ಭಾರತ ಸರ್ಕಾರ ವಿರುದ್ಧ ಹೈಕೋರ್ಟ್​​ನಲ್ಲಿ ಮೊಕದ್ದಮೆ ಹೂಡಿದ ಇಲಾನ್ ಮಸ್ಕ್ ಒಡೆತನದ ಎಕ್ಸ್‌

ಬೆಂಗಳೂರು : ಎಲಾನ್ ಮಸ್ಕ್ ಒಡೆತನದ ಎಕ್ಸ್‌ ವೆಬ್‌ಸೈಟ್‌ನಲ್ಲಿನ ಟ್ವೀಟ್ ಮತ್ತು ಇತರ ವಿಷಯವನ್ನು ತೆಗೆದುಹಾಕುವಂತೆ ಸೂಚಿಸಲು ಕೇಂದ್ರ ಸರ್ಕಾರವು ಮಾಹಿತಿ ತಂತ್ರಜ್ಞಾನ ಕಾಯ್ದೆ (ಐಟಿ ಆಕ್ಟ್) ಸೆಕ್ಷನ್ 79(3)(ಬಿ)ಯನ್ನು ಬಳಸುವ ವಿಧಾನವನ್ನು ಪ್ರಶ್ನಿಸಿ ಎಕ್ಸ್, ಭಾರತ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಭಾರತದಲ್ಲಿನ ಸರ್ಕಾರಿ ಅಧಿಕಾರಿಗಳು ಸರಿಯಾದ ಕಾನೂನು ಕಾರ್ಯವಿಧಾನಗಳನ್ನು ಬೈಪಾಸ್ … Continued

ಮಾರ್ಚ್‌ ೨೧ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು : ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಾಳೆಯಿಂದ ಆರಂಭವಾಗಲಿದ್ದು, ೨,೮೧೮ ಕೇಂದ್ರಗಳಲ್ಲಿ ೮.೯೬ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೧ ಮಾರ್ಚ್‌ ೨೧ ರಿಂದ ಏಪ್ರಿಲ್‌ ೪ರ ವರೆಗೆ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ … Continued

48 ನಾಯಕರ ಹನಿಟ್ರ್ಯಾಪ್ ಸಿಡಿ ಇದೆ, ನನ್ನ ಮೇಲೂ ಯತ್ನ; ಸಚಿವ ಕೆ.ಎನ್. ರಾಜಣ್ಣ ಸ್ಫೋಟಕ ಮಾಹಿತಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್‌ (Honey Trap) ಮತ್ತೆ ಸದ್ದು ಮಾಡುತ್ತಿದೆ. ರಾಜ್ಯದ 48 ರಾಜಕೀಯ ಮುಖಂಡರ ಸಿ.ಡಿ ತಯಾರಾಗಿದೆ. ನನ್ನ ಮೇಲೂ ಹನಿಟ್ರ್ಯಾಪ್ ಪ್ರಯತ್ನ ಆಗಿದೆ ಎಂದು ಸಹಕಾರಿ ಸಚಿವ ಕೆ ಎನ್ ರಾಜಣ್ಣ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ಎಲ್ಲ ಪಕ್ಷದ ನಾಯಕರು ಸೇರಿದಂತೆ ಸುಮಾರು 48 ಮಂದಿಯ ಹನಿಟ್ರ್ಯಾಪ್ ಸಿ.ಡಿ. ಮಾಡಲಾಗಿದೆ ಎಂದು … Continued

ವೀಡಿಯೊ…| ಹಾಸನ : ಇಬ್ಬರು ಅರಣ್ಯ ಇಲಾಖೆ ಅಧಿಕಾರಿಗಳನ್ನು ಅಟ್ಟಿಸಿಕೊಂಡು ಬಂದ ಕೋಪಗೊಂಡ ಕಾಡಾನೆ ; ಸ್ವಲ್ಪದರಲ್ಲೇ ಪಾರು…

ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಇಬ್ಬರು ಅರಣ್ಯಾಧಿಕಾರಿಗಳನ್ನು ಕಾಡು ಆನೆಯೊಂದು ಅಟ್ಟಿಸಿಕೊಂಡು ಹೋದ ಆಘಾತಕಾರಿ ಘಟನೆ ನಡೆದಿದ್ದು, ಇಬ್ಬರು ಅರಣ್ಯಾಧಿಕಾರಿಗಳು ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಆನೆ ತನ್ನತ್ತ ಧಾವಿಸಿ ಬರುತ್ತಿದ್ದರೂ ಕ್ಯಾಮರಾಮನ್ ಪ್ರಾಣಕ್ಕೂ ಲೆಕ್ಕ ಕೊಡದೆ ಧೈರ್ಯವಾಗಿ ನಿಂತು ಘಟನೆಯನ್ನು ಚಿತ್ರೀಕರಿಸಿದ್ದಾರೆ. ಹಾಸನದ ಬೇಲೂರು ತಾಲೂಕಿನ ಗ್ರಾಮದಲ್ಲಿ ಕಾಡು ಆನೆಯೊಂದು ದಾರಿ ತಪ್ಪಿ ಕೃಷಿ ಭೂಮಿಗೆ ನುಗ್ಗಿದೆ. ಅರಣ್ಯ … Continued

ಬಿಡದಿಯ ಕಾರ್ಖಾನೆಯಲ್ಲಿ ಪಾಕಿಸ್ತಾನ ಪರ ಬರಹ; ಇಬ್ಬರ ಬಂಧನ

ರಾಮನಗರ : ವ ಬಿಡದಿಯಲ್ಲಿರುವ ಟೊಯೋಟಾ ಬೋಷೂಕೂ ಆಟೋಮೇಟಿವ್ ಇಂಡಿಯಾ ಕಂಪನಿಯ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಿಡದಿಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಹೈಮದ್ ಹುಸೇನ್ (24) ಮತ್ತು ಸಾದಿಕ್ (20) ಎಂಬವರು ಬಂಧಿತ ಆರೋಪಿಗಳು. ಇವರು ಟೊಯೋಟಾ ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಶೌಚಾಲಯದ … Continued

ಕರ್ನಾಟಕದ 12 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ 12 ಜಿಲ್ಲೆಗಳಲ್ಲಿ ಮಾರ್ಚ್​ 23ರಿಂದ ಎರಡ್ಮೂರು ದಿನಗಳ ಕಾಲ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವಾರದ ಹಿಂದಷ್ಟೇ ಬೆಂಗಳೂರಿನ ಕೆಲವೆಡೆ ಮಳೆಯಾಗಿತ್ತು, ಅದಾದ ಬಳಿಕ ಗರಿಷ್ಠ ತಾಪಮಾನದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ರಾಜ್ಯದ ಕರಾವಳಿ ಜಿಲ್ಲೆಗಳು, ವಿಶೇಷವಾಗಿ ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು … Continued

ಕರ್ನಾಟಕದ ಉತ್ತರ ಒಳನಾಡಿನಲ್ಲಿ 3 ದಿನ ಬಿಸಿಗಾಳಿ ಸಾಧ್ಯತೆ ; ದಕ್ಷಿಣ ಒಳನಾಡಿನ ಕೆಲಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನಲ್ಲಿ ಮಾರ್ಚ್‌ 18ರಿಂದ 22ರ ವರೆಗೆ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಪೈಕಿ ಮಾರ್ಚ್‌ 18 ಮತ್ತು 19ರಂದು ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ಕಲಬುರಗಿ, ಬೀದರ, ಯಾದಗಿರಿ, ರಾಯಚೂರು ಬಾಗಲಕೋಟ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇರುವ … Continued

ಕರ್ನಾಟಕದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು; 75 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಕ್ಕೆ…!

