ಕರ್ನಾಟಕದಲ್ಲಿ ನಾಲ್ಕೈದು ದಿನ ವ್ಯಾಪಕ ಮಳೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 03 ರಿಂದ ಅಕ್ಟೋಬರ್ 11 ರವರೆಗೆ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಅಕ್ಟೋಬರ್ 7 ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು … Continued

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

ಬೆಂಗಳೂರು : ಜೆಡಿಎಸ್ ನಾಯಕ ಮತ್ತು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಮತ್ತು ಪರಿಷತ್ ಸದಸ್ಯ ರಮೇಶ್ ಗೌಡ ವಿರುದ್ಧ ವಿಜಯ ಟಾಟಾ ಅವರು ಸುಲಿಗೆ ಮತ್ತು ಜೀವ ಬೆದರಿಕೆ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ದೂರಿನಲ್ಲಿ ಭದ್ರತೆಯನ್ನೂ ಕೋರಿದ್ದಾರೆ. ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಜಯ ಟಾಟಾ ಅವರು … Continued

ವಿಧಾನ ಪರಿಷತ್ ಉಪಚುನಾವಣೆ :ಕಾಂಗ್ರೆಸ್ ಅ‌ಭ್ಯರ್ಥಿ ಘೋಷಣೆ

ಉಡುಪಿ/ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದಿಂದ ವಿಧಾನಪರಿಷತ್ತಿಗೆ ನಡೆಯಲಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕೊನೆಗೂ ತನ್ನ ಅಭ್ಯರ್ಥಿಯ ಹೆಸರು ಘೋಷಣೆ ಮಾಡಿದೆ. ಉಡುಪಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜು ಪೂಜಾರಿ ಅವರ ಹೆಸರನ್ನು ಬುಧವಾರದಂದು ಘೋಷಣೆ ಮಾಡಿದೆ. ಪ್ರಮುಖ ಎದುರಾಳಿಯಾಗಿರುವ ಬಿಜೆಪಿ ಈಗಾಗಲೇ ಕಿಶೋರ್ ಕುಮಾರ್ ಅವರ ಹೆಸರನ್ನು ಪ್ರಕಟಿಸಿದೆ.1994ರಲ್ಲಿ ಗ್ರಾಮ ಪಂಚಾಯತ್ … Continued

ದುರ್ಬಳಕೆ ಕಡಿವಾಣಕ್ಕೆ ಬಿಪಿಎಲ್ ಪಡಿತರ ಕಾರ್ಡ್‌ ಮಾನದಂಡ ಪರಿಶೀಲನೆಗೆ ಸಮಿತಿ ರಚನೆ : ದೇಶಪಾಂಡೆ

ಬೆಂಗಳೂರು: ಬಡತನದ ರೇಖೆಗಿಂತ ಕೆಳಗೆ (ಬಿಪಿಎಲ್) ಇರುವ ಕುಟುಂಬಗಳಿಗೆ ಪಡಿತರ ಚೀಟಿ ವಿತರಣಾ ಮಾನದಂಡ ಪರಿಶೀಲನೆಗೆ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಉಪಸಮಿತಿ ರಚಿಸಲಾಗಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್ ಪಡಿತರ ಚೀಟಿ ದುರ್ಬಳಕೆಗೆ ಕಡಿವಾಣ ಹಾಕುವುದು, ಸರ್ಕಾರದ ಬೊಕಸಕ್ಕೆ ಅನಗತ್ಯ ವೆಚ್ಚ … Continued

ಚುನಾವಣಾ ಬಾಂಡ್ ಪ್ರಕರಣ : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಇತರರ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಬೆಂಗಳೂರು : ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯ ಘಟಕಗಳು ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದ ಮೇಲೆ ಬೆಂಗಳೂರಿನ ತಿಲಕ್‌ ನಗರ ಠಾಣೆಯಲ್ಲಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ಮತ್ತಿತರರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ಕುರಿತಾದ ತನಿಖೆಗೆ ಹೈಕೋರ್ಟ್‌ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಿಜೆಪಿ ಮಾಜಿ … Continued

ಮುಡಾ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್‌ : 14 ನಿವೇಶನ ಹಿಂದಿರುಗಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ ; ಮುಡಾ ಆಯುಕ್ತರಿಗೆ ಪತ್ರ….!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎನ್. ಪಾರ್ವತಿ ಅವರು ತಮ್ಮ ಕುಟುಂಬದ ವಿರುದ್ಧದ ಪ್ರಕರಣಗಳ ಕೇಂದ್ರ ಬಿಂದುವಾಗಿರುವ ಭೂಮಿಯನ್ನು ಹಿಂದಿರುಗಿಸುವುದಾಗಿ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ)ಕ್ಕೆ ಪತ್ರ ಬರೆದಿದ್ದಾರೆ. ತನ್ನ ಆತ್ಮಸಾಕ್ಷಿಯಂತೆ ನಡೆಯುತ್ತಿದ್ದೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಈ ಪ್ಲಾಟ್‌ಗಳನ್ನು ಹಿಂದಿರುಗಿಸುವುದರ ಜೊತೆಗೆ, ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆಗೆ ನಾನು … Continued

ಯಕ್ಷಗಾನಕ್ಕೆ ವಿಶ್ವಸಂಸ್ಥೆ ಗೌರವ : ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆಗೆ ಯುನೆಸ್ಕೊ (UNESCO) ಮಾನ್ಯತೆ

ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗುಣವಂತೆಯ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಸಂಸ್ಥೆಗೆ ವಿಶ್ವಸಂಸ್ಥೆಯ ಮಾನ್ಯತೆ, ಗೌರವ ದೊರೆತಿದೆ ಎಂದು ಮಂಡಳಿಯ ನಿರ್ದೇಶಕ ಕೆರೆಮನೆ ಶಿವಾನಂದ ಹೆಗಡೆ ತಿಳಿಸಿದ್ದಾರೆ. ಈ ಕುರಿತು ಪ್ರಕಟನೆ ನೀಡಿರುವ ಅವರು, ಯುನೆಸ್ಕೊದಿಂದ ಮಾನ್ಯತೆ ಪಡೆದ ಮೊದಲ ಯಕ್ಷಗಾನ ಸಂಸ್ಥೆಯಾಗಿದೆ. ಜೂನ್ 11 ಹಾಗೂ … Continued

ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಶುರುವಾಯ್ತು ಇ.ಡಿ.ಸಂಕಷ್ಟ ;ಇಸಿಐಆರ್ ದಾಖಲು

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ (ED) ಪ್ರಕರಣ ದಾಖಲಿಸಿದೆ. ಜಾರಿ ನಿರ್ದೇಶನಾಲವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣದಡಿ ದಾಖಲಿಸಿದ್ದು, ಇದರಿಂದ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಈಗ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರಿನ ವಿಶೇಷ ನ್ಯಾಯಾಲಯದ … Continued

ಕರ್ನಾಟಕದ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದಿನ 3 ರಿಂದ 5 ದಿನಗಳ ಕಾಲ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಕ್ರಿಯವಾಗಿದ್ದು, ಸೋಮವಾರ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಈ ನಾಲ್ಕು ಜಿಲ್ಲೆಗಳಲ್ಲಿ ಗುಡುಗು ಸಹಿತ ಅತ್ಯಧಿಕ ಭಾರಿ ಮಳೆ ಸುರಿಯಲಿದ್ದು, ಆರೆಂಜ್ ಅಲರ್ಟ್ … Continued

ವೀಡಿಯೊ| ಹಿಂದಿನ ರಾಜ್ಯಪಾಲರ ಕ್ರಮ ಸಮರ್ಥಿಸಿಕೊಂಡಿದ್ದ ಸಿದ್ದರಾಮಯ್ಯನವರ ಹಳೆ ವೀಡಿಯೊ ಹಂಚಿಕೊಂಡು ಟಾಂಗ್‌ ನೀಡಿದ ಸ್ನೇಹಮಯಿ ಕೃಷ್ಣ…!

ಬೆಂಗಳೂರು : ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಕಾರ್ಯ ವೈಖರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌‍ ನಾಯಕರು ಟೀಕಿಸುತ್ತಿರುವ ಬೆನ್ನಲ್ಲೇ ಈಗ, ಸಿದ್ದರಾಮಯ್ಯ ಈ ಹಿಂದೆ ರಾಜ್ಯಪಾಲರ ಪಾತ್ರದ ಕುರಿತು ಆಡಿರುವ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ದೂರುದಾರ ಸ್ನೇಹಮಯಿ‌ ಕೃಷ್ಣ (Snehamayi Krishna) ಅವರು ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಸಿದ್ದರಾಮಯ್ಯ ಅವರ 2011ರ ವೀಡಿಯೊ … Continued