ಜಗತ್ತಿನಲ್ಲಿ ಲೂಟಿಕೋರರು, ದರೋಡೆಕೋರರು ಇದ್ರೆ ಅದು ರಾಜಕಾರಣಿಗಳು : ಶಾಸಕ ರಾಜು ಕಾಗೆ ಹೇಳಿಕೆ ಚರ್ಚೆಗೆ ಗ್ರಾಸ

ಬೆಳಗಾವಿ : ರಾಜಕೀಯ ವ್ಯವಸ್ಥೆ ತುಂಬಾ ಕೆಟ್ಟೋಗಿದೆ. ರಾಜಕಾರಣಿಗಳಲ್ಲಿ ಯಾವುದೇ ಪಾವಿತ್ರ್ಯ ಉಳಿದಿಲ್ಲ. ಜಗತ್ತಿನಲ್ಲಿ ಲೂಟಿ ಮಾಡುವವರು ದರೋಡೆ ಮಾಡುವವರು ಇದ್ದರೆ ಅದು ರಾಜಕಾರಣಿಗಳು ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದ್ದು, ಸಂಚಲನಕ್ಕೆ ಕಾರಣವಾಗಿದೆ. ಮಂಗಳವಾರ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗುಳಕೋಡ ಗ್ರಾಮದಲ್ಲಿ ಖಾಸಗಿ ಶಾಲೆ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ರಾಜಕಾರಣಿಗಳ ವಿರುದ್ಧ … Continued

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ: ಸಂಸದ ಪ್ರತಾಪ ಸಿಂಹ ವಿರುದ್ಧ ಎಫ್ಐಆರ್ ದಾಖಲು

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನೀಡಿದ ಹೇಳಿಕೆಗಾಗಿ ಬಿಜೆಪಿ ಸಂಸದ ಪ್ರತಾಪ ಸಿಂಹ‌ ಅವರ ವಿರುದ್ಧ ಎಫ್‌ ಐ ಆರ್‌ ದಾಖಲಾಗಿದೆ. ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸೋಮಾರಿ ಸಿದ್ಧ ಎಂಬ ಪದ ಬಳಕೆ ಮಾಡಿದ ಹಿನ್ನಲೆಯಲ್ಲಿ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇದು ಅವಹೇನಕಾರಿ ಪದವಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು … Continued

ರಾಜ್ಯದಲ್ಲಿ ಮಂಗಳವಾರ 74 ಮಂದಿಗೆ ಕೋವಿಡ್‌ ಸೋಂಕು, ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 74 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 464ಕ್ಕೆ ಏರಿಕೆಯಾಗಿದೆ. ಅಲ್ಲದೆ, ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 74 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 464ಕ್ಕೆ ಏರಿಕೆಯಾಗಿದೆ … Continued

ಫೆಬ್ರವರಿ 2ರಿಂದ ಮೂರು ದಿನ ನಡೆಯಲಿದೆ ಹಂಪಿ ಉತ್ಸವ ; ಸಚಿವ ಜಮೀರ್ ಅಹಮದ್

ಬೆಂಗಳೂರು: ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 2 ರಿಂದ ಆರಂಭವಾಗಲಿದ್ದು, 3 ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಮಂಗಳವಾರ ಹೇಳಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 2ರಿಂದ 3 ದಿನಗಳ ಕಾಲ ಹಂಪಿ ಉತ್ಸವ … Continued

ಕೋವಿಡ್ ಬಂದರೆ 7 ದಿನ ಹೋಂ ಐಸೊಲೇಷನ್ ಕಡ್ಡಾಯ : ದಿನೇಶ ಗುಂಡೂರಾವ್

ಬೆಂಗಳೂರು: ಕೋವಿಡ್ ಸೋಂಕಿಗೆ ಒಳಗಾದರೆ ರೋಗಿಗಳು 7 ದಿನ ಕಡ್ಡಾಯವಾಗಿ ಹೋಂ ಐಸೊಲೇಷನ್ (ಮನೆ ಪ್ರತ್ಯೇಕತೆ)ನಲ್ಲಿರಬೇಕು. ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದ್ದಾರೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ನಿಟ್ಟಿನಲ್ಲಿ ಸಚಿವ ದಿನೇಶ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ಮಂಗಳವಾರ ಸಂಪುಟ ಉಪಸಮಿತಿ ಸಭೆ ಬಳಿಕ ಮಾಧ್ಯಮದವರ … Continued