ಮಂಗಳೂರು: ಕರ್ನಾಟಕ ಪೊಲೀಸರು ನಡೆಸಿದ ಅತಿ ದೊಡ್ಡ ಕಾರ್ಯಾಚರಣೆಯಲ್ಲಿ 75 ಕೋಟಿ ರೂಪಾಯಿ ಮೌಲ್ಯದ 37.870 ಕೆಜಿ ನಿಷೇಧಿತ ಎಂಡಿಎಂ (ಮಾದಕ ದ್ರವ್ಯ) ಅನ್ನು ಮಂಗಳೂರು ನಗರ ಪೊಲೀಸರು ಬೆಂಗಳೂರಿನಲ್ಲಿ ವಶಪಡಿಸಿಕೊಂಡಿದ್ದು, ಇಬ್ಬರು ದಕ್ಷಿಣ ಆಫ್ರಿಕಾದ ಪ್ರಜೆಗಳನ್ನು ಬಂಧಿಸಿದ್ದಾರೆ. ಆರೋಪಿಗಳಾದ ಬಾಂಬಾ ಫಾಂಟಾ, ಅಲಿಯಾಸ್ ಅಡೋನಿಸ್ ಜಬುಲಿಲೆ (31) ಮತ್ತು ಅಬಿಗಾಲಿ ಅಡೋನಿಸ್ ಅಲಿಯಾಸ್ ಓಡಿಜೋ … Continued

ಚಿತ್ರದುರ್ಗ | ಬಡಿದಾಡಿಕೊಂಡ ಪಿಎಸ್‌ಐ-ಬಿಜೆಪಿ ಮುಖಂಡ ; ವೀಡಿಯೊ ವೈರಲ್‌

ಆಘಾತಕಾರಿ ಘಟನೆಯೊಂದರಲ್ಲಿ ಚಿತ್ರದುರ್ಗದಲ್ಲಿ ಪೊಲೀಸ್ ಅಧಿಕಾರಿ ಮತ್ತು ಸ್ಥಳೀಯ ಬಿಜೆಪಿ ಮುಖಂಡ ಪರಸ್ಪರ ಕಪಾಳಮೋಕ್ಷ ಮಾಡಿಕೊಂಡ ಘಟನೆ ನಡೆದಿದೆ. ದುರ್ಗದ ಸಿರಿ ಹೋಟೆಲ್ ಎದರಿನ ರಸ್ತೆಯಲ್ಲಿ ನಡೆದ ಪರಸ್ಪರ ಕಪಾಳಮೋಕ್ಷ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, ಶುಕ್ರವಾರ ಮಧ್ಯರಾತ್ರಿ ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತಗೌಡ ಮತ್ತು ಇತರರು ಹೋಟೆಲ್ ಎದುರಿನ ಪ್ರದೇಶದಲ್ಲಿ … Continued

ಚಿನ್ನ ಕಳ್ಳಸಾಗಣೆ ಪ್ರಕರಣ : ಕಸ್ಟಡಿಯಲ್ಲಿ ನನಗೆ ಚಿತ್ರಹಿಂಸೆ, 10-15 ಬಾರಿ ಕಪಾಳಮೋಕ್ಷ ; ರನ್ಯಾ ರಾವ್ ಆರೋಪ

ಬೆಂಗಳೂರು: ತನಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಲಾಗಿದೆ ಮತ್ತು ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ನನ್ನನ್ನು ತಪ್ಪಾಗಿ ಸಿಲುಕಿಸಲಾಗಿದೆ ಎಂದು ನಟಿ ರನ್ಯಾ ರಾವ್ ಹೇಳಿದ್ದಾರೆ. ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ) ಯ ಹೆಚ್ಚುವರಿ ಮಹಾನಿರ್ದೇಶಕರಿಗೆ (ಎಡಿಜಿ) ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ ರನ್ಯಾ ರಾವ್ ಅವರು, ಅಧಿಕೃತವಾಗಿ ಹೇಳಿದಂತೆ ವಿಮಾನ ನಿಲ್ದಾಣದ ಟರ್ಮಿನಲ್‌ನಿಂದ ಅಲ್ಲ, ವಿಮಾನದಿಂದ ನೇರವಾಗಿ … Continued