ಕಿರುತೆರೆ ನಟಿ-ನಿರೂಪಕಿಗೆ ಚಾಕುವಿನಿಂದ ಇರಿದ ಗಂಡ…

ಬೆಂಗಳೂರು: ಕಿರುತೆರೆ ಧಾರಾವಾಹಿ ನಟಿ ಹಾಗೂ ನಿರೂಪಕಿಗೆ ಆಕೆಯ ಗಂಡನೇ ಚಾಕುವಿನಿಂದ ಇರಿದಿರುವ ಘಟನೆ ಶುಕ್ರವಾರ ವರದಿಯಾಗಿದೆ. ವರದಿಗಳ ಪ್ರಕಾರ, ಧಾರಾವಾಹಿ ನಟಿ ಹಾಗೂ ಖಾಸಗಿ ವಾಹಿನಿಯ ನಿರೂಪಕಿಗೆ ಮಂಜುಳಾ ಅಲಿಯಾಸ್‌ ಶ್ರುತಿ ಎಂಬವರಿಗೆ ಚಾಕು ಇರಿಯಲಾಗಿದ್ದು,  ಆಕೆಯ ಗಂಡನೇ ಆಕೆಯ ಮೇಲೆ ಪೆಪ್ಪರ್ ಸ್ಪ್ರೇ ಹಾಕಿ ಬಳಿಕ ಆಕೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ಬೆಂಗಳೂರಿನ … Continued

ವೀಡಿಯೊ…| ಶ್ರೀರಂಗಪಟ್ಟಣ : ಫೋಟೊಕ್ಕೆ ಪೋಸ್ ನೀಡುವಾಗ ಸೇತುವೆಯಿಂದ ನದಿಗೆ ಬಿದ್ದು ಕೊಚ್ಚಿ ಹೋದ ವ್ಯಕ್ತಿ

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಪಿಕ್ನಿಕ್ ವೇಳೆ ಕಾವೇರಿ ನದಿ ಬಳಿ ಫೋಟೋ ತೆಗೆದುಕೊಳ್ಳಲು ಹೋಗಿ ನಿರ್ಮಾಣ ಹಂತದಲ್ಲಿರುವ ಸೇತುವೆಯಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಶ್ರೀರಂಗಪಟ್ಟಣದಲ್ಲಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ದುರಂತದ ವೀಡಿಯೊ ವೈರಲ್ ಆಗಿದ್ದು, ಆಯತಪ್ಪಿ ಬಿದ್ದ ನಂತರ ವ್ಯಕ್ತಿ ಕಾವೇರಿ ನದಿಯ ಬಲವಾದ ಪ್ರವಾಹದಲ್ಲಿ … Continued

ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕವಾಗಿಲ್ಲ : ಸಿಎಂ ಕಚೇರಿ ಸ್ಪಷ್ಟನೆ

ಬೆಂಗಳೂರು :ಎಐಸಿಸಿಯ ಹಿಂದುಳಿದ ವರ್ಗಗಳ (ಒಬಿಸಿ) ಸಲಹಾ ಮಂಡಳಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕಗೊಂಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಅಂತಹ ಯಾವುದೇ ನೇಮಕಾತಿಯೂ ಆಗಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ. ಒಬಿಸಿ ಸಲಹಾ ಮಂಡಳಿಯ ಸದಸ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಬ್ಬರಾಗಿದ್ದಾರೆ.‌ ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ … Continued

ವೀಡಿಯೊ..| ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆಗಳು ಬಂದ್ ಆಗ್ತವೆ : ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿಕೆ ಚರ್ಚೆಗೆ ಗ್ರಾಸ

