ರಾಜ್ಯದಲ್ಲಿ ವಿದ್ಯುತ್​ ದರ ಇಳಿಕೆ : ಇಂದಿನಿಂದಲೇ ಜಾರಿ

ಬೆಂಗಳೂರು: ಲೋಕಸಭೆ ಚುನಾವಣೆ ಸಮಯದಲ್ಲಿ ಕರ್ನಾಟಕ ರಾಜ್ಯ ವಿದ್ಯುತ್​ಚ್ಛಕ್ತಿ ನಿಯಂತ್ರಣ ಆಯೋಗ(KERC)ಎಲ್ಲ ವರ್ಗದ ವಿದ್ಯುತ್​ ಬಳಕೆದಾರರಿಗೆ ಗುಡ್​ ನ್ಯೂಸ್​ ನೀಡಿದೆ. ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ (KERC) ಫೆಬ್ರವರಿಯಲ್ಲಿ ಪ್ರಕಟಿಸಿದ ವಿದ್ಯುತ್‌ ದರ ಪರಿಷ್ಕರಣೆ ಆದೇಶ ಇಂದಿನಿಂದ ಜಾರಿಯಾಗಲಿದೆ. ಅಲ್ಲದೆ, ಕೈಗಾರಿಕೆ ಮತ್ತು ವಾಣಿಜ್ಯೋದ್ಯಮ ಬಳಕೆದಾರ ವರ್ಗದವರಿಗೆ ನಿಗದಿತ ಶುಲ್ಕದಲ್ಲೂ ಇಳಿಕೆಯಾಗಿದೆ. ಆದೇಶದಂತೆ 100 ಯುನಿಟ್​ಗಿಂತ … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ (Congress)ನಿಂದ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಲಾಗಿದೆ. ರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್‌ ಒಟ್ಟು 40 ಸ್ಟಾರ್‌ ಪ್ರಚಾರಕರ ಹೆಸರನ್ನು ಘೋಷಣೆ ಮಾಡಿದೆ. ಪಟ್ಟಿಯಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಸಹ ಸೇರಿದ್ದಾರೆ. … Continued

ಲೋಕಸಭಾ ಚುನಾವಣೆ : ಬಿಜೆಪಿ ಸ್ಟಾರ್​ ಪ್ರಚಾರಕರ ಪಟ್ಟಿ ಪ್ರಕಟ

ಬೆಂಗಳೂರು : ಲೋಕಸಭಾ ಚುನಾವಣೆಗಾಗಿ ಭಾರೀ ಸಿದ್ಧತೆ ನಡೆಸಿರುವ ಬಿಜೆಪಿ ಕರ್ನಾಟಕದಲ್ಲಿ ಜೆಡಿಎಸ್‌ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಇಟ್ಟುಕೊಂಡಿದೆ. ಅದು ತನ್ನ ಸ್ಟಾರ್‌ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. 40 ಜನ ಸ್ಟಾರ್‌ ಪ್ರಚಾರಕರ ಪಟ್ಟಿಯು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ … Continued

ಕೋಲಾರ: ಇಬ್ಬರ ಜಗಳದಲ್ಲಿ ಮತ್ತೊಬ್ಬರಿಗೆ ಮಣೆ ಹಾಕಿದ ಕಾಂಗ್ರೆಸ್‌ ; ಮಾಜಿ ಮೇಯರ್​ ಪುತ್ರ ಗೌತಮಗೆ ಟಿಕೆಟ್‌

ಕೋಲಾರ : ಕಗ್ಗಂಟಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ಕಾಂಗ್ರೆಸ್​​ ಕೊನೆಗೂ ಘೋಷಣೆ ಮಾಡಿದೆ. ಪರಿಶಿಷ್ಟ ಜಾತಿಯ ಎಡಗೈ ಸಮುದಾಯದ ಮಾಜಿ ಮೇಯರ್​ ವಿಜಯಕುಮಾರ​ ಅವರ ಪುತ್ರ ಕೆ.ವಿ. ಗೌತಮ​ (K Goudtam) ಅವರಿಗೆ ನೀಡಿದೆ. ಈ ಮೂಲಕ ಕಾಂಗ್ರೆಸ್​ ಹೈಕಮಾಂಡ್​ ಮಾಜಿ ಸಭಾಧ್ಯಕ್ಷ ರಮೇಶಕುಮಾರ ಹಾಗೂ ಸಚಿವ ಕೆ.ಎಚ್​ ಮುನಿಯಪ್ಪ ಈ ನಾಯಕರ … Continued

ಕರ್ನಾಟಕದಲ್ಲಿ ಬಿಜೆಪಿಗೆ ಆಘಾತ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ಸಿಗೆ ಸೇರ್ಪಡೆಯಾದ ತೇಜಸ್ವಿನಿ ಗೌಡ

ಬೆಂಗಳೂರು: ರಾಜ್ಯ ಬಿಜೆಪಿಗೆ ಹಿನ್ನಡೆಯಲ್ಲಿ ಮೊನ್ನೆಯಷ್ಟೇ ಬಿಜೆಪಿಯ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಾಗೂ ಪಕ್ಷದ ವಕ್ತಾರೆಯಾಗಿದ್ದ ತೇಜಸ್ವಿನಿ ಗೌಡ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್‌ ಸೇರ್ಪಡೆಯಾದರು. ತೇಜಸ್ವಿನಿ ಗೌಡ ಬಿಜೆಪಿಯಿಂದ ಬೆಂಗಳೂರು ಗ್ರಾಮಾಂತರ … Continued

ಕಾಂಬೋಡಿಯಾದಲ್ಲಿ ಸೈಬರ್‌ ವಂಚಕರ ಜಾಲದಲ್ಲಿ ಸಿಕ್ಕಿಬಿದ್ದಿರುವ 5000ಕ್ಕೂ ಹೆಚ್ಚು ಭಾರತೀಯರು…! ಸೈಬರ್‌ ವಂಚನೆ ಕೃತ್ಯಗಳಿಗೆ ಇವರ ಬಳಕೆ…!!

ನವದೆಹಲಿ: 5,000 ಕ್ಕೂ ಹೆಚ್ಚು ಭಾರತೀಯರು ಕಾಂಬೋಡಿಯಾದಲ್ಲಿ ಸಿಕ್ಕಿಬಿದ್ದಿದ್ದಾರೆ. ಅಲ್ಲಿ ಅವರನ್ನು ಅವರ ಇಚ್ಛೆಗೆ ವಿರುದ್ಧವಾಗಿ ಒತ್ತೆಯಾಳಾಗಿ ಬಂಧನದಲ್ಲಿ ಇಡಲಾಗಿದೆ ಮತ್ತು ಅವರನ್ನು ಸೈಬರ್ ವಂಚನೆ ಕೃತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಈ ವಂಚಕರು ಕಳೆದ ಆರು ತಿಂಗಳಲ್ಲಿ ಭಾರತದಲ್ಲಿ ಕನಿಷ್ಠ 500 ಕೋಟಿ ರೂಪಾಯಿಗಳನ್ನು ವಂಚಿಸಿದ್ದಾರೆ ಎಂದು ಸರ್ಕಾರ ಅಂದಾಜಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ … Continued

ಲೋಕಸಭೆ ಚುನಾವಣೆ : ಕರ್ನಾಟಕದ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ; ಒಂದು ಕ್ಷೇತ್ರ ಇನ್ನೂ ಕಗ್ಗಂಟು

ಬೆಂಗಳೂರು : ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್‌ ಕರ್ನಾಟಕದ ಕೋಲಾರ ಹೊರತು ಪಡಿಸಿ ಮೂರು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಾಕಿ ಉಳಿದಿದ್ದ ನಾಲ್ಕು ಕ್ಷೇತ್ರಗಳ ಪೈಕಿ ಚಾಮರಾಜನಗರ, ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ್ದು, ಕೋಲಾರ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿಲ್ಲ. ಬಳ್ಳಾರಿ ಲೋಕಸಭಾ ಟಿಕೆಟ್ ಅನ್ನು ಶಾಸಕ ಇ ತುಕರಾಂ, … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ: ಇಬ್ಬರು ಆರೋಪಿಗಳ ಮಾಹಿತಿ ನೀಡಿದವರಿಗೆ ತಲಾ ₹10 ಲಕ್ಷ ಬಹುಮಾನ ಘೋಚಿಸಿದ ಎನ್‌ ಐ ಎ

ಬೆಂಗಳೂರು: ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಸುಧಾರಿತ ಸ್ಫೋಟಕ (ಐಇಡಿ) ಅಳವಡಿಸಿದ ಶಂಕಿತ ಮುಸಾವಿರ್ ಹುಸೇನ್ ಶಾಜಿಬ್ ಮತ್ತು ಪ್ರಕರಣದಲ್ಲಿ ಸಂಚು ರೂಪಿಸಿದ ಅಬ್ದುಲ್ ಮಥೀನ್ ಅಹ್ಮದ್ ತಾಹಾ ಎಂಬ ಶಂಕಿತ ಆರೋಪಿಗಳ ಮಾಹಿತಿಗಾಗಿ ಎನ್‌ಐಎ ಬಹುಮಾನ ಘೋಷಿಸಿದೆ. ಬೆಂಗಳೂರು ಕೆಫೆ ಸ್ಫೋಟ ಪ್ರಕರಣದ ಇಬ್ಬರು ಶಂಕಿತರ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ … Continued

ಮಾರ್ಚ್‌ 30ರಂದು ಪ್ರಥಮ ಪಿಯುಸಿ ಫಲಿತಾಂಶ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯಾಂಕನ ಮಂಡಳಿ (KSEAB)ಯು 2023-24 ನೇ ಸಾಲಿನ ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶವು ಮಾರ್ಚ್‌ 30 (ಶನಿವಾರ)ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಮಂಡಳಿಯ ವೆಬ್‌ಸೈಟ್‌ karresults.nic.in ನಲ್ಲಿ ಫಲಿತಾಂಶವನ್ನು ಬೆಳಿಗ್ಗೆ 9 ರಿಂದ 11ರೊಳಗೆ ಪ್ರಕಟವಾಗಲಿದೆ ಎಂದು ತಿಳಿಸಲಾಗಿದೆ. ಫೆ.12 ರಿಂದ 27ರ ವರೆಗೆ ಪಿಯುಸಿ ಪರೀಕ್ಷೆ ನಡೆದಿತ್ತು. … Continued

ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಅಧಿಕೃತ ಪ್ರಕ್ರಿಯೆ ಗುರುವಾರದಿಂದ ಆರಂಭವಾಗುತ್ತಿದೆ. ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಏ.26ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ (ಮಾರ್ಚ್‌ ೨೮) ಆರಂಭವಾಗಲಿದೆ. ಏಪ್ರಿಲ್‌ 4 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಏ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, … Continued