ಪ್ರತಿ ತಾಲೂಕಿನಲ್ಲಿ ವಿವಿಧೋದ್ದೇಶಗಳ ಮಹಿಳಾ ಸಹಕಾರಿ ಸಂಘಗಳು ಆರಂಭ, ಸರ್ಕಾರದಿಂದಲೇ ಶೇ.90 ರಷ್ಟು ಷೇರು ಬಂಡವಾಳ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ವಿವಿಧೋದ್ದೇಶಗಳ ಮಹಿಳಾ ಸಹಕಾರಿ ಸಂಘಗಳನ್ನು ಸರ್ಕಾರದ ಶೇ. 90 ರಷ್ಟು ಷೇರು ಬಂಡವಾಳದೊಂದಿಗೆ ಪ್ರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು, ಭಾನುವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಯಮಿತ, ಬೆಂಗಳೂರು – ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಲ ನಿಯಮಿತ, ಬೆಂಗಳೂರು ಮತ್ತು ಸಹಕಾರ ಇಲಾಖೆ … Continued

ಹಿಜಾಬ್ ಕಾರಣಕ್ಕೆ ಪರೀಕ್ಷೆಗೆ ಗೈರಾದರೆ ಮರು ಪರೀಕ್ಷೆಗೆ ಅವಕಾಶವಿಲ್ಲ: ಸಚಿವ ಮಾಧುಸ್ವಾಮಿ

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯದಿದ್ದರೆ ಅವರಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಸಚಿವ ಜೆ. ಮಾಧುಸ್ವಾಮಿ ಹೇಳಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ರಘುಪತಿ ಭಟ್, ಹಿಜಾಬ್ ಸಂಘರ್ಷದ ವೇಳೆ ಪರೀಕ್ಷೆಯಿಂದ ವಂಚಿತರಾದವರಿಗೆ ಮತ್ತೊಮ್ಮೆ ಪರೀಕ್ಷೆಗೆ ಅವಕಾಶ ಕೊಡಬೇಕು. ಅನಗತ್ಯ ವಿವಾದ ಸೃಷ್ಟಿಸುವವರ ವಿರುದ್ಧ … Continued

ಕರ್ನಾಟಕದ 16 ಜಿಲ್ಲೆಗಳಲ್ಲಿ‌ ದೈನಂದಿನ ಕೊರೊನಾ ಸೋಂಕು ಶೂನ್ಯ..!

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಇಳಿಕೆಯಾಗುತ್ತಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 106 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇಂದು 4 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,420 ಕ್ಕೆ ಇಳಿಕೆಯಾಗಿದೆ. ಅವಧಿಯಲ್ಲಿ 337 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ಸೋಂಕಿನಿಂದ ಮೃತಪಟ್ಟವರ ಪ್ರತಿಶತ ಸಂಖ್ಯೆ ಶೇ3.77 ರಷ್ಟು ಇದೆ. ಬಾಗಲಕೋಟೆ, … Continued

ರಾಜ್ಯದಲ್ಲಿ ಅವಧಿಗೂ ಮುನ್ನ ಚುನಾವಣೆ ತಳ್ಳಿಹಾಕಿದ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ ನಡೆಸುವ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದು, ಅವಧಿಗೂ ಮೊದಲೇ ಚುನಾವಣೆ ನಡೆಯಲಿದೆ ಎಂಬ ವರದಿಗಳನ್ನು ತಳ್ಳಿ ಹಾಕಿದ್ದಾರೆ. ಬೆಂಗಳೂರಿನ ಆರ್‌ಟಿ ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಧಿಪೂರ್ವ ವಿಧಾನಸಭೆ ಚುನಾವಣೆ ನಡೆಸುವ ಬಗ್ಗೆ ಪಕ್ಷದಲ್ಲಿ ಯಾವುದೇ ಹಂತದಲ್ಲೂ ಚರ್ಚೆಗಳಾಗಿಲ್ಲ. … Continued

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಅರ್ಜಿ ಶುಲ್ಕ ಹೆಚ್ಚಳ

ಬೆಂಗಳೂರು: ಮೇ ತಿಂಗಳಲ್ಲಿ 15,000 ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಇಟಿ ಪರೀಕ್ಷೆ ನಡೆಸಲು ಸಂಬಂಧಪಟ್ಟ ಅಧಿಕಾರಿಗಳು ಗ್ರೀನ್‌ ಸಿಗ್ನಲ್‌ ನೀಡಿದ್ದು, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8ನೇ ತರಗತಿ) ನೇಮಕಾತಿ ಪರೀಕ್ಷೆಗೆ ಅರ್ಜಿ ಶುಲ್ಕ ದರವನ್ನು ಶೇ. 25ರಷ್ಟು ಹೆಚ್ಚಳ ಮಾಡಲಾಗಿದೆ. ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಒಂದು ಹುದ್ದೆಗೆ 625 … Continued

ಗೃಹ ರಕ್ಷಕ ಸ್ವಯಂಸೇವಕರ ಭತ್ಯೆ ಹೆಚ್ಚಿಸಿದ ಸರ್ಕಾರ

ಬೆಂಗಳೂರು : ರಾಜ್ಯದಲ್ಲಿ ಪೊಲೀಸ್ ಇಲಾಖೆ ಹೊರತುಪಡಿಸಿ ಕಾರ್ಯ ನಿರ್ವಹಿಸುತ್ತಿರುವ ಸುಮಾರು 3025 ಗೃಹ ರಕ್ಷಕ ಸ್ವಯಂಸೇವಕರ ಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ನಿರ್ಧಾರದಿಂದ ರಾಜ್ಯದ ವಿವಿಧ ಇಲಾಖೆಯಲ್ಲಿ ಗೃಹ ರಕ್ಷಕ ಸ್ವಯಂಸೇವಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರ ಬಹಳ ದಿನಗಳ ಬೇಡಿಕೆ ಈಡೆರಿಸಿದಂತಾಗಿದೆ ಎಂದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು … Continued

ಶಿಕ್ಷಕರಾಗುವವರಿಗೆ ಗುಡ್‌ ನ್ಯೂಸ್‌…ಇನ್ಮುಂದೆ ವರ್ಷದಲ್ಲಿ ಎರಡು ಬಾರಿ ಟಿಇಟಿ ಪರೀಕ್ಷೆ

ಬೆಂಗಳೂರು: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವರ್ಷಕ್ಕೆ 2 ಬಾರಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೆಜ್ಜೆ ಇಟ್ಟಿದೆ. ಈ ಕುರಿತು ಶಿಕ್ಷಣ ಇಲಾಖೆ ಪ್ರತಿ ವರ್ಷ 2 ಬಾರಿ ಶಿಕ್ಷಕರ ಅರ್ಹಾ ಪರೀಕ್ಷೆ (ಟಿಇಟಿ) ಪರೀಕ್ಷೆ ನಡೆಸಲು ಸೂಚಿಸಿದೆ. ಈ ಕುರಿತು ಪ್ರಾಥಮಿ ಶಿಕ್ಷಣ ಇಲಾಖೆಯ ಸರ್ಕಾರದ … Continued

ಕರ್ನಾಟಕದಲ್ಲಿ ಭಾನುವಾರ ಹೊಸದಾಗಿ 229 ಜನರಿಗೆ ಕೊರೊನಾ ಸೋಂಕು ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಭಾನುವಾರ ಹೊಸದಾಗಿ 229 ಕೊರೊನಾ ಸೋಂಕು ದಾಖಲಾಗಿದೆ. ಹಾಗೂ ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇವೇಳೆ 264 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈಗ ಸಕ್ರಿಯ ಪ್ರಕರಣಗಳ ಸಂಖ್ಯೆ 3,248ಕ್ಕೆ ಇಳಿಕೆಯಾಗಿದೆ. ರಾಜ್ಯದ ಪಾಸಿಟಿವಿಟಿ ರೇಟ್ 0.47%ಕ್ಕೆ ಮತ್ತು ಮರಣ ಪ್ರಮಾಣ 1.31%ಗೆ ಇಳಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಹೊಸದಾಗಿ … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು, ಸಕ್ರಿಯ ಪ್ರಕರಣಗಳು ಇಳಿಕೆ

ಬೆಂಗಳೂರು: ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಹಾಗೂ ಸಕ್ರಿಯ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದೆ. ರಾಜ್ಯದಲ್ಲಿ ಇಂದು, ಶನಿವಾರ ಹೊಸದಾಗಿ 278 ಸೋಂಕು ದಾಖಲಾಗಿದ್ದು, ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 458 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 3,286ಕ್ಕೆ ಇಳಿಕೆಯಾಗಿದೆ ರಾಜ್ಯದ ಸಕಾರಾತ್ಮಕತೆ ದರ 0.53% ಮತ್ತು ಮರಣ … Continued

ಕರ್ನಾಟಕದಲ್ಲಿ ಗುರುವಾರ ಹೊಸದಾಗಿ 382 ಕೊರೊನಾ ಸೋಂಕು ದಾಖಲು, 10 ಮಂದಿ ಸಾವು

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಗುರುವಾರ ಹೊಸದಾಗಿ 382 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದೇವೇಳೆ 689 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು, ಗುರುವಾರ ಕೊರೊನಾ ಸೋಂಕಿನಿಂದ 10 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ರಾಜ್ಯದಲ್ಲಿ 3,890 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ … Continued