ಸ್ಥಳೀಯ ಸಂಸ್ಥೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ : ಸಂಘಟನಾತ್ಮಕ ಜಿಲ್ಲೆಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ

ಬೆಂಗಳೂರು : ಸ್ಥಳೀಯ ಸಂಸ್ಥೆಗಳ (ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ) ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ದಿನಾಂಕ ಘೋಷಣೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಸಂಘಟನಾತ್ಮಕ ಜಿಲ್ಲೆಗಳಿಗೆ ಉಸ್ತುವಾರಿಗಳನ್ನಾಗಿ ನೇಮಕ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಏಳು ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ. ಪಿ.ರಾಜೀವ : ಹಾವೇರಿ, ಹುಬ್ಬಳ್ಳಿ-ಧಾರವಾಡ, ಧಾರವಾಡ ಗ್ರಾಮಾಂತರ, ಗದಗ, ರಾಮನಗರ, … Continued

ಕರ್ನಾಟಕ ಬಿಜೆಪಿ ಹಂಚಿಕೊಂಡ ಅನಿಮೇಟೆಡ್ ವೀಡಿಯೊ ತೆಗೆದುಹಾಕಿ ; ಎಕ್ಸ್​ ಗೆ ಚುನಾವಣಾ ಆಯೋಗ ಸೂಚನೆ

ನವದೆಹಲಿ: ಮುಸ್ಲಿಂ ಸಮುದಾಯದ ಮೀಸಲಾತಿಗೆ ಸಂಬಂಧಿಸಿದಂತೆ ಬಿಜೆಪಿ ಕರ್ನಾಟಕ ಘಟಕ ಹಂಚಿಕೊಂಡಿರುವ ಅನಿಮೇಟೆಡ್ ಕಾರ್ಟೂನ್ ವೀಡಿಯೊವನ್ನು ‘ತಕ್ಷಣ’ ತೆಗೆದುಹಾಕುವಂತೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ ಗೆ ಸೂಚನೆ ನೀಡಿದೆ. ಈ ಸಂಬಂಧ ‘X’ ನ ನೋಡಲ್ ಅಧಿಕಾರಿಗೆ ಚುನಾವಣಾ ಆಯೋಗವು ಬರೆದ ಪತ್ರದಲ್ಲಿ, ಕರ್ನಾಟಕ ಬಿಜೆಪಿ ಘಟಕ ಮಾಡಿರುವ ಪೋಸ್ಟ್ … Continued

ಲೋಕಸಭಾ ಚುನಾವಣೆ ವೇಳೆ ಕರ್ನಾಟಕದಲ್ಲಿ ಬಿಜೆಪಿಗೆ ಶಾಕ್‌ ; ಪರಿಷತ್‌ ಸ್ಥಾನಕ್ಕೆ ತೇಜಸ್ವಿನಿ ಗೌಡ ದಿಢೀರ್‌ ರಾಜೀನಾಮೆ..!

ಬೆಂಗಳೂರು : ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ಅವರು ತಮ್ಮ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ..! ಅವಧಿಗೆ ಮುಂಚೆಯೇ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಲೋಕಸಭಾ ಚುನಾವಣೆ (Lok Sabha Election 2024) ವೇಳೆ ಈ ಬೆಳವಣಿಗೆ ನಡೆದಿರುವುದರಿಂದ ಮಹತ್ವ ಪಡೆದಿದ್ದು, ಅವರು ಕಾಂಗ್ರೆಸ್‌ ಸೇರುವ ಸಾಧ್ಯತೆ … Continued

ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸದಾನಂದ ಗೌಡ…!

ಬೆಂಗಳೂರು : ‘ನಾನು ಚುನಾವಣಾ ರಾಜಕಾರಣದಲ್ಲಿ ಮುಂದುವರಿಯಬಾರದು ಎಂದು ತೀರ್ಮಾನ ಮಾಡಿದ್ದೇನೆ’ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ರಾಜಕೀಯಕ್ಕೆ ನಿವೃತ್ತಿ ಪ್ರಕಟಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದಿಂದ ಹೆಚ್ಚಿನ ಲಾಭ ಪಡೆದುಕೊಂಡಿದ್ದೇನೆ. ಈಗ ನನಗೆ ಹೆಚ್ಚಿನ ಅಸೆ ಏನೂ ಇಲ್ಲ. ಇನ್ಮುಂದೆ ಚುನಾವಣಾ ರಾಜಕೀಯದಲ್ಲಿ ಮುಂದುವರಿಯಬಾರದು ನಿರ್ಧಾರ … Continued

ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ : ಸಿ.ಟಿ. ರವಿ

ಬೆಂಗಳೂರು : ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಆದರೆ ವರಿಷ್ಠರು ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ. ನಗರದಲ್ಲಿ ಇಂದು, ಭಾನುವಾರ ಮಾತನಾಡಿದ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಲಿದ್ದಾರೆ ಎನ್ನುವ ವಿಚಾರ ನನಗೆ ಗೊತ್ತಿಲ್ಲ. ಈಗ ನಾನು … Continued