ಹಾವೇರಿ | ಲೋಕಾಯುಕ್ತ ದಾಳಿ ವೇಳೆ ಲಕ್ಷಗಟ್ಟಲೆ ನಗದು ಹಣ ಗಂಟುಕಟ್ಟಿ ಕಿಟಿಕಿಯಿಂದ ಹೊರಗೆ ಎಸೆದ ಅಧಿಕಾರಿ…!

ಹಾವೇರಿ: ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಹೆದರಿದ ಅಧಿಕಾರಿಯೊಬ್ಬರು ನೋಟುಗಳ ಕಟ್ಟುಗಳನ್ನು ಗಂಟುಕಟ್ಟಿ ಹೊರಗೆಸೆದಿರುವ ವಿದ್ಯಮಾನ ಹಾವೇರಿಯಲ್ಲಿ ನಡೆದಿರುವುದು ವರದಿಯಾಗಿದೆ. ಹಾವೇರಿ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಹಿರೇಕೆರೂರು ಉಪವಿಭಾಗದ ಸಹಾಯಕ ಇಂಜಿನಿಯರ್ ಕಾಶಿನಾಥ ಭಜಂತ್ರಿ ಎಂಬವರು ಲೋಕಾಯುಕ್ತ ಅಧಿಕಾರಿಗಳ ದಾಳಿಯ ವೇಳೆ 9 ಲಕ್ಷ … Continued

ದೇಗುಲದ ಹಣ ದೇಗುಲಕ್ಕೇ ಬಳಕೆ: ಸರ್ಕಾರದಿಂದ ದೇವಸ್ಥಾನದಲ್ಲಿ ಬೋರ್ಡ್‌ ಅಳವಡಿಕೆ

ಬೆಂಗಳೂರು: “ಈ ದೇವಸ್ಥಾನದ (Hindu Temple) ಹಣವನ್ನು ಈ ದೇವಸ್ಥಾನದ ಅಭಿವೃದ್ಧಿಗೇ ಬಳಸುತ್ತೇವೆ. ಅನ್ಯ ಉದ್ದೇಶಕ್ಕೆ ಬಳಸುವುದಿಲ್ಲ” ಎಂದು ದೇವಸ್ಥಾನಕ್ಕೆ ಬರುವ ಭಕ್ತರಿಗೆ ಎದ್ದು ಕಾಣುವಂತೆ ದೇವಸ್ಥಾನದಲ್ಲಿ ಬೋರ್ಡ್‌ ಹಾಕಲು ಮುಜರಾಯಿ ಇಲಾಖೆ (Muzrai Department) ಮುಂದಾಗಿದೆ. ಮುಜರಾಯಿ ದೇವಸ್ಥಾನದಲ್ಲಿ ಭಕ್ತರು ಸಲ್ಲಿಸುವ ಕಾಣಿಕೆಯ ಹಣವನ್ನು ಅನ್ಯ ಧರ್ಮದ ಪವಿತ್ರ ಸ್ಥಳಗಳಿಗೆ ಬಳಕೆ ಮಡಲಾಗುತ್ತಿದೆ ಎಂಬ … Continued

ಕರ್ನಾಟಕದಲ್ಲಿ ಹಲವು ಜಿಲ್ಲೆಗಳಲ್ಲಿ ನವೆಂಬರ್ 13ರಿಂದ ಮತ್ತೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ತರಹ ಪರಿಚಲನೆ ಉಂಟಾಗಿರುವ ಕಾರಣ, ಅಲ್ಲಿ ಕಡಿಮೆ ಒತ್ತಡ ಪ್ರದೇಶ ರಚನೆಯಾಗುತ್ತಿದೆ. ಹೀಗಾಗಿ ಮುಂದಿನ 2 ದಿನಗಳಲ್ಲಿ ಚಂಡಮಾರುತದ ಪರಿಚಲನೆ ನಿಧಾನವಾಗಿ ತಮಿಳುನಾಡು ಹಾಗೂ ಶ್ರೀಲಂಕಾ ತೀರದ ಕಡೆಗೆ ಚಲಿಸುವ ಸಾಧ್ಯತೆ ದಟ್ಟವಾಗಿದೆ. ಚಂಡಮಾರುತ ಚಲನೆ ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ಅದರ ಪಕ್ಕದಲ್ಲೇ ಇದೆ. ಇದರ … Continued

