ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಗುರುವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹುಬ್ಬಳ್ಳಿಯಿಂದ ಧಾರವಾಡವನ್ನು ಪ್ರತ್ಯೇಕಿಸಿ ಮತ್ತೊಂದು ಮಹಾನಗರ ಪಾಲಿಕೆ ರಚನೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರಸ್ತುತ … Continued

ಪ್ರಯಾಣಿಕರಿಗೆ ಹೊಸ ವರ್ಷದ ಆರಂಭಕ್ಕೇ ಶಾಕ್ ನೀಡಿದ ಸರ್ಕಾರ : ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯ ಸರ್ಕಾರ ಹೊಸ ವರ್ಷದ ಆರಂಭದಲ್ಲೇ ಬಸ್ ಪ್ರಯಾಣಿಕರಿಗೆ ಶಾಕ್ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC) ಸೇರಿದಂತೆ ನಾಲ್ಕೂ ನಿಗಮಗಳ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಲು ಗುರುವಾರ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ. ಇಂದು, ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ … Continued

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಸಿ.ಎಸ್‌.ಷಡಾಕ್ಷರಿ ಪುನರಾಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ (Govt Employees) 2024-2029ನೇ ಅವಧಿಯ ಚುನಾವಣೆಯಲ್ಲಿ ಸಂಘದ ಹಾಲಿ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಪುನರಾಯ್ಕೆಯಾಗಿದ್ದಾರೆ. ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಮತ್ತು ರಾಜ್ಯ ಖಜಾಂಚಿ ಸ್ಥಾನಕ್ಕೆ ಶುಕ್ರವಾರ ಚುನಾವಾಣೆ ನಡೆದಿದ್ದು, ಅಧ್ಯಕ್ಷರಾಗಿ ಸಿ.ಎಸ್‌.ಷಡಾಕ್ಷರಿ (CS Shadakshari) ಅವರು ಅವರು ಎರಡನೇ ಬಾರಿ ಹಾಗೂ ಖಜಾಂಚಿಯಾಗಿ ಶಿವರುದ್ರಯ್ಯ ವಿ.ವಿ ಆಯ್ಕೆಯಾಗಿದ್ದಾರೆ. … Continued

ಜಮ್ಮು-ಕಾಶ್ಮೀರ | ಪೂಂಚ್‌ ಬಳಿ 300 ಅಡಿ ಕಂದಕಕ್ಕೆ ಉರುಳಿದ ಸೇನಾ ವಾಹನ : ಕರ್ನಾಟಕದ ಮೂವರು ಸೈನಿಕರು ಸಾವು

ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ವಾಹನ 300 ಅಡಿ ಕಂದಕಕ್ಕೆ ಸೇನಾ ಬಿದ್ದು ಸಂಭವಿಸಿದ ದುರಂತದಲ್ಲಿ ಕರ್ನಾಟದ ಮೂವರು ಸೈನಿಕರು ಮೃತಪಟ್ಟಿದ್ದಾರೆ. ಮಂಗಳವಾರ ಸಂಜೆ 5:30ರ ಸುಮಾರಿಗೆ 300 ಅಡಿ ಕಂದಕಕ್ಕೆ ಸೇನಾ ವಾಹನ ಬಿದ್ದು ಮರಾಠಾ ರೆಜಿಮೆಂಟ್‌ನ (Maratha Light Infantry) ಐವರು ಮೃತಪಟ್ಟಿದ್ದರು. ಅವರಲ್ಲಿ ಮೂವರು ಕರ್ನಾಟಕದವರಾಗಿದ್ದಾರೆ. ಸೇನಾ … Continued

ಕಳೆದುಹೋಗಿ 25 ವರ್ಷಗಳ ನಂತರ ಹಿಮಾಚಲ ಪ್ರದೇಶದಲ್ಲಿ ಪತ್ತೆಯಾದ ಬಳ್ಳಾರಿ ಜಿಲ್ಲೆಯ ಮಹಿಳೆ …!

