ಎಸ್‌.ಎಂ. ಕೃಷ್ಣ ನಿಧನ ; ನಾಳೆ (ಡಿ.11) ರಾಜ್ಯದಲ್ಲಿ ರಜೆ ಘೊಷಣೆ : 3 ದಿನ ಶೋಕಾಚರಣೆ

ಬೆಂಗಳೂರು: ಇಂದು, ಮಂಗಳವಾರ ಮುಂಜಾನೆ ಮೃತರಾದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರ ಗೌರವಾರ್ಥ ರಾಜ್ಯ ಸರ್ಕಾರ (Karnataka Government) ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಹಾಗೂ ನಾಳೆ ಬುಧವಾರ (ಡಿಸೆಂಬರ್ 11) ರಜೆ (Government Holiday) ಘೋಷಣೆ ಮಾಡಿದೆ. ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಹೀಗಾಗಿ ಬುಧವಾರ … Continued

“ನಿಮ್ಮ ಅವಿರತ ಪ್ರಯತ್ನಗಳು ಇಲ್ಲದಿದ್ದರೆ….”: ಎಸ್.ಎಂ.ಕೃಷ್ಣಗೆ ಧನ್ಯವಾದ ಹೇಳಿ ಪತ್ರ ಬರೆದಿದ್ದ ಅಂದಿನ ಅಮೆರಿಕದ ಅಧ್ಯಕ್ಷ ಜಾನ್ ಕೆನಡಿ

ಬೆಂಗಳೂರು : ಇಂದು, ಮಂಗಳವಾರ ನಿಧನರಾದ ಪದ್ಮವಿಭೂಷಣ ಎಸ್.ಎಂ.ಕೃಷ್ಣ ಅವರು ಅರ್ಧ ಶತಮಾನದ ರಾಜಕೀಯ ಜೀವನದಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ, ವಿದೇಶಾಂಗ ಸಚಿವರಾಗಿ ಹೀಗೆ ಹಲವಾರು ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಆದರೆ ದೇಶದ ರಾಜಕೀಯದಲ್ಲಿ ಆಳವಾದ ಧುಮುಕುವ ಮೊದಲು, ಅವರು ಅಮೆರಿಕದಲ್ಲಿ ಕಾನೂನು ವಿದ್ಯಾರ್ಥಿಯಾಗಿದ್ದಾಗ ಅಲ್ಲಿನ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು…!. ವರ್ಚಸ್ವಿ … Continued

ವಿಶ್ವ ಭೂಪಟದಲ್ಲಿ ಬೆಂಗಳೂರಿಗೆ ಮಾನ್ಯತೆ ತಂದುಕೊಟ್ಟ ಎಸ್‌.ಎಂ. ಕೃಷ್ಣ ನಡೆದು ಬಂದ ದಾರಿ….

ಬೆಂಗಳೂರು : ಇಂದು ಮಂಗಳವಾರ ಬೆಳಗಿನ ಜಾವ ನಿಧನರಾದ (ಡಿಸೆಂಬರ್‌ 10)  ಎಸ್‌.ಎಂ. ಕೃಷ್ಣ (ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ) ಅವರು ಈ ರಾಜ್ಯ ಕಂಡ ಅಪರೂಪದ ಹಾಗೂ ವಿಶಿಷ್ಟ ರಾಜಕಾರಣಿ. ವಿಧಾನಸಭೆಯ ಸ್ಪೀಕರ್, ಉಪಮುಖ್ಯಮಂತ್ರಿ ಮುಖ್ಯಮಂತ್ರಿಯಾಗಿ (Chief Minister), ಮಹಾರಾಷ್ಟ್ರದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ ಬಳಿಕ ವಿದೇಶಾಂಗ ವ್ಯವಹಾರಗಳ ಸಚಿವರೂ ಆಗಿ ಕಾರ್ಯನಿರ್ವಹಿಸಿದ್ದು, ಸುದೀರ್ಘ ರಾಜಕೀಯ … Continued

ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಇನ್ನಿಲ್ಲ

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್​ಎಂ ಕೃಷ್ಣ (SM Krishna) ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು, ಮಂಗಳವಾರ (ಡಿಸೆಂಬರ್​ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್​​ಎಂ ಕೃಷ್ಣರನ್ನು ಮೊದಲು ವೈದೇಹಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಬಳಿಕ ಶ್ವಾಸಕೋಶದ … Continued

ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮತ್ತೆ ಮಳೆ ; ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತದ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹಲವೆಡೆ ಡಿಸೆಂಬರ್ 14ರವರೆಗೆ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, … Continued

