ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಸ್ಥಾನ : ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಗುಡುಗಿದ ಯತ್ನಾಳ

ಬೆಳಗಾವಿ : ವಿಧಾನಸಭೆಯ ವಿಪಕ್ಷದ ನಾಯಕ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕದವರಿಗೆ ನೀಡಬೇಕೆಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತೆ ಆಗ್ರಹಿಸಿದ್ದು, ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ … Continued

ನಕಲಿ ನೋಟು ಜಾಲ : ಕರ್ನಾಟಕದ ಬಳ್ಳಾರಿ ಸೇರಿ 4 ರಾಜ್ಯಗಳಲ್ಲಿ ಏಕಕಾಲದಲ್ಲಿ ಎನ್‌ ಐ ಎ ದಾಳಿ

ನವದೆಹಲಿ: ಕರ್ನಾಟಕದ ಬಳ್ಳಾರಿ ಜಿಲ್ಲೆ ಹಾಗೂ ಇತರ ಮೂರು ರಾಜ್ಯಗಳ ವಿವಿಧ ಸ್ಥಳಗಳಲ್ಲಿ ಶನಿವಾರ ಶೋಧ ಕಾರ್ಯ ನಡೆಸಿರುವ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ನಕಲಿ ನೋಟು ಜಾಲವನ್ನು ಭೇದಿಸಿದೆ. ಉತ್ತರಪ್ರದೇಶ, ಬಿಹಾರ, ಮಹಾರಾಷ್ಟ್ರ, ಕರ್ನಾಟಕದಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಈ ಪ್ರಕರಣವು ಶಂಕಿತರಿಂದ ರೂಪಿಸಲಾದ ದೊಡ್ಡ ಪಿತೂರಿಗೆ ಸಂಬಂಧಿಸಿದ್ದು, ಕೆಲವರನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ.₹500, … Continued

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್‌ 7ರ ವರೆಗೆ ಮಳೆ ಮುನ್ಸೂಚನೆ

ಬೆಂಗಳೂರು : ಆಗ್ನೇಯ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್‌ 7 ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲೆಯಲ್ಲಿ ವಾಯಭಾರ ಕುಸಿತ ಉಂಟಾಗಿದ್ದರಿಂದ ತಮಿಳುನಾಡು, ಪಾಂಡಿಚೇರಿ, ಆಂಧ್ರಪ್ರದೇಶ, ಓಡಿಸ್ಸಾ ರಾಜ್ಯಗಳ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು … Continued

ಹಾಸನ ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣ ಸುಖಾಂತ್ಯ: ನೆಲ್ಯಾಡಿ ಬಳಿ ಅಪಹರಣಕಾರರ ಬಂಧನ

ಹಾಸನ : ಹಾಸನದ ಬಿಟ್ಟಗೌಡನಹಳ್ಳಿ ಬಳಿ ನಡೆದಿದ್ದ ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಅಪಹರಣಕಾರರನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡದ ನೆಲ್ಯಾಡಿ ಬಳಿ ಅಪಹರಣಕಾರರನ್ನು ಪತ್ತೆ ಹಚ್ಚಿದ ಹಾಸನ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಕಿಡ್ನಾಪ್ ಆಗಿದ್ದ ಶಾಲಾ ಶಿಕ್ಷಕಿಯನ್ನು ರಕ್ಷಿಸಿದ್ದಾರೆ. ಪೊಲೀಸರು ಸಂಜೆ ಐದು ಗಂಟೆ ಸುಮಾರಿಗೆ ದಕ್ಷಿಣ ಕನ್ನಡದ ನೆಲ್ಯಾಡಿ ಬಳಿ … Continued

ಅರಣ್ಯ ಇಲಾಖೆಯ 540 ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 (506 ಸರ್ಕಾರವು ಅನುಮತಿಸಿದ ಹುದ್ದೆ +34 ಹಿಂದಿನ ಅಧಿಸೂಚನೆಯಲ್ಲಿನ ಹಿಂಬಾಕಿ ಹುದ್ದೆಗಳು) ಗಸ್ತು ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳಂತೆ ‘ಅರಣ್ಯ ರಕ್ಷಕ) ಗ್ರೂಪ್‌ ‘ಸಿ’ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತರಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್ … Continued