ಬಳ್ಳಾರಿ: ಸುಮಾರು 25 ವರ್ಷಗಳ ನಂತರ ಮನೆಯವರ ಸಂಪರ್ಕವಿಲ್ಲದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಕೊನೆಗೂ ಪತ್ತೆಯಾಗಿದ್ದಾರೆ…! ಮೂಲತಃ ಬಳ್ಳಾರಿ ತಾಲೂಕಿನ ಕುರುವಳ್ಳಿ ಗ್ರಾಮದವರಾದ ಸಾಕಮ್ಮ ಎಂಬ ಮಹಿಳೆ ಹಿಮಾಚಲ ಪ್ರದೇಶದ ಮಂಡಿಯಲ್ಲಿ ಪತ್ತೆಯಾಗಿದ್ದು,ಅವರನ್ನು ಈಗ ಕರೆತರಲಾಗಿದೆ. 20 ವರ್ಷಗಳಿಗೂ ಹೆಚ್ಚು ಕಾಲ ಮನೆ ಬಿಟ್ಟು ಹೋಗಿದ್ದ ಬಳ್ಳಾರಿ ಮೂಲದ ಸಾಕವ್ವ ಪತ್ತೆಯಾಗಿದ್ದು, ಡಿಸೆಂಬರ್ 24ರಂದು ಸಂಜೆ ಬೆಂಗಳೂರಿನ … Continued

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ

ಹೈದರಾಬಾದ್‌: ಡಿಸೆಂಬರ್‌ 23ರಿಂದ ಮೂರು ದಿನ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತ ಆಗಿರುವ ಕಾರಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಡಿಸೆಂಬರ್‌ 23ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, … Continued

ಕನ್ನಡ ಸಾಹಿತಿ-ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆ

ನವದೆಹಲಿ : 2024ರ ಕೇಂದ್ರ ಸಾಹಿತ್ಯ ಅಕಾಡೆಮಿಯ ಈ ಸಾಲಿನ ಪ್ರಶಸ್ತಿ(Sahitya Akademi Award 2024)ಯನ್ನು ಪ್ರಕಟಿಸಲಾಗಿದ್ದು, ಕನ್ನಡದ ವಿದ್ವಾಂಸ, ಭಾಷಾ ವಿಜ್ಞಾನಿ ಮತ್ತು ವಿಮರ್ಶಕ ಮೈಸೂರಿನ ಪ್ರೊ. ಕೆ.ವಿ.ನಾರಾಯಣ (K.V.Narayana) ಅವರ ʼನುಡಿಗಳ ಅಳಿವುʼ ವಿಮರ್ಶೆ ಕೃತಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ದೇಶದ 21 ಭಾಷೆಗಳ ಲೇಖಕರಿಗೆ ಪ್ರಶಸ್ತಿ ಪ್ರಕಟಿಸಲಾಗಿದ್ದು, ವಿಮರ್ಶೆ ವಿಭಾಗದಲ್ಲಿ ಪ್ರೊ.ಕೆ.ವಿ.ನಾರಾಯಣ … Continued

ಶಬರಿಮಲೆಯಲ್ಲಿ ಮೇಲ್ಸೇತುವೆ ಮೇಲಿಂದ ಜಿಗಿದು ಕರ್ನಾಟಕದ ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆ

ಶಬರಿಮಲೆ : ಶಬರಿಮಲೆಯ ಶ್ರೀ ಅಯ್ಯಪ್ಪನ (Sabarimala Temple) ದೇವಸ್ಥಾನದಲ್ಲಿ, ಸಾವಿರಾರು ಭಕ್ತರ ಮುಂದೆಯೇ ಕರ್ನಾಟಕದ ಭಕ್ತರೊಬ್ಬರು ಮಾಳಿಗೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಕರ್ನಾಟಕದ ಕನಕಪುರದ ನಿವಾಸಿ ಕುಮಾರಸ್ವಾಮಿ (40) ಎಂದು ಗುರುತಿಸಲಾಗಿದೆ. ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದ ಮೇಲಿನಿಂದ ಇವರು ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸೋಮವಾರ ತಡರಾತ್ರಿ ನಡೆದಿದೆ. … Continued

ಡಿಸೆಂಬರ್ 17 ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆ : ಮುನ್ಸೂಚನೆ

ಬೆಂಗಳೂರು: ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಡಿ.17 ರಿಂದ ಮೂರು ದಿನ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿ.17 ರಂದು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಮೈಸೂರು, ಚಾಮರಾಜನಗರ, … Continued

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2 ದಿನ ಭಾರಿ ಮಳೆ ಮುನ್ಸೂಚನೆ ; ಹಳದಿ ಅಲರ್ಟ್‌ ಘೋಷಣೆ

ಬೆಂಗಳೂರು : ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪೂರ್ವ ಹಿಂದೂ ಮಹಾಸಾಗರ ವಲಯಗಳಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪರಿಚಲನೆಗಳಿಂದಾಗಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಎರಡ್ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 12 ಮತ್ತು 13 … Continued