ಯಾರೋ ಹೇಳಿದಾಕ್ಷಣ ವಿಜೇಯೆಂದ್ರ ಬದಲಾವಣೆ ಮಾಡಲು ಆಗದು : ರಾಧಾಮೋಹನ ಅಗರ್ವಾಲ್

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯ ಕಂಡುಬಂದಿಲ್ಲ. ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಸದ್ಯಕ್ಕೆ ಬದಲಾವಣೆ ಮಾಡುವ ಯಾವುದೇ ವಿಚಾರ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನದಾಸ ಅಗರ್ವಾಲ್ ಹೇಳಿದ್ದಾರೆ. ಶನಿವಾರ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆದ ಬಳಿಕ ಮಾಧ್ಯಮಗಳ ಜತೆ … Continued

ಕರ್ನಾಟಕದಲ್ಲಿ ಹೊಸದಾಗಿ 3 ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಕೇಂದ್ರದ ಸಮ್ಮತಿ

ನವದೆಹಲಿ: ಕೇಂದ್ರ ಸರ್ಕಾರವು ದೇಶದಲ್ಲಿ 85 ಕೇಂದ್ರೀಯ ವಿದ್ಯಾಲಯಗಳು ಮತ್ತು 28 ಹೊಸ ನವೋದಯ ವಿದ್ಯಾಲಯಗಳನ್ನು ತೆರೆಯುವುದಾಗಿ ಪ್ರಕಟಿಸಿದೆ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ನೀಡಲಾಗಿದ್ದು, ಕರ್ನಾಟಕದಲ್ಲಿ ಮೂರು ಕೇಂದ್ರೀಯ ವಿದ್ಯಾಲಯಗಳನ್ನು ತೆರೆಯಲಾಗುತ್ತದೆ. ಅಲ್ಲದೆ, ಜಮ್ಮು ಮತ್ತು ಕಾಶ್ಮೀರದಲ್ಲಿ 13 ಕೇಂದ್ರೀಯ ವಿದ್ಯಾಲಯಗಳನ್ನು ತೆರೆಯಲಾಗುತ್ತದೆ. 28 ಹೊಸ ನವೋದಯ ವಿದ್ಯಾಲಯಗಳನ್ನು ತೆರೆಯುವುದಾಗಿ ಪ್ರಕಟಿಸಲಾಗುತ್ತದೆ, … Continued

ಶಿವಕುಮಾರ ಸ್ವಾಮೀಜಿ ಪುತ್ಥಳಿಗೆ ಹಾನಿ ; ಆರೋಪಿ ಬಂಧಿಸಿದ ಪೊಲೀಸರು

ಬೆಂಗಳೂರು : ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿಯನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ರಾಜ್ ಶಿವು ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿ ನ.30 ರಂದು ರಾತ್ರಿ ಪುತ್ಥಳಿಗೆ ಹಾನಿ ಮಾಡಿದ್ದ ಎಂದು ಹೇಳಲಾಗಿದೆ. ಶಿವಕುಮಾರ ಸ್ವಾಮೀಜಿ ಮೂರ್ತಿ ಒಡೆಯುವಂತೆ ಕನಸನಲ್ಲಿ ಬಂದು ಏಸು ಹೇಳಿದ್ದ. ಇದಕ್ಕೆ … Continued

ಒಪ್ಪಂದ ಆಗಿದ್ದರೆ ಅವರಿಬ್ಬರೇ ರಾಜಕಾರಣ ನಡೆಸಲಿ, ನಾವೆಲ್ಲ ಯಾಕೆ ಬೇಕು? : ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಸಚಿವ ಪರಮೇಶ್ವರ ಅಸಮಾಧಾನ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿರುವ ವಿಚಾರ ನನಗೇನು ಗೊತ್ತಿಲ್ಲ. ಒಪ್ಪಂದ ಆಗಿದೆ ಎನ್ನುವುದಾದರೆ ನಾವೆಲ್ಲ ಯಾಕಿರಬೇಕು?. ಅವರಿಬ್ಬರೇ ರಾಜಕಾರಣ ನಡೆಸಲಿ. ಆ ರೀತಿ ಒಪ್ಪಂದ ಆಗಿರಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಸಚಿವ ಜಿ.ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 4-5 ದಿನ ಮಳೆ ; ಮುನ್ಸೂಚನೆ

ಬೆಂಗಳೂರು ; ಫೆಂಗಲ್ ಚಂಡಮಾರುತದ ದುರ್ಬಲವಾಗುತ್ತಿದೆ, ಆದರೆ ಕರ್ನಾಟಕದಲ್ಲಿ ಅದರ ಪ್ರಭಾವದಿಂದ ಮಳೆ ಬೀಳುತ್ತಿದೆ. ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಡಿಸೆಂಬರ್ 9ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, … Continued