ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ : ಬಾಂಬ್‌ ಇಟ್ಟಿದ್ದ ಪ್ರಮುಖ ಆರೋಪಿಯ ಗುರುತು ಪತ್ತೆ ಮಾಡಿದ ಎನ್‌ ಐ ಎ ; ಈತ ಯಾರು? ಹಿನ್ನೆಲೆ ಏನು ?

ಬೆಂಗಳೂರು : ಪ್ರಮುಖ ಬೆಳವಣಿಗೆಯಲ್ಲಿ, ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ ಭಾಗಿಯಾಗಿರುವ ಆರೋಪಿಗಳ ಛಾಯಾಚಿತ್ರಗಳು ಮುನ್ನೆಲೆಗೆ ಬಂದಿವೆ. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಗುರುತಿಸಲಾಗಿದೆ. ಇವರಿಬ್ಬರೂ ಶಿವಮೊಗ್ಗದ ಐಸಿಸ್ ಘಟಕದೊಂದಿಗೆ ಸಂಬಂಧ ಹೊಂದಿದ್ದು, ಈ ಹಿಂದೆಯೂ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದಾರೆ. ಪ್ರಮುಖ ಆರೋಪಿಯನ್ನು ಶಿವಮೊಗ್ಗದ ತೀರ್ಥಹಳ್ಳಿ ನಿವಾಸಿ ಮುಸಾವಿರ್ ಹುಸೇನ್ ಶಾಜಿಬ್ ಎಂದು ಗುರುತಿಸಲಾಗಿದ್ದು, … Continued

ಲೋಕಸಭಾ ಚುನಾವಣೆ : ಕರ್ನಾಟಕ ಕಾಂಗ್ರೆಸ್ಸಿನಲ್ಲಿ ಭಾರೀ ಬದಲಾವಣೆ, ಐವರು ನೂತನ ಕಾರ್ಯಾಧ್ಯಕ್ಷರ ನೇಮಕ, ಚುನಾವಣಾ ಪ್ರಚಾರ ಸಮಿತಿಗೂ ನೇಮಕ

ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ ಪಕ್ಷದೊಳಗೆ ಮೇಜರ್‌ ಸರ್ಜರಿ ಮಾಡಿದೆ. ಸಂಘಟನಾತ್ಮಕ ಬದಲಾವಣೆ ಮಾಡಿರುವ ಕಾಂಗ್ರೆಸ್‌ ಐವರು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನು ಬದಲಾವಣೆ ಮಾಡಿದ್ದು, ಅವರ ಬದಲಿಗೆ ಐವರು ನೂತನ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಅಲ್ಲದೆ, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನೂ ನೇಮಕ ಮಾಡಲಾಗಿದೆ. ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ವಿನಯಕುಮಾರ ಸೊರಕೆ ಅವರನ್ನು ನೇಮಕ … Continued

ರಾಜ್ಯದ 5, 8, 9ನೇ ತರಗತಿಯ ಬೋರ್ಡ್ ಪರೀಕ್ಷೆಯ ದಿನಾಂಕ ಪ್ರಕಟ

ಬೆಂಗಳೂರು: 5, 8ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠವು ಪರೀಕ್ಷಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಶುಕ್ರವಾರ ಅನುಮತಿ ನೀಡಿದ್ದು, ಮಾರ್ಚ್ 25 (ಸೋಮವಾರ) ಪರೀಕ್ಷೆ ಮುಂದುವರಿಸಲು ಸರ್ಕಾರದ ಶಿಕ್ಷಣ ಇಲಾಖೆ ನಿರ್ಧರಿಸಿ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 25 ರಿಂದ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್‌ … Continued

ಕಾಂಗ್ರೆಸ್‌ 3ನೇ ಪಟ್ಟಿ ಪ್ರಕಟ: ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ; 5 ಕ್ಷೇತ್ರಗಳಲ್ಲಿ ಸಚಿವರ ಮಕ್ಕಳಿಗೆ ಟಿಕೆಟ್‌

ಬೆಂಗಳೂರು : ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್​ ತನ್ನ ಮೂರನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 57 ಅಭ್ಯರ್ಥಿಗಳ ಪಟ್ಟಿಯಲ್ಲಿ ಕರ್ನಾಟಕದ 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್​​ ಘೋಷಿಸಿದೆ. 17 ಕ್ಷೇತ್ರಗಳ ಅಭ್ಯರ್ಥಿಗಳಲ್ಲಿ ಸಚಿವರ ಮಕ್ಕಳಿಗೆ ಮಣೆಹಾಕಲಾಗಿದೆ. ಕರ್ನಾಟಕದ 17 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಬಾಗಲಕೋಟೆ ಲೋಕಸಭಾ ಕ್ಷೇತ್ರ-ಸಂಯುಕ್ತಾ ಪಾಟೀಲ ಬೆಂಗಳೂರು ದಕ್ಷಿಣ-ಸೌಮ್ಯಾ ರೆಡ್ಡಿ ಬೆಂಗಳೂರು … Continued

ಬಿಜೆಪಿಗೆ ರಾಜೀನಾಮೆ ನೀಡಿದ ಚಿಕ್ಕಬಳ್ಳಾಪುರ ಸಂಸದ ಬಚ್ಚೇಗೌಡ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್‌. ಬಚ್ಚೇಗೌಡ (BN Bachegowda) ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಬರೆದಿರುವ ಪತ್ರದಲ್ಲಿ, ʻʻನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಈ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ತಿಳಿಸಿದ್ದಾರೆ. 2008ರಲ್ಲಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದು, ಶಾಸಕನಾಗಿ … Continued

ಅಪಾಯಕಾರಿ 23 ಶ್ವಾನ ತಳಿಗಳ ಸಾಕಣೆ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ ಸುತ್ತೋಲೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಮನುಷ್ಯನ ಜೀವಕ್ಕೆ ಮಾರಕವಾಗಬಹುದಾದ 23 ಶ್ವಾನ ತಳಿಗಳ ಸಾಕುವುದು ಹಾಗೂ ಮಾರಾಟ ನಿಷೇಧಿಸಿ ಕೇಂದ್ರ ಸರ್ಕಾರ ಇತ್ತೀಚಗೆ ಹೊರಡಿಸಿದ್ದ ಸುತ್ತೋಲೆಗೆ ಮಂಗಳವಾರ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ. ತಜ್ಞರ ಸಮಿತಿಯ ಶಿಫಾರಸ್ಸು ಆಧರಿಸಿ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಆದರೆ ತಜ್ಞರು ಇದಕ್ಕೆ ಸಂಬಂಧಿತ ಯಾರನ್ನು ಸಂಪರ್ಕಿಸಿಲ್ಲ ಎಂದು ಆಕ್ಷೇಪಿಸಿ ವೃತ್ತಿಪರ ಶ್ವಾನ … Continued

ಕರ್ನಾಟಕದ 5, 8, 9, 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು : ರಾಜ್ಯದ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರ್ಕಾರದ ಸುತ್ತೋಲೆ ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿರುವ ಮೇಲ್ಮನವಿ ವಿಚಾರಣೆಯನ್ನು ಸೋಮವಾರ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ 5, 8, 9 ಮತ್ತು 11ನೇ ತರಗತಿಗಳಿಗೆ … Continued

ಲೌಡ್ ಸ್ಪೀಕರಿನಲ್ಲಿ ಹನುಮಾನ ಚಾಲೀಸಾ ಹಾಕಿದ್ದಕ್ಕಾಗಿ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಮೂವರ ಬಂಧನ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು: ಅಂಗಡಿಯಲ್ಲಿ ಲೌಡ್ ಸ್ಪೀಕರ್ ಹಾಕಿದ್ದಕ್ಕಾಗಿ ಆಕ್ಷೇಪ ವ್ಯಕ್ತಪಡಿಸಿ ಯುವಕರ ಗುಂಪೊಂದು ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಕಬ್ಬನ್ ಪೇಟೆ ಸಿದ್ದನಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಭಾನುವಾರ ಸಂಜೆ … Continued

ಕರ್ನಾಟಕದಲ್ಲಿ ಇಂದಿನಿಂದ ಮೂರ್ನಾಲ್ಕು ದಿನಗಳ ಕಾಲ ಮಳೆ ಬೀಳುವ ಮುನ್ಸೂಚನೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗಿನಿಂದ ಕೂಡಿದ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್‌ 18 ರಂದು ಉತ್ತರ ಒಳನಾಡಿನ ಬೀದರ, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್‌ 21 ರಂದು ಧಾರವಾಡ, ಬೆಳಗಾವಿ, ಬೀದರ, ಕಲಬುರಗಿ, ರಾಯಚೂರು … Continued

ವಿವಿಧ ಅಕಾಡೆಮಿ-ಪ್ರಾಧಿಕಾರಕ್ಕೆ ನೇಮಕ ; ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಪುರುಷೋತ್ತಮ ಬಿಳಿಮಲೆ, ಸಾಹಿತ್ಯ ಅಕಾಡೆಮಿ ಮುಕುಂದರಾಜ ಅಧ್ಯಕ್ಷರಾಗಿ ನೇಮಕ

ಬೆಂಗಳೂರು: ರಾಜ್ಯ ಸರ್ಕಾರ ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಗೆ ಬರುವ ಕೆಲವೇ ಗಂಟೆಗಳ ಮುನ್ನ 19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ. ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಉಮರ್ ಯುಎಚ್, ಕರ್ನಾಟಕ … Continued