ಏಪ್ರಿಲ್ 1ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಮಾರ್ಚ್‌ 31ರಿಂದ ರಾಜ್ಯಾದ್ಯಂತ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್‌ 2ರಂದು ಕರಾವಳಿಯ ಎಲ್ಲಾ ಜಿಲ್ಲೆ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಏಪ್ರಿಲ್‌ 1ರಂದು ದಕ್ಷಿಣ ಕನ್ನಡ … Continued

ಉಚಿತ ಯೋಜನೆಗಳು ಅಪಾಯಕಾರಿ, ಯಾವುದನ್ನೂ ಫ್ರೀ ಕೊಡಬಾರದು; ಕಾಂಗ್ರೆಸ್‌ ನಾಯಕ ಆರ್​ವಿ ದೇಶಪಾಂಡೆ

ದಾಂಡೇಲಿ: ಕಾಂಗ್ರೆಸ್ ಶಾಸಕ, ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.​​ವಿ. ದೇಶಪಾಂಡೆ ಕೂಡ ಉಚಿತ ಯೋಜನೆಗಳು ಅಪಾಯಕಾರಿ ಎಂದು ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಅಂಬೇವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಉಚಿತ ಕೊಡುಗೆ ಎಂಬುದು ಅಪಾಯಕಾರಿ ಪದ. ಜನರಿಗೆ ಏನನ್ನೂ … Continued

ಯತ್ನಾಳ ಉಚ್ಚಾಟನೆ ಆದೇಶ ಏ.10ರೊಳಗೆ ಹಿಂಪಡೆಯಿರಿ, ಇಲ್ಲದಿದ್ದರೆ ಪ್ರತಿಭಟನೆ : ಬಿಜೆಪಿಗೆ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಬೆಳಗಾವಿ: ಏಪ್ರಿಲ್‌ 10ರ ಒಳಗೆ ಬಸನಗೌಡ ಪಾಟೀಲ ಯತ್ನಾಳ​ ಅವರ ಉಚ್ಚಾಟನೆ ಮಾಡಿರುವ ಆದೇಶ ಹಿಂಪಡೆಯಬೇಕು. ಇಲ್ಲದಿದ್ದರೆ ಏಪ್ರಿಲ್‌ 13ರಂದು‌ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಿಜೆಪಿ ಹೈಕಮಾಂಡ್​ಗೆ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಶಿಸ್ತುಪಾಲನಾ ಸಮಿತಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ​ ಅವರನ್ನು … Continued

ಕರ್ನಾಟಕದ ವಿವಿಧೆಡೆ ಐದು ದಿನಗಳ ವರೆಗೆ ಮಳೆ ಮುನ್ಸೂಚನೆ

ಬೆಂಗಳೂರು : ಮುಂದಿನ ಎರಡು ದಿನಗಳ ಕಾಲ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಉತ್ತರ ಒಳನಾಡು ಜಿಲ್ಲೆಗಳಾದ ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ಚದುರಿದ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ … Continued

ಒಳಮೀಸಲಾತಿ : ನ್ಯಾ. ನಾಗಮೋಹನ ದಾಸ ಆಯೋಗದ ಮಧ್ಯಂತರ ವರದಿ ಅಂಗೀಕರಿಸಿದ ಸಚಿವ ಸಂಪುಟ

ಬೆಂಗಳೂರು : ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿದೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು. ಗುರುವಾರ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದ ಕುರಿತು ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ … Continued

ಕರ್ನಾಟಕದ 11 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ 11 ಜಿಲ್ಲೆಗಳಲ್ಲಿ ಇಂದು (ಮಾರ್ಚ್​ 27) ಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಹಾವೇರಿ ಜಿಲ್ಲೆಗಳಾದ ಹಾವೇರಿ, ಗದಗ, … Continued

