ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ನ್ಯಾ. ಸುಭಾಷ್ ಆಡಿ ನೇತೃತ್ವದ ಸಮಿತಿ ಕಾರ್ಯಾಚರಣೆಗೆ ಹೈಕೋರ್ಟ್‌ ತಡೆ

ಬೆಂಗಳೂರು: ಬೆಂಗಳೂರು: ವೀರಶೈವ-ಲಿಂಗಾಯತ ಪಂಚಮಸಾಲಿ ಉಪಪಂಗಡವನ್ನು 2ಎಗೆ ಸೇರ್ಪಡೆ ಮಾಡುವ ವಿಚಾರದಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ರಾಜ್ಯ ಸರ್ಕಾರ ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ. ಆಡಿ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಮುಂದಿನ ಆದೇಶದ ವರೆಗೆ ಮುಂದುವರಿಯದಂತೆ ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದೆ. ಕಾನೂನಿಗೆ ವಿರುದ್ಧವಾಗಿ ಉನ್ನತಮಟ್ಟದ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. … Continued

ಮುಧೋಳ ನಾಯಿಗಳು ಪ್ರಧಾನಿ ಮೋದಿ ಭದ್ರತೆಗೆ ಸೇರ್ಪಡೆ ಬಹುತೇಕ ಖಚಿತ : ಎಸ್‌ಪಿಜಿಯಿಂದ ನಡೆಯುತ್ತಿದೆ ಪ್ರಯೋಗ

ಬೆಂಗಳೂರು: ರಾಜ್ಯದ ಬಾಗಲಕೋಟೆ ಜಿಲ್ಲೆಯ ಕಾರವಾನ್‌ ಹೌಂಡ್‌ ಎಂದು ಕರೆಯಲ್ಪಡುವ ಮುಧೋಳ ನಾಯಿಗಳು ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆಯ ಹೊಣೆ ಹೊತ್ತಿರುವ ವಿಶೇಷ ರಕ್ಷಣಾ ಗುಂಪಿನ (ಎಸ್‌ಪಿಜಿ) ಭಾಗವಾಗುವ ಎಲ್ಲ ಸಾಧ್ಯೆತಗಳೂ ಇವೆ ಎಂದು ವರದಿಗಳು ತಿಳಿಸಿವೆ. ಈ ಬೆಳವಣಿಗೆಯನ್ನು ದೃಢೀಕರಿಸಿರುವ ತಿಮ್ಮಾಪುರದ ಕೋರೆಹಲ್ಲು ಸಂಶೋಧನೆ ಮತ್ತು ಮಾಹಿತಿ ಕೇಂದ್ರದ ಮುಖ್ಯಸ್ಥ ಡಾ ಸುಶಾಂತ್ ಹಂಡಗೆ … Continued

ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗೆ ಹೊಸ ಯೋಜನೆಗಳನ್ನು ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಾಣೆಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಅವರು ಹಲವು ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. 250 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಸಂಪೂರ್ಣವಾಗಿ ಶೌಚಾಲಯಗಳ ನಿರ್ಮಾಣ ಮಾಡಲಾಗುವುದು ಎಂದು ಅವರು … Continued

ಹರ್ ಘರ್ ತಿರಂಗಾ ಜಾಹೀರಾತಿನಲ್ಲಿ ನೆಹರೂ ಭಾವಚಿತ್ರ ಹಾಕದ ಸರ್ಕಾರ : ಬಿಜೆಪಿ ನಡೆಗೆ ಕಾಂಗ್ರೆಸ್ ಆಕ್ರೋಶ

ಬೆಂಗಳೂರು : ರಾಜ್ಯ ಸರ್ಕಾರದ ಹರ್ ಘರ್ ತಿರಂಗಾ ಜಾಹೀರಾತಿನಲ್ಲಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಭಾವಚಿತ್ರ ಹಾಕದಿರುವುದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು, ಸಾರ್ವಜನಿಕರ ಹಣದಲ್ಲಿ ದ್ವೇಷ ತೀರಿಸಿಕೊಳ್ಳುವ ಚಾಳಿಯನ್ನು ಬಿಜೆಪಿ ಸರ್ಕಾರ ಮುಂದುವರಿಸಿದೆ ಎಂದು ಹೇಳಿದ್ದಾರೆ. ಸ್ವಾತಂತ್ರ್ಯ ಚಳುವಳಿಯಲ್ಲಿ … Continued

ಆಗಸ್ಟ್‌ 12 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ; ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ

ಹುಬ್ಬಳ್ಳಿ: ರಾಜ್ಯಾದ್ಯಂತ ಆಗಸ್ಟ್‌ 12 ರಿಂದ 25ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಮತ್ತು ನಿಯೋಜಿತ ಪರೀಕ್ಷಾ ಕೇಂದ್ರದಿಂದ ಹಿಂದಿರುಗುವಾಗ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಗರ, ಹೊರವಲಯ, ಸಾಮಾನ್ಯ ಹಾಗೂ … Continued

ನಾಳೆಯಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ ಆರಂಭ

ಬೆಂಗಳೂರು: : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ಆಗಸ್ಟ್ 12ರಿಂದ 25ರ ವರೆಗೆ ನಡೆಯಲಿದ್ದು, ಕಟ್ಟುನಿಟ್ಟಾಗಿ ನಡೆಸಲು ಎಲ್ಲಾ ಕ್ರಮಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಕೈಗೊಂಡಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಮುಂಜಾಗರೂಕತಾ ಕ್ರಮಗಳ್ಳಲಾಗಿದ್ದು, ಪ್ರತಿ ಕೇಂದ್ರಗಳಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ. ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ … Continued

ಪಿಯು ಅಂಕ ಪರಿಗಣಿಸದ ಕೆಇಎ: ಹೈಕೋರ್ಟ್‌ ಮೆಟ್ಟಿಲೇರಿದ ಪುನರಾವರ್ತಿತ ಸಿಇಟಿ ವಿದ್ಯಾರ್ಥಿಗಳು

ಬೆಂಗಳೂರು: 2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 2022ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕ್ರಮ ಪ್ರಶ್ನಿಸಿ ಕೆಲವು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪುನರಾವರ್ತಿತ ವಿದ್ಯಾರ್ಥಿಗಳು ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಬೆಂಗಳೂರಿನ ಜಿ. ಮನಸ್ವಿನಿ ಸೇರಿದಂತೆ ಏಳು ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಯು ಗುರುವಾರ ನ್ಯಾಯಮೂರ್ತಿ ಎಸ್. … Continued

ಮಳೆಯಿಂದಾಗಿ ಎರಡು ತಿಂಗಳಲ್ಲಿ 64 ಜನರು ಸಾವು : ಸಚಿವ ಅಶೋಕ್ ಮಾಹಿತಿ

ಮಂಡ್ಯ: ರಾಜ್ಯದಲ್ಲಿ ಕಳೆದೆರಡು ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ 64 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 14 ಜಿಲ್ಲೆಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಕಂದಾಯ ಸಚಿವ ಆರ್‍. ಅಶೋಕ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಮಳೆ ಅವಾಂತರ ಹಿನ್ನೆಲೆಯಲ್ಲಿ ಕೆ.ಆರ್‍. ಪೇಟೆಗೆ ಭೇಟಿ ನೀಡಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಜೂನ್ 1ರಿಂದ ಆಗಸ್ಟ್ 4ರ … Continued

ವಿಧಾನಸಭಾ ಚುನಾವಣೆಗೆ ತಯಾರಿ: ರಾಜ್ಯ ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿ ಡಾ.ಪರಮೇಶ್ವರ ನೇಮಕ

ನವದೆಹಲಿ: ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಜೋರಾಗಿ ತಯಾರಿ ನಡೆಸಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿಗೆ ಅಧ್ಯಕ್ಷರು, ಉಪಾಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ “ಪ್ರಣಾಳಿಕೆ, ನೀತಿ ಮತ್ತು ದೂರದೃಷ್ಟಿ ಸಮಿತಿ 2023ಕ್ಕೆ ಅಧ್ಯಕ್ಷರನ್ನಾಗಿ ಡಾ. ಜಿ.ಪರಮೇಶ್ವರ ಅವರನ್ನು ನೇಮಕ … Continued

ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ 5 ದಿನ ಭಾರೀ ಮಳೆ; ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ 5 ದಿನ ಜೋರಾದ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ನಾಳೆಯಿಂದ ಮೂರು ದಿನ ಮಳೆ ಜೋರಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಆಗಸ್ಟ್ 3, 4ರಂದು ಹಾಗೂ ಮಂಡ್ಯ ಮತ್ತು ರಾಮನಗರದಲ್ಲಿ ಆಗಸ್ಟ್ 4 ರಂದು ಭಾರಿ ಮಳೆ … Continued