ಕೊಪ್ಪಳ: ”ಗ್ರಾಮೀಣ ಭಾಗದಲ್ಲಿ ರಸ್ತೆ ನಿರ್ಮಿಸಬೇಕೆಂದರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಸೇರಿ ಎಲ್ಲ ಬಂದ್‌ ಆಗುತ್ತವೆ,” ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿಕೆ ನೀಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲೆಯ ಕುಕನೂರು ತಾಲೂಕಿನ ಗ್ರಾಮವೊಂದರಲ್ಲಿ ಶನಿವಾರ ನಡೆದ ಸರಕಾರಿ ಪ್ರೌಢಶಾಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ರೈತರೊಬ್ಬರು, ” ಮಹಿಳೆಯರಿಗೆ ಹಣ ಕೊಡ್ತೀರಿ, ಸೌಲಭ್ಯ ಕೊಡ್ತೀರಿ. … Continued

ಕರ್ನಾಟಕದ 8 ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರಿ ಗಾಳಿ ಮಳೆಯ ಮುನ್ಸೂಚನೆ

ಬೆಂಗಳೂರು : ರಾಜ್ಯದ 8 ಜಿಲ್ಲೆಗಳಲ್ಲಿ ಭಾನುವಾರದ ವರೆಗೆ ಜೋರಾದ ಗಾಳಿಯೊಂದಿಗೆ  ಭಾರಿ ಮಳೆಯಾಗಲಿದೆ  ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 7 ರವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಳಿಕ ಯೆಲ್ಲೋ ಅಲರ್ಟ್ ಇದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರಿಗೂ ಜುಲೈ … Continued

ಕೋವಿಡ್ ಲಸಿಕೆಗಳಿಗೂ ಹೃದಯಾಘಾತದ ಸಾವುಗಳಿಗೂ ಯಾವುದೇ ಸಂಬಂಧವಿಲ್ಲ; ತಳ್ಳಿಹಾಕಿದ ಏಮ್ಸ್ ವೈದ್ಯರು

ನವದೆಹಲಿ: ಕೋವಿಡ್-19 ಲಸಿಕೆಗಳನ್ನು “ಪರಿಣಾಮಕಾರಿ” ಎಂದು ಕರೆದ ದೆಹಲಿಯ ಏಮ್ಸ್ ವೈದ್ಯರು, ವ್ಯಾಕ್ಸಿನೇಷನ್ ಮತ್ತು ಹೃದಯಾಘಾತದಿಂದ ಉಂಟಾಗುವ ಹಠಾತ್ ಸಾವುಗಳಿಗೆ ಸಂಬಂಧವಿದೆ ಎಂಬುದನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ದೆಹಲಿಯ ಏಮ್ಸ್‌ನ ಶ್ವಾಸಕೋಶ, ಕ್ರಿಟಿಕಲ್ ಕೇರ್ ಮತ್ತು ಸ್ಲೀಪ್ ಮೆಡಿಸಿನ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಕರಣ ಮದನ ಅವರು, ಈವರೆಗೆ ಬಳಸಲಾದ ಲಸಿಕೆಗಳ ಬಗ್ಗೆ ಪರಿಶೀಲನೆ ನಡೆಸಲು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 9ವರೆಗೂ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜುಲೈ 9ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವ ಅರಬ್ಬೀ ಸಮುದ್ರದ ಮಹಾರಾಷ್ಟ್ರ ಹಾಗೂ ಕರ್ನಾಟಕದ ಕರಾವಳಿಯಲ್ಲಿ ಟ್ರಫ್ ಇರುವ ಕಾರಣ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹಾಗೂ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು … Continued

ದೇಶದಲ್ಲಿ ಮೊದಲ ಬಾರಿಗೆ ಜಾತಿಗಣತಿ ಕೈಗೊಂಡಿದ್ದು ಕಾಂಗ್ರೆಸ್ ಸರ್ಕಾರ ; ಬಿಜೆಪಿ ವಿರುದ್ಧ ವಸಂತ ಲದವಾ ವಾಗ್ದಾಳಿ