ಚೀನಾದಲ್ಲಿ ಹೊಸ ಮಾದರಿ ಸೋಂಕು ಉಲ್ಬಣ : ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಚೀನಾದಲ್ಲಿ ಸೋಂಕಿನಿಂದಾಗಿ ಮಕ್ಕಳಲ್ಲಿ ಉಸಿರಾಟದ ತೊಂದರೆ ಉಲ್ಬಣದ ವರದಿಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಸಾರ್ವಜನಿಕ ಆರೋಗ್ಯ ಮತ್ತು ಆಸ್ಪತ್ರೆಯ ಸನ್ನದ್ಧತೆಯ ಕ್ರಮಗಳನ್ನು ತಕ್ಷಣವೇ ಪರಿಶೀಲಿಸುವಂತೆ ಕೇಂದ್ರ ಸರ್ಕಾರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದ ನಂತರ ರಾಜ್ಯ ಆರೋಗ್ಯ ಇಲಾಖೆಯಿಂದ ಈ ಕ್ರಮ … Continued

ತಮಿಳುನಾಡಿಗೆ ಮತ್ತೆ ಒಂದು ತಿಂಗಳು ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಮತ್ತೆ ಒಂದು ತಿಂಗಳು ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWRC) ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಇಂದು, ಗುರುವಾರ ಸಭೆ ನಡೆಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWRC), ನವೆಂಬರ್ 23ರಿಂದ ಡಿಸೆಂಬರ್ 23ರವರಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಹರಿಸುವಂತೆ … Continued

ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2 ದಿನ ಮಳೆ ಮುನ್ಸೂಚನೆ : 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು : ಬೆಂಗಳೂರು ಹಾಗೂ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಆರು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ನವೆಂಬರ್ 23ರ ಬೆಳಗಿನಿಂದ ೨೪ ತಾಸು ಭಾರೀ ಮಳೆಯಾಗುವ … Continued

ಜಾತಿ ಗಣತಿ ವರದಿಗೆ ಡಿಸಿಎಂ ಶಿವಕುಮಾರ ವಿರೋಧ; ವರದಿ ತಿರಸ್ಕರಿಸಬೇಕೆಂದು ಸಿಎಂಗೆ ಒತ್ತಾಯಿಸುವ ಮನವಿಗೆ ಸಹಿ : ಸ್ವೀಕರಿಸುವ ನಿರ್ಧಾರ ಅಚಲ ಎಂದ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕದ ಒಕ್ಕಲಿಗ ಸಮುದಾಯದ ರಾಜಕೀಯ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ತಮ್ಮ ಮೊದಲ ಅಧಿಕಾರಾವಧಿಯಲ್ಲಿ ನಡೆಸಿದ 2015 ರ ಜಾತಿ ಸಮೀಕ್ಷೆಯ ವರದಿಯನ್ನು ತಿರಸ್ಕರಿಸುವಂತೆ ಒತ್ತಾಯಿಸಿದ್ದಾರೆ. ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿಲ್ಲ ಎಂದು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ ಒಕ್ಕಲಿಗ ನಾಯಕರು ಸಹಿ ಹಾಕಿರುವ ಪತ್ರದಲ್ಲಿ ಹೇಳಲಾಗಿದೆ. … Continued

ಗಿಗ್ ಕಾರ್ಮಿಕರಿಗೆ ಯುನಿವರ್ಸಲ್ ಐಡಿ ಕಾರ್ಡ್ ನೀಡುವ ಬಗ್ಗೆ ಚಿಂತನೆ: ಸಚಿವ ಸಂತೋಷ ಲಾಡ್

ಉಡುಪಿ: ಆಹಾರ ವಿತರಣಾ ಆ್ಯಪ್‌ಗಳು ಮತ್ತು ಇ-ಕಾಮರ್ಸ್ ಕಂಪನಿಗಳೊಂದಿಗೆ ಕೆಲಸ ಮಾಡುವ ಗಿಗ್ ಕಾರ್ಮಿಕರಿಗೆ ಯುನಿವರ್ಸಲ್ ಐಡಿ ಕಾರ್ಡ್ ನೀಡುವ ಕುರಿತು ಚಿಂತನೆ ನಡೆಸಲಾಗುತ್ತಿದೆ. ಗಿಗ್ ಕಾರ್ಯಕರ್ತರ ಕಾರ್ಮಿಕರು ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನಗಳನ್ನು ಪಡೆಯಬಹುದು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಗಿಗ್ ಕಾರ್ಮಿಕರ ಸಾಮಾಜಿಕ … Continued