ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಅಸಾನಿ ಚಂಡಮಾರುತ ಕ್ಷೀಣವಾಗಿದ್ದರೂ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕಳೆದ ಎರಡು ವಾರಗಳಿಂದ ರಾಜ್ಯದ ಒಳನಾಡಿನಲ್ಲಿ ಬೀಳುತ್ತಿರುವ ಮಳೆ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಗೋಚರಿಸುತ್ತಿಲ್ಲ. ಕಳೆದ ನಾಲ್ಕು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಜಿಟಿಜಿಟಿ ಮಳೆ ಬೀಳುತ್ತಿದ್ದು, ಮೋಡ ಮುಸುಕಿದ … Continued

ಸಂಪುಟ ವಿಸ್ತರಣೆ: ಅಮಿತ್ ಶಾ ಭೇಟಿ ಮಾಡಿದ ಸಿಎಂ, ಯಾವಾಗ ಏನುಬೇಕಾದರೂ ಆಗಬಹುದು ಎಂದ ಬೊಮ್ಮಾಯಿ

ನವದೆಹಲಿ: ರಾಜ್ಯದ ಸಚಿವ ಸಂಪುಟದ ಕುರಿತು ಕೇಂದ್ರ ಗೃಹ ಸಚಿವ ಅಮಿತ ಶಾ ಅವರ ಜೊತೆ ಸಮಾಲೋಚನೆ ನಡೆಸಲಾಗಿದೆ. ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವಾಗ ಏನೂ ಬೇಕಾದರೂ ಆಗಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಮಿಕವಾಗಿ ಹೇಳಿದ್ದಾರೆ. ನವದೆಹಲಿಯಲ್ಲಿ ಇಂದು, ಬುಧವಾರ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ … Continued

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಚಂಡಮಾರುತವಾಗುವ ಸಾಧ್ಯತೆ: ಕರ್ನಾಟಕದಲ್ಲೂ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ನಾಳೆ ಮಧ್ಯಾಹ್ನದ ಸುಮಾರಿಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹೀಗಾಗಿ ಅಂಡಮಾನ್‌ ಮತ್ತು ನಿಕೊಬಾರ್‌ ದ್ವೀಪಗಳು ಹಾಗೂ ಒಡಿಶಾದ ಕಡಲ ತೀರ ಪ್ರದೇಶಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಚಂಡಮಾರುತದ ಪರಿಣಾಮ ರಾಜ್ಯದ ಮೇಲೆಯೂ ಆಗುವ ಸಾಧ್ಯತೆ ನಿಚ್ಚಳವಾಗಿದ್ದು, ಹಲವೆಡೆ ಸುರಿಯುತ್ತಿರುವ ಮಳೆ … Continued

ಗೋ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಗೋ ಮಾತಾ ಸಹಕಾರ ಸಂಘ ಸ್ಥಾಪನೆಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪ್ರಾಯೋಗಿಕವಾಗಿ ಗೋ ಮಾತಾ ಸಹಕಾರ ಸಂಘ ಸ್ಥಾಪಿಸುವ ನಿಟ್ಟಿನಲ್ಲಿ ರೂಪುರೇಷೆಗಳನ್ನು ಸಿದ್ದಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. 2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ನಡೆದ ಪಶುಸಂಗೋಪನಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ. ಗೋವಿನ ಅನೇಕ ಉತ್ಪನ್ನಗಳನ್ನು ಜನರು ಖರೀದಿ ಮಾಡುತ್ತಾರೆ. … Continued

ಸಿಎಂ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತ ಸೇರಿ 17 ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೇರಿದಂತೆ 17 ಐಎಎಸ್‌ ಅಧಿಕಾರಿಗಳನ್ನು ಗುರುವಾರ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಬಿಬಿಎಂಪಿ ಆಯುಕ್ತರಾಗಿದ್ದ ಗೌರವ್ ಗುಪ್ತಾ ಅವರನ್ನು ಮೌಲಭೂತ ಸೌಕರ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದ್ದು, ಅವರ ಸ್ಥಾನಕ್ಕೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ತುಷಾರ ಗಿರಿನಾಥ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ … Continued

ಕರ್ನಾಟಕದಲ್ಲಿ ಏರುತ್ತಿದೆ ಕೊರೊನಾ…ಹೊಸದಾಗಿ 154 ಜನರಿಗೆ ಸೋಂಕು, ಬೆಂಗಳೂರಲ್ಲಿ 142 ಪ್ರಕರಣ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಇಂದು, ಗುರುವಾರ ಒಟ್ಟು 154 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರಲ್ಲೇ 142 ಪ್ರಕರಣ ದಾಖಲಾಗಿವೆ ರಾಜ್ಯದ ಕೋವಿಡ್‌ ಪಾಸಿಟಿವಿಟಿ ದರ ಶೇ.1.49ಕ್ಕೆ ಏರಿಕೆ ಕಂಡರೆ ಬೆಂಗಳೂರಿನ ಪಾಸಿಟಿವಿಟಿ ರೇಟ್ ಶೇ.3 ದಾಟಿದೆ. ಇದೇವೇಳೆ ಒಟ್ಟು 116 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ರಾಜ್ಯದ … Continued

