ರಾಜ್ಯದಲ್ಲಿ 247 ಪಿಡಿಒ ಹುದ್ದೆ ಭರ್ತಿಗೆ ಕೆಪಿಎಸ್‌ಸಿ ಅಧಿಸೂಚನೆ ಪ್ರಕಟ

ಬೆಂಗಳೂರು: ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) 247 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಅರ್ಜಿಯನ್ನು ಏಪ್ರಿಲ್ 15 ರಿಂದ ಸಲ್ಲಿಸಬಹುದು. 150 ಹುದ್ದೆಗಳು ಉಳಿಕೆ ಮೂಲ ವೃಂದಕ್ಕೆ ಸೇರಿದೆ, ಹಾಗೂ 97 ಹುದ್ದೆಗಳು ಹೈದ್ರಾಬಾದ್‌-ಕರ್ನಾಟಕ ವೃಂದಕ್ಕೆ ಸೇರಿವೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ … Continued

ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸ್ತೇನೆ ಎಂದು ಈಶ್ವರಪ್ಪ ಘೋಷಣೆ : ಯಡಿಯೂರಪ್ಪ ವಿರುದ್ಧ ತೊಡೆತಟ್ಟಿದ ಬಿಜೆಪಿ ನಾಯಕ

ಶಿವಮೊಗ್ಗ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಶುಕ್ರವಾರ ( ಮಾರ್ಚ್‌ 15) ಘೋಷಿಸಿದ್ದಾರೆ. ತಮ್ಮ ಪುತ್ರನಿಗೆ ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ಪಕ್ಷದ ರಾಜ್ಯ ನಾಯಕರ ವಿರುದ್ಧ ಮುನಿಸಿಕೊಂಡಿರುವ ಈಶ್ವರಪ್ಪ ಸ್ವತಂತ್ರವಾಗಿ ಸ್ಪರ್ಧಿಸುವ ಘೋಷಣೆ ಮಾಡಿದ್ದಾರೆ. ಪುತ್ರ ಕಾಂತೇಶ ಅವರಿಗೆ ಟಿಕೆಟ್ ಸಿಗದ … Continued

ಬಿಜೆಪಿ ಲೋಕಸಭೆ ಅಭ್ಯರ್ಥಿಯಾಗಿ ರಾಜಕೀಯಕ್ಕೆ ಪದಾರ್ಪಣೆ ಮಾಡಿದ ಖ್ಯಾತ ಹೃದ್ರೋಗ ತಜ್ಞ, ದೇವೇಗೌಡರ ಅಳಿಯ ಪದ್ಮಶ್ರೀ ಡಾ ಸಿ.ಎನ್. ಮಂಜುನಾಥ

ಬೆಂಗಳೂರು : ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಅಳಿಯ ಹಾಗೂ ಬೆಂಗಳೂರಿನ ಜಯದೇವ ಆಸ್ಪತ್ರೆ ನಿರ್ದೇಶಕ ಡಾ ಸಿ.ಎನ್. ಮಂಜುನಾಥ ಅವರು ರಾಜಕೀಯ ಪ್ರವೇಶಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಸಹೋದರ ಡಿ.ಕೆ. ಸುರೇಶ ವಿರುದ್ಧ ಡಾ ಮಂಜುನಾಥ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಶಿವಕುಮಾರ ಸಹೋದರರ … Continued

ಹೊರಬಿತ್ತು ಮತ್ತೊಂದು ಸಮೀಕ್ಷೆ : ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಹೆಚ್ಚಿನ ಸ್ಥಾನ-ಎಬಿಪಿ ನ್ಯೂಸ್-ಸಿ ವೋಟರ್ ಸಮೀಕ್ಷೆ ಭವಿಷ್ಯ

ನವದೆಹಲಿ :  ಲೋಕಸಭಾ ಚುನಾವಣೆಗಳು ಹತ್ತಿರವಾಗುತ್ತಿದ್ದು, ಯಾವುದೇ ಸಮಯದಲ್ಲಿಯೂ ಚುನಾವಣೆ ಘೋಷಣೆಯಾಗಬಹುದಾಗಿದೆ. ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿವೆ. ಲೋಕಸಭೆ ಚುನಾವಣೆಗೂ ಮುನ್ನ ಎಬಿಪಿ ನ್ಯೂಸ್-ಸಿ ವೋಟರ್ಸ್ ಚುನಾವಣಾ ಪೂರ್ವ ಒಪಿನಿಯನ್‌ ಪೋಲ್‌ ನಡೆಸಿದ್ದು, ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಜಯ ಸಾಧಿಸಲಿದೆ ಎಂಬುದು ಸಮೀಕ್ಷೆಯಲ್ಲಿ ಕಂಡುಬಂದಿದೆ. ಎಬಿಪಿ ನ್ಯೂಸ್-ಸಿವೋಟರ್ ಒಪಿನಿಯನ್ … Continued

ಲೋಕಸಭಾ ಚುನಾವಣೆ : ಬಿಜೆಪಿಯ 2ನೇ ಪಟ್ಟಿ ಪ್ರಕಟ ; 20 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಪ್ರಕಟ, ಹಲವು ಹಾಲಿ ಸಂಸದರಿಗೆ ಕೈತಪ್ಪಿದ ಟಿಕೆಟ್‌

ನವದೆಹಲಿ : ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ಎಂಟು ಹಾಲಿ ಸಂಸದರಿಗೆ ಟಿಕೆಟ್​ ಕೈತಪ್ಪಿದ್ದು ಬಿಜೆಪಿ ಹೈಕಮಾಂಡ್‌ ಹೊಸ ಮುಖಗಳಿಗೆ ಮಣೆ ಹಾಕಿದೆ. ಟಿಕೆಟ್ ಮಿಸ್ ಆಗಿದ್ದು, ಆರು ಹೊಸ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಮೈಸೂರು-ಪ್ರತಾಪ ಸಿಂಹ, ಬೆಂಗಳೂರು ಉತ್ತರ- … Continued

ಬಿಜೆಪಿಯ ಮೂವರು ಹಾಲಿ ಸಂಸದರು ನಮ್ಮ ಸಂಪರ್ಕದಲ್ಲಿದ್ದಾರೆ : ಚುನಾವಣೆ ಸನಿಹದಲ್ಲಿ ಡಿಕೆ ಶಿವಕುಮಾರ ಅಚ್ಚರಿಯ ಹೇಳಿಕೆ

ಕಲಬುರಗಿ : ಬಿಜೆಪಿಯ ಮೂವರು ಹಾಲಿ ಸಂಸದರು ನಮ್ಮ ಸಂಪರ್ಕದಲ್ಲಿದ್ದು, ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗುವುದರ ಬಗ್ಗೆ ಮಾತನಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಲ್ಬುರಗಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಮ್ಮ ಜೊತೆ ಯಾವ್ಯಾವ ಸಂಸದರು ಸಂಪರ್ಕದಲ್ಲಿದ್ದಾರೆ ಎಂಬ ಬಗ್ಗೆ ನಾನು ಈಗಲೇ ಮಾಹಿತಿ ಬಹಿರಂಗಪಡಿಸುವುದಿಲ್ಲ. ನಮ್ಮ … Continued

ಲೋಕಸಭೆ ಚುನಾವಣೆ: ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಬಿಜೆಪಿಯಲ್ಲಿ ಕಸರತ್ತು

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ನಿರ್ಧರಿಸಲು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸೋಮವಾರ ತನ್ನ ಎರಡನೇ ಸಭೆ ನಡೆಸಿತು. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತಿತರರು ಭಾಗಿಯಾದರು.ಪಕ್ಷದ ಎರಡನೇ ಪಟ್ಟಿಯನ್ನು ಮಂಗಳವಾರ … Continued

ಕರ್ನಾಟಕದಲ್ಲಿ ಕಲರ್‌ ಕಾಟನ್ ಕ್ಯಾಂಡಿ ನಿಷೇಧ : ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಸುವಂತಿಲ್ಲ ; ನಿಯಮ ಮೀರಿದ್ರೆ ಜೈಲು-ದಂಡ

ಬೆಂಗಳೂರು : ರಾಜ್ಯದಲ್ಲಿ ಕಲ‌ರ್ ಕಾಟನ್ ಕ್ಯಾಂಡಿ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಒಂದು ವೇಳೆ ಕೃತಕ ಬಣ್ಣದ ಕಾಟನ್ ಕ್ಯಾಂಡಿ ಮಾರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಬಣ್ಣ ಬಳಸದೇ ಇರುವ ಕಾಟನ್ ಕ್ಯಾಂಡಿ ಮಾರಬಹುದು ಎಂದು … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ: ಶಂಕಿತನ ಹೊಸ ಫೋಟೋ ಬಿಡುಗಡೆ ಮಾಡಿದ ಎನ್‌ಐಎ

ನವದೆಹಲಿ : 10 ಮಂದಿ ಗಾಯಗೊಂಡಿರುವ ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟದ ಪ್ರಕರಣದ ಶಂಕಿತ ಆರೋಪಿಯ ಹೊಸ ಫೋಟೋಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಿಡುಗಡೆ ಮಾಡಿದೆ. ಮಾರ್ಚ್ 3 ರಂದು ಪ್ರಕರಣವನ್ನು ಕೈಗೆತ್ತಿಕೊಂಡ ಭಯೋತ್ಪಾದನಾ ನಿಗ್ರಹ ಸಂಸ್ಥೆಯಾದ ಎನ್‌ಐಎ, ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಇರಿಸಿದ್ದ … Continued