ಪೊಲೀಸ್ ಇಲಾಖೆ ಆಧುನೀಕರಣಕ್ಕೆ ತಂತ್ರಜ್ಞಾನ ವಿನಿಮಯಕ್ಕೆಬವೇರಿಯಾ ಜತೆ ಒಪ್ಪಂದ

ಬೆಂಗಳೂರು:ಅಪರಾಧ ಪ್ರಕರಣಗಳ ಪತ್ತೆ ಮತ್ತು ನಿಗ್ರಹಕ್ಕೆ ನೂತನ ತಂತ್ರಜ್ಞಾನ ಬಳಕೆ ಹಾಗೂ ಪೊಲೀಸ್ ಇಲಾಖೆ ಆಧುನೀಕರಣಕ್ಕೆ ತಂತ್ರಜ್ಞಾನ ವಿನಿಮಯಕ್ಕೆ ಸಂಬಂಧಿಸಿದಂತೆ ಜರ್ಮನಿ ದೇಶದ ಬವೇರಿಯಾ ರಾಜ್ಯದ ಜತೆಗಿನ ದ್ವಿಪಕ್ಷೀಯ ಸಂಬಂಧ ಗಟ್ಟಿಯಾಗಿದ್ದು, ಅದು ಮತ್ತಷ್ಟು ಭದ್ರಗೊಳ್ಳಲಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿರುವ ಫೆಡರಲ್ ರಿಪಬ್ಲಿಕ್ … Continued

ಕರ್ನಾಟಕದಲ್ಲಿ ಒಂದೂವರೆ ಸಾವಿರ ದಾಟಿದ ಒಂದೇ ದಿನದ ಸೋಂಕಿತರ ಸಂಖ್ಯೆ..!

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಕೂಡ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಕಳೆದ ಒಂದೇ ದಿನದಲ್ಲಿ ರಾಜ್ಯದಲ್ಲಿ 1587 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,66,689 ಕ್ಕೆ ಏರಿಕೆಯಾಗಿದೆ. ಕಳೆದ ಮೂರು ತಿಂಗಳಲ್ಲಿ ಪ್ರಥಮ ಬಾರಿಗೆ ಸಂಕಿತರ ಸಂಖ್ಯೆ ದಿನವೊಂದಕ್ಕೆ ಸಾವಿರ ದಾಟಿದೆ…! ರಾಜ್ಯದಲ್ಲಿ ಶುಕ್ರವಾರ 10 ಜನ ಸೋಂಕಿತರು ಮೃತಪಟ್ಟಿದ್ದು, … Continued

ಚಿತ್ರಮಂದಿರ ಭರ್ತಿಗೆ ಯಾವುದೇ ನಿರ್ಬಂಧವಿಲ್ಲ: ಸಿಎಂ ಬಿಎಸ್‌ವೈ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿನಿಮಾ ಥಿಯೇಟರ್​ಗಳಲ್ಲಿ ಜನರ ಸಂಖ್ಯೆಯನ್ನು ಶೇ.50 ರಷ್ಟು ಸೀಮಿತ ಮಾಡಿ ಸರ್ಕಾರ ಆದೇಶ ಮಾಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಇಂತಹ ಯಾವುದೇ ಪ್ರಸ್ತಾಪವೂ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ ಈ ಕುರಿತು ಟ್ವೀಟ್‌ ಮೂಲಕ … Continued

ಕಾಮೆಡ್‌-ಕೆ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು : ರಾಜ್ಯದಲ್ಲಿನ ಖಾಸಗಿ ಕಾಲೇಜುಗಳಲ್ಲಿನ ಇಂಜಿನಿಯರಿಂಗ್ ಸೀಟುಗಳ ಭರ್ತಿಗಾಗಿ ನಡೆಸಲಾಗುವ ಕಾಮೆಡ್-ಕೆ ಪ್ರವೇಶ ಪರೀಕ್ಷೆಗೆ ದಿನಾಂಕ ಪ್ರಕಟಿಸಲಾಗಿದೆ. ಜೂನ್ 20ರಂದು ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ ಎಂಬುದಾಗಿ ಕಾಮೆಡ್-ಕೆ ತಿಳಿಸಿದೆ. ಈ ಕುರಿತಂತೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಮೆಡ್-ಕೆ ಕಾರ್ಯಕಾರಿ ಕಾರ್ಯದರ್ಶಿ ಡಾ.ಕುಮಾರ್ ಅವರು, ಈ ಸಲದ ಕಾಮೆಡ್-ಕೆ ಪರೀಕ್ಷೆ ಜೂನ್ 20ರಂದು ನಡೆಸಲಾಗುತ್ತದೆ ಎಂದು … Continued