ಕಣ್ಣ ಮುಚ್ಚಾಲೆ ಆಟವಾಡುವಾಗ ಐಸ್‌ಕ್ರೀಂ ಫ್ರೀಜರ್‌ನಲ್ಲಿ ಅವಿತುಕೊಂಡ ಇಬ್ಬರು ಬಾಲಕಿಯರು ಉಸಿರುಗಟ್ಟಿ ಸಾವು

ನಂಜನಗೂಡು : ಕಣ್ಣ ಮುಚ್ಚಾಲೆ ಆಟವಾಡುವಾಗ ಐಸ್‌ಕ್ರೀಂ ಫ್ರೀಜರ್‌ನಲ್ಲಿ ಅವಿತುಕೊಳ್ಳಲು ಹೋಗಿ ಬಾಗಿಲು ಬಂದ್‌ ಆಗಿದ್ದರಿಂದ ಇಬ್ಬರು ಬಾಲಕಿಯರು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ತಾಲೂಕಿನ ಮಸಗೆ ಗ್ರಾಮದಲ್ಲಿ ಬುಧವಾರ ನಡೆದ ಬಗ್ಗೆ ವರದಿಯಾಗಿದೆ. ಮೃತ ಬಾಲಕಿಯರನ್ನು ಗ್ರಾಮದ ನಾಗರಾಜ ನಾಯಕ ಅವರ ಪುತ್ರಿ ಭಾಗ್ಯ (12) ಹಾಗೂ ರಾಜು ನಾಯಕ ಪುತ್ರಿ ಕಾವ್ಯಾ (5) ಎಂದು … Continued

ಕರ್ನಾಟಕದಲ್ಲಿ ಬುಧವಾರ ಹೊಸದಾಗಿ 126 ಮಂದಿಗೆ ಕೊರೊನಾ ಸೋಂಕು, ಬೆಂಗಳೂರಿನಿಂದಲೇ ಬಹುತೇಕ ಪ್ರಕರಣಗಳು

ಬೆಂಗಳೂರು: ಕೋವಿಡ್ ಸೋಂಕು ನಿಧಾನವಾಗಿ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ (ಬುಧವಾರ) ಬೆಂಗಳೂರಿನಲ್ಲಿ 114 ಜನರಿಗೆ ಸೋಂಕು ಸೇರಿದಂತೆ ಕರ್ನಾಟಕದಲ್ಲಿ 126 ಜನರಿಗೆ ಕೊರೊನಾ ಸೋಂಕು ದಾಖಲಾಗಿದೆ. ಈ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡ, ಧಾರವಾಡ, ಕೋಲಾರ ಮತ್ತು ತುಮಕೂರು ಜಿಲ್ಲೆಯಲ್ಲಿ … Continued

ಕರ್ನಾಟಕದಲ್ಲಿ ಮಂಗಳವಾರ 85 ಮಂದಿಗೆ ಸೋಂಕು, ಬೆಂಗಳೂರಿನಲ್ಲಿ ನಿಧನವಾಗಿ ಏರಿಕೆ

ಬೆಂಗಳೂರು: ಕೊರೊನಾ ಸೋಂಕಿನ ಏರಿಕೆಯಾಗುತ್ತಿದೆ. ಇಂದು, ಮಂಗಳವಾರ ಒಟ್ಟು 85 ಸೋಂಕು ದಾಖಲಾಗಿದ್ದು, ಸೋಮವಾರಕ್ಕಿಂತ 21 ಪ್ರಕರಣಗಳು ಹೆಚ್ಚಾಗಿದೆ. ಸಮಾಧಾನದ ಸಂಗತಿಯೆಂದರೆ ಕಳೆದ ಹಲವು ದಿನಗಳಿಂದ ಯಾವುದೇ ಮರಣ ದಾಖಲಾಗಿಲ್ಲ. ಬೆಂಗಳೂರು ನಗರದಲ್ಲಿ ಇಂದು 82 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 70 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಪಾಸಿಟಿವಿಟಿ ರೇಟ್ 1.18% … Continued

ಕರ್ನಾಟಕದಲ್ಲಿಯೂ ನಿಧಾನವಾಗಿ ಏರುತ್ತಿದೆ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ನಿಧಾನವಾಗಿ ಏರುತ್ತಿದೆ. ಇಂದು, ಶನಿವಾರ ಒಂದೇ ದಿನದಲ್ಲಿ 139 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಹೆಚ್ಚಿನವರು ಬೆಂಗಳೂರಿನಲ್ಲಿ ಹೆಚ್ಚಾಗಿ ಸೊಂಕು ತಗುಲಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,46,874ಕ್ಕೆ ಏರಿಕೆಯಾಗಿದೆ. ಇಂದು ಕೊರೊನಾದಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. … Continued