ಸತ್ಯವಂತರಿಗಿದು ಕಾಲವಲ್ಲ…ದುಷ್ಟರಿಗೆ ಸುಭಿಕ್ಷ ಕಾಲ… : ಪಕ್ಷದಿಂದ ತಮ್ಮ ಉಚ್ಚಾಟಿಸಿದ್ದಕ್ಕೆ ಬಿಜೆಪಿಗೆ ಮಾರ್ಮಿಕವಾಗಿ ತಿವಿದ ಯತ್ನಾಳ

ಬೆಂಗಳೂರು: ಬಿಜೆಪಿಯಿಂದ ತಮ್ಮನ್ನು ಉಚ್ಚಾಟನೆ ಮಾಡಿರುವ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪುರಂದರ ದಾಸರ ಉಕ್ಕಿಯನ್ನು ಉಲ್ಲೇಖಿಸಿ ಬಿಜೆಪಿಗೆ ಮಾರ್ಮಿಕವಾಗಿ ಟಾಂಗ್‌ ನೀಡಿದ್ದಾರೆ. ಹೈ ಕಮಾಂಡ್‌ನಿಂದ ಉಚ್ಚಾಟನೆ ಆದೇಶ ಹೊರಬಿದ್ದ ನಂತರ ಪ್ರತಿಕ್ರಿಯಿಸಿರುವ ಅವರು, ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ ಎಂದು ಪುರಂದರ ದಾಸರ ಹೇಳಿದ್ದಾರೆ. ಉಪಕಾರ ಮಾಡಿದರೆ ಅಪಕರಿಸುವ ಕಾಲ. ಸಕಲವು … Continued

ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉಚ್ಚಾಟನೆ

ನವದೆಹಲಿ: ಬಿಜೆಪಿಯಿಂದ ಬಸನಗೌಡ ಪಾಟೀಲ ಯತ್ನಾಳ (Basanagouda Patil Yatnal) ಅವರನ್ನು ಉಚ್ಚಾಟನೆ ಮಾಡಲಾಗಿದೆ. ಶಿಸ್ತು ಸಮಿತಿ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಸರಿಯಾಗಿ ಉತ್ತರ ನೀಡದ ಕಾರಣ ಬಿಜೆಪಿ (BJP) ಹೈಕಮಾಂಡ್‌ ಈ ನಿರ್ಧಾರವನ್ನು ಕೈಗೊಂಡಿದ್ದು, ತಕ್ಷಣವೇ ಜಾರಿಗೆ ಬರುವಂತೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಪಕ್ಷದ ಕೇಂದ್ರ ಶಿಸ್ತು ಸಮಿತಿಯು ಮಾರ್ಚ್ … Continued

ಇಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾರ್ಚ್ 26ರಂದು ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂನೆ ನೀಡಿದೆ. ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ-ದಕ್ಷಿಣ … Continued

ಪಕ್ಷದ ಶಿಸ್ತು ಉಲ್ಲಂಘನೆ ; ಶಿವರಾಮ ಹೆಬ್ಬಾರ, ಸೋಮಶೇಖರ ಸೇರಿ ರಾಜ್ಯದ ಐವರು ಬಿಜೆಪಿ ನಾಯಕರಿಗೆ ಹೈಕಮಾಂಡ್‌ ನೋಟಿಸ್‌

ನವದೆಹಲಿ: ಪಕ್ಷದ ಶಿಸ್ತು ಉಲ್ಲಂಘನೆ, ಪಕ್ಷದ ಇಮೇಜಿಗೆ ಧಕ್ಕೆ ಆಗುವಂತೆ ಬಹಿರಂಗವಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕದ ಐವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ. ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯು ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ, ಯಶವಂತಪುರ ಶಾಸಕ ಎಸ್‌.ಟಿ. ಸೋಮಶೇಖ‌ರ ಸೇರಿದಂತೆ ಐವರಿಗೆ ಕಾರಣ ಕೇಳಿ ನೋಟಿಸ್ ನೀಡಿದೆ. ಸಾರ್ವಜನಿಕ ವೇದಿಕೆಗಳಲ್ಲಿ … Continued