ಮತ್ತೆ ಏರಿಕೆ..ಕರ್ನಾಟಕದಲ್ಲಿ 1488 ದೈನಂದಿನ ಕೊರೊನಾ ಸೋಂಕು..!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಆರ್ಭಟ ಹೆಚ್ಚಾಗುತ್ತಿದ್ದು ಕಳೆದ 24 ತಾಸಿನಲ್ಲಿ ಕೊರೊನಾ ದೈನಂದಿನ ಸೋಂಕು ಗುರುವಾರ ಹೊಸ ಒಂದುಸಾವಿರದ ಸಮೀಪ ಬಂದಿದ್ದು, 1488 ಜನರಿಗೆ ಸೊಂಕು ದೃಢ ಪಟ್ಟಿದೆ. ಕೊರೊನಾದಿಂದ ಕಳೆದ 24 ಗಂಟೆಗಳಲ್ಲಿ 8 ಸೋಂಕಿತರು ಮೃತಪಟ್ಟಿದ್ದು ಬೆಂಗಳೂರು ನಗರ ದಲ್ಲಿ 7 ಜನರು ಹಾಗೂ ಬೀದರಿನಲ್ಲಿ ಒಬ್ಬರು ಕೊರನಾದಿಂದ ಮೃತಪಟ್ಟಿದ್ದಾರೆ. ಸಕ್ರಿಯ … Continued

ಕರ್ನಾಟಕ ಉಪಚುನಾವಣೆ: ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ

ಬೆಂಗಳೂರು: ಉಪಚುನಾವಣೆ ನಡೆಯಲಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಆದರೆ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ  ಅಭ್ಯರ್ಥಿ ಹೆಸರು ಇನ್ನೂ ಪ್ರಕಟಿಸಬೇಕಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರ ವಿಧಾನಸಬಾ ಕ್ಷೇತ್ರದಿಂದ ದಿವಂಗತ ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರಿಗೆ ಟಿಕೆಟ್‌ ನೀಡಲಾಗಿದೆ. ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಬಸವನಗೌಡ ಆರ್. ತಿರುವಿಹಾಳ ಅವರಿಗೆ … Continued

ಶೀಘ್ರದಲ್ಲಿ ಹುಕ್ಕಾ ಪಾರ್ಲರ್ ಬಂದ್, ಎಂಟಿ ಡ್ರಗ್ ಪಾಲಿಸಿ : ಬೊಮ್ಮಾಯಿ

ಬೆಂಗಳೂರು: ಶೀಘ್ರದಲ್ಲೇ ಹುಕ್ಕಾ ಪಾರ್ಲರ್ ಗಳನ್ನು ಬಂದ್ ಮಾಡಲಾಗುವುದು ಮತ್ತು ಎಂಟಿ ಡ್ರಗ್ ಪಾಲಿಸಿ ಜಾರಿಗೆ ತರಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಮಹಾಂತೇಶ್ ಕವಟಗಿಮಠ ಪ್ರಶ್ನೆಗೆ ಉತ್ತರಿಸಿದ ಅವರು, ಮಾದಕ ವಸ್ತು ಸೇವನೆ ಸಂಪೂರ್ಣವಾಗಿ ನಿಷೇಧ ಆಗಬೇಕಾಗಿದೆ.  ಸಿಂಥೆಟಿಕ್‌ ಡ್ರಗ್ ಅನ್ನು ವಿದ್ಯಾರ್ಥಿಗಳಿಗೆ ಕೊಡುವ ಕೆಲಸವಾಗುತ್ತಿದೆ, … Continued

