ನಾನು ಎದ್ದಾಗ ಮಗು ಸತ್ತಿತ್ತು : ಪೊಲೀಸರಿಗೆ ಕೊಲೆ ಆರೋಪಿ ಸಿಇಒ ಹೇಳಿಕೆ, ಮಗು ಉಸಿರುಗಟ್ಟಿ ಸತ್ತಿದೆ: ಪೋಸ್ಟ್ ಮಾರ್ಟೆಮ್ ವರದಿ, ಇದು ಯೋಜಿತ ಕೊಲೆಯಂತೆ ತೋರುತ್ತದೆ ; ಪೊಲೀಸ್‌

ಪಣಜಿ: ಕೊಲೆ ಆರೋಪಿ ಸ್ಟಾರ್ಟ್‌ಅಪ್‌ನ ಸಿಇಒ ಸುಚನಾ ಸೇಠ್‌ ತನ್ನ ನಾಲ್ಕು ವರ್ಷದ ಮಗನನ್ನು ಕೊಂದ ಕೊಠಡಿಯಲ್ಲಿ ಕೆಮ್ಮಿನ ಸಿರಪ್ಪಿನ ಖಾಲಿ ಬಾಟಲಿಗಳನ್ನು ಗೋವಾ ಪೊಲೀಸರು ಪತ್ತೆ ಮಾಡಿದ್ದಾರೆ, ಮಹಿಳೆ ಆತನಿಗೆ ಹೆಚ್ಚಿನ ಪ್ರಮಾಣದ ಔಷಧಿ ನೀಡಿರಬಹುದು ಮತ್ತು ಅದು ದೊರೆತಿರುವುದು ಇದು ಪೂರ್ವ ಯೋಜಿತ ಕೊಲೆ ಎಂದು ಸೂಚಿಸುತ್ತದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. … Continued

ಹೈಕಮಾಂಡ್ ಮುಂದೆ ಮೂವರು ಡಿಸಿಎಂ ಪ್ರಸ್ತಾಪವಿಲ್ಲ; ಇವೆಲ್ಲ ಕೇವಲ ಊಹಾಪೋಹ : ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕಲಬುರಗಿ: ಕರ್ನಾಟಕದಲ್ಲಿ ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯ ಮಾತು ಕೇವಲ ಊಹಾಪೋಹ, ಹೈಕಮಾಂಡ್ ಮುಂದೆ ಅಂತಹ ಯಾವುದೇ ಪ್ರಸ್ತಾವನೆಯಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ ರಾಜ್ಯದಲ್ಲಿ ಮೂವರು ಉಪಮುಖ್ಯಮಂತ್ರಿಗಳ ಹುದ್ದೆ ಸೃಷ್ಟಿಸುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹೈಕಮಾಂಡ್ ಎದುರು ಇಂತಹ ಯಾವುದೇ ಪ್ರಸ್ತಾವನೆ ಇಲ್ಲ. ಇದಕ್ಕಿಂತಲೂ ಹೆಚ್ಚಿನ ಸ್ಪಷ್ಟನೆ ಬೇಕಿದ್ದರೆ … Continued

ಕರ್ನಾಟಕದಲ್ಲಿ ಸೋಮವಾರ 279 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಸೋಮವಾರ 279 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಹಾಗೂ ಮೂವರು ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಇದೇ ವೇಳೆ 235 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸದ್ಯ ರಾಜ್ಯದಲ್ಲಿ ಒಟ್ಟು 1,222 ಸಕ್ರಿಯ ಕೊರೊನಾ ಪ್ರಕರಣಗಳಿವೆ. ಮೈಸೂರು ಜಿಲ್ಲೆಯಲ್ಲಿ ಇಬ್ಬರು ಕೊರೊನಾ … Continued

ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿ : ಸ್ವಾಮೀಜಿಗಳ ನಿಯೋಗದಿಂದ ಸಿಎಂ ಸಿದ್ದರಾಮಯ್ಯಗೆ ಮನವಿ

ಬೆಂಗಳೂರು : ಲಿಂಗಾಯತ ಮಠಾಧೀಶರ ನಿಯೋಗ ಸೋಮವಾರ (ಜನವರಿ 8) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿ ಎಂದು ಘೋಷಿಸಬೇಕು ಎಂದು ಒತ್ತಾಯಿಸಿ ಮನವಿ ಮಾಡಿದೆ. ಬಸವಲಿಂಗ ಪಟ್ಟಾದೇವರು ಸ್ವಾಮೀಜಿ ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ … Continued

ಹೊಸನಗರ : ಮಂಗನ ಕಾಯಿಲೆಗೆ 18 ವರ್ಷದ ಯುವತಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಯಿಂದ (ಕೆಎಫ್ ಡಿ) ಬಳಲುತ್ತಿದ್ದ 18 ವರ್ಷದ ಯುವತಿ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರದ ಅರಮನೆ ಕೊಪ್ಪ ವ್ಯಾಪ್ತಿಯ ಗ್ರಾಮವೊಂದರ ಯುವತಿಗೆ ವಾರದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಏಕಾಏಕಿ ಜ್ವರ ಉಲ್ಬಣಗೊಂಡ ಅವರನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೆಎಫ್ ಡಿ ಟೆಸ್ಟ್ … Continued

