ನಿಗಮ-ಮಂಡಳಿ ಅಧಿಕಾರ 2 ವರ್ಷಕ್ಕೆ ನಿಗದಿ : ಡಿ.ಕೆ.ಶಿವಕುಮಾರ ಕೊಟ್ಟ ಕಾರಣ ಹೀಗಿದೆ..

ಬೆಂಗಳೂರು: ರಾಜ್ಯದ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ 34 ಶಾಸಕರನ್ನು ಆಯ್ಕೆ ಮಾಡಲಾಗಿದ್ದು, ಅವರಿಗೆ ಎರಡು ವರ್ಷ ಮಾತ್ರ ಅಧಿಕಾರದ ಅವಧಿ ನೀಡಲಾಗಿದೆ. ಇದು ಕೆಲವರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ (DK Shivakumar) ಅವರು “ಪಕ್ಷಕ್ಕಾಗಿ ದುಡಿದ ಎಲ್ಲ ಶಾಸಕರು, ಕಾರ್ಯಕರ್ತರಿಗೆ ಅಧಿಕಾರ ಸಿಗಲಿ ಎಂಬ … Continued

ಲೋಕಸಭಾ ಚುನಾವಣೆ: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ: ಉಸ್ತುವಾರಿಗಳ ಪಟ್ಟಿ ಇಲ್ಲಿದೆ….

ಬೆಂಗಳೂರು: ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿರುವ ಬಿಜೆಪಿ ವರಿಷ್ಠ ಮಂಡಳಿಯು ರಾಜ್ಯ ಚುನಾವಣಾ ಉಸ್ತುವಾರಿಯನ್ನು ರಾಧಮೋಹನದಾಸ ಅಗರವಾಲ್ ಹಾಗೂ ಹಾಗೂ ಸಹ ಉಸ್ತುವಾರಿಯನ್ನಾಗಿ ಸುಧಾಕರ್ ರೆಡ್ಡಿ ಅವರನ್ನು ನೇಮಿಸಿದ ಬೆನ್ನಲ್ಲೇ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಉಸ್ತುವಾರಿಗಳನ್ನು ಆಯ್ಕೆ ಮಾಡಲಾಗಿದ್ದು, … Continued

ಲೋಕಸಭೆ ಚುನಾವಣೆ: ಕರ್ನಾಟಕ ಸೇರಿ 23 ರಾಜ್ಯಗಳಿಗೆ ಚುನಾವಣಾ ಉಸ್ತುವಾರಿಗಳ ನೇಮಿಸಿದ ಬಿಜೆಪಿ

ನವದೆಹಲಿ: ಈ ವರ್ಷದ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಶನಿವಾರ ಕರ್ನಾಟಕ ಸೇರಿದಂತೆ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ-ಪ್ರಭಾರಿಗಳನ್ನು ನೇಮಿಸಿದೆ. ಕರ್ನಾಟಕದ ಚುನಾವಣಾ ಉಸ್ತುವಾರಿಯಾಗಿ ರಾಧಾಮೋಹನದಾಸ ಅಗರ್ವಾಲ್‌ ಹಾಗೂ ಸಹ ಪ್ರಭಾರಿಯಾಗಿ ಸುಧಾಕರ ರೆಡ್ಡಿ ಅವರನ್ನು ನೇಮಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ ತಾವ್ಡೆ ಅವರನ್ನು ಬಿಹಾರ … Continued

5,8,9ನೇ ತರಗತಿಗೆ SA-2 ಪರೀಕ್ಷೆ; ಮಾದರಿ ಪ್ರಶ್ನೋತರ ಪತ್ರಿಕೆ ಪ್ರಕಟ

ಬೆಂಗಳೂರು : 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿರುವ ಸಂಕಲನಾತ್ಮಕ ಮೌಲ್ಯಾಂಕನ-2 (SA-2) ಕ್ಕೆ ಸಂಬಂಧಿಸಿದಂತೆ ಮಾದರಿ ಪ್ರಶೋತ್ತರ ಪತ್ರಿಕೆಗಳನ್ನು ಮಂಡಲಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ … Continued

ಬಿಜೆಪಿ ನಾವೇ ಕಟ್ಟಿ ಬೆಳೆಸಿದ ಮನೆ…ಈ ಮನೆಗೆ ಸಂತೋಷದಿಂದಲೇ ವಾಪಸ್‌ ಬಂದಿದ್ದೇನೆ :ಶೆಟ್ಟರ

ಬೆಂಗಳೂರು: ದೇಶಕ್ಕೆ ಸುರಕ್ಷತೆ ದೃಷ್ಟಯಿಂದ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಆಶಿಸಿ ಬಿಜೆಪಿಗೆ ಮರಳಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ ಹೇಳಿದ್ದಾರೆ. ಇಲ್ಲಿನ ವಿಮಾನನಿಲ್ದಾಣದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ನಮ್ಮ ಮನೆ, ನಾವೇ ಕಟ್ಟಿ ಬೆಳೆಸಿದ ಮನೆ. ಆ ಮನೆಗೆ ಸಂತೋಷದಿಂದ ವಾಪಸಾಗಿದ್ದೇನೆ. ರಾಷ್ಟ್ರದ -ರಾಜ್ಯದ ನಾಯಕರು … Continued