ಕಾಂಗ್ರೆಸ್‌ ಐದನೇ ಗ್ಯಾರಂಟಿ ʼಯುವನಿಧಿʼ ಯೋಜನೆ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಯುವನಿಧಿ ನೋಂದಣಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಚಾಲನೆ ನೀಡಿದ್ದಾರೆ. ವಿಧಾನಸೌಧದ ಬ್ವಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಸಚಿವರಾದ ಶರಣ ಪ್ರಕಾಶ ಪಾಟೀಲ, ಪ್ರಿಯಾಂಕ್ ಖರ್ಗೆ, ಎಂ.ಸಿ. ಸುಧಾಕರ, ಬಿ. ನಾಗೇಂದ್ರ ಮೊದಲಾದವರು ಉಪಸ್ಥಿತರಿದ್ದರು. ಇದು … Continued

ಕರ್ನಾಟಕದಲ್ಲಿ 34 ಜೆಎನ್.1 ಕೋವಿಡ್ ವೈರಸ್ ರೂಪಾಂತರ ಪ್ರಕರಣಗಳು ದೃಢ

ಬೆಂಗಳೂರು: ರಾಜ್ಯದಲ್ಲಿ 34 ಜನರಿಗೆ ಕೋವಿಡ್‌-19 ಜೆಎನ್‌ 1 ರೂಪಾಂತರಿ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಹೊಸ ರೂಪಾಂತರಿ ಹರಡುವ ಸೂಚನೆ ನೀಡಿದೆ. ರಾಜ್ಯದಲ್ಲಿ 3 ಮಂದಿ ಸಾವಿಗೀಡಾಗಿದ್ದಾರೆ. ಸೋಮವಾರ 3,155 ಜನರಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಹೊಸದಾಗಿ 125 ಜನರಿಗೆ ಕೋವಿಡ್‌ ಸೋಂಕು ಕಾಣಿಸಿಕೊಂಡಿದೆ. ಈಗ ಒಟ್ಟು 436 ಸಕ್ರಿಯ ಸೋಂಕಿತರು … Continued

ಶನಿವಾರ ಒಂದೇ ದಿನ ರಾಜ್ಯದಲ್ಲಿ 104 ಜನರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶನಿವಾರ ಒಂದೇ ದಿನ 104 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 271ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 104 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 40,89,356ಕ್ಕೆ ಮತ್ತು … Continued

ರಾಜ್ಯ ಬಿಜೆಪಿ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ; ಯಾರಿಗೆ ಯಾವ ಹುದ್ದೆ..? ಇಲ್ಲಿದೆ ಪಟ್ಟಿ….

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪಕ್ಷದ ರಾಜ್ಯ ಘಕಟಕಕ್ಕೆ ನೂತನ ಪದಾಧಿಕಾರಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಶನಿವಾರ ಅದನ್ನು ಬಿಡುಗಡೆ ಮಾಡಲಾಗಿದೆ. 10 ಮಂದಿ ಉಪಾಧ್ಯಕ್ಷರು, ನಾಲ್ವರು ರಾಜ್ಯ ಪ್ರಧಾನ ಕಾರ್ಯದರ್ಶಿಗಳು, 10 ಮಂದಿ ರಾಜ್ಯ ಕಾರ್ಯದರ್ಶಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಬಿಜೆಪಿ ರಾಜ್ಯ … Continued

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಹಿಂಪಡೆಯುವ ಕುರಿತು ಚರ್ಚಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ ಯೂಟರ್ನ್

ಮೈಸೂರು : ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧ ಹಿಂಪಡೆಯುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಮತ್ತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿದ ನಂತರ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಸ್ಪಷ್ಟಪಡಿಸಿದ್ದಾರೆ. ಮಾದ್ಯಮದವರ ಜೊತೆ ಮಾತನಾಡಿದ ಅವರು, ‘ನಾವು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಮಾಡಿರುವ ಆದೇಶ … Continued