ಅಯೋಧ್ಯಾ ರಾಮಮಂದಿರ ಪ್ರತಿಷ್ಠಾಪನೆ ; ಜ.22ಕ್ಕೆ ರಾಜ್ಯದ ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆಗೆ ಸೂಚನೆ

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಿಮಿತ್ತ ಜನವರಿ 22ರಂದು ರಾಜ್ಯದ ಎಲ್ಲ ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಲು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಮುಜರಾಯಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಜನವರಿ … Continued

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸರ್ಕಾರಿ ವೈದ್ಯ ಹುದ್ದೆ ತೊರೆದ ಸಂಸದ ಶ್ರೀನಿವಾಸ್ ಪ್ರಸಾದ ಅಳಿಯ…!

ಚಾಮರಾಜನಗರ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಂಸದ ಶ್ರೀನಿವಾಸ ಪ್ರಸಾದ ಅವರ ಅಳಿಯ ತಮ್ಮ ಸರ್ಕಾರಿ ವೈದ್ಯ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಸಂಸದ ವಿ.ಶ್ರೀನಿವಾಸಪ್ರಸಾದ ಅವರ ಅಳಿಯ ಡಾ.ಎನ್‌ಎಸ್ ಮೋಹನ ಬೆಂಗಳೂರು ಸಂಜಯ ಗಾಂಧಿ ಆಸ್ಪತ್ರೆಯ ಖ್ಯಾತ ಬೆನ್ನುಹುರಿ ತಜ್ಞ ಹಾಗು ಪ್ರಾಧ್ಯಾಪಕರಾಗಿದ್ದರು. ಮುಂದಿನ ಲೋಕಸಭಾ ಚುನಾವಣೆಗೆ ಚಾಮರಾಜನಗರ ಕ್ಷೇತ್ರದಿಂದ ಟಿಕೆಟ್‌ … Continued

ಕರ್ನಾಟಕದಲ್ಲಿ ಶುಕ್ರವಾರ ಹೊಸದಾಗಿ 328 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ (ಕಳೆದ 24 ಗಂಟೆಗಳಲ್ಲಿ) ಹೊಸದಾಗಿ 328 ಕೊರೊನಾ ಪ್ರಕರಣಗಳು ದಾಖಲಾಗಿದೆ. ಇದೇವೇಳೆಸೋಂಕಿನಿಂದ ಗುಣಮುಖರಾಗಿ 409 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1159ಕ್ಕೆ ಏರಿಕೆಯಾಗಿದೆ. ರಾಜ್ಯದಾದ್ಯಂತ ಶುಕ್ರವಾರ ಒಟ್ಟು 7205 ಮಂದಿಗೆ ಕೋವಿಡ್‌ 19 ಪರೀಕ್ಷೆ … Continued

ʼಯುವನಿಧಿ ಯೋಜನೆʼಗೆ ಈವರಗೆ 32 ಸಾವಿರ ಅರ್ಜಿ ಸಲ್ಲಿಕೆ : ಬೆಳಗಾವಿ, ಬೆಂಗಳೂರಲ್ಲಿ ಹೆಚ್ಚು

ಬೆಂಗಳೂರು : ಕರ್ನಾಟಕ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೊಮಾ ಪಾಸಾದವರಿಗೆ ಭತ್ಯೆ ನೀಡುವ “ಯುವನಿಧಿ ಯೋಜನೆ” ಚಾಲನೆ ಸಿಕ್ಕಿದ್ದು, ಅರ್ಜಿಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿವೆ. ಆರಂಭವಾದ ಸುಮಾರು 10 ದಿನಗಳಲ್ಲಿ ಈವರೆಗೆ ಒಟ್ಟು 32,184 ಪದವೀಧರರು ಅರ್ಜಿ ಸಲ್ಲಿಸಿದ್ದಾರೆ. ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಜನವರಿ 12ರಂದು ಶಿವಮೊಗ್ಗದಲ್ಲಿ ನಡೆಯುವ ವಿಶೇಷ … Continued

ಕರ್ನಾಟಕದಲ್ಲಿ ಗುರುವಾರ 298 ಮಂದಿಗೆ ಕೋವಿಡ್‌ ಸೋಂಕು, ನಾಲ್ವರು ಸಾವು

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಹೊಸದಾಗಿ 298 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗೂ ನಾಲ್ವರು ಮೃತಪಟ್ಟಿದ್ದಾರೆ ಎಂದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1240ಕ್ಕೆ ಏರಿಕೆಯಾಗಿದೆ. ಇದೇವೇಳೆ ಕೋವಿಡ್ ನಿಂದ 229 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ … Continued