ಹುಬ್ಬಳ್ಳಿ : ಸ್ವಾತಂತ್ರ್ಯ ಬಂದ ನಂತರ ಮೊದಲ ಬಾರಿಗೆ ಜಾತಿಗಣತಿ ಕೈಗೊಂಡಿದ್ದು ಕಾಂಗ್ರೆಸ್ ಸರ್ಕಾರವೇ ಹೊರತು ಬಿಜೆಪಿ ಸರ್ಕಾರ ಅಲ್ಲ ಎಂದು ಕಾಂಗ್ರೆಸ್‌ ವಕ್ತಾರ ವಸಂತ ಲದವಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ೨೦೧೧ರಲ್ಲಿ ಭಾರತದ ಸಾಮಾಜಿಕ, ಆರ್ಥಿಕ ಜಾತಿ ಗಣತಿ ನಡೆಸಲಾಗಿದೆ. ೨೦೧೦ರಲ್ಲಿ ಸಂಸತ್ತಿನ ಉಭಯ … Continued

ಕ್ಯಾಂಪಸ್‌ ಶೌಚಾಲಯದಲ್ಲಿ ಮಹಿಳಾ ಉದ್ಯೋಗಿಗಳ ವೀಡಿಯೊ ಚಿತ್ರೀಕರಣ ; ಇನ್ಫೋಸಿಸ್‌ ಉದ್ಯೋಗಿಯ ಬಂಧನ

ಬೆಂಗಳೂರು :  ಕ್ಯಾಂಪಸ್‌ನ ಶೌಚಾಲಯದಲ್ಲಿ ಮಹಿಳಾ ಸಹೋದ್ಯೋಗಿಗಳ ಅಶ್ಲೀಲ ವೀಡಿಯೊಗಳನ್ನು ರಹಸ್ಯವಾಗಿ ರೆಕಾರ್ಡ್ ಮಾಡಿದ ಆರೋಪದ ಮೇಲೆ ಟೆಕ್ ಕಂಪನಿ ಇನ್ಫೋಸಿಸ್‌ನ ಉದ್ಯೋಗಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಸ್ವಪ್ನಿಲ್ ನಾಗೇಶ ಮಾಲಿ (28) ಎಂದು ಗುರುತಿಸಲಾಗಿದೆ, ಈತ ಆಂಧ್ರಪ್ರದೇಶದವರಾಗಿದ್ದು, ಇನ್ಫೋಸಿಸ್‌ನ ಹೆಲಿಕ್ಸ್ ಘಟಕದಲ್ಲಿ ಹಿರಿಯ ಅಸೋಸಿಯೇಟ್ ಸಲಹೆಗಾರನಾಗಿದ್ದಾನೆ ಎನ್ನಲಾಗಿದೆ. ಪೊಲೀಸ್ ವರದಿಯ ಪ್ರಕಾರ, ಜೂನ್ 30 ರಂದು … Continued

ಗುಂಡ್ಲುಪೇಟೆ | ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಮಂಗಗಳ ಶವಗಳು ಪತ್ತೆ, ವಿಷಪ್ರಾಶನದ ಶಂಕೆ

ಚಾಮರಾಜನಗರ: ಐದು ಹುಲಿಗಳಿಗೆ ವಿಷಪ್ರಾಶನ ಮಾಡಿದ ಆಘಾತಕಾರಿ ಘಟನೆಯ ಬೆನ್ನಲ್ಲೇ, ಚಾಮರಾಜನಗರ ಜಿಲ್ಲೆಯಲ್ಲಿ 20 ಮಂಗಗಳ ಶವಗಳು ಬುಧವಾರ ಪತ್ತೆಯಾಗಿವೆ…! ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯ ಉದ್ದಕ್ಕೂ ಮಂಗಗಳ ಮೃತದೇಹಗಳು ಪತ್ತೆಯಾಗಿವೆ. ಮಂಗಗಳಿಗೆ ವಿಷಪ್ರಾಶನ ಮಾಡಲಾಗಿದೆ ಎಂದು ಅರಣ್ಯ ಮತ್ತು ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಿಂದ ಕೋತಿಗಳನ್ನು ಬೇರೆಡೆ … Continued