ಪ್ರತಿಭಟನೆಗೆ ಬಗ್ಗಿದ ಸರ್ಕಾರ ; ರೈತರಿಗೆ ನೀಡಿದ್ದ ವಕ್ಫ್​ ನೋಟಿಸ್ ವಾಪಸ್ ; ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ವಕ್ಫ್‌ ಆಸ್ತಿ ವಿವಾದ(Waqf Board land row) ರಾಜ್ಯದಲ್ಲಿ ಭುಗಿಲೆದ್ದ ನಂತರ ರಾಜ್ಯ ಸರ್ಕಾರ ರೈತರಿಗೆ ನೀಡಿದ್ದ ನೋಟಿಸ್ ಅನ್ನು ಅಧಿಕೃತವಾಗಿ ವಾಪಸ್ ಪಡೆದುಕೊಂಡಿದೆ. ಈ ಸಂಬಂಧ ಅಧಿಕೃತ ಆದೇಶ ಹೊರಬಿದ್ದಿದೆ. ಆರಂಭದಲ್ಲಿ ರೈತರ ಜಮೀನಿನಿಂದ ಆರಂಭವಾದ ಈ ವಕ್ಫ್ ಆಸ್ತಿ ವಿವಾದ ಬಳಿಕ ಮಠಕ್ಕೆ ಹಾಗೂ ಹಿಂದೂ ದೇವಾಲಯಗಳಿಗೂ ನೋಟಿಸ್ ನೀಡುವ ಮೂಲಕ … Continued

ರೂಪಾ ವಿರುದ್ಧದ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಒಪ್ಪಲ್ಲ ; ಸುಪ್ರೀಂ ಕೋರ್ಟ್‌ಗೆ ತಿಳಿಸಿದ ರೋಹಿಣಿ ಸಿಂಧೂರಿ

ನವದೆಹಲಿ: ಕರ್ನಾಟಕದ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ವಿರುದ್ಧ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿರುವ ಮನವಿ ಹಿಂಪಡೆಯುವುದಕ್ಕೆ ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ. ಪ್ರಕರಣ ಇತ್ಯರ್ಥಗೊಳಿಸಲು ಎರಡೂ ಕಡೆಯವರಿಗೆ ಒಮ್ಮತಕ್ಕೆ ಬರಲು ಸಾಧ್ಯವಾಗುತ್ತಿಲ್ಲ ಮತ್ತು ಪ್ರಕರಣದ ವಿಚಾರಣಾ ಪ್ರಕ್ರಿಯೆಗೆ ಮುಂದಾಗುವುದಾಗಿ … Continued

ಸರ್ಕಾರಿ ಕಚೇರಿ, ಆವರಣಗಳಲ್ಲಿ ಧೂಮಪಾನ, ತಂಬಾಕು ಸೇವನೆ ನಿಷೇಧ

 ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿ ಆವರಣಗಳಲ್ಲಿ ಧೂಮಪಾನ ಇತರೆ ತಂಬಾಕು ಉತ್ಪನ್ನಗಳ ಸೇವನೆ ನಿಷೇಧಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ. ಧೂಮಪಾನ ಹಾಗೂ ತಂಬಾಕಿನ ಇತರ ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ … Continued

ವಕ್ಫ್ ಭೂ ವಿವಾದ | ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಕಳವಳಕಾರಿ ; ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್