ಕರ್ನಾಟಕದಲ್ಲಿ ಎರಡನೇ ಅಲೆ ಭೀತಿ: ಆರೋಗ್ಯ ಸಿಬ್ಬಂದಿಗೆ 50 ದಿನ ರಜೆ ಇಲ್ಲ ಎಂದ ಆರೋಗ್ಯ ಸಚಿವರು

ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಮುನ್ಸೂಚನೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಇನ್ನು 50 ದಿನಗಳು ರಜೆ ನೀಡದಿರಲು ತೀರ್ಮಾನಿಸಲಾಗಿದೆ. ಎಲ್ಲರೂ ಇದಕ್ಕೆ ಸ್ಪಂದಿಸಬೇಕು ಎಂದು ಆರೋಗ್ಯ ಖಾತೆ ಸಚಿವ ಡಾ.ಆರ್‌.ಸುಧಾಕರ ಮನವಿ ಮಾಡಿದ್ದಾರೆ. ಗುರುವಾರ ಆರೋಗ್ಯ ಇಲಾಖೆ ಅಧಿಕಾರಿಗಳು, ಮುಖ್ಯ ಆಸ್ಪತ್ರೆ ವೈದ್ಯರ ನೇತೃತ್ವದಲ್ಲಿ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ … Continued

ಮತ್ತೆ ಹೆಚ್ಚಳ.. ಕರ್ನಾಟಕದಲ್ಲಿ 1200 ದಾಟಿದ ದೈನಂದಿನ ಕೊರೊನಾ ಪ್ರಕರಣ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ಪ್ರಕರಣ ಮಂಗಳವಾರಕ್ಕಿಂತ ಬುಧವಾರ ಮತ್ತೂ ಹೆಚ್ಚಾಗಿದೆ. ಕಳೆದ 24 ಗಂಟೆಯಲ್ಲಿ 1275 ಮಂದಿಗೆ ಕೊರೊನಾ ಸೋಂಕು ಧೃಡವಾಗಿದೆ. ನಾಲ್ವರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬುಧವಾರ ಹೇಳಿದೆ. ಬೆಂಗಳೂರಿನಲ್ಲಿ 786 ಮಂದಿಗೆ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ … Continued

ರಾತ್ರಿ ೧೦ರಿಂದ ಬೆಳಗ್ಗೆ ೬ಗಂಟೆ ವರೆಗೆ ದರ್ಗಾ, ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆಗೆ ನಿಷೇಧ ಹೇರಿದ ವಕ್ಫ್‌ ಮಂಡಳಿ

ಬೆಂಗಳೂರು: ರಾಜ್ಯದ ಎಲ್ಲ ಮಸೀದಿ ಹಾಗೂ ದರ್ಗಾಗಳಲ್ಲಿ ರಾತ್ರಿ ೧೦ ಗಂಟೆಯಿಂದ ಬೆಳಗಿನ ೬ ಗಂಟೆ ವರೆಗೆ ಧ್ವನಿವರ್ಧಕ ಬಳಕೆಗೆ ನಿಷೇಧ ಹೇರಿ ಕರ್ನಾಟಕ ವಕ್ಫ್‌ ಮಂಡಳಿ ಸುತ್ತೋಲೆ ಹೊರಡಿಸಿದೆ. ದ್ವನಿವರ್ಧಕಗಳನ್ನು “ಅಜಾನ್‌ʼ ಹಾಗೂ ಪ್ರಮುಖ ಪ್ರಕಟನೆಗಳಿಗಾಗಿ ಮಾತ್ರ ಬಳಕೆ ಮಾಡಬೇಕು ಎಂದು ತಿಳಿಸಿದೆ. ಧ್ವನಿವರ್ಧಕಗಳಿಂದಾಗುವ ಶಬ್ದದ ಮಟ್ಟ ಮಾನವನ ಆರೋಗ್ಯ ಹಾಗೂ ಜನರ ಸ್ವಾಸ್ಥ್ಯದ … Continued