ಎಸ್ ​ಎಸ್ ​ಎಲ್ ​​ಸಿ, ದ್ವಿತೀಯ ಪಿಯು ಪರೀಕ್ಷೆ 1, 2ರ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಅಂತಿಮಗೊಳಿಸಿ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಬುಧವಾರ (ನವೆಂಬರ್ 5) ಪ್ರಕಟಿಸಿದೆ. ಎಸ್​​ಎಸ್​ಎಲ್​ಸಿ ಪರೀಕ್ಷೆ-1 ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯುಲಿದ್ದು, ಪಿಯುಸಿ ಪರೀಕ್ಷೆ-1ರ ಪರೀಕ್ಷೆಗಳು 2026ರ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಮಳೆ ಕಡಿಮೆಯಾಗುತ್ತಿದ್ದರೂ ಮಂಗಳವಾರ (ನವೆಂಬರ್‌ 4) ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather) ಮುನ್ಸೂಚನೆ ನೀಡಿದೆ. ಕರಾವಳಿಯ ಕೆಲವೆಡ ಹಗುರ ಮಳೆಯಾಗುವ ಸಾಧ್ಯತೆ ಇದೆ. ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿಲ್ಲ. ಉತ್ತರ ಒಳನಾಡಿನ ಬೀದರ, ಕಲಬುರ್ಗಿ, … Continued

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; 70 ಸಾಧಕರಿಗೆ ಪ್ರಶಸ್ತಿ : ಸಂಪೂರ್ಣ ಪಟ್ಟಿ ಇಲ್ಲಿದೆ….

ಬೆಂಗಳೂರು : 2025-26ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ (Kannada Rajyotsava Awards 2025)ಯನ್ನು ಪ್ರಕಟಿಸಲಾಗಿದೆ. ಒಟ್ಟು 70  ಸಾಧಕರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಿ ಇಂದು (ಅಕ್ಟೋಬರ್ 30) ಪ್ರಶಸ್ತಿಗೆ ಆಯ್ಕೆಯಾದವರ ಹೆಸರು ಪ್ರಕಟಿಸಿದ್ದು, ಇದೇ ಮೊದಲ‌ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಕರೆಯದೆ ಒಟ್ಟು 70 … Continued

ವಿದ್ಯಾರ್ಥಿಗಳ ಪಾಸಿಂಗ್‌ ಅಂಕ ಇಳಿಕೆ ಬೇಡ : ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಸಭಾಪತಿ ಹೊರಟ್ಟಿ ಪತ್ರ

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಇದ್ದ ಕನಿಷ್ಠ ಅಂಕಗಳನ್ನು 35ರಿಂದ 33ಕ್ಕೆ ಇಳಿಸಲು ಸರ್ಕಾರ ಮುಂದಾಗಿರುವುದಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj horatti) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವ ಬಸವರಾಜ ಹೊರಟ್ಟಿಯವರು 33 ಅಂಕದ ಬದಲಿಗೆ 35 ಅಂಕಗಳನ್ನೇ ನಿಗದಿಪಡಿಸಬೇಕು. ವಿದ್ಯಾರ್ಥಿಗಳ ಭವಿಷ್ಯತ್ತಿನ ದೃಷ್ಟಿಯಿಂದ … Continued

ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಸಿಎಂ ಆಗ್ತಾರೆ ; ಯತ್ನಾಳ ಭವಿಷ್ಯ

ಬೆಳಗಾವಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಭವಿಷ್ಯ ನುಡಿದಿದ್ದಾರೆ. ಬುಧವಾರ ಇಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ರಾಜ್ಯದ ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿ ನಡೆಯಲಿದೆ. ಈಗ ಮುಖ್ಯಮಂತ್ರಿ ಹುದ್ದೆಗೆ ಲಾಬಿ ಮಾಡುತ್ತಿರುವವರಿಗೆ ಅದು ಸಿಗುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಮುಂದಿನ ಮುಖ್ಯಮಂತ್ರಿ … Continued

ಮೊಂತಾ ಚಂಡಮಾರುತ ; ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಜೋರಾದ ಗಾಳಿ-ಮಳೆ ಸಾಧ್ಯತೆ

ಬೆಂಗಳೂರು : ಮೊಂತಾ ಚಂಡಮಾರುತದ (Monta Cyclone) ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಅಕ್ಟೋಬರ್‌ 30ರಂದು ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಅಕರಾವಳಿಯಲ್ಲಿ ಗಂಟೆಗೆ ಸರಾಸರಿ 35 -45 ಕಿಮೀಯಿಂದ ಗರಿಷ್ಠ 55 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ … Continued

ರೂಪುಗೊಂಡ ಮೊಂತಾ ಚಂಡಮಾರುತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ  ಉಂಟಾದ ಮೊಂತಾ ಚಂಡಮಾರುತದ ಕಾರಣದಿಂದಾಗಿ ಮುಂದಿನ ಕೆಲವು ದಿನಗಳವರೆಗೆ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಅಕ್ಟೋಬರ್ 28 ರಂದು ಕರ್ನಾಟಕದ ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದ್ದು, 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಿದೆ. ಅಕ್ಟೋಬರ್ 28 ರ ಬೆಳಿಗ್ಗೆ … Continued

ರೈತರಿಗೆ ವಂಚಿಸಿದ ‘ಪ್ರಕರಣ’; ಆರೋಪಿ ಪರ ಸಚಿವ ಜಮೀರ್ ಪ್ರಭಾವ ಬೀರಲು ಯತ್ನಿಸಿದರೆ..? ಆಡಿಯೋ ವೈರಲ್‌

ಬೆಂಗಳೂರು: ರಾಜ್ಯದ ರೈತರಿಗೆ ವಂಚಿಸಿದ ತೆಲಂಗಾಣದ ವ್ಯಾಪಾರಿಗಳ ವಿರುದ್ಧದ ಪ್ರಕರಣದಲ್ಲಿ ಆರೋಪಿ ವ್ಯಕ್ತಿಯ ಪರವಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರಭಾವ ಬೀರಲು ಮುಂದಾಗಿದ್ದರು ಎನ್ನಲಾದ ಪೋನ್ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. ಚಿಕ್ಕಬಳ್ಳಾಪುರದ ಪೆರೆಸಂದ್ರ ಪಿಎಸ್‌ಐ ಜಗದೀಶ್ ರೆಡ್ಡಿ ಅವರಿಗೆ ಫೋನ್ ಮಾಡಿರುವ ಸಚಿವ ಜಮೀರ್ ಅಹ್ಮದ್ ಖಾನ್, ರಾಜ್ಯದ ರೈತರಿಗೆ ವಂಚನೆ … Continued

ಮುಂದಿನ 2 ದಿನ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಕರಾವಳಿ ಹಾಗೂ ಉತ್ತ-ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್‌ 27, 28 ಹಾಗೂ 29 ರಂದು ಗುಡುಗಿನಿಂದ ಕೂಡಿದ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಅಕ್ಟೋಬರ್‌ 26 ರಂದು ಉತ್ತರ ಕನ್ನಡದಲ್ಲಿ ಮಾತ್ರ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ. ಅಕ್ಟೋಬರ್ 27 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ … Continued

ಕರ್ನಾಟಕದಲ್ಲಿ ಭಾರೀ ಮಳೆ ಮುನ್ಸೂಚನೆ ; 3 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ಕರ್ನಾಟದಲ್ಲಿ ಇಂದು, ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ 3 ಜಿಲ್ಲೆಗಳಿಗೆ ಆರೆಂಜ್ ಮತ್ತು 27 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಕರಾವಳಿಯಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಮಳೆ ಜೊತೆ ಗಾಳಿಯ … Continued