ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್‌ ನಕಾರ; ಆದರೆ ಕೆಲ ಷರತ್ತುಗಳು ಅನ್ವಯ

ಬೆಂಗಳೂರು : ಸೆಪ್ಟೆಂಬರ್‌ 22ರಿಂದ ರಾಜ್ಯದಲ್ಲಿ ಆರಂಭವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ – 2025ಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್‌ ಗುರುವಾರ ನಿರಾಕರಿಸಿದೆ. ಆದರೆ, ಸಮೀಕ್ಷೆಯಲ್ಲಿ ಜನರು ಭಾಗವಹಿಸುವುದು ಕಡ್ಡಾಯವಲ್ಲ ಎಂದು ಹೇಳಿದೆ. ಅಲ್ಲದೆ, ಇಲ್ಲಿ ಸಂಗ್ರಹಿಸಿದ ದತ್ತಾಂಶವನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ತನ್ನನ್ನು ಹೊರತುಪಡಿಸಿ ಬೇರಾರಿಗೂ ಸೋರಿಕೆಯಾಗದಂತೆ ಗೌಪ್ಯತೆ ಕಾಯ್ದುಕೊಳ್ಳಬೇಕು ಮತ್ತು … Continued

ವಾಯುಭಾರ ಕುಸಿತ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 29ರ ವರೆಗೆ ಮಳೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 29ರ ವರೆಗೆ ಜೋರಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ. … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ  ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಸೆಪ್ಟೆಂಬರ್ 23 ರವರೆಗೂ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಹಗುರದಿಂದ … Continued

ಹಿಂದುಸ್ತಾನಿ ಗಾಯಕ ಪಂ. ವೆಂಕಟೇಶಕುಮಾರಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ

ಬೆಂಗಳೂರು: ಪ್ರತಿ ವರ್ಷ ನಾಡಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿನ ಅರಮನೆಯ ಮುಂಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಗೆ  ಪ್ರಸಕ್ತ ಸಾಲಿನಲ್ಲಿ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತದ ಗಾಯಕ ಪಂ.ಕೆ.ವೆಂಕಟೇಶಕುಮಾರ (Pandit Venkatesh Kumar) ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ … Continued

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2026ರ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳನ್ನು (SSLC, PUC Exam) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ದ್ವಿತೀಯ ಪಿಯುಸಿ ಪರೀಕ್ಷೆ-1, 2026ರ ಫೆ.28ರಿಂದ ಮಾ.17ರವರೆಗೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ-2, ಏ.25ರಿಂದ ಮೇ 9ರವರೆಗೆ ನಡೆಯಲಿದೆ.ದ್ವಿತೀಯ … Continued

ಸೆಪ್ಟೆಂಬರ್‌ 22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ ; ಅಧಿಕೃತ ಆದೇಶ ಬಾಕಿ

ಬೆಂಗಳೂರು : ಕರ್ನಾಟಕ ಹಾಲು ಒಕ್ಕೂಟ(KMF) ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆಗೆ ಮುಂದಾಗಿದೆ. ಸೆ.22ರಿಂದ ನೂತನ ದರ ಜಾರಿಗೆ ಬರಲಿದೆ ಎನ್ನಲಾಗಿದ್ದು, ಆದರೆ ಈ ಬಗ್ಗೆ ಕೆಎಂಎಫ್ ಅಧಿಕೃತ ಆದೇಶ ಹೊರಡಿಸುವುದು ಬಾಕಿಯಿದೆ. ಕೇಂದ್ರ ಸರ್ಕಾರ ಜಿಎಸ್​​ಟಿ ಇಳಿಕೆ ಮಾಡಿದ ಬೆನ್ನಲ್ಲೇ ದರ ಇಳಿಕೆಗೆ ಮುಂದಾಗಿರುವ … Continued

ವೀಡಿಯೊ..| ಕರ್ನಾಟಕದ ಆಳಂದ ಮತಕ್ಷೇತ್ರದ 6,000ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲು ಯತ್ನ : ರಾಹುಲ್ ಗಾಂಧಿ ಆರೋಪ

ನವದೆಹಲಿ: ಚುನಾವಣಾ ಆಯೋಗದ ವಿರುದ್ಧ ತಮ್ಮ ದಾಳಿಯನ್ನು ತೀವ್ರಗೊಳಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಭದ್ರಕೋಟೆಯಲ್ಲಿ ಮತದಾರರ ಪಟ್ಟಯಿಂದ ಮತದಾರರ ಹೆಸರನ್ನು ಸಾಮೂಹಿಕವಾಗಿ ಅಳಿಸಲಾಗಿದೆ ಎಂದು ಆರೋಪಿಸಿದ್ದಾರೆ. ಇಂದು ಗುರುವಾರ ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ವಿಶೇಷ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಆಳಂದ ಕ್ಷೇತ್ರದಲ್ಲಿ … Continued

ಕರ್ನಾಟಕದಲ್ಲಿ ಎರಡು ದಿನ ಭರ್ಜರಿ ಮಳೆ ಮುನ್ಸೂಚನೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವಡೆ ಮತ್ತೆ ಧಾರಾಕಾರ ಮಳೆಯಾಗುತ್ತಿದೆ. ರಾಜ್ಯದಲ್ಲಿ ಇನ್ನೂ ಎರಡು ದಿನ ದಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಬೆಂಗಳೂರು ಸೇರಿ10 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇಂದು, ಗುರುವಾರ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 18 ಭಾರಿ … Continued

15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನ ಗುಜರಿಗೆ ಹಾಕಿ- ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 15 ವರ್ಷಕ್ಕಿಂತ ಹಳೆಯ ಎಲ್ಲ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಅಧೀನದಲ್ಲಿರುವ ವಿವಿಧ ಇಲಾಖೆಗಳು, ನಿಗಮ/ಮಂಡಳಿಗಳು, ನಗರಸಭೆ, ಮಂಡಳಿಗಳ ವಾಹನಗಳನ್ನು ನಾಶಪಡಿಸಲು ಆದೇಶದಲ್ಲಿ ತಿಳಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶದಂತೆ ರಾಜ್ಯ ಸರ್ಕಾರ ಈ ಸೂಚನೆ ನೀಡಿದೆ. ಆದ್ಯತೆ ಮತ್ತು ಉಪಯೋಗದ ಆಧಾರದ ಮೇಲೆ 5 … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ : ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದಾದ್ಯಂತ ಸೆಪ್ಟಂಬರ್ 16ರಿಂದ ಮೂರು ದಿನಗಳ ಕಾಲ ಧಾರಾಕಾರ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 3 ದಿನ ಭಾರಿ ಮಳೆಯ ಹಿನ್ನೆಲೆಯಲ್ಲಿ ಸೆಪ್ಟಂಬರ್ 16, 17 ಹಾಗೂ 18 ರಂದು ಬೆಂಗಳೂರು ಸೇರಿ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ. ಬೆಂಗಳೂರಲ್ಲಿ ಸೆಪ್ಟೆಂಬರ್ 18 ಗುರುವಾರ ಭಾರೀ ಮಳೆಯಾಗುವ ಮುನ್ಸೂಚನೆ … Continued