ಹುಬ್ಬಳ್ಳಿ: ಕರ್ನಾಟಕದಲ್ಲಿ ಧಾರ್ಮಿಕ ಸಂಸ್ಥೆಗಳು ಸೇರಿದಂತೆ ವಿವಿಧ ಆಸ್ತಿಗಳ ಮಾಲೀಕತ್ವವನ್ನು ವಕ್ಫ್ ಮಂಡಳಿಗೆ ಸೇರಿದ್ದು ಎಂದು ಹೇಳುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಮತ್ತು ಈ ವಿಷಯವನ್ನು ಜೆಪಿಸಿ ಮುಂದೆ ಇಡಲಾಗುವುದು ಎಂದು ಸಂಸದ ಮತ್ತು ವಕ್ಫ್ (ತಿದ್ದುಪಡಿ) ಮಸೂದೆ 2024ರ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ ಹೇಳಿದ್ದಾರೆ. ಗುರುವಾರ (ನವೆಂಬರ್ 7) ಹುಬ್ಬಳ್ಳಿಯಲ್ಲಿ ರೈತರು … Continued

ಹುಬ್ಬಳ್ಳಿ | ವಕ್ಫ್‌ ಆಸ್ತಿ ವಿವಾದ : ಅಹವಾಲು ಸ್ವೀಕರಿಸಿದ ಜಂಟಿ ಸಂಸದೀಯ ಸಮಿತಿ

ಹುಬ್ಬಳ್ಳಿ: ನಗರಕ್ಕೆ ಆಗಮಿಸಿರುವ ಸಂಸದ ಜಗದಾಂಬಿಕಾ ಪಾಲ ಅವರ ಅಧ್ಯಕ್ಷತೆಯ ವಕ್ಫ್‌ ಕಾಯ್ದೆ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಯು ವಕ್ಫ್ ನೋಟಿಸ್‌ಗೆ ಸಂಬಂಧಿಸಿದಂತೆ 75ಕ್ಕೂ ಹೆಚ್ಚು ಅಹವಾಲುಗಳು ಸಲ್ಲಿಕೆಯಾಯಿತು. ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಒಂದು ಗಂಟೆಗೂ ಹೆಚ್ಚು ಕಾಲ ಅಹವಾಲು ಸಭೆ ನಡೆದಿದ್ದು, ರೈತರು, ಜನಸಾಮಾನ್ಯರು, ವಿವಿಧ ಸಂಘಟನೆಗಳು ಹಾಗೂ ಬಿಜೆಪಿ ಶಾಸಕರು … Continued

ಮುಡಾ ಹಗರಣ : ಸತತ ಎರಡು ಗಂಟೆಗಳ ಕಾಲ ಸಿಎಂ ಸಿದ್ದರಾಮಯ್ಯ ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು, ಬುಧವಾರ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು. ಲೋಕಾಯುಕ್ತ ಪೊಲೀಸರು ಸತತ 2 ತಾಸುಗಳ ಕಾಲ ಸಿದ್ದರಾಮಯ್ಯ ಅವರನ್ನು ವಿಚಾರಣೆ ನಡೆಸಿದ್ದು, ಅವರಿಗೆ ಸುಮಾರು 40 ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಯಿತು ಎಂದು ಹೇಳಲಾಗಿದೆ. ಸಿದ್ದರಾಮಯ್ಯ ಅವರು ಲೋಕಾಯುಕ್ತ ತನಿಖೆ ಎದುರಿಸುತ್ತಿರುವ ಕರ್ನಾಟಕದ … Continued

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಸೃಷ್ಟಿ ; ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು : ಕೇರಳದ ದಕ್ಷಿಣ ಕರಾವಳಿ ಹಾಗೂ ಶ್ರೀಲಂಕಾದಿಂದ ದೂರದಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಸೃಷ್ಟಿಯಾಗಿದೆ. ಹೀಗಾಗಿ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಚಂಡಮಾರುತದ ಪರಿಚಲನೆಯ ಪ್ರಭಾವದಿಂದ ಕರ್ನಾಟಕದಲ್ಲಿ ನವೆಂಬರ್ 9 ರ ನಂತರ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ನವೆಂಬರ್ 9 ರ ನಂತರ … Continued