ಇಂದು (ಮೇ 29) ಕರ್ನಾಟಕದ 6 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ನೆಚ್ಚರಿಕೆ ; ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಜೋರಾಗಿ ಸುರಿಯುತ್ತಿದೆ. ಹಲವು ಜಿಲ್ಲೆಗಳಲ್ಲಿ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ. ಗುರುವಾರ (ಮೇ 29) ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ , ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಅತಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮೈಸೂರು, ಉಡುಪಿ, … Continued

ಅರಣ್ಯ ಇಲಾಖೆ ರಾಯಭಾರಿಯಾಗಿ ಅನಿಲ ಕುಂಬ್ಳೆ ನೇಮಕ: ಸಂಭಾವನೆ ಎಷ್ಟು ಗೊತ್ತೆ..?!

ಬೆಂಗಳೂರು: ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮನಿರ್ದೇಶನ ಮಾಡಲಾಗುತ್ದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಮಂಗಳವಾರ ತಿಳಿಸಿದ್ದಾರೆ. ಅರಣ್ಯ ಸಚಿವರಾಗಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಂಗಳವಾರಮಾಧ್ಯಮದವರೊಂದಿಗೆ ಮಾತನಾಡಿದ ಖಂಡ್ರೆ, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ … Continued

ಬಿಜೆಪಿಯಿಂದ ಶಾಸಕರಾದ ಶಿವರಾಮ ಹೆಬ್ಬಾರ, ಎಸ್‌.ಟಿ. ಸೋಮಶೇಖರ ಉಚ್ಚಾಟನೆ

ಬೆಂಗಳೂರು: ಶಾಸಕರಾದ ಶಿವರಾಮ ಹೆಬ್ಬಾರ (Shivaram Hebbar) ಹಾಗೂ ಎಸ್.ಟಿ. ಸೋಮಶೇಖರ (ST Somashekhar) ಅವರನ್ನು ಬಿಜೆಪಿ (BJP)ಯಿಂದ ಉಚ್ಚಾಟನೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಇಬ್ಬರು ಶಾಸಕರನ್ನು 6 ವರ್ಷಗಳ ಕಾಲ ಬಿಜೆಪಿ ಹೈಕಮಾಂಡ್‌ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಬಸವನಗೌಡ ಪಾಟೀಲ ಯತ್ನಾಳ್‌ ಅವರ ಉಚ್ಚಾಟನೆ ಮಾಡಿದ ಕೆಲವು ದಿನಗಳ ನಂತರ ಈ … Continued

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ : ಕರ್ನಾಟಕದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ ; 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದೆ. ಮೇ 25 ರಿಂದ ಮೇ 28ರ ವರೆಗೆ ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು … Continued

ಕರ್ನಾಟಕದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿಗೆ ಪೂರ್ಣ ಬಹುಮತ ; ಪೀಪಲ್ಸ್ ಪಲ್ಸ್ ಸಮೀಕ್ಷೆಯಲ್ಲಿ ಬಹಿರಂಗ….

ಬೆಂಗಳೂರು: ಕರ್ನಾಟಕದಲ್ಲಿ ಈಗ ವಿಧಾನಸಭಾ ಚುನಾವಣೆ ನಡೆದರೆ, ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಪೂರ್ಣ ಬಹುಮತದೊಂದಿಗೆ ಜಯಗಳಿಸುತ್ತದೆ ಎಂದು ಹೈದರಾಬಾದ್ ಮೂಲದ ಪೀಪಲ್ಸ್ ಪಲ್ಸ್ ಮತ್ತು ಕೊಡೆಮೊ ಟೆಕ್ನಾಲಜೀಸ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯೊಂದು ಹೇಳಿದೆ. 10,481 ಪ್ರತಿಸ್ಪಂದಕರನ್ನು ಒಳಗೊಂಡ ಒಂದು ತಿಂಗಳ ಅವಧಿಯ ಸಮೀಕ್ಷೆಯು, ಈಗ ಚುನಾವಣೆ ನಡೆದರೆ 224 ಸದಸ್ಯರ ವಿಧಾನಸಭೆಯಲ್ಲಿ … Continued

ಸಿಇಟಿ ಫಲಿತಾಂಶ ಫಲಿತಾಂಶ ಪ್ರಕಟ: ಎಂಜಿನಿಯರಿಂಗ್ ವಿಭಾಗದಲ್ಲಿ ಭವೇಶ ರಾಜ್ಯಕ್ಕೆ ಪ್ರಥಮ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್​ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಿಇಟಿ ಫಲಿತಾಂಶ (CET Result) ಇಂದು (ಮೇ 24) ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. ಶನಿವಾರ ಮಧ್ಯಾಹ್ನ 2 ಗಂಟೆ ನಂತರ … Continued

ಮೈಸೂರು ಸ್ಯಾಂಡಲ್ ಸೋಪ್‌ ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ನೇಮಕ

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಸಂಕೇತವಾಗಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್‌ಡಿಎಲ್) ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ನಟಿ ತಮನ್ನಾ ಭಾಟಿಯಾ (Tamannaah Bhatia) ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ ಲಿಮಿಟೆಡ್‌ನಿಂದ (KSDL) ಈ ಪ್ರಕಟಣೆ ಹೊರಬಿದ್ದಿದ್ದು, ಮೈಸೂರು ಸ್ಯಾಂಡಲ್ ಮತ್ತು ಇತರ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 5 ದಿನ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, ದಕ್ಷಿಣ ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಮೇ 22ರಂದು ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, … Continued

ಗೃಹ ಸಚಿವ ಜಿ.ಪರಮೇಶ್ವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ಇಡಿ ದಾಳಿ

ತುಮಕೂರು: ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ ಅವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ, ಮೇಲೆ ಜಾರಿ ನಿರ್ದೇಶನಾಲಯ(ED)ದ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು, ತುಮಕೂರಿನ ಎಸ್ಎಸ್ಐಟಿ ಕಾಲೇಜು ಸೇರಿದಂತೆ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಅಲ್ಲದೆ, ನೆಲಮಂಗಲದ … Continued

ನಾಳೆ (ಮೇ21) ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆ ; 4 ಜಿಲ್ಲೆಗಳಿಗೆ ರೆಡ್ ಅಲರ್ಟ್‌, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದ್ದು, ಮೇ 21ರ ಹೊತ್ತಿಗೆ ಕರ್ನಾಟಕ ಕರಾವಳಿಗೆ ಹತ್ತಿರದ ಪೂರ್ವ ಮಧ್ಯ ಅರಬ್ಬಿ ಸಮುದ್ರದ ಮೇಲೆ ಮೇಲ್ಮಟ್ಟದ ವಾಯುಭಾರ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಮೇ 21 ರಂದು ರಾಜ್ಯ ನಾಲ್ಕು ಜಿಲ್ಲೆಗಳಲ್ಲಿ ಅತ್ಯಂತ ಭಾರಿಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ. 6 ಜಿಲ್ಲೆಗಳಿಗೆ … Continued