗಳ ಚುನಾವಣೆ ಫಲಿತಾಂಶ | ಕಾಂಗ್ರೆಸ್ಸಿಗೆ ತೀವ್ರ ಮುಖಭಂಗ ; ಬಿಜೆಪಿಗೆ ಭರ್ಜರಿ ಜಯ

ಬೆಂಗಳೂರು :  ರಾಜ್ಯದ ನಾಲ್ಕು ಪಟ್ಟಣ ಪಂಚಾಯತಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್​​ಗೆ ಭಾರಿ ಮುಖಭಂಗವಾಗಿದೆ. ಎಲ್ಲ ನಾಲ್ಕೂ ಪಟ್ಟಣ ಪಂಚಾಯತಗಳಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಬಜಪೆ ಹಾಗೂ ಮೂಲ್ಕಿ ತಾಲೂಕಿನ ಕಿನ್ನಿಗೋಳಿ ಪಟ್ಟಣ ಪಂಚಾಯತ, ಉತ್ತರ ಕನ್ನಡದ ಮಂಕಿ ಪಟ್ಟಣ ಪಂಚಾಯತ, ಬೆಂಗಳೂರು … Continued

ಕರ್ನಾಟಕದಲ್ಲಿ ತಾಪಮಾನ ತೀವ್ರ ಕುಸಿತ ; ಇಂದು ಸಹ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡಿನಲ್ಲಿ ವ್ಯಾಪಕ ಚಳಿ ಬೀಳುತ್ತಿದ್ದು, ಸೋಮವಾರವೂ ಕೆಲ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಹಲವು ಭಾಗಗಳಲ್ಲಿ (Karnataka Districts) ಕನಿಷ್ಠ ತಾಪಮಾನ ಒಂದಂಕಿಗೆ ಇಳಿದಿದ್ದು, ಬೀದರಿನಲ್ಲಿ ದಾಖಲೆಯ ಮಟ್ಟದ ಚಳಿ ದಾಖಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಬೆಳಗ್ಗಿನ ಸಮಯದಲ್ಲಿ ಮಂಜು ಮತ್ತು ಶೀತಗಾಳಿ ಸಾಮಾನ್ಯವಾಗಿದೆ. ಡಿಸೆಂಬರ್ … Continued

ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್‌, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಭಾರಿ ಇಳಿಕೆಯಾಗುತ್ತಿದ್ದು, ತೀವ್ರ ಚಳಿ ಬೀಳುತ್ತಿದೆ. ಕರ್ನಾಟಕದ (Karnataka Weather) ಹಲವು ಜಿಲ್ಲೆಗಳಿಗೆ ಭಾನುವಾರ (ಡಿ.21) ತೀವ್ರ ಶೀತ ಗಾಳಿ(Cold Wave) ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು 7 ಜಿಲ್ಲೆಗಳಿಗೆ ಆರೆಂಜ್‌ ಹಾಗೂ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ತೀವ್ರ ಶೀತ ಗಾಳಿ ಹಿನ್ನೆಲೆಯಲ್ಲಿ ಬೀದರ, … Continued