ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 5 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಜುಲೈ 19ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ, ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಸೇರಿ ಏಳು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ ದಾವಣಗೆರೆ ಹಾಗೂ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ … Continued

ಸಾಲ ಕೊಡಿಸುವುದಾಗಿ ಉದ್ಯಮಿಗಳಿಗೆ ಕೋಟ್ಯಂತರ ರೂ. ವಂಚನೆ ; ಮಂಗಳೂರಿನ ವಂಚಕ ಅರೆಸ್ಟ್‌ ; ತಪ್ಪಿಸಿಕೊಳ್ಳಲು ಮನೆಯಲ್ಲೇ ನಿಗೂಢ ಕೋಣೆ ಪತ್ತೆ…!

ಮಂಗಳೂರು : ಮಂಗಳೂರು ನಗರ ಪೊಲೀಸರು ಮಧ್ಯರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಜೆಪಿನಮೊಗರು ಪ್ರದೇಶದ ವಂಚಕ ರೋಹನ್ ಸಲ್ಡಾನಾ ಎಂಬಾತನನ್ನು ಬಂಧಿಸಿದ್ದಾರೆ. ಈತ ನಕಲಿ ಸಾಲ ಮತ್ತು ಭೂ ವ್ಯವಹಾರಗಳ ಮೂಲಕ ಶ್ರೀಮಂತ ಉದ್ಯಮಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಹೊತ್ತಿದ್ದಾನೆ. ಪೊಲೀಸ್ ಆಯುಕ್ತ ಸುಧೀರಕುಮಾರ ರೆಡ್ಡಿ ಮತ್ತು ಸಹಾಯಕ ಪೊಲೀಸ್ ಆಯುಕ್ತ ರವೀಶ ನಾಯಕ ನೇತೃತ್ವದ … Continued

ಭಾರಿ ಮಳೆ ಮುನ್ಸೂಚನೆ ; ಮೂರು ಜಿಲ್ಲೆಗಳ ಶಾಲೆಗಳಿಗೆ ಜುಲೈ 17ರಂದು ರಜೆ ಘೋಷಣೆ

 ಮಂಗಳೂರು/ಉಡುಪಿ/ಮಡಿಕೇರಿ: ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳ ಶಾಲೆಗಳಿಗೆ ಜುಲೈ 17ರಂದು ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 17ರಂದು ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರಿ ಗಾಳಿ ಮಳೆ ಸಾಧ್ಯತೆ ; ಮುನ್ಸೂಚನೆ

ಬೆಂಗಳೂರು: ಮುಂದಿನ ಐದಾರು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದ ಮೇಲಿನ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದಲ್ಲಿ ಮುಂದಿನ ಎರಡ್ಮೂರು ದಿನಗಳು ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರ್ನಾಟಕದ ಕರಾವಳಿ ಹಾಗೂ ಒಳನಾಡು ಭಾಗಗಳಲ್ಲಿ ಮಳೆ ಹೆಚ್ಚಾಗಲಿದ್ದು, ಒಟ್ಟು … Continued

ಕರ್ನಾಟಕ ಸರ್ಕಾರ ಭೂಸ್ವಾಧೀನ ಕೈಬಿಟ್ಟ ಬೆನ್ನಲ್ಲೇ ಏರೋಸ್ಪೇಸ್ ಉದ್ಯಮಿಗಳಿಗೆ ಬಹಿರಂಗ ಆಹ್ವಾನ ನೀಡಿದ ಆಂಧ್ರ ಸರ್ಕಾರ

ಅಮರಾವತಿ: ಮೂರು ವರ್ಷಗಳಿಂದ ನಡೆಯುತ್ತಿದ್ದ ದೇವನಹಳ್ಳಿಯ ಚನ್ನರಾಯಪಟ್ಟಣ ಜಮೀನು ಭೂಸ್ವಾಧೀನವನ್ನು ರಾಜ್ಯ ಸರ್ಕಾರ ರದ್ದುಪಡಿಸಿದ ಬೆನ್ನಲ್ಲೇ, ಆಂಧ್ರಪ್ರದೇಶ ಸರ್ಕಾರ ಏರೋಸ್ಪೇಸ್ ಉದ್ಯಮಿಗಳಿಗೆ ಬಹಿರಂಗ ಆಹ್ವಾನ ನೀಡಿದೆ. ಆಂಧ್ರ (Andhra Pradesh) ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪುತ್ರ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ನಾರಾ ಲೋಕೇಶ್ (Nara Lokesh) ಏರೋಸ್ಪೇಸ್ ಉದ್ಯಮಿಗಳಿಗೆ ಬಹಿರಂಗ ಆಹ್ವಾನ ನೀಡಿದ್ದಾರೆ. … Continued

ರಾಜ್ಯ-ಕೇಂದ್ರದಲ್ಲಿ ಅಧಿಕಾರದಲ್ಲಿದ್ದವರಿಗೆ ತೊಂದರೆಯಾಗ್ಬಹುದು, ಭಾರತಕ್ಕೆ ಆಘಾತವಾಗ್ಬಹುದು ; ಕೋಡಿಮಠ ಶ್ರೀಗಳ ಭವಿಷ್ಯ

ಮೈಸೂರು: ರಾಜ್ಯ ಹಾಗೂ ರಾಷ್ಟ್ರದಲ್ಲಿ ಅಧಿಕಾರದಲ್ಲಿ ಇರುವವರಿಗೆ ತೊಂದರೆಯಾಗಬಹುದು ಎಂದು ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿ ಭುವಿಷ್ಯ ಹೇಳಿದ್ದಾರೆ. ಅರಸನ ಅರಮನೆಗೆ ಕಾರ್ಮೋಡ ಕವಿದೀತು ಎಂದು ಹೇಳಿರುವ ಸ್ವಾಮೀಜಿ ರಾಜ್ಯ ಸರ್ಕಾರವೂ ಆಗಿರಬಹುದು, ಕೇಂದ್ರ ಸರ್ಕಾರವೂ ಆಗಬಹುದು. ಅಧಿಕಾರದ ಸ್ಥಾನದಲ್ಲಿರುವವರಿಗೆ ಆಪತ್ತು ಬರಬಹುದು ಎಂಬರ್ಥದಲ್ಲಿ ಹೇಳಿದ್ದಾರೆ. ಮೈಸೂರಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಅರಸನ ಅರಮನೆಗೆ … Continued

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಜುಲೈ 21ರ ವರೆಗೆ ಅತಿ ಭಾರಿ ಮಳೆ ಮುನ್ನೆಚ್ಚರಿಕೆ ; ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದರೆ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ ಹಾಗೂ ಉತ್ತರ ಕರ್ನಾಟಕದ ಕೆಲವು ಕಡೆ ಮಳೆಯಾಗಿದೆ. ಕರ್ನಾಟಕದ ಕರಾವಳಿ, ಮಲೆನಾಡು ಸೇರಿ ಬಹುತೇಕ ಕಡೆಗಳಲ್ಲಿ ಜುಲೈ 21ರವರೆಗೂ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ವೇಗವಾಗಿ ಗಾಳಿಯೂ ಬೀಸಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ದಕ್ಷಿಣ … Continued

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್​ ಸರ್ಜರಿ: 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 34 ಐಪಿಎಸ್ (IPS)​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿಯೂ ಸರ್ಜರಿ ನಡೆದಿದೆ. ಐಪಿಎಸ್ ಅಧಿಕಾರಿಗಳ ವರ್ಗಾವಣೆ ವಿವರ (ವರ್ಗಾವಣೆ ಮಾಡಿರುವ ಹುದ್ದೆ) ಅಕ್ಷಯ ಮಚೀಂದ್ರ – ಡಿಸಿಪಿ, ಬೆಂಗಳೂರೂ ಕೇಂದ್ರ ವಿಭಾಗ ಅಜಯ … Continued

ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ನೇಮಕ

ನವದೆಹಲಿ : ನ್ಯಾಯಮೂರ್ತಿ ವಿಭು ಭಖ್ರು ಅವರನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿ ಕೇಂದ್ರ ಸರ್ಕಾರವು ಸೋಮವಾರ ಆದೇಶ ಹೊರಡಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಮಧ್ಯಪ್ರದೇಶ, ಜಾರ್ಖಂಡ್, ಗುವಾಹಟಿ ಹಾಗೂ ಪಾಟ್ನಾ ಹೈಕೋರ್ಟ್‌ಗಳಿಗೂ ಸಹ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಿಸಲಾಗಿದೆ. ಮಧ್ಯಪ್ರದೇಶ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ … Continued

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಜುಲೈ 18ರ ವರೆಗೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 18ರ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಹಲವು ಜಿಲ್ಲೆಗಳಿಗೆ  ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಜುಲೈ 13ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ  ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, … Continued