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ‘ಹಳೇ ಪಿಂಚಣಿ ಯೋಜನೆ(OPS)ಗೆ ಒಳಪಡಲು ಅವಕಾಶ ನೀಡಿ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕಾಂಗ್ರೆಸ್ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹೊಸ ಪಿಂಚಣಿ ಯೋಜನೆ (ಎನ್ ಪಿಎಸ್)ಯಿಂದ ಹಳೆ ಪಿಂಚಣಿ ಯೋಜನೆಗೆ ಒಳಪಡಲು ಅವಕಾಶ ನೀಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಈ ಬಗ್ಗೆ ಆಡಳಿತ ಮತ್ತು ಸಮನ್ವಯ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಹಳೆಯ ಪಿಂಚಣಿ ಯೋಜನೆಗೆ ಒಳಪಡಲು 6 ಷರತ್ತುಗಳನ್ನು … Continued

ರಾಮ ಮಂದಿರ ಉದ್ಘಾಟನೆ : ಸೋಮವಾರ ಸರ್ಕಾರಿ ರಜೆ ನೀಡಲ್ಲ ; ಸಿಎಂ ಸಿದ್ದರಾಮಯ್ಯ

ತುಮಕೂರು: ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ಸೋಮವಾರ(ಜನವರಿ 22) ನಡೆಯಲಿದ್ದು ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಸರ್ಕಾರಿ ರಜೆ ಘೋಷಿಸಬೇಕು ಎಂದು ಬಿಜೆಪಿ, ಹಿಂದೂ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಆಗ್ರಹಿಸಿದ್ದವು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಜೆ ಘೋಷಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತುಮಕೂರಿನಲ್ಲಿ … Continued

ಸಿ.ಎಂ.ಇಬ್ರಾಹಿಂ ಜೆಡಿಎಸ್‌ ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಸುವಂತಿಲ್ಲ : ಕೋರ್ಟ್‌ ಆದೇಶ

ಬೆಂಗಳೂರು: ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿರುವ ಮುಖಂಡ ಸಿ.ಎಂ.ಇಬ್ರಾಹಿಂ ಅವರಿಗೆ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಕೆ ಮಾಡುವಂತಿಲ್ಲ ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ, ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ ಎಂದು ನ್ಯಾಯಾಲಯ ಸೂಚನೆ ನೀಡಿದೆ. ಪಕ್ಷದ ಚಿಹ್ನೆ ಬಳಸದಂತೆ ಸಿ.ಎಂ. ಇಬ್ರಾಹಿಂ ಅವರಿಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. … Continued

ಫೆ.16ಕ್ಕೆ ರಾಜ್ಯ ಬಜೆಟ್ ಮಂಡನೆ

ಬೆಂಗಳೂರು : ರಾಜ್ಯ ವಿಧಾನಮಂಡಲ ಅಧಿವೇಶನ ಫೆಬ್ರವರಿ 12ರಿಂದ ಆರಂಭವಾಗಲಿದ್ದು, ಫೆಬ್ರವರಿ 23ರವರೆಗೆ ನಡೆಯಲಿದೆ. ಫೆಬ್ರವರಿ 16ರಂದು ರಾಜ್ಯ ಬಜೆಟ್​ ಮಂಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿಧಾನಮಂಡಲ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಈ ಕುರಿತು ಗುರುವಾರ ನಡೆದ ಸಚಿವ ಸಂಪುಟಲ್ಲಿ ಚರ್ಚೆ ಮಾಡಿ ತೀರ್ಮಾನಿಸಲಾಗಿದೆ. ಹಣಕಾಸು ಖಾತೆಯನ್ನೂ ಹೊಂದಿರುವ … Continued

ಯಾವ ಕ್ಷಣದಲ್ಲೂ ನಿಗಮ‌ ಮಂಡಳಿ ನೇಮಕಾತಿ ಪಟ್ಟಿ ಬಿಡುಗಡೆಯಾಗಬಹುದು : 39 ಕಾರ್ಯಕರ್ತರಿಗೆ, 36 ಶಾಸಕರಿಗೆ ಅವಕಾಶ ; ಡಿಸಿಎಂ ಶಿವಕುಮಾರ

ಬೆಂಗಳೂರು: ನಿಗಮ ಮಂಡಳಿ ನೇಮಕಾತಿ ಪಟ್ಟಿ ಈಗಾಗಲೇ ಅಂತಿಮಗೊಂಡಿದ್ದು, ಯಾವುದೇ ಕ್ಷಣದಲ್ಲಿ ಪ್ರಕಟವಾಗಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ವಿಧಾನಸೌಧದ ಬಳಿ ಗುರುವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, 39 ಮಂದಿ ಕಾರ್ಯಕರ್ತರಿಗೆ ಹಾಗೂ 36 ಶಾಸಕರನ್ನು ಮೊದಲ ಪಟ್ಟಿಯಲ್ಲಿ ನೇಮಕಾತಿ ಮಾಡಲಾಗುತ್ತದೆ. ಪಟ್ಟಿ ಯಾವುದೇ ಕ್ಷಣದಲ್ಲಾದರೂ ಪಟ್ಟಿ ಬಿಡುಗಡೆ ಆಗಬಹುದು ಎಂದರು. ಕಾರ್ಯಕರ್ತರು … Continued