ಅತಿಹೆಚ್ಚು ಆದಾಯ ಪಡೆದ ಮುಜರಾಯಿ ದೇವಾಲಯಗಳ ಪಟ್ಟಿ ಬಿಡುಗಡೆ ; ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ 1ನೇ ಸ್ಥಾನ : ರಾಜ್ಯದ 8 ಶ್ರೀಮಂತ ದೇವಾಲಯಗಳು..

ಬೆಂಗಳೂರು : 2023-24ರಲ್ಲಿ ಅತಿಹೆಚ್ಚು ಆದಾಯ ಕಂಡ ಮುಜರಾಯಿ ಇಲಾಖೆಯ ದೇವಾಲಯಗಳ ಮಾಹಿತಿಯನ್ನು ಇಲಾಖೆ ಆಯುಕ್ತರು ಬಿಡುಗಡೆಗೊಳಿಸಿದ್ದು, ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು ಮೊದಲನೇ ಸ್ಥಾನವನ್ನು ಉಳಿಸಿಕೊಂಡಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು 2023-24ನೇ ಆರ್ಥಿಕ ವರ್ಷದಲ್ಲಿ ₹146.01 ಕೋಟಿ ಆದಾಯ ಗಳಿಸಿದೆ ಎಂದು ಮುಜರಾಯಿ ಆಯುಕ್ತರು ತಿಳಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು ಸತತ 13ನೇ ವರ್ಷ ಆದಾಯದಲ್ಲಿ … Continued

ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ದೂರು ದಾಖಲು

ಬೆಂಗಳೂರು: ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂಬ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಸಚಿವ ದಿನೇಶ ಗುಂಡೂರಾವ್ ಕುಟುಂಬದವರನ್ನು ಅವಮಾನಿಸಿರುವ ಶಾಸಕ ಯತ್ನಾಳ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶೇಷಾದ್ರಿಪುರ ಪೊಲೀಸ್ … Continued

ಕರ್ನಾಟಕದ ಮೊದಲ ಹಂತದ ಚುನಾವಣೆ: 60 ನಾಮಪತ್ರ ತಿರಸ್ಕೃತ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಕಾರ್ಯ ಪೂರ್ಣಗೊಂಡಿದ್ದು, ಇದರಲ್ಲಿ 60 ನಾಮಪತ್ರಗಳು ತಿರಸ್ಕೃತಗೊಂಡಿವೆ. 14 ಕ್ಷೇತ್ರಗಳಲ್ಲಿ ಒಟ್ಟು 358 ಅಭ್ಯರ್ಥಿಗಳಿಂದ 492 ನಾಮಪತ್ರ ಸಲ್ಲಿಕೆಯಾಗಿದ್ದು, 13 ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಕಾರ್ಯ ಪೂರ್ಣಗೊಂಡಿದೆ. ಅವುಗಳಲ್ಲಿ 276 ಅಭ್ಯರ್ಥಿಗಳ 384 ನಾಮಪತ್ರ ಕ್ರಮಬದ್ಧವಾಗಿವೆ … Continued

ಕರ್ನಾಟಕವೂ ಸೇರಿದಂತೆ ಕೆಲವು ರಾಜ್ಯಗಳಿಗೆ 2 ದಿನ ಬಿಸಿ ಗಾಳಿ, ಕೆಲವು ಕಡೆ “ತೀವ್ರ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ನವದೆಹಲಿ: ಪೂರ್ವ ಭಾರತ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಇನ್ನೆರಡು ದಿನಗಳಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದೇ ವೇಳೆ ಭಾರತದ ಈಶಾನ್ಯ ಪ್ರದೇಶದಲ್ಲಿ ಏಪ್ರಿಲ್ 9 ರವರೆಗೆ ತೀವ್ರ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಒಡಿಶಾ, ಪಶ್ಚಿಮ ಬಂಗಾಳ, … Continued

ಏಪ್ರಿಲ್ 8ರ ಬಳಿಕ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು : ಬಿರು ಬಿಸಲು ಹಾಗೂ ತಾಪಮಾನ ಹೆಚ್ಚಳದಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಸಮಾಧಾನಕರ ಸುದ್ದಿ ನೀಡಿದೆ. ಏಪ್ರಿಲ್​ 8ರ ಬಳಿಕ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 6ರಂದು ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ … Continued

ಲೋಕಸಭೆ ಚುನಾವಣೆ : ಕರ್ನಾಟಕದಲ್ಲಿ 26 ಕೋಟಿ ರೂ. ನಗದು, 33 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಮದ್ಯ ವಶ

ಬೆಂಗಳೂರು : ಮಾರ್ಚ್ 16 ರಂದು ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಕರ್ನಾಟಕದಲ್ಲಿ 33 ಕೋಟಿ ರೂ.ಗೂ ಅಧಿಕ ಮೌಲ್ಯದ 26.68 ಕೋಟಿ ರೂಪಾಯಿ ನಗದು ಮತ್ತು ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಬುಧವಾರ ಬಹಿರಂಗಪಡಿಸಿದೆ. ಇವುಗಳಿಗೆ ಸಂಬಂಧಿಸಿದಂತೆ ಒಟ್ಟು 1,205 ಪ್ರಕರಣಗಳು ದಾಖಲಿಸಲಾಗಿದೆ ಎಂದು ಅದು ಹೇಳಿದೆ. ಕರ್ನಾಟಕದಲ್ಲಿ 28 ಕ್ಷೇತ್ರಗಳನ್ನು … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ಏಪ್ರಿಲ್ 6ರಿಂದ ಮೂರು ದಿನಗಳ ಕಾಲ ಮಳೆ ಮುನ್ಸೂಚನೆ

ಬೆಂಗಳೂರು : ಭಾರತೀಯ ಹವಾಮಾನ ಇಲಾಖೆ (IMD) ಏಪ್ರಿಲ್ 6ರಿಂದ 8 ರವರೆಗೆ ಹಲವಾರು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಬೀದರ, ಕಲಬುರ್ಗಿ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಏಪ್ರಿಲ್ 6 ರಂದು ಅಲ್ಪ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ. ಏಪ್ರಿಲ್ 7 ರಂದು ದಕ್ಷಿಣ ಕನ್ನಡ, ಬೀದರ, ಕಲಬುರ್ಗಿ, ಚಿಕ್ಕಮಗಳೂರು, … Continued

ಏಪ್ರಿಲ್‌ ಎರಡನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ..?

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಬೇಗನೆ ಪ್ರಕಟವಾಗುವ ಸಾಧ್ಯತೆ ಇದೆ. ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮುಕ್ತಾಯ ಹಂತಕ್ಕೆ ತಲುಪಿದ್ದು, ಇದೇ ಏಪ್ರಿಲ್‌ 10ಕ್ಕೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಯಾರಿ ನಡೆಸಿದೆ ಎಂದು ಹೇಳಲಾಗಿದೆ. ರಾಜ್ಯದ 1,124 ಕೇಂದ್ರಗಳಲ್ಲಿ ಮಾರ್ಚ್‌ 1ರಿಂದ … Continued

ಕೆಪಿಸಿಸಿ ಪುನರ್ರಚನೆ : 7 ಜಿಲ್ಲಾಧ್ಯಕ್ಷರು, 43 ರಾಜ್ಯ ಉಪಾಧ್ಯಕ್ಷರು, 138 ಪ್ರಧಾನ ಕಾರ್ಯದರ್ಶಿಗಳ ನೇಮಕ

ಬೆಂಗಳೂರು : ಲೋಕಸಭಾ ಚುನಾವಣೆ ವೇಳೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (KPCC) ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. 43 ರಾಜ್ಯ ಉಪಾಧ್ಯಕ್ಷರು ಮತ್ತು 138 ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಜೊತೆಗೆ ಏಳು ಜಿಲ್ಲೆಗಳ ಜಿಲ್ಲಾಧ್ಯಕ್ಷರ ನೇಮಕವನ್ನೂ ಮಾಡಲಾಗಿದೆ. ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥರಾಗಿ ರಮೇಶ ಬಾಬು ಅವರನ್ನು ನೇಮಕ ಮಾಡಲಾಗಿದ್ದು, ವಿನಯ … Continued

ಏಪ್ರಿಲ್‌-ಜೂನ್‌ ಅವಧಿಯಲ್ಲಿ ದೇಶದಲ್ಲಿ ಭಾರೀ ಬಿಸಿಲು ; ಕರ್ನಾಟಕದ ಈ ಭಾಗಗಳಲ್ಲಿ ಬಿಸಿಗಾಳಿಯ ಕೆಟ್ಟ ಪರಿಣಾಮ ; ಹವಾಮಾನ ಇಲಾಖೆ

ನವದೆಹಲಿ : ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ಮುಂದಿನ ಹಲವು ದಿನಗಳಲ್ಲಿ ಬಿಸಿಲಿನ ಧಗೆ ಏರಲಿದೆ ಎಂದಿರುವ ಹವಾಮಾನ ಇಲಾಖೆ ಉಷ್ಣ ಮಾರುತದ ಎಚ್ಚರಿಕೆ ನೀಡಿದೆ. ಏಪ್ರಿಲ್‌ ಮೊದಲ ವಾರದಿಂದಲೇ ದೇಶದ ದಕ್ಷಿಣ, ಉತ್ತರ, ಕೇಂದ್ರ ಭಾಗಗಳಲ್ಲಿ ಉಷ್ಣ ಗಾಳಿ ಹೆಚ್ಚಲಿದೆ. ಏಪ್ರಿಲ್‌-ಜೂನ್‌ ತಿಂಗಳಲ್ಲಿ ಸಾಮನ್ಯಕ್ಕಿಂತ ಹೆಚ್ಚಿನ ತಾಪಮಾನ ಕಂಡು ಬರಲಿದೆ. ಕರ್ನಾಟಕ, ಆಂಧ್ರಪ್ರದೇಶ, ಗುಜರಾತ್‌, … Continued