ಸರ್ಕಾರಿ ಜಾಗದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗೆ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ಬೆಂಗಳೂರು: ಸರ್ಕಾರಿ ಜಾಗದಲ್ಲಿ ಆರ್​ಎಸ್​ಎಸ್​ ಸೇರಿದಂತೆ ಖಾಸಗಿ ಸಂಘಟನೆಗಳ ಚಟುವಟಿಕೆ ನಡೆಸಲು ಕಡ್ಡಾಯವಾಗಿ ಅನುಮತಿಪಡೆಯಬೇಕೆಂದು ಇತ್ತೀಚೆಗೆ ಸಚಿವ ಸಂಪುಟವು ನಿರ್ಧಾರ ಕೈಗೊಂಡ ನಂತರ ಈಗ ರಾಜ್ಯ ಸರ್ಕಾರವು ಈ ಬಗ್ಗೆ ಅಧಿಕೃತ ಆದೇಶವನ್ನು ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರ ಶನಿವಾರ (ಅಕ್ಟೋಬರ್ 18) ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಆದೇಶ ಜಾರಿಯಾಗಲಿದೆ. ರಾಜ್ಯದ … Continued

ಶಿಕ್ಷಕ ಅಭ್ಯರ್ಥಿಗಳಿಗೆ ಸಿಹಿಸುದ್ದಿ ; ಡಿಸೆಂಬರ್ 7ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ (TET) : ಶಿಕ್ಷಣ ಇಲಾಖೆ ಘೋಷಣೆ

ಬೆಂಗಳೂರು : ಶಿಕ್ಷಕರಾಗಲು ಬಯಸುವವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಡಿಸೆಂಬರ್ 7ರಂದು ನಡೆಯಲಿದೆ. ಈ ಸಂಬಂಧ ಶಿಕ್ಷಣ ಇಲಾಖೆಯು ಶಿಕ್ಷಕರ ಅರ್ಹತಾ ಪರೀಕ್ಷೆ (TET)ಗೆ ಅಧಿಸೂಚನೆ ಹೊರಡಿಸಿದ್ದು, ಡಿಸೆಂಬರ್‌ 7ಕ್ಕೆ ಟಿಇಟಿ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಿದೆ. ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕುರಿತ ಅಧಿಸೂಚನೆ ಹೊರಡಿಸಲಾಗಿದ್ದು, … Continued

ವೀಡಿಯೊ..| ಬೆಂಗಳೂರಲ್ಲಿ ಕ್ರೂರ ಸರಗಳ್ಳತನ ; ಕತ್ತಿ ಹಿಡಿದು ಮಹಿಳೆಯರಿಗೆ ಹೆದರಿಸಿ, ಓರ್ವ ಮಹಿಳೆ ಬೆರಳು ಕತ್ತರಿಸಿ ಸರ ದೋಚಿದ ಕಳ್ಳರು

ಬೆಂಗಳೂರು: ಬೆಂಗಳೂರಿನಲ್ಲಿ ಸರಗಳ್ಳತನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸೆಪ್ಟೆಂಬರ್‌ನಲ್ಲಿ ಕತ್ತಿ ಹಿಡಿದು ಬೆದರಿಸಿ ಮಹಿಳೆಯೊಬ್ಬರ ಚಿನ್ನದ ಸರವನ್ನು ಕಳ್ಳರು ಕಸಿದುಕೊಂಡ ಘಟನೆಯ ವೀಡಿಯೊ ಈಗ ವೈರಲ್‌ ಆಗಿದೆ. ಮಹಿಳೆ ವಿರೋಧಿಸಿದಾಗ, ಸರಗಳ್ಳ ಆಕೆಯ ಎರಡು ಬೆರಳುಗಳನ್ನು ಕತ್ತರಿಸಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಗಿರಿನಗರ ಪೊಲೀಸರು ಇಬ್ಬರು ಸರಗಳ್ಳರಾದ ಪ್ರವೀಣ ಮತ್ತು ಯೋಗಾನಂದ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. … Continued

ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ಅನುಮತಿ ಕಡ್ಡಾಯ ; ಆರ್‌ ಎಸ್‌ ಎಸ್‌ ಚಟುವಟಿಕೆಗೆ ಪರೋಕ್ಷ ಮೂಗುದಾರಕ್ಕೆ ಮುಂದಾದ ಸರ್ಕಾರ..?

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳ ಆವರಣದಲ್ಲಿ, ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ಚಟುವಟಿಕೆಗಳಿಗೆ ಪರೋಕ್ಷವಾಗಿ ನಿಯಂತ್ರಣ ಹೇರುವ ನಿರ್ಧಾರವನ್ನು ಗುರುವಾರ (ಅಕ್ಟೋಬರ್ 16) ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನ ನಡೆಸಲು ಸರ್ಕಾರದ ಪೂರ್ವಾ ಅನುಮತಿ ಕಡ್ಡಾಯಗೊಳಿಸಲಾಗಿದೆ. ಗುರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಒಂದು ವಾರ ಮಳೆ ಸಾಧ್ಯತೆ : ಹವಾಮಾನ ಇಲಾಖೆ

ಬೆಂಗಳೂರು: ಮುಂದಿನ 7 ದಿನಗಳ ಕಾಲ ಕರ್ನಾಟಕ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ. ಅಕ್ಟೋಬರ್ 16 ರಿಂದ 22 ರವರೆಗೆ ಕರ್ನಾಟಕದಾದ್ಯಂತ ಮಳೆ ಮುಂದುವರಿಯಲಿದ್ದು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ … Continued

ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್‌ ; ತುಟ್ಟಿ ಭತ್ಯೆ ಹೆಚ್ಚಳ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬಕ್ಕೆ ಕರ್ನಾಟಕ ಸರ್ಕಾರ ಸಿಹಿಸುದ್ದಿ ನೀಡಿದೆ. ರಾಜ್ಯ ಸರ್ಕಾರಿ ನೌಕರರಿಗೆ ಶೇ.2 ತುಟ್ಟಿ ಭತ್ಯೆ ಹೆಚ್ಚಳ ಮಾಡಿದ್ದು, ಈ ಬಗ್ಗೆ ಆದೇಶ ಹೊರಡಿಸಲಾಗಿದೆ. ತುಟ್ಟಿಭತ್ಯೆ ದರವನ್ನು ಶೇ.12.25ರಿಂದ 14.25ರಷ್ಟು ಪರಿಷ್ಕರಿಸಿ ಸರ್ಕಾರ ಆದೇಶಿಸಿದ್ದು, ಈ ಬಗ್ಗೆ ಸರ್ಕಾರದ ಆರ್ಥಿಕ ಇಲಾಖೆಯ (ಸೇವೆಗಳು-2) ಜಂಟಿ ಕಾರ್ಯದರ್ಶಿ ಉಮಾ ಕೆ. ಅವರು … Continued

ಎಸ್ ಎಸ್ ಎಲ್ ಸಿ-ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ; ಪಾಸಿಂಗ್ ಮಾರ್ಕ್ಸ್ ಇಳಿಕೆ ಮಾಡಿದ ಸರ್ಕಾರ…!

ಬೆಂಗಳೂರು: ಹಬ್ಬದ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಇದೇ ವರ್ಷದಿಂದ ಜಾರಿಯಾಗುವಂತೆ, ಪಾಸ್‌ ಆಗಲು ಬೇಕಾದ ಕನಿಷ್ಠ ಅಂಕಗಳನ್ನು ಕಡಿಮೆ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿಯಲ್ಲಿ ಇನ್ಮುಂದೆ ಪಾಸ್‌ ಆಗಲು 33% ಅಂಕ ಪಡೆದರೆ ಸಾಕು ಹಾಗೂ ಪಿಯುಸಿಯಲ್ಲಿ ಉತ್ತೀರ್ಣರಾಗಲು 30% ಅಂಕ ಪಡೆದರೆ ತೇರ್ಗಡೆ ಆಗಲಿದ್ದಾರೆ. ಈ ವರೆಗೆ ಎಸ್‌ಎಸ್‌ಎಲ್‌ಸಿ ಯಲ್ಲಿ ಪಾಸ್‌ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು : ಮುಂದಿನ ಮೂರು ದಿನ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ನೀಡಿದೆ. (ಅಕ್ಟೋಬರ್‌ 14ರಂದು ದಕ್ಷಿಣ ಹಾಗೂ ಉತ್ತರ ಒಳನಾಡಿನ 25ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ (Yellow Alert) ನೀಡಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 3-4 ದಿನ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರ್ನಾಟಕ ಸ್ಟೇಟ್ ನ್ಯಾಚರಲ್ ಡಿಸಾಸ್ಟರ್ ಮಾನಿಟರಿಂಗ್ ಸೆಂಟರ್ (ಕೆಎಸ್‌ಎನ್‌ಡಿಎಂಸಿ) ಐದು ದಿನಗಳ ಮುನ್ಸೂಚನೆ ನೀಡಲಾಗಿದೆ. ಅಕ್ಟೋಬರ್ 10ರಂದು 12 ಜಿಲ್ಲೆಗಳಲ್ಲಿ ಮಳೆಯಾಗುವ (Hevay Rain) ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಕೆಎಸ್‌ಎನ್‌ಡಿಎಂಸಿ ಪ್ರಕಾರ, ಅಕ್ಟೋಬರ್ 10ರಂದು ರಾಜ್ಯದಾದ್ಯಂತ ಗುಡುಗು ಸಹಿತ ಜೋರಾದ … Continued

ಶಾಸಕ ವೀರೇಂದ್ರ ಪಪ್ಪಿ ಬೆಟ್ಟಿಂಗ್ ಹಗರಣ : 50 ಕೋಟಿ ರೂ.ಮೌಲ್ಯದ 40 ಕೆಜಿ ಚಿನ್ನದ ಗಟ್ಟಿ ವಶಕ್ಕೆ ಪಡೆದ ಇ.ಡಿ.

ನವದೆಹಲಿ: ಬಂಧಿತ ಕರ್ನಾಟಕದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಮತ್ತು ಇತರ ಕೆಲವರು ಭಾಗಿಯಾಗಿದ್ದಾರೆ ಎನ್ನಲಾದ ಆನ್‌ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಹೊಸದಾಗಿ ನಡೆಸಿದ ಶೋಧದ ಸಮಯದಲ್ಲಿ 50.33 ಕೋಟಿ ರೂ. ಮೌಲ್ಯದ ಸುಮಾರು 40 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ತಿಳಿಸಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ಎರಡು ಲಾಕರ್‌ಗಳಿಂದ 24 ಕ್ಯಾರೆಟ್ … Continued