ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ ; ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಜೂನ್‌ 27 ರ ವರೆಗೂ ಹಲವು ಜಿಲ್ಲೆಗಳಿಗೆ ಭಾರೀ ಮಳೆಯಾಗಲಿರುವ ಹಿನ್ನಲೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇಂದಿನಿಂದ ಆರಂಭವಾಗಿ ಜೂನ್ 27 ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದೆ, ಆರೆಂಜ್ ಅಲರ್ಟ್ ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು … Continued

ಇಂದು 12 ಜಿಲ್ಲೆಗಳಲ್ಲಿ ಭರ್ಜರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸೋಮವಾರ (ಜೂನ್‌ 24) ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್‌ 24 ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ. ಚಿಕ್ಕಮಗಳೂರು, ಮಂಡ್ಯ, ಮೈಸೂರು, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಆರೆಂಜ್‌ … Continued

ವೀಡಿಯೊ..| ʼಪುಷ್ಪಕʼ ಸುರಕ್ಷಿತ ಲ್ಯಾಂಡಿಂಗ್‌ ಪ್ರಯೋಗ ಯಶಸ್ವಿ : ಇಸ್ರೊದ ಹ್ಯಾಟ್ರಿಕ್‌ ಸಾಧನೆ

ಚಿತ್ರದುರ್ಗ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ಇಸ್ರೋದ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನದ ಸ್ವಯಂಚಾಲಿತ ಲ್ಯಾಂಡಿಂಗ್ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದೆ. ಚಿತ್ರದುರ್ಗದಲ್ಲಿರುವ ಇಸ್ರೋದ ಏರೋನಾಟಿಕಲ್ ಪರೀಕ್ಷಾ ವಲಯದಲ್ಲಿ ಈ ಕಾರ್ಯಾಚರಣೆ ಭಾನುವಾರ ಯಶಸ್ವಿಯಾಗಿ ನಡೆದಿದ್ದು, ಈ ಕುರಿತು ಇಸ್ರೋ ಟ್ವೀಟ್‌ ಮೂಲಕ ಮಾಹಿತಿ ನೀಡಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ … Continued

ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ

ಹಾಸನ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ವಿಧಾನ ಪರಿಷತ್ ಸದಸ್ಯ ಸೂರಜ ರೇವಣ್ಣ ಅವರನ್ನು ಪೊಲೀಸರು ಭಾನುವಾರ ಬೆಳಿಗ್ಗೆ ಬಂಧಿಸಿದ್ದಾರೆ. ಶನಿವಾರ ರಾತ್ರಿ 7:30ರ ಸುಮಾರಿಗೆ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರವಾಗಿ ಹೊಳೆ ನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ನಂತರ ಕೆಲಸ ಕೇಳಿಕೊಂಡು ಹೋಗಿದ್ದ ಯುವಕನ ಮೇಲೆ … Continued

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ಭಾರೀ ಮಳೆ ಮುನ್ಸೂಚನೆ : ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 22, 23ರಂದು ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಜೂನ್ 22 ಮತ್ತು 23ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇರುವುದರಿಂದ ಎರಡು ದಿನ ರೆಡ್ … Continued

ಜಮೀನು ಒತ್ತುವರಿ ಆರೋಪ ; ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಖ್ಯಾತ ಬಾಲಿವುಡ್ ಗಾಯಕ

ಬೆಂಗಳೂರು: ಭೂಮಿ ಒತ್ತುವರಿ ಮಾಡಿದ ಆರೋಪದಡಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಅವರ ಪತಿ ವಿರುದ್ಧ ಬಾಲಿವುಡ್ ಗಾಯಕ ಲಕ್ಕಿ ಅಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಯಲಹಂಕ ನ್ಯೂಟೌನ್​ ಕೆಂಚೇನಹಳ್ಳಿ ಬಳಿ ಇರುವ ತಮ್ಮ ಜಮೀನು ಕಬಳಿಸಲು ರೋಹಿಣಿ ಸಿಂಧೂರಿ ಹಾಗು ಪತಿ ಸುಧೀರ ರೆಡ್ಡಿ ಸೇರಿದಂತೆ ಯಲಹಂಕ ಉಪವಿಭಾಗದ ಎಸಿಪಿ ಮಂಜುನಾಥ, ಸರ್ವೇಯರ್ … Continued

ಡಿಕೆ ಶಿವಕುಮಾರ ಹೇಳಿಕೆಗೆ ಖಂಡಿಸಿ ಸಿಎಂ ಸಿದ್ದರಾಮಯ್ಯಗೆ ಸಾಹಿತಿಗಳ ಪತ್ರ

ಬೆಂಗಳೂರು: ‘ಅಕಾಡೆಮಿ, ಪ್ರಾಧಿಕಾರಗಳು ಹಾಗೂ ಸಾಹಿತಿಗಳ ಕುರಿತು ಕೆಪಿಸಿಸಿ ಅಧ್ಯಕ್ಷರು ನೀಡಿದ ಹೇಳಿಕೆ ಕಾಂಗ್ರೆಸ್‌ ಪಕ್ಷದ ನಿಲುವೂ ಆಗಿದೆ. ಸಾಹಿತಿ, ಕಲಾವಿದರು, ಸಂಸ್ಕೃತಿ ಚಿಂತಕರನ್ನು ಯಾವುದೇ ಪಕ್ಷದ ಅಡಿಯಾಳುಗಳಂತೆ ಕಾಣುವುದು ಸರಿಯಾದ ನಡವಳಿಕೆಯಲ್ಲ. ಇದನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ‘ಜಾಗೃತ ನಾಗರಿಕರು-ಕರ್ನಾಟಕ’ದ ಪ್ರಮುಖರು ಹೇಳಿದ್ದು, ಸಾಹಿತಿಗಳು ಕೂಡ ರಾಜಕಾರಣಿಗಳೇ ಎಂಬ ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ … Continued

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ , ಭೂ ಕುಸಿತದ ಸಾಧ್ಯತೆ ; ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಬೆಂಗಳೂರು: ಮುಂಗಾರು ಮಳೆಯ ಆರ್ಭಟ ಶುಕ್ರವಾರ (ಜೂನ್‌ 21)ದಿಂದ ಮತ್ತೆ ಜೋರಾಗಲಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳು ಹಾಗೂ ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಿಗೆ ಒಂದು ವಾರ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಪಶ್ಚಿಮ ಘಟ್ಟದ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು, ಹಾಗೂ ಶಿವಮೊಗ್ಗ, ಮೈಸೂರು … Continued

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಪ್ರವೇಶ ಪತ್ರ ಪ್ರಕಟ: ಜೂನ್‌ 30 ರಂದು ಪರೀಕ್ಷೆ

ಬೆಂಗಳೂರು : ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಇದೇ ಜೂನ್ 30 ರಂದು ನಡೆಸಲಿರುವ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆಗೆ ನೋಂದಣಿ ಮಾಡಿರುವ ಅಭ್ಯರ್ಥಿಗಳು ಗುರುವಾರದಿಂದ (ಜೂನ್ 20) ತಮ್ಮ ಪರೀಕ್ಷೆ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು http://schooleducation.kar.nic.in  ನಲ್ಲಿ ಅಧಿಕೃತ … Continued

ವಾಹನಗಳಿಗೆ ಕಣ್ಣುಕುಕ್ಕುವ ಎಲ್‌ಇಡಿ ಲೈಟ್‌ ಹಾಕಿಸಿದ್ದೀರಾ : ಜುಲೈ 1ರಿಂದ ಬೀಳಲಿದೆ ದಂಡ…

ಬೆಂಗಳೂರು : ಕೇಂದ್ರ ಮೋಟಾರು ಕಾಯಿದೆಯ ಮಾನದಂಡದಂತೆ ವಾಹನಗಳಿಗೆ ಹೆಡ್‌ಲೈಟ್‌ ಅಳವಡಿಸಬೇಕು. ಈ ಕಾಯಿದೆ ಉಲ್ಲಂಘಿಸಿ ಹೆಚ್ಚು ಪ್ರಕಾಶಮಾನವಾದ ಅಥವಾ ಕಣ್ಣಿಗೆ ಕುಕ್ಕುವಂತಹ ಎಲ್‌ಇಡಿ ಹೆಡ್‌ಲೈಟ್‌ಗಳನ್ನು ಅಳವಡಿಸುವ ಹಾಗಿಲ್ಲ. ಈ ಬಗ್ಗೆ ಜುಲೈ 1ರಿಂದ ರಾಜ್ಯ ಪೊಲೀಸ್‌ ವಿಶೇಷ ಅಭಿಯಾನ ಕೈಗೊಳ್ಳಲಿದೆ. ವಾಹನಗಳಿಗೆ ಕಣ್ಣಿಗೆ ಕುಕ್ಕುವಂತಹ ಎಲ್ಇಡಿ ದೀಪ ಅಳವಡಿಸಿದ್ದರೆ ಅಂತಹ ವಾಹನ ಸವಾರರ ವಿರುದ